ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು […]

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ ತಹಶೀಲ್ದಾರ್ ವರ್ಗಾವಣೆ ಸಮ್ಮತವಲ್ಲ ► ವರ್ಗಾವಣೆ ಆದೇಶವನ್ನು ಸರಕಾರ ತಕ್ಷಣ ಹಿಂಪಡೆಯಬೇಕು: ಸಾಮಾಜಿಕ ಮುಖಂಡ ಮಹಮ್ಮದಾಲಿ

(ನ್ಯೂಸ್ ಕಡಬ) newskadaba.com ಕಡಬ, ಮಾ.20. ತಾಲೂಕು ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಬ್ಬ ಸಮಾಜಮುಖಿ ಚಿಂತನೆಯ ತಹಶೀಲ್ದಾರರನ್ನು ಬೇರೆಡೆಗೆ ವರ್ಗಾಯಿಸಿರುವ ಮಾಹಿತಿ ಇದ್ದು ಇದು ಸರಿಯಲ್ಲ. ಇವರ ವರ್ಗಾವಣೆ ಆದೇಶವನ್ನು ತಕ್ಷಣ ಸರಕಾರ ಹಿಂಪಡೆದು ಕಡಬದಲ್ಲಿಯೇ ಉಳಿಸಿಕೊಳ್ಳುವ ಕಾರ್ಯವಾಗಬೇಕು ಎಂದು ಕುಟ್ರುಪ್ಪಾಡಿ ಗ್ರಾ.ಪಂ. ಸದಸ್ಯ, ಸಾಮಾಜಿಕ ಮುಖಂಡ ಎಚ್.ಮಹಮ್ಮದಾಲಿ ಆಗ್ರಹಿಸಿದರು. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಡಬದ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ಜಾನ್ ಪ್ರಕಾಶ್ ರೋಡ್ರಿಗಸ್ ಕಳೆದ ಒಂದು ವರ್ಷದಿಂದ ಜನಮಾನಸದಲ್ಲಿ ಉತ್ತಮ ಅಧಿಕಾರಿ

ಕಡಬ ತಹಶೀಲ್ದಾರ್ ವರ್ಗಾವಣೆ ಸಮ್ಮತವಲ್ಲ ► ವರ್ಗಾವಣೆ ಆದೇಶವನ್ನು ಸರಕಾರ ತಕ್ಷಣ ಹಿಂಪಡೆಯಬೇಕು: ಸಾಮಾಜಿಕ ಮುಖಂಡ ಮಹಮ್ಮದಾಲಿ Read More »

ಕರಾವಳಿ

ಇಂದು (ಮಾ.20) ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ► ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು (ಮಾ. 20) ಮಂಗಳೂರಿಗೆ ಭೇಟಿ ನೀಡಲಿದ್ದು, ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಿಗ್ಗೆ 11:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. 3.30ಕ್ಕೆ ಮುಲ್ಕಿ

ಇಂದು (ಮಾ.20) ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ► ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ Read More »

ಕರಾವಳಿ

ಕಡಬ ಅಡಿಗ ಮೋಟಾರ್ಸ್‌ನಲ್ಲಿ ಸ್ಮಾರ್ಟ್ ಸ್ಕೂಟರ್ ಟಿವಿಎಸ್ ‘ಎನ್ ಟಾರ್ಕ್ 125’ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಇಲ್ಲಿನ ವೈಭವ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಟಿ.ವಿ.ಎಸ್. ಮೋಟಾರ್ಸ್‌ ಕಂಪೆನಿಯ ಅಧಿಕೃತ ಡೀಲರ್ ತಾಲೂಕಿನ ಪ್ರಸಿದ್ದ ಅಡಿಗ ಮೋಟಾರ್ಸ್‌ ಮಾರಾಟ ಮಳಿಗೆಯಲ್ಲಿ ಟಿ.ವಿ.ಎಸ್ ಎನ್ ಟಾರ್ಕ್ 125 ನ್ನು ಬಿಡುಗಡೆಗೊಳಿಸಲಾಯಿತು. ಗ್ರಾಹಕರಾದ ದೇವಸಗಾಯಂ ಕಡಬ ಹಾಗೂ ಡೀಕಯ್ಯ ಕೈಕಂಬ ಇವರು ಹೊಸ ಮಾದರಿಯ ಎನ್ಟಾರ್ಕ್ 125 ಸ್ಕೂಟರ್ನ್ನು ಅನಾವರಣಗೊಳಿಸಿದರು. ಪ್ರಥಮ ಗ್ರಾಹಕರಾದ ನಿರಂಜನ್ ಕುಮಾರ್ ಎಡಮಂಗಲ ಹಾಗೂ ಅಂದುಕುಂಞ ಕೋಡಿಂಬಾಳ ಇವರಿಗೆ ಪ್ರಮುಖರಾದ ಉದ್ಯಮಿ ಜನಾರ್ದನ ರಾವ್ ಅಡೂರು ಹಾಗೂ ವೈಭವ

ಕಡಬ ಅಡಿಗ ಮೋಟಾರ್ಸ್‌ನಲ್ಲಿ ಸ್ಮಾರ್ಟ್ ಸ್ಕೂಟರ್ ಟಿವಿಎಸ್ ‘ಎನ್ ಟಾರ್ಕ್ 125’ ಬಿಡುಗಡೆ Read More »

ತಂತ್ರಜ್ಞಾನ

ಆಲಂಕಾರು: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಶಾಲಾ ಕಟ್ಟಡ, ರಿಕ್ಷಾದ ಮೇಲೆ ಬಿದ್ದ ಮರ – ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಸೋಮವಾರ ಸಂಜೆ ಆಲಂಕಾರು ವ್ಯಾಪ್ತಿಯಲ್ಲಿ ಬೀಸಿದ ಭಾರೀ ಬಿರುಗಾಳಿ ಮಳೆಗೆ ಶರವೂರು ಸರಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ ಒಂದು ಮನೆ ಮತ್ತು ಅಪಾರ ಪ್ರಮಾಣದ ಅಡಿಕೆ ತೋಟ ನಾಶವಾಗಿದೆ. ಸೋಮವಾರ ಸಂಜೆ ವೇಳೆಗೆ ಗಾಳಿ ಮಳೆ ಬೀಸಿದ್ದರಿಂದಾಗಿ ಶರವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಂಚು ತುಂಡಾಗಿ ತರಗತಿಯೊಳಗೆ ಬಿದ್ದಿದ್ದು, ಕಂಗಾಲಾದ ಕೆಲವು ಮಕ್ಕಳು ತರಗತಿಯಿಂದ ಓಡಿ ಪಕ್ಕದ ಮನೆ ಸೇರಿದಂತೆ ರಂಗ ಮಂದಿರದಲ್ಲಿ ಆಶ್ರಯ ಪಡೆದಿದ್ದಾರೆ‌. ಇನ್ನೊಂದೆಡೆ ಶರವೂರು

ಆಲಂಕಾರು: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಶಾಲಾ ಕಟ್ಟಡ, ರಿಕ್ಷಾದ ಮೇಲೆ ಬಿದ್ದ ಮರ – ತಪ್ಪಿದ ಅನಾಹುತ Read More »

ಕರಾವಳಿ

ಸವಣೂರು: ಸಿಡಿಲು ಬಡಿದು ಓರ್ವ ಮೃತ್ಯು ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ಮಾ.19. ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತರನ್ನು ಪುಣ್ಚಪ್ಪಾಡಿ ಸಮೀಪದ ನೆಕ್ಕಿ ನಿವಾಸಿ ಕೇಪು ಎಂಬವರ ಪುತ್ರ ವಿಕಲಚೇತನರಾದ ಧನಂಜಯ(25) ಎಂದು ಗುರುತಿಸಲಾಗಿದೆ. ಧನಂಜಯರವರು ವಾಸಿಸುತ್ತಿದ್ದ ಮನೆಯ ಸಮೀಪದಲ್ಲಿದ್ದ ತೆಂಗಿನ ಮರಕ್ಕೆ ಬಡಿದ ಸಿಡಿಲಿನ‌ ಆಘಾತದಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಅಲ್ಲದೆ ಘಟನೆಯಲ್ಲಿ ಘಟನೆಯಲ್ಲಿ ಮೃತರ ಅಕ್ಕ ಗೀತಾ ಹಾಗೂ ದೊಡ್ಡಪ್ಪ ಕುಂಡ ಎಂಬವರು ಸಣ್ಣ ಪುಟ್ಟ

ಸವಣೂರು: ಸಿಡಿಲು ಬಡಿದು ಓರ್ವ ಮೃತ್ಯು ► ಇಬ್ಬರಿಗೆ ಗಾಯ Read More »

ಕರಾವಳಿ

ಬೆಳ್ತಂಗಡಿ: ಆಕ್ಟಿವಾ – ಕಾರು ನಡುವೆ ಅಪಘಾತ ► ಕಾಲೇಜು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.19. ಕಾರು‌ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಬೆಳ್ತಂಗಡಿಯ ಅಳದಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರ್ಕಳದ ಹೊಸ್ಮಾರು‌ ನಿವಾಸಿ ಸುಧಾಕರ್ ಹೆಗ್ಡೆ ಎಂಬವರ ಪುತ್ರ ಉಜಿರೆ ಎಸ್ಡಿಎಂ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸುಚಿನ್ ಎಂದು ಗುರುತಿಸಲಾಗಿದೆ. ಈತ ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದಾಗ ಆಳದಂಗಡಿ ಸಮೀಪ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟನೆನ್ನಲಾಗಿದೆ. ಗಂಭೀರ ಗಾಯಗೊಂಡ ಸುಚಿನ್ ನನ್ನು ಆಸ್ಪತ್ರೆಗೆ

ಬೆಳ್ತಂಗಡಿ: ಆಕ್ಟಿವಾ – ಕಾರು ನಡುವೆ ಅಪಘಾತ ► ಕಾಲೇಜು ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ದಲಿತ ಸಂಘರ್ಷ ಸಮಿತಿ ಮುಖಂಡನ ನೇತೃತ್ವದಲ್ಲಿ ಹನ್ನೊಂದು ಜನ ಹಿಂದುಗಳು ಕಡಬ ತಾಲೂಕಿನ ಆಲಂಕಾರಿನಲ್ಲಿ ಬೌದ್ಧ ಧರ್ಮಕ್ಕೆ ಧರ್ಮಾಂತರವಾಗಿರುವುದು ಸ್ವಯಂಪ್ರೇರಿತ ಧರ್ಮ ಸ್ವೀಕಾರ ಅಲ್ಲ. ಅದು ಕಾನೂನುಬಾಹಿರವಾಗಿದ್ದು, ಬಲವಂತದ ಮತಾಂತರ ಎಂದು ಸಾಮಾಜಿಕ ಕಾರ್ಯಕರ್ತ, ಮೊಗೇರ ಸಮುದಾಯದ ಮುಂದಾಳು ತಿಮ್ಮಪ್ಪ ವಿ.ಕೆ ಆರೋಪಿಸಿದ್ದಾರೆ. ಅವರು  ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಾಯಕ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದಲಿತ ಸಮಾಜದ ಮೇಲೆ ದಾಳಿ ಮಾಡುವ ಹುನ್ನಾರವಾಗಿದೆ. ದಲಿತ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ Read More »

ಕರಾವಳಿ

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ.

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ಟ್ವೆಂಟಿ-20 ತ್ರಿಕೋನ ಸರಣಿ ಫೈನಲ್ ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತ ► ಯುಗಾದಿ ಹಬ್ಬದಂದೇ ಭಾರತಕ್ಕೆ ರೋಚಕ ಗೆಲುವು ತಂದಿತ್ತ ದಿನೇಶ್ ಕಾರ್ತಿಕ್

(ನ್ಯೂಸ್ ಕಡಬ) newskadaba.com ಕೊಲಂಬೊ, ಮಾ.18. ಟ್ವೆಂಟಿ -20 ತ್ರಿಕೋನ ಸರಣಿಯ ಫೈನಲ್ ಪಂದ್ಯಾಟದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಭಾರತ ತಂಡವು 4 ವಿಕೆಟ್ ಗಳ ಅಂತರದಲ್ಲಿ ಜಯಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡವು ನಿಗದಿತ 20 ಓವರ್ ಗಳಲ್ಲಿ 166 ರನ್ ಪೇರಿಸಿ ಗೆಲುವಿಗೆ 167 ರನ್ ಗಳ ಸವಾಲನ್ನು ನೀಡಿತ್ತು. ಭಾರತದ ಗೆಲುವಿಗೆ 12 ಎಸೆತಗಳಲ್ಲಿ 34 ರನ್ ಗಳಿಸಬೇಕಾಗಿತ್ತು. ಉತ್ತಮ ದಾಂಡಿಗರೆಲ್ಲ ಔಟ್ ಆಗಿ ಪಂದ್ಯವನ್ನು ವೀಕ್ಷಿಸುತ್ತಿರಬೇಕಾದರೆ ಸೋಲಿನ ದವಡೆಗೆ ಸಿಲುಕಿದ್ದ

ಟ್ವೆಂಟಿ-20 ತ್ರಿಕೋನ ಸರಣಿ ಫೈನಲ್ ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತ ► ಯುಗಾದಿ ಹಬ್ಬದಂದೇ ಭಾರತಕ್ಕೆ ರೋಚಕ ಗೆಲುವು ತಂದಿತ್ತ ದಿನೇಶ್ ಕಾರ್ತಿಕ್ Read More »

ಕ್ರೀಡಾ ನ್ಯೂಸ್
Scroll to Top