ಸುಳ್ಯಪದವು: ಆತ್ಮಹತ್ಯೆಗೆ ಯತ್ನಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.12. ಶುಕ್ರವಾರದಂದು ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಸುಳ್ಯಪದವು ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕರ್ನಾಟಕ – ಕೇರಳ ಗಡಿ ಭಾಗದ ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ನೆಟ್ಟಣಿಗೆ ನಿವಾಸಿ ನಾಗರಾಜ ಮಣಿಯಾಣಿ ಎಂಬವರ ಪುತ್ರ ಪಡುವನ್ನೂರು ಗ್ರಾಮದ ಸರ್ವೋದಯ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚರಣ್ ರಾಜ್ ಎಂದು ಗುರುತಿಸಲಾಗಿದೆ. ಮಾರ್ಚ್ 09 ರಂದು ಬೆಳಿಗ್ಗಿನ ಜಾವ […]

ಸುಳ್ಯಪದವು: ಆತ್ಮಹತ್ಯೆಗೆ ಯತ್ನಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ

96 ರ ಅಜ್ಜಿಗೆ 10 ನೇ ತರಗತಿ ಪಾಸ್ ಆಗುವಾಸೆ ► ಕಲಿಕೆಗೆ ವಯಸ್ಸು ಅಡ್ಡಿಯಿಲ್ಲ ಎಂದು ಸಾಬೀತುಪಡಿಸಿದ ಕಲ್ಯಾಣಿ ಅಮ್ಮ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ.12. ಬಾಲ್ಯದಲ್ಲಿ ಶಿಕ್ಷಣ ಪಡೆಯದಿದ್ದರೂ, ಎಳೆಯ ವಯಸ್ಸಿನಲ್ಲಿ ಶಿಕ್ಷಣವನ್ನು ಪಡೆಯಬೇಕೆಂಬ ಬಯಕೆಯನ್ನು ವ್ಯಕ್ತಪಡಿಸಿ ವೃದ್ಧೆಯೋರ್ವರು ಇದೀಗ ಅಕ್ಷರಾಭ್ಯಾಸವನ್ನು ಮಾಡುತ್ತಿದ್ದಾರೆ. ಕೇರಳದ ಪಾಲ್ಘಾಟ್ ಜಿಲ್ಲೆಯ ಮುಟ್ಟಂ ನಿವಾಸಿ ದಿ| ಕೃಷ್ಣ ಪಿಳ್ಳೈ ಎಂಬವರ ಪತ್ನಿ 96 ರ ಹರೆಯದ ಕಲ್ಯಾಣಿ ಅಮ್ಮ ತನ್ನ ಬಾಲ್ಯದಲ್ಲಿ ನಾಲ್ಕನೇ ತರಗತಿಗರ ತಿಲಾಂಜಲಿ ಇಟ್ಟಿದ್ದರು‌. ನಂತರದ‌ ದಿನಗಳಲ್ಲಿ ಅಕ್ಷರಗಳನ್ನು ಹಾಗೂ ಮಗ್ಗಿಯನ್ನು ಕಲಿತಿದ್ದರೂ ಮದುವೆಯ ನಂತರ ಸಂಸಾರದ ಹೊರೆಯನ್ನು ತಲೆಮೇಲೆ ಎಳೆದುಕೊಂಡು ಕಲಿಕೆಯ ಆಸೆಗೆ ತಣ್ಣೀರು ಬಿದ್ದಿತ್ತು.

96 ರ ಅಜ್ಜಿಗೆ 10 ನೇ ತರಗತಿ ಪಾಸ್ ಆಗುವಾಸೆ ► ಕಲಿಕೆಗೆ ವಯಸ್ಸು ಅಡ್ಡಿಯಿಲ್ಲ ಎಂದು ಸಾಬೀತುಪಡಿಸಿದ ಕಲ್ಯಾಣಿ ಅಮ್ಮ Read More »

ರಾಷ್ಟ್ರೀಯ ನ್ಯೂಸ್

ವಿಶ್ವ ಕಿಡ್ನಿ ದಿನಾಚರಣೆ – ಮಾರ್ಚ್ 10 ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಮಾ.12. ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು. 2008ರಲ್ಲಿ 88 ದೇಶಗಳು ಈ ಆಚರಣೆಯಲ್ಲಿ ಭಾಗಿಯಾದರು. 2015ರಲ್ಲಿ ಸುಮಾರು 150ಕ್ಕೂ

ವಿಶ್ವ ಕಿಡ್ನಿ ದಿನಾಚರಣೆ – ಮಾರ್ಚ್ 10 ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಬಂಟ್ವಾಳ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.11. ಸುಮಾರು 06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ಭಾನುವಾರದಂದು ವೇಣೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಮೇರಮಜಲು ಗ್ರಾಮದ ಅಬ್ಬೆಟ್ಟು ಮನೆ ನಿವಾಸಿ ಫ್ರಾನ್ಸಿಸ್ ಡಿ’ಸೋಜಾ ಎಂಬವರ ಪುತ್ರ ಲಾರೆನ್ಸ್ ಮೆಲ್ವಿನ್ ಡಿ ಸೋಜಾ ಯಾನೆ ಜೀವನ್ ಯಾನೆ ಸಲ್ಮಾನ್ ಯಾನೆ ಮಹಮ್ಮದ್ ಸಲ್ಮಾನ್(32) ಎಂದು ಗುರುತಿಸಲಾಗಿದೆ. 2012 ರ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡು ಪ್ರಸ್ತುತ ಬೆಳ್ತಂಗಡಿ

ಬಂಟ್ವಾಳ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ Read More »

ಕರಾವಳಿ

ಕಲ್ಲುಗುಡ್ಡೆ: ಪ್ರತ್ಯೇಕವಾಗಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗಳಿಗೆ ದಾಳಿ ► ಆರು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಪ್ರತ್ಯೇಕವಾಗಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಆರು ಮಂದಿಯನ್ನು ಬಂಧಿಸಿ 3440 ರೂ. ಗಳನ್ನು ವಶಪಡಿಸಿಕೊಂಡ ಘಟನೆ ಭಾನುವಾರದಂದು ಕಲ್ಲುಗುಡ್ಡೆಯಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಕಲ್ಲುಗುಡ್ಡೆಯ ದೋಂತಿಲಡ್ಕ ಎಂಬಲ್ಲಿ ರಸ್ತೆ ಬದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿ ಸ್ಥಳೀಯ ನಿವಾಸಿಗಳಾದ ರಾಜು, ಕೇಶವ ಹಾಗೂ ಪೊಡಿಯ ಎಂಬವರನ್ನು ಬಂಧಿಸಿ ಆಟಕ್ಕೆ ಬಳಸಿದ 1990 ರೂ. ಗಳನ್ನು ವಶಕ್ಕೆ

ಕಲ್ಲುಗುಡ್ಡೆ: ಪ್ರತ್ಯೇಕವಾಗಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗಳಿಗೆ ದಾಳಿ ► ಆರು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಕಡಬ: ಕಂದಾಯ ಇಲಾಖೆಯಲ್ಲಿನ ದಲಿತ ವಿರೋಧಿ ನೀತಿಯ ವಿರುದ್ಧ ಪ್ರತಿಭಟನೆ ► ತಾಲೂಕು ಉದ್ಘಾಟನೆಗಾಗಿ ಆಗಮಿಸಲಿರುವ ಕಂದಾಯ ಸಚಿವರಿಗೆ ಚಪ್ಪಲಿ ಚಳವಳಿಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಕಂದಾಯ ಇಲಾಖೆ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ಇದರ ಬಗ್ಗೆ ಕಡಬ ತಾಲೂಕು ಉದ್ಘಾಟನೆಗೆ ಆಗಮಿಸಲಿರುವ ಕಂದಾಯ ಸಚಿವರ ವಿರುದ್ಧ ಚಪ್ಪಲಿ ಚಳವಳಿ ಮಾಡಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಚಾಲಕ ಆನಂದ ಮಿತ್ತಬೈಲು ಹೇಳಿದರು. ಅವರು ಭಾನುವಾರದಂದು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಿಧ ರಾಜಕೀಯ ವ್ಯಕ್ತಿಗಳ ಕುಮ್ಮಕ್ಕಿನಿಂದಾಗಿ ಕಡಬ ಭಾಗದ ಅನೇಕ

ಕಡಬ: ಕಂದಾಯ ಇಲಾಖೆಯಲ್ಲಿನ ದಲಿತ ವಿರೋಧಿ ನೀತಿಯ ವಿರುದ್ಧ ಪ್ರತಿಭಟನೆ ► ತಾಲೂಕು ಉದ್ಘಾಟನೆಗಾಗಿ ಆಗಮಿಸಲಿರುವ ಕಂದಾಯ ಸಚಿವರಿಗೆ ಚಪ್ಪಲಿ ಚಳವಳಿಯ ಎಚ್ಚರಿಕೆ Read More »

ಕರಾವಳಿ

ಕಾಣಿಯೂರು: ಅಪರಿಚಿತ ಗಂಡಸಿನ ಮೃತದೇಹದ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.11. ಅಪರಿಚಿತ ಗಂಡಸಿನ ಕೊಳೆತ ಮೃತದೇಹದ ಅಸ್ಥಿಪಂಜರವೊಂದು ಪೊದೆಯಲ್ಲಿ ಪತ್ತೆಯಾದ ಘಟನೆ ಕಾಣಿಯೂರು ಸಮೀಪದ ಕೂಡುರಸ್ತೆ ಎಂಬಲ್ಲಿ ಭಾನುವಾರದಂದು ಕಂಡುಬಂದಿದೆ. ಮೃತದೇಹವು ಸಂಪೂರ್ಣ ಕೊಳೆತಿದ್ದು, ಅಸ್ಥಿಪಂಜರ ಕಂಡುಬಂದಿದೆ ಎನ್ನಲಾಗಿದೆ. ಸುಮಾರು 50 ರಿಂದ 60 ವರ್ಷ ಪ್ರಾಯದ ಗಂಡಸಿನ ಮೃತದೇಹವಾಗಿರಬಹುದೆಂದು ಅಂದಾಜಿಸಲಾಗಿದ್ದು, ಪಕ್ಕದಲ್ಲೇ ಕೀಟನಾಶಕದ ಬಾಟಲ್ ಪತ್ತೆಯಾಗಿದೆ. ಒಂದು ಕಾಲನ್ನು ಯಾವುದೋ ಪ್ರಾಣಿಗಳು ತಿಂದು ದೇಹದಿಂದ ಬೇರ್ಪಟ್ಟು ಪೊದೆಯಲ್ಲಿ ಮಲಗಿಸಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಪೊದೆಯೊಂದರಿಂದ ಕೊಳೆತ ವಾಸನೆ ಬರುತ್ತಿದ್ದುದನ್ನು ಗಮನಿಸಿದ

ಕಾಣಿಯೂರು: ಅಪರಿಚಿತ ಗಂಡಸಿನ ಮೃತದೇಹದ ಅಸ್ಥಿಪಂಜರ ಪತ್ತೆ Read More »

ಕರಾವಳಿ

ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ► ನೂತನ ನಾಡಧ್ವಜದ ಬಣ್ಣ, ವಿನ್ಯಾಸ ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.11. ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕೆಂಬ ಬೇಡಿಕೆಯು ಈಡೇರಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡನಾಡಿನ ನಾಡಧ್ವಜವನ್ನು ಅಧಿಕೃತವಾಗಿ ಅನಾವರಣಗೊಳಿಸಿದ್ದಾರೆ. ನಾಡಧ್ವಜ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರವು ಹಳದಿ, ಬಿಳಿ ಮತ್ತು ಕೆಂಪು ಬಣ್ಣಗಳಿಂದ ಕೂಡಿದ ನಾಡಧ್ವಜವನ್ನು ಸಿದ್ಧಪಡಿಸಿದ್ದು, ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಸಾಹಿತಿ ಹಂಪ ನಾಗರಾಜಯ್ಯ ತ್ರಿವರ್ಣ ಬಣ್ಣದ ನಾಡಧ್ವಜವನ್ನು ವಿನ್ಯಾಸಗೊಳಿಸಿದ್ದು, ರಾಜ್ಯ ಸರಕಾರಕ್ಕೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ

ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ► ನೂತನ ನಾಡಧ್ವಜದ ಬಣ್ಣ, ವಿನ್ಯಾಸ ತಿಳಿಯಬೇಕೇ…? Read More »

ಕರ್ನಾಟಕ

ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ ► HLLMRI ವಿಭಾಗದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.11. ಬೆಂಗಳೂರಿನಲ್ಲಿರುವಂತೆ ಮಂಗಳೂರಿನಲ್ಲಿಯೂ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿಯವರ ಹೆಸರಿನಲ್ಲಿ ಪ್ರಸ್ತುತ ಇರುವ ಆರ್‌ಎಪಿಸಿಸಿ ಆಸ್ಪತ್ರೆ ಮೇಲ್ದರ್ಜೆಗೇರಲಿದ್ದು, ವೆನ್ಲಾಕ್ ಆಸ್ಪತ್ರೆಯು ಮುಂದಿನ ಎರಡು ವರ್ಷಗಳಲ್ಲಿ ಇನ್ನಷ್ಟು ಹೊಸ ಸೌಲಭ್ಯಗಳೊಂದಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಶನಿವಾರದಂದು ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸೂಪರ್

ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ ► HLLMRI ವಿಭಾಗದ ಲೋಕಾರ್ಪಣೆ Read More »

ಕರಾವಳಿ

ಪುತ್ತೂರು: ಜ್ಯೋತಿಷ್ಯ ಕೇಳಲು ಬಂದ ಬಾಲಕಿಯ ಮೇಲೆ ಅತ್ಯಾಚಾರ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.11. ಜ್ಯೋತಿಷ್ಯ ಕೇಳಲೆಂದು ಆಗಮಿಸಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಶನಿವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ತನ್ನ ಮನೆಯಲ್ಲಿಯೇ ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದ್ದ ಪುತ್ತೂರಿನ ಬನ್ನೂರು ನೆಕ್ಕಿಲ ನಿವಾಸಿ ಬಾಲಚಂದ್ರ ಆಚಾರ್ಯ(34) ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಈತ ಮಾರ್ಚ್ 03 ರಂದು ಜ್ಯೋತಿಷ್ಯ ಕೇಳಲೆಂದು ತನ್ನ ಮನೆಯವರೊಂದಿಗೆ ಬಂದಿದ್ದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಬಾಲಕಿಯ ಹೆತ್ತವರು ನೀಡಿದ

ಪುತ್ತೂರು: ಜ್ಯೋತಿಷ್ಯ ಕೇಳಲು ಬಂದ ಬಾಲಕಿಯ ಮೇಲೆ ಅತ್ಯಾಚಾರ ► ಆರೋಪಿಯ ಬಂಧನ Read More »

ಕರಾವಳಿ
Scroll to Top