ಭಗ್ನ ಪ್ರೇಮಿಯ ಇರಿತಕ್ಕೆ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ ► ಪ್ರೀತಿ, ಪ್ರೇಮದ ಗುಂಗಿನಲ್ಲಿ ಇನ್ನೊಬ್ಬರ ಜೀವನದಲ್ಲಿ ಚೆಲ್ಲಾಟವಾಡುವ ಸ್ವಾರ್ಥಿಗಳು
(ನ್ಯೂಸ್ ಕಡಬ) newskadaba.com ಸಂಪಾದಕೀಯ: ತನ್ನ ಪ್ರೀತಿ ನಿವೇದನೆಯನ್ನು ನಿರಾಕರಿಸಿದ ಒಂದೇ ಒಂದು ಕಾರಣಕ್ಕಾಗಿ ಸಿಟ್ಟಿನಿಂದ ಭಗ್ನ ಪ್ರೇಮಿಯೊಬ್ಬ ಸಹಪಾಠಿ ವಿದ್ಯಾರ್ಥಿನಿಯೋರ್ವಳನ್ನು ಚೂರಿಯಿಂದ ಇರಿದು ಕೊಲೆಗೈದ ಹೃದಯ ವಿದ್ರಾವಕ ಘಟನೆ ಸುಳ್ಯದಲ್ಲಿ ಮಂಗಳವಾರದಂದು ಸಂಜೆ ನಡೆದು ಹೋಯ್ತು. ತಾನು ವ್ಯಾಸಂಗ ಮಾಡಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆಯನ್ನಿಟ್ಟು ದೂರದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಹರೂ ಮೆಮೋರಿಯಲ್ ಕಾಲೇಜಿಗೆ ಆಗಮಿಸಿ ದ್ವಿತೀಯ ಬಿಎಸ್ಸಿ ಓದುತ್ತಿದ್ದ ಸೌಮ್ಯ ಸ್ವಭಾವದ ವಿದ್ಯಾರ್ಥಿನಿ ಅಕ್ಷತಾ […]









