ಕಡಬಕ್ಕೆ ಆಗಮಿಸಿದ ಮಲಯಾಳಂ ಸಿನಿಮಾ ತಾರೆಯರ ದಂಡು ► ಮೋಹನ್ ಲಾಲ್, ಮಮ್ಮುಟ್ಟಿ, ನಿವಿನ್ ಪೋಲಿ ಜೊತೆ‌ ಸೆಲ್ಫಿಗಾಗಿ ಮುಗಿಬೀಳುತ್ತಿರುವ ಅಭಿಮಾನಿಗಳು

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಕೇರಳದ ಸಿನಿಮಾ ನಾಯಕರ ದಂಡು ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಪ್ರಸಿದ್ಧ ಸಿನಿಮಾ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಹಾಗೂ ನಿವಿನ್ ಪೋಲಿ, ಸಿನಿಮಾ ನಟಿ ಪ್ರಿಯಾ ಆನಂದ್ ಸೇರಿದಂತೆ ಚಿತ್ರ ತಂಡದ ದಿಗ್ಗಜರು ಎರಡು ವಿಭಿನ್ನ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ರೋಷನ್ ಆಂಡ್ರೋಸ್ ನಿರ್ದೇಶನದಲ್ಲಿ ಮಲೆಯಾಳಂ ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ಕಾಯಂಕುಳಂ ಕೊಚ್ಚುನ್ನಿ’ ಚಿತ್ರದಲ್ಲಿ ನಾಯಕನಾಗಿ ನಿವಿನ್ ಪೋಲಿ, ನಾಯಕಿಯಾಗಿ ಪ್ರಿಯಾ ಆನಂದ್ ಹಾಗೂ ಅತಿಥಿ ನಟನಾಗಿ ಮೋಹನ್ […]

ಕಡಬಕ್ಕೆ ಆಗಮಿಸಿದ ಮಲಯಾಳಂ ಸಿನಿಮಾ ತಾರೆಯರ ದಂಡು ► ಮೋಹನ್ ಲಾಲ್, ಮಮ್ಮುಟ್ಟಿ, ನಿವಿನ್ ಪೋಲಿ ಜೊತೆ‌ ಸೆಲ್ಫಿಗಾಗಿ ಮುಗಿಬೀಳುತ್ತಿರುವ ಅಭಿಮಾನಿಗಳು Read More »

ಕರಾವಳಿ

ಪ್ರೇಮಿಗಳ ದಿನಕ್ಕೆ ಕೇಂದ್ರ ಸರಕಾರ ರಜೆ ಘೋಷಿಸಲು ವಾಟಾಳ್ ನಾಗರಾಜ್ ಆಗ್ರಹ ► ಕುರಿಗಳಿಗೆ ಮದುವೆ ಮಾಡುವ ಮೂಲಕ ‘ವ್ಯಾಲೆಂಟೈನ್ಸ್ ಡೇ’ ಆಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.14. ಪ್ರೀತಿಸಿ ಮದುವೆಯಾಗುವ ಜೋಡಿಗೆ ರಾಜ್ಯ ಸರ್ಕಾರ 50 ಸಾವಿರದಿಂದ 1 ಲಕ್ಷ ಪ್ರೋತ್ಸಾಹ ಧನ ನೀಡಲಿ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಬುಧವಾರ ಕುರಿಗಳಿಗೆ ಮದುವೆ ಮಾಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಪ್ರೇಮಿಗಳ ದಿನವನ್ನು ವಿಶೇಷವಾಗಿ ಆಚರಿಸಿ ಮಾತನಾಡಿದ ವಾಟಾಳ್ ನಾಗರಾಜ್, ಪ್ರೇಮಿಗಳ ದಿನವನ್ನು ನಾವು ವಿರೋಧಿಸಬಾರದು. ಪ್ರೇಮಿಗಳ ದಿನದಂದು ಕೇಂದ್ರ ಸರ್ಕಾರ ಒಂದು ದಿನ ರಜೆ ಘೋಷಿಸಬೇಕು. ಪ್ರೀತಿಗೆ ಯಾವುದೇ ಜಾತಿ

ಪ್ರೇಮಿಗಳ ದಿನಕ್ಕೆ ಕೇಂದ್ರ ಸರಕಾರ ರಜೆ ಘೋಷಿಸಲು ವಾಟಾಳ್ ನಾಗರಾಜ್ ಆಗ್ರಹ ► ಕುರಿಗಳಿಗೆ ಮದುವೆ ಮಾಡುವ ಮೂಲಕ ‘ವ್ಯಾಲೆಂಟೈನ್ಸ್ ಡೇ’ ಆಚರಣೆ Read More »

ಕರ್ನಾಟಕ

ಪಡ್ಡೆ ಹುಡುಗರ ನಿದ್ದೆಗೆಡಿಸಿದ ವೈರಲ್ ಸ್ಟಾರ್ ಪ್ರಿಯಾ ವಾರಿಯರ್ ಅಭಿನಯದ ಹಾಡಿಗೆ ವಿರೋಧ ► ಚಿತ್ರ ನಿರ್ಮಾಪಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ.14. ಪಡ್ಡೆ ಹುಡುಗರ ನಿದ್ದೆಗೆಡಿಸಿ ದಿನ ಬೆಳಗಾಗೋದ್ರಲ್ಲಿ ಸುದ್ದಿಗೆ ಬಂದ ಚೆಂದುಳ್ಳಿ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯಿಸಿರುವ ಹಾಡಿನಲ್ಲಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಶಬ್ಧಗಳಿವೆ ಎಂದು ಹಾಡಿನ ವಿರುದ್ಧ ದೂರು ದಾಖಲಾಗಿದೆ. ಹಾಡಿನಲ್ಲಿರುವ ಕೆಲವು ಶಬ್ಧಗಳು ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ನಾಲ್ಕೈದು ಯುವಕರು ಹಾಡಿನ ನಿರ್ಮಾಪಕರ ವಿರುದ್ಧ ಹೈದರಾಬಾದ್ ನ ಫಾರೂಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ನಟಿ ಪ್ರಿಯಾ ವಿರುದ್ಧ

ಪಡ್ಡೆ ಹುಡುಗರ ನಿದ್ದೆಗೆಡಿಸಿದ ವೈರಲ್ ಸ್ಟಾರ್ ಪ್ರಿಯಾ ವಾರಿಯರ್ ಅಭಿನಯದ ಹಾಡಿಗೆ ವಿರೋಧ ► ಚಿತ್ರ ನಿರ್ಮಾಪಕರ ವಿರುದ್ಧ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ನೆಟ್ಟಣ ರೈಲ್ವೇ ಸ್ಟೇಶನ್ ನಲ್ಲಿ ನೂಕುನುಗ್ಗಲುಂಟಾಗಿ ಪೊಲೀಸರನ್ನೇ ತಳ್ಳಿಹಾಕಿದ ಯಾತ್ರಿಕರು ► ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಮಹಾಶಿವರಾತ್ರಿ ಪ್ರಯುಕ್ತ ಕುಕ್ಕೇ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನಕ್ಕೆ ಆಗಮಿಸಿದ್ದ ದೂರದೂರಿನ ಭಕ್ತರು ಹಿಂತಿರುಗಿ ಹೋಗಲು ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲ್ವೇ ನಿಲ್ದಾಣಕ್ಕೆ ಆಗಮಿಸಿದಾಗ ನೂಕು‌ ನುಗ್ಗಲು ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಟಿಕೆಟ್ ನೀಡಲು ಒಂದೇ ಕೌಂಟರ್ ಇದ್ದುದರಿಂದ ಪ್ರಯಾಣಿಕರು ಟಿಕೆಟ್ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದು, ಇದ್ದ ಓರ್ವ ರೈಲ್ವೇ ಪೊಲೀಸ್ ಸಿಬ್ಬಂದಿಯನ್ನು ಜನರು ತಳ್ಳಿ ಹಾಕಿ ನೂಕುನುಗ್ಗಲು ನಡೆಸಿದ್ದರಿಂದ ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.

ನೆಟ್ಟಣ ರೈಲ್ವೇ ಸ್ಟೇಶನ್ ನಲ್ಲಿ ನೂಕುನುಗ್ಗಲುಂಟಾಗಿ ಪೊಲೀಸರನ್ನೇ ತಳ್ಳಿಹಾಕಿದ ಯಾತ್ರಿಕರು ► ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು Read More »

ಕರಾವಳಿ

ಸರಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ರಾಜ್ಯದಲ್ಲಿರುವ ಕ್ರೈಸ್ತರು ► ಬಜೆಟ್ ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಅತ್ಯಗತ್ಯ: ಎ.ಸಿ.ಜಯರಾಜ್ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ರಾಜ್ಯದಲ್ಲಿ ಕ್ರೈಸ್ತರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಶನ್‌ನ ಅಧ್ಯಕ್ಷ, ನ್ಯಾಯವಾದಿ ಎ.ಸಿ.ಜಯರಾಜ್ ಅವರು ಆಗ್ರಹಿಸಿದ್ದಾರೆ. ಅವರು ಮಂಗಳವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರಕಾರವು ಕ್ರೈಸ್ತರ ಅಭಿವೃದ್ಧಿ ಸಮಿತಿಯನ್ನು ಸ್ಥಾಪಿಸಿದ್ದು, 175 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಸಮಿತಿಯು ಕೇವಲ ಶಿಫಾರಸು ಮಾಡುವ ಅಧಿಕಾರವನ್ನು ಮಾತ್ರ ಹೊಂದಿರುವುದರಿಂದ ಸಮುದಾಯಕ್ಕೆ ಹೆಚ್ಚಿನ ಅನುಕೂಲತೆ ಸಿಗುತ್ತಿಲ್ಲ. ಕೇವಲ ಚರ್ಚುಗಳ

ಸರಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ರಾಜ್ಯದಲ್ಲಿರುವ ಕ್ರೈಸ್ತರು ► ಬಜೆಟ್ ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಅತ್ಯಗತ್ಯ: ಎ.ಸಿ.ಜಯರಾಜ್ ಆಗ್ರಹ Read More »

ಕರಾವಳಿ

ಕೆಮ್ಮಾರ: ಓವರ್ ಟೇಕ್ ವಿಚಾರದಲ್ಲಿ ಗಲಾಟೆ ► ಮೂವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.14. ಓವರ್ ಟೇಕ್ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಶಾಂತಿ ಭಂಗ ಉಂಟಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಘಟನೆ ಉಪ್ಪಿನಂಗಡಿಯ ಕೆಮ್ಮಾರ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಸೋಮವಾರ ರಾತ್ರಿ ಕೆಮ್ಮಾರದಲ್ಲಿ ಓವರ್ ಟೇಕ್ ವಿಚಾರದಲ್ಲಿ ಮುಸ್ತಾಲಿಪ್, ಮಹಮ್ಮದ್ ಇಕ್ಬಾಲ್ ಹಾಗೂ ಶ್ರೀಶಕುಮಾರ್ ಎಂಬವರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು‌.‌ ಸ್ಥಳದಲ್ಲಿ ಎರಡೂ ಕೋಮಿನ ಯುವಕರು ಜಮಾಯಿಸಲು ತೊಡಗಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ

ಕೆಮ್ಮಾರ: ಓವರ್ ಟೇಕ್ ವಿಚಾರದಲ್ಲಿ ಗಲಾಟೆ ► ಮೂವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪ್ಪಿನಂಗಡಿ ಪೊಲೀಸರು Read More »

ಕರಾವಳಿ

ಎಸ್ಕೆಎಸ್ಸೆಸ್ಸೆಫ್‌ ಸುಳ್ಯ ವಲಯದ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ಹಸನ್ ಅರ್ಶದಿ ಬೆಳ್ಳಾರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಖ್ ಅಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.14. ಎಸ್ಕೆಎಸ್ಸೆಸ್ಸೆಫ್‌ ಸುಳ್ಯ ವಲಯಾಧ್ಯಕ್ಷರಾಗಿ ಹಸನ್ ಅರ್ಶದಿ ಬೆಳ್ಳಾರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಖ್ ಅಡ್ಕ ಆಯ್ಕೆಯಾಗಿದ್ದಾರೆ. ಸುಳ್ಯದ ಸಮಸ್ತ ಕಾರ್ಯಾಲಯ ಸುನ್ನಿ ಮಹಲ್ ಕಛೇರಿಯಲ್ಲಿ ಭಾನುವಾರದಂದು ಜರಗಿದ ಆಯ್ಕೆ ಪ್ರಕ್ರಿಯೆಯನ್ನು ಸುಳ್ಯ ವಲಯದ ಚುನಾವಣಾ ಅಧಿಕಾರಿಗಳಾದ ಇಸ್ಹಾಕ್ ಫೈಝಿ ಹಾಗೂ ಅಬ್ದುಲ್ ಖಾದರ್ ಬಂಟ್ವಾಳರವರು ನಡೆಸಿಕೊಟ್ಟರು. ಉಪಾಧ್ಯಕ್ಷರಾಗಿ ಕೆ.ಹೆಚ್. ಅಬ್ದುಲ್ ರಝಾಕ್ ಮುಸ್ಲಿಯಾರ್ ಅಜ್ಜಾವರ, ಕೋಶಾಧಿಕಾರಿಯಾಗಿ ಅಬ್ದುಲ್ಲಾ ಫೈಝಿ ಪೈಂಬಚ್ಚಾಲ್, ವರ್ಕಿಂಗ್ ಕಾರ್ಯದರ್ಶಿಯಾಗಿ ಅಕ್ಬರ್ ಅಲಿ ಸುಳ್ಯ, ಇಬಾದ್ ಕಾರ್ಯದರ್ಶಿಯಾಗಿ ಅಬ್ದುಲ್

ಎಸ್ಕೆಎಸ್ಸೆಸ್ಸೆಫ್‌ ಸುಳ್ಯ ವಲಯದ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ಹಸನ್ ಅರ್ಶದಿ ಬೆಳ್ಳಾರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಖ್ ಅಡ್ಕ ಆಯ್ಕೆ Read More »

ಕರಾವಳಿ

ಮೊಬೈಲ್ ಚಾರ್ಜಿಂಗ್ ಪ್ಲಗ್ ತೆಗೆಯುವಾಗ ವಿದ್ಯುತ್ ಶಾಕ್ ► ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಫೆ.13. ಮೊಬೈಲ್ ಚಾರ್ಜಿಂಗ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶವಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಶ್ರೀರಂಗಪಟ್ಟಣದ ತಾಲೂಕಿನ ಬಸವಪುರ ನಿವಾಸಿ ಸಾಗರ್ (20) ಎಂದು ಗುರುತಿಸಲಾಗಿದೆ. ಗೂಡ್ಸ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಸಾಗರ್ ಇಂದು ಬಾಡಿಗೆಗಾಗಿ ಬಂದಿದ್ದ ವೇಳೆ ಮೊಬೈಲ್ ಚಾರ್ಜ್ ಇಲ್ಲದ ಕಾರಣ ಮೈಸೂರು-ಬನ್ನೂರು ರಸ್ತೆಯಲ್ಲಿರುವ ದೇವೇಗೌಡ ವೃತ್ತದ ಸಮೀಪವಿರುವ ಸಿಮೆಂಟ್ ಅಂಗಡಿಯಲ್ಲಿ ಚಾರ್ಜಿಗೆ ಇಟ್ಟಿದ್ದ ಎನ್ನಲಾಗಿದೆ. ಬಾಡಿಗೆಗೆ ಹೋಗಲು ಅಣಿಯಾದ ಈತ

ಮೊಬೈಲ್ ಚಾರ್ಜಿಂಗ್ ಪ್ಲಗ್ ತೆಗೆಯುವಾಗ ವಿದ್ಯುತ್ ಶಾಕ್ ► ಯುವಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ನೆಟ್ಟಣ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.13. ಕೂಲಿ‌ಕೆಲಸದ ನಿಮಿತ್ತ ಜಿಲ್ಲೆಗೆ ಆಗಮಿಸಿ ಟೆಂಟ್ ಹಾಕಿ ವಾಸ್ತವ್ಯವಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ನೆಟ್ಟಣದಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಳಗೂಡು ಹೋಬಳಿ ನಿವಾಸಿ ಮನೋಹರ್(80) ಎಂದು ಗುರುತಿಸಲಾಗಿದೆ. ಇವರು ತನ್ನ ಕುಟುಂಬಿಕರೊಂದಿಗೆ ನೆಟ್ಟಣದಲ್ಲಿ ಟೆಂಟ್ ಹಾಕಿ ವಾಸ್ತವ್ಯದಲ್ಲಿದ್ದು, ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಮಂಗಳವಾರದಂದು ಕುಸಿದು ಬಿದ್ದ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಈ ಬಗ್ಗೆ

ನೆಟ್ಟಣ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ರಾಜ್ಯದ ಆರೂವರೆ ಕೋಟಿ ಜನರು ನನ್ನ ಆಸ್ತಿಯಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ► ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಸಮೀಕ್ಷೆಗೆ ಪ್ರತ್ಯುತ್ತರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ನಾನು ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿಯಾಗಿದ್ದು, 13 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದೇನೆ ಎಂದು ಸಮೀಕ್ಷೆಯೊಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮದು ಅವಿಭಕ್ತ ಕುಟುಂಬವಾಗಿದ್ದು, ಒಟ್ಟು ಆಸ್ತಿಯ ಲೆಕ್ಕ ಇದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವಿಭಕ್ತ ಕುಟುಂಬದ ಒಟ್ಟು ಆಸ್ತಿಯನ್ನು ಘೋಷಿಸಿದ್ದೆ. ಅಣ್ಣ ತಮ್ಮಂದಿರ ಎಲ್ಲ ಆಸ್ತಿಯ ವಿವರವನ್ನೂ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗಿತ್ತು. ಅಣ್ಣನ ನಿಧನದ ಬಳಿಕ ನಾನೇ ಮನೆಯ ಯಜಮಾನನಾಗಿದ್ದು, ಈಗ ಕುಟುಂಬದ

ರಾಜ್ಯದ ಆರೂವರೆ ಕೋಟಿ ಜನರು ನನ್ನ ಆಸ್ತಿಯಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ► ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಸಮೀಕ್ಷೆಗೆ ಪ್ರತ್ಯುತ್ತರ Read More »

ಕರ್ನಾಟಕ
Scroll to Top