ಅರಂತೋಡು: ಶಾಲಾ ಬಸ್ ಢಿಕ್ಕಿ ಹೊಡೆದು 6 ವರ್ಷದ ಬಾಲಕಿ ಮೃತ್ಯು ► ಬಸ್ಸಿನಿಂದ ಇಳಿದು ಟಿಫಿನ್ ಪಡೆಯುತ್ತಿದ್ದಾಗ ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.13. ಶಾಲಾ ಬಸ್ಸೊಂದು ಢಿಕ್ಕಿ ಹೊಡೆದು ಆರು ವರ್ಷ ವಯಸ್ಸಿನ ಬಾಲಕಿ ಮೃತಪಟ್ಟ ಘಟನೆ ಸುಳ್ಯ ಸಮೀಪದ ಅರಂತೋಡಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ ಬಾಲಕಿಯನ್ನು ಸುಳ್ಯ ತಾಲೂಕು ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಅಪ್ಪಕುಂಜಿ ಎಂಬವರ ಪುತ್ರಿ, ಕೆವಿಜಿ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಆಗ್ನೇಯ ಬಾಲು(6) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಬಾಲಕಿ ಸ್ಕೂಲ್ ಬಸ್ಸಿನಿಂದ ಇಳಿದಿದ್ದು ಆ ಸಮಯ ಆಕೆಯ ಟಿಫಿನ್ ಬಾಕ್ಸ್ ಬಸ್ಸಿನಲ್ಲಿ ಉಳಿದಿದ್ದರಿಂದ ಅದನ್ನ […]

ಅರಂತೋಡು: ಶಾಲಾ ಬಸ್ ಢಿಕ್ಕಿ ಹೊಡೆದು 6 ವರ್ಷದ ಬಾಲಕಿ ಮೃತ್ಯು ► ಬಸ್ಸಿನಿಂದ ಇಳಿದು ಟಿಫಿನ್ ಪಡೆಯುತ್ತಿದ್ದಾಗ ಘಟನೆ Read More »

ಕರಾವಳಿ

ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ► ಐವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಚ್ಚಿ, ಫೆ.13. ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ನಿಲ್ಲಿಸಲಾಗಿದ್ದ ಒಎನ್ ಜಿಸಿ ಸಂಸ್ಥೆಗೆ ಸೇರಿದ ಡ್ರಿಲ್ ಶಿಪ್ ‘ಸಾಗರ್ ಭೂಷಣ್’ ನೌಕೆಯ ಇಂಧನ ಟ್ಯಾಂಕರ್ ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 5 ಮಂದಿ ಮೃತಪಟ್ಟು ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ ಸಾಗರ್ ಭೂಷಣ್ ನೌಕೆ ದುರಸ್ತಿಗಾಗಿ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿತ್ತು. ನೌಕೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಇಂಧನ ಟ್ಯಾಂಕ್ ಬಳಿ ಸ್ಫೋಟ ಸಂಭವಿಸಿದ್ದು,

ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ► ಐವರು ಮೃತ್ಯು, ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ.13. ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ‌ ಚಿಕ್ಕಮಗಳೂರಿನಲ್ಲಿ ಸೋಮವಾರದಂದು ನಡೆದಿದೆ. ಮೃತ ಬಾಲಕನನ್ನು ಚಿಕ್ಕಮಗಳೂರಿನ ಮೂಗ್ತಿಹಳ್ಳಿ ಸಮೀಪದ ನಿವಾಸಿ ದುರ್ಗಾ ಪ್ರಸಾದ್ ಎಂಬವರ ಪುತ್ರ ಅನೀಶ್ (3) ಎಂದು ಗುರುತಿಸಲಾಗಿದೆ.‌ಅನೀಶ್ ನನ್ನು ಮನೆಯಲ್ಲಿ ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಉಸಿರುಗಟ್ಟಿ ಮಗು ಮೃತಪಟ್ಟರೆನ್ನಲಾಗಿದೆ.

ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗು ಮೃತ್ಯು Read More »

ಕರ್ನಾಟಕ

ಮೃತ ದೀಪಕ್ ಸಹೋದರನಿಗೆ ಸಿದ್ಧವಾಯಿತು ಸರಕಾರಿ ನೌಕರಿಯ ಆಫರ್ ► ಕುದುರೆಮುಖ ಕಬ್ಬಿಣದ ಅದಿರು ಕಂಪೆನಿಯಿಂದ ಮಾನವೀಯ ನೆಲೆಯಲ್ಲಿ ಉದ್ಯೋಗ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.13. ಇತ್ತೀಚೆಗೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸುರತ್ಕಲ್ ನ ದೀಪಕ್ ರಾವ್ ಕುಟುಂಬದ ಜೀವನಕ್ಕೆ ಕೇಂದ್ರ ಸರ್ಕಾರ ಆಧಾರವಾಗಿ ನಿಲ್ಲಲು ಮುಂದಾಗಿದ್ದು, ದೀಪಕ್ ಸೋದರ ಸತೀಶ್ ಗೆ ಕೇಂದ್ರ ಸರಕಾರಿ ಸ್ವಾಮ್ಯದ ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಆಫರ್ ಬಂದಿದೆ. ಹುಟ್ಟಿನಿಂದಲೇ ಮಾತೂ ಬರದ, ಕಿವಿಯೂ ಕೇಳದ 28 ರ ಹರೆಯದ ಅನಕ್ಷರಸ್ಥ ಸತೀಶ್ ನಿಗೆ ಪಣಂಬೂರಿನಲ್ಲಿರುವ ಕೆಐಒಸಿಎಲ್ ಕಂಪನಿಯಲ್ಲಿ ಮಾನವೀಯ ನೆಲೆಯಲ್ಲಿ ಕೆಲಸ ನೀಡಲು ಆಫರ್ ನೀಡಲಾಗಿದೆ.

ಮೃತ ದೀಪಕ್ ಸಹೋದರನಿಗೆ ಸಿದ್ಧವಾಯಿತು ಸರಕಾರಿ ನೌಕರಿಯ ಆಫರ್ ► ಕುದುರೆಮುಖ ಕಬ್ಬಿಣದ ಅದಿರು ಕಂಪೆನಿಯಿಂದ ಮಾನವೀಯ ನೆಲೆಯಲ್ಲಿ ಉದ್ಯೋಗ Read More »

ಕರಾವಳಿ

ನಿಮ್ಮಿಂದ 10 ರೂ. ನಾಣ್ಯ ತೆಗೆದುಕೊಳ್ಳುತ್ತಿಲ್ಲವೇ..? ► ಈಗಲೇ 14440 ಗೆ ಕರೆ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ವ್ಯಾಪಾರಿಗಳು, ಗ್ರಾಹಕರಲ್ಲಿ ತೀವ್ರ ಗೊಂದಲ ಸೃಷ್ಟಿಸಿ ನಿರಾಕರಣೆಗೆ ಕಾರಣವಾಗುತ್ತಿರುವ ಹತ್ತು ರೂ. ನಾಣ್ಯಗಳು ಚಾಲ್ತಿಯಲ್ಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸಾರ್ವಜನಿಕರ ಮೊಬೈಲ್ ಫೋನ್ ಗಳಿಗೆ ಸಂದೇಶ ಕಳುಹಿಸಿ ಗೊಂದಲ ನಿವಾರಿಸುವ ಅಭಿಯಾನ ಕೈಗೊಂಡಿದೆ. 10 ರೂಪಾಯಿ ನಾಣ್ಯವು ರೂಪಾಯಿ ಚಿಹ್ನೆ ಸಹಿತ ಮತ್ತು ರಹಿತವಾಗಿ ಚಲಾವಣೆಯಲ್ಲಿವೆ. ಭಯ ಪಡದೆ ಅವುಗಳನ್ನು ಸ್ವೀಕರಿಸಿ. ಹೆಚ್ಚಿನ ಮಾಹಿತಿಗಾಗಿ 14440ಗೆ ಮಿಸ್ಡ್ ಕಾಲ್ ಕೊಡಿ ಎಂದು ಆರ್ಬಿಐನಿಂದ ಮೊಬೈಲ್ ಫೋನ್ ಗಳಿಗೆ

ನಿಮ್ಮಿಂದ 10 ರೂ. ನಾಣ್ಯ ತೆಗೆದುಕೊಳ್ಳುತ್ತಿಲ್ಲವೇ..? ► ಈಗಲೇ 14440 ಗೆ ಕರೆ ಮಾಡಿ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷಕ್ಕೂ ಅಧಿಕ ಹಣ ಬ್ಯಾಂಕಿಗೆ ವಂಚನೆ ► ಉಂಡ ಮನೆಗೇ ದ್ರೋಹ ಬಗೆದ ಬ್ಯಾಂಕ್ ಮ್ಯಾನೇಜರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.12. ಬ್ಯಾಂಕ್ ಮ್ಯಾನೇಜರೋರ್ವರೇ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ.ಗಳನ್ನು ಸಾಲವಾಗಿ ತೆಗೆದು ವಂಚಿಸುವ ಮೂಲಕ ಉಂಡ ಮನೆಗೇ ದ್ರೋಹ ಬಗೆದ ಘಟನೆ ಬುದ್ಧಿವಂತರ ಜಿಲ್ಲೆಯಾದ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಬೆಳಕಿಗೆ ಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಡಿಕೇಟ್ ಬ್ಯಾಂಕ್ ವಗ್ಗ ಶಾಖೆಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಶಾಖಾ ಮ್ಯಾನೇಜರ್ ತಮಿಳುನಾಡು ಮೂಲದ ಟಿ. ದುರೈ ಎಂಬಾತ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಬಂಗಾರದ ಅಡಮಾನ ಸಾಲ ಮತ್ತು

ಬಂಟ್ವಾಳ: ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷಕ್ಕೂ ಅಧಿಕ ಹಣ ಬ್ಯಾಂಕಿಗೆ ವಂಚನೆ ► ಉಂಡ ಮನೆಗೇ ದ್ರೋಹ ಬಗೆದ ಬ್ಯಾಂಕ್ ಮ್ಯಾನೇಜರ್ Read More »

ಕರಾವಳಿ

ಕಣ್ಣು ಮಿಟುಕಿಸಿ ರಾತ್ರಿ ಬೆಳಗಾಗುವುದರೊಳಗೆ ದಾಖಲೆ ಸೃಷ್ಟಿಸಿದ ಮಲಯಾಳಿ ಹುಡುಗಿ ► ಪ್ರೇಮಿಗಳಲ್ಲಿ ಕಿಚ್ಚು ಎಬ್ಬಿಸಿದೆ ಸಿನಿಮಾ ಹಾಡೊಂದರ ದೃಶ್ಯ

(ನ್ಯೂಸ್ ಕಡಬ) newskadaba.com ಕೇರಳ, ಫೆ.12. ‘ಒರು ಅಡಾರ್ ಲವ್’ (Oru adaar love) ಎಂಬ ಮಲೆಯಾಳಂ ಸಿನಿಮಾದ ಒಂದು ಹಾಡಿನಿಂದ ರಾತ್ರಿ ಬೆಳೆಗಾಗುವುದರೊಳಗೆ ಮಲಯಾಳಿ ಹುಡುಗಿಯೋರ್ವಳು ಇಂಟರ್ ನೆಟ್ ಸ್ಟಾರ್ ಆಗಿ ಮಿಂಚಿದ್ದಾಳೆ. ಮಾರ್ಚ್ 03 ಕ್ಕೆ ಬಿಡುಗಡೆಯಾಗಲಿರುವ ‘ಒರು ಅಡಾರ್ ಲವ್’ ಮಲಯಾಳಂ ಚಿತ್ರದ 18ರ ಹರೆಯದ ಯುವತಿ ಪ್ರಿಯಾ ಪ್ರಕಾಶ್ ವಾರಿಯರ್ ಳ ಕಣ್ ಮಿಟುಕಿಗೆ ಎಲ್ಲರೂ ಸೋತಿದ್ದಾರೆ. ಪ್ರೇಮಿಗಳ ದಿನ ಹತ್ತಿರವಿರುವಾಗ ಈ ಚಿತ್ರದ ನವಿರಾದ ದೃಶ್ಯವೊಂದು ಪ್ರೇಮಿಗಳಲ್ಲಿ ಕಿಚ್ಚು ಎಬ್ಬಿಸಿದೆ. ಒಂದು

ಕಣ್ಣು ಮಿಟುಕಿಸಿ ರಾತ್ರಿ ಬೆಳಗಾಗುವುದರೊಳಗೆ ದಾಖಲೆ ಸೃಷ್ಟಿಸಿದ ಮಲಯಾಳಿ ಹುಡುಗಿ ► ಪ್ರೇಮಿಗಳಲ್ಲಿ ಕಿಚ್ಚು ಎಬ್ಬಿಸಿದೆ ಸಿನಿಮಾ ಹಾಡೊಂದರ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ಮಲ್ಪೆ: ಬೈಕ್ – ಬಸ್ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಫೆ.12. ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರದಂದು ಮಲ್ಪೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಹೆಬ್ರಿಯ ಸೋಮೇಶ್ವರ ನಿವಾಸಿ ಮಂಜುನಾಥ್ ನಾಯ್ಕ್ (26) ಎಂದು ಗುರುತಿಸಲಾಗಿದೆ. ಇವರು ಸಂಚರಿಸುತ್ತಿದ್ದ ಬೈಕಿಗೆ ಮಲ್ಪೆ ಬೀಚ್ ಬಳಿಯ ವಡಂಬಾಂಡೇಶ್ವರ ಎಂಬಲ್ಲಿ ಬಸ್ ಢಿಕ್ಕಿಯಾದುದರಿಂದ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟರು. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಮಲ್ಪೆ: ಬೈಕ್ – ಬಸ್ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಚಾರ್ಮಾಡಿ: 60 ಅಡಿ ಆಳದ ಪ್ರಪಾತಕ್ಕೆ ಬಿದ್ದ ಬೊಲೇರೋ ► ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.12. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಕಾರೊಂದು ರಸ್ತೆ ಬದಿಯ 60 ಅಡಿಯ ಕಮರಿಗೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಕಾರ್ಟಗಿ ನಿವಾಸಿಗಳಾದ ಬೊಲೆರೋ ಚಾಲಕ ಶ್ರೀಧರ್(38), ಶರಣಪ್ಪ(34), ತೇಜಶ್ವಿನಿ(9) ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ 60 ಅಡಿ ಪ್ರಪಾತಕ್ಕೆ ಬಿದ್ದು ಜಖಂಗೊಂಡಿದೆ.

ಚಾರ್ಮಾಡಿ: 60 ಅಡಿ ಆಳದ ಪ್ರಪಾತಕ್ಕೆ ಬಿದ್ದ ಬೊಲೇರೋ ► ಮೂವರಿಗೆ ಗಾಯ Read More »

ಕರಾವಳಿ

ಬೆಳ್ತಂಗಡಿ: ವ್ಯಕ್ತಿಯ ಕೊಲೆಗೈದ ತಂದೆ, ಸಹೋದರನ ಬಂಧನ ► ಹತ್ಯೆಗೈದು 24 ಗಂಟೆಗಳೊಳಗೆ ಆರೋಪಗಳನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.12. ತನ್ನ ಮಗನನ್ನು ಚೂರಿಯಿಂದ ಇರಿದು ಕೊಲೆ‌ ಮಾಡಿ ಪರಾರಿಯಾಗಿದ್ದ ಬೆಳ್ತಂಗಡಿಯ ಜ್ಯೋತಿಷಿಗಳಾದ ಮಂಜುನಾಥ ಹಾಗೂ ಆತನ ಮತ್ತೋರ್ವ ಪುತ್ರ ರಾಘವೇಂದ್ರನನ್ನು ಜಿಲ್ಲಾ ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ. ತಂದೆ ಮಗ ಸೇರಿ ನವೀನ್‌ನನ್ನು ಕೊಲೆಗೈದು ರಾತ್ರಿಯೇ ಕಾರಿನಲ್ಲಿ ಪರಾರಿಯಾಗಿದ್ದರು. ಇದರ ಸುಳಿವು ಅರಿತ ಪೊಲೀಸರು ನೆರೆ ಜಿಲ್ಲೆಗಳಲ್ಲಿ ನಾಕಾಬಂಧಿ ನಡೆಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ತಾಲೂಕಿನ ಕಸಬಾ ಗ್ರಾಮದ ಮಟ್ಲ ಎಂಬಲ್ಲಿ ನವೀನ್‌ನನ್ನು ಆತನ ತಂದೆ ಮಂಜುನಾಥ ಹಾಗೂ

ಬೆಳ್ತಂಗಡಿ: ವ್ಯಕ್ತಿಯ ಕೊಲೆಗೈದ ತಂದೆ, ಸಹೋದರನ ಬಂಧನ ► ಹತ್ಯೆಗೈದು 24 ಗಂಟೆಗಳೊಳಗೆ ಆರೋಪಗಳನ್ನು ಬಂಧಿಸಿದ ಪೊಲೀಸರು Read More »

ಕರಾವಳಿ
Scroll to Top