ಬಳ್ಳಾರಿಯ ಬಿಜೆಪಿ ಭದ್ರಕೋಟೆಯಲ್ಲಿ ಜೆಡಿಎಸ್ ಪ್ರಾಬಲ್ಯ…? ► ಬಿಜೆಪಿ‌ ಜಿಲ್ಲಾಧ್ಯಕ್ಷ ಸೇರಿ ಹಲವರ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.29. ಬಳ್ಳಾರಿ ಜಿಲ್ಲಾ ಬಿಜೆಪಿಗೆ ಮತ್ತೊಂದು ಬಿಗ್ ಶಾಕ್! ಎರಡು ದಿನಗಳ ಹಿಂದೆಯಷ್ಟೇ ವಿಜಯನಗರ ಶಾಸಕ ಆನಂದ್‍ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ವಿಜಯನಗರ ಬಿಜೆಪಿ ಘಟಕದ ಎಲ್ಲಾ ಮುಖಂಡರು ಇಂದು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವೇಗೌಡರಿಗೆ ಎಲ್ಲಾ ಘಟಕಗಳ ಪದಾಧಿಕಾರಿಗಳು ಇಂದು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳ್ಳಾರಿ ಬಿಜೆಪಿಯ ಭದ್ರ ಕೋಟೆಯಾಗಿತ್ತು. ಆನಂದ್‍ಸಿಂಗ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಭದ್ರಕೋಟೆ ಅಲುಗಾಡತೊಡಗಿದ್ದು, […]

ಬಳ್ಳಾರಿಯ ಬಿಜೆಪಿ ಭದ್ರಕೋಟೆಯಲ್ಲಿ ಜೆಡಿಎಸ್ ಪ್ರಾಬಲ್ಯ…? ► ಬಿಜೆಪಿ‌ ಜಿಲ್ಲಾಧ್ಯಕ್ಷ ಸೇರಿ ಹಲವರ ರಾಜೀನಾಮೆ Read More »

ಕರ್ನಾಟಕ

ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿಯುಂಟಾಗಿ ಕಾರು ಭಸ್ಮ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.28. ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಉರಿದು ಭಸ್ಮವಾದ ಘಟನೆ ಕಡೂರಿನಲ್ಲಿ ಭಾನುವಾರ ಸಂಜೆ ನಡೆದಿದೆ. ಸಖರಾಯಪಟ್ಟಣ ನಿವಾಸಿ ಲೋಕೇಶ್ ಎಂಬವರು ಇತರ ನಾಲ್ವರೊಂದಿಗೆ ತನ್ನ ಫೋರ್ಡ್ ಕಂಪೆನಿಗೆ ಸೇರಿದ ಕಾರಿನಲ್ಲಿ ತರೀಕೆರೆಯಿಂದ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ ಬಾನೆಟ್‍ನ ಮೇಲೆ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಕೆಳಗಿಳಿದ ಲೋಕೇಶ್ ಹಾಗೂ ಇತರರು ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ

ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿಯುಂಟಾಗಿ ಕಾರು ಭಸ್ಮ Read More »

ಕರ್ನಾಟಕ

ಲಾರಿಗೆ ಢಿಕ್ಕಿ ಹೊಡೆದ ಬೈಕ್ ► ಮಗು ಸೇರಿ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಜ.28. ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮಗು ಸೇರಿದಂತೆ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಶಾಂತಿಪುರಂ ಬಳಿ ನಡೆದಿದೆ. ಮೃತರನ್ನು ಗುಡಪಲ್ಲಿ ನಿವಾಸಿಗಳಾದ ನಾರಾಯಣಮ್ಮ(40), ಮಮತ(24), ಹಾಗೂ 2 ವರ್ಷದ ಪುಟಾಣಿ ಯಶ್ವಂತಿ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬೈಕ್ ಸವಾರ ರಾಜಪ್ಪರನ್ನು ಕುಪ್ಪಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಬೈಕಿನಲ್ಲಿ ಶಾಂತಿಪುರಂನಿಂದ ಕುಪ್ಪಂ ಕಡೆಗೆ ತೆರಳುತ್ತಿದ್ದ ಇವರ ಬೈಕ್ ರಾಚಪ್ಪನ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದ

ಲಾರಿಗೆ ಢಿಕ್ಕಿ ಹೊಡೆದ ಬೈಕ್ ► ಮಗು ಸೇರಿ ಮೂವರು ಮೃತ್ಯು Read More »

ಕರ್ನಾಟಕ

ಮನ್ ಕಿ ಬಾತ್ ನಲ್ಲಿ ಮೈಸೂರಿನ ಯುವಕನ ಅನುಭವ ಹಂಚಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.28. ಪ್ರಧಾನಿ ನರೇಂದ್ರ ಮೋದಿಯವರ 2018ನೇ ವರ್ಷದ ಮೊದಲ ಮನ್ ಕಿ ಬಾತ್ ಭಾನುವಾರದಂದು ನಡೆದಿದ್ದು, ಅದರಲ್ಲಿ ಮೈಸೂರಿನ ದರ್ಶನ್ ಎಂಬವರ ಅನುಭವವನ್ನು ಹಂಚಿಕೊಂಡಿದ್ದಾರೆ. ತಿಂಗಳಿಗೆ ತಂದೆಯ ಔಷಧಿಗಾಗಿ 6 ಸಾವಿರ ರೂ. ಖರ್ಚು ಮಾಡುತ್ತಿದ್ದ ದರ್ಶನ್ ರವರು ಇದೀಗ ಜನೌಷಧಿ ಕೇಂದ್ರದಿಂದ ಖರೀದಿಸುವುದರ ಮೂಲಕ ಶೇ.75ರಷ್ಟು ಹಣವನ್ನು ಉಳಿತಾಯ ಮಾಡುತ್ತಿದ್ದಾರೆ. ಜನೌಷಧಿ ಕೇಂದ್ರದ ಬಗ್ಗೆ ದರ್ಶನ್ ಅನುಭವವನ್ನು ಪ್ರಧಾನಿ ಮೋದಿ ಅವರು ತಮ್ಮ ಮನದ ಮಾತು ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ

ಮನ್ ಕಿ ಬಾತ್ ನಲ್ಲಿ ಮೈಸೂರಿನ ಯುವಕನ ಅನುಭವ ಹಂಚಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಅಮಾಯಕ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಬಶೀರ್ ಹತ್ಯೆ ಬಗ್ಗೆ ನಮಗೆ‌ ಚಿಂತೆಯಿಲ್ಲ ► ಕೊಲೆಗಡುಕರಿಗೆ ಬೆಂಬಲ ಸೂಚಿಸಿದ ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.28. ಅಮಾಯಕ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯಾಗಿದೆ. ಆದ್ದರಿಂದ ಬಶೀರ್ ಹತ್ಯೆಯ ಬಗ್ಗೆ ನಮಗೇನೂ ಚಿಂತೆಯಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೊನ್ನೆ ದೀಪಕ್ ರಾವ್ ಕೊಲೆಗೆ ಪ್ರತೀಕಾರವಾಗಿ ಬಶೀರ್ ಕೊಲೆ ನಡೆಯಿತು. ಒಬ್ಬ ಅಮಾಯಕ, ಮುಗ್ದ ಮುಸ್ಲಿಮನ ಹತ್ಯೆಯಾಯಿತು ಎಂದು ಮಾಧ್ಯಮಗಳಲ್ಲಿ ಭಾರೀ ವರದಿ ಬಂತು. ಬಶೀರ್ ಹತ್ಯೆಗೂ ಮೊದಲು ಅಮಾಯಕ

ಅಮಾಯಕ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಬಶೀರ್ ಹತ್ಯೆ ಬಗ್ಗೆ ನಮಗೆ‌ ಚಿಂತೆಯಿಲ್ಲ ► ಕೊಲೆಗಡುಕರಿಗೆ ಬೆಂಬಲ ಸೂಚಿಸಿದ ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿಕೆ Read More »

ಕರಾವಳಿ

ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4ರನ್ವಯ 2018-19 ನೇ ಸೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ ಟ್ರಸ್ಟ್ ಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ “ಅರ್ಜಿ ನಮೂನೆ” (Form-I) ರಲ್ಲಿ ದಿನ ಜನವರಿ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಲು, ಜಂಟಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು, ಇವರಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ

ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ Read More »

ಕರ್ನಾಟಕ

ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ತುಂಬೆ, ಜ.28. ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಭಾನುವಾರದಂದು ತುಂಬೆ ಸಮೀಪದ ಮಾರಿಪಳ್ಳದಲ್ಲಿ ನಡೆದಿದೆ. ಮೃತ ಯುವಕರನ್ನು ಮಾರಿಪಳ್ಳ ನಿವಾಸಿಗಳಾದ ಸವಾದ್ ಮತ್ತು ರಮ್ಲಾನ್ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ತುಂಬೆಗೆ ಆಗಮಿಸಿ ಈಜಲು ನೇತ್ರಾವತಿ ನದಿಗಿಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಆಳ ತಿಳಿಯದೆ ಇವರಿಬ್ಬರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು Read More »

ಕರಾವಳಿ

ದಿಢೀರ್ ಬೆಳವಣಿಗೆಯಲ್ಲಿ ಶಾಸಕ ಆನಂದ್ ಸಿಂಗ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.27. ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿರುವ ಸ್ಪೀಕರ್ ಕೋಳಿವಾಡ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಶಾಸಕ ಆನಂದ್ ಸಿಂಗ್, ‘ನಾನು ಈ ದಿನ, ಕರ್ನಾಟಕ ವಿಧಾನಸಭೆಯ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಒಂದು ಸಾಲಿನ

ದಿಢೀರ್ ಬೆಳವಣಿಗೆಯಲ್ಲಿ ಶಾಸಕ ಆನಂದ್ ಸಿಂಗ್ ರಾಜೀನಾಮೆ Read More »

ಕರ್ನಾಟಕ

ಔಷಧಿಗೆ ಚೀಟಿ ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ► ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.28 ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗಿನಿಂದ ಔಷಧಿ ತರಿಸಲು ಚೀಟಿ ನೀಡುವ ಕೆಟ್ಟ ಪದ್ಧತಿಗೆ ಕಡಿವಾಣ ಹಾಕಲಾಗಿದ್ದು, ಔಷಧಿಗಾಗಿ ಚೀಟಿ ಬರೆದು ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚೆಗೆ ಹೊಸನಗರದಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಯಿಂದ 100 ಹಾಸಿಗೆಗೆ ಮೇಲ್ದರ್ಜೆಗೇರಿಸಿದ ಸಾರ್ವಜನಿಕ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ, ಎಲ್ಲಾ ಆಸ್ಪತ್ರೆಗಳಲ್ಲಿ ಮುಂದಿನ ಕೆಲವೇ ದಿನಗಳಲ್ಲಿ

ಔಷಧಿಗೆ ಚೀಟಿ ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ► ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ Read More »

ಕರ್ನಾಟಕ

ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.28. ಸುಮಾರು 18 ವರುಷಗಳ ಹಿಂದೆ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎಲ್ ಪಿಸಿ ವಾರಂಟ್ ಆರೋಪಿಯೊಬ್ಬನನ್ನು ಸಂಪ್ಯ ಪೊಲೀಸರು ಬಂಧಿಸಿದ ಘಟನೆ ಶನಿವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಇಂದಿರಾನಗರದ ಪೂಡಿಪಲ್ಲಿ ನಿವಾಸಿ ಅಹಮ್ಮದ್ ಎಂಬವರ ಪುತ್ರ ಹಾರೀಸ್(38) ಎಂದು ಗುರುತಿಸಲಾಗಿದೆ. ಆರೋಪಿಯು ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ಕಾಸರಗೋಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ Read More »

ಕರಾವಳಿ
Scroll to Top