ಅಪರಿಚಿತ ವಾಹನ ಢಿಕ್ಕಿ ► ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಹಳೇಬೀಡು, ಜ. 27. ಅಪರಿಚಿತ ವಾಹನ‌ವೊಂದು ಢಿಕ್ಕಿಹೊಡೆದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಮೃತಪಟ್ಟ ಘಟನೆ ಹಳೇಬೀಡು-ಜಾವಗಲ್ ರಸ್ತೆಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಹಳೇಬೀಡು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ನಾಗರಾಜ್ (29) ಎಂದು ಗುರುತಿಸಲಾಗಿದೆ. ನಾಗರಾಜ್ ‌ಶನಿವಾರ ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಢಿಕ್ಕಿ ► ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು Read More »

ಕರ್ನಾಟಕ

ರಾಜ್ಯಾದ್ಯಂತ ನಾಳೆ(ಜ.28) ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.27. ರಾಜ್ಯದಲ್ಲಿ ಜನವರಿ 28, 2018 (ಮೊದಲನೇ ಸುತ್ತು) ಮತ್ತು ಮಾರ್ಚ್ 11, 2018 (ಎರಡನೇ ಸುತ್ತು) ರಂದು ಎರಡು ಹಂತದಲ್ಲಿ ನಡೆಯುವ ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ 0-5 ವಯೋಮಿತಿಯ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಕೆ. ರತ್ನಪ್ರಭಾ ಅವರು ಸೂಚಿಸಿದರು. 2018 ರ ರಾಷ್ಟ್ರೀಯ ಲಸಿಕಾ ದಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ವಿಧಾನಸೌಧದಲ್ಲಿ ಇಂದು

ರಾಜ್ಯಾದ್ಯಂತ ನಾಳೆ(ಜ.28) ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ Read More »

ಕರ್ನಾಟಕ

ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಜ.27. ಜಾತಿ ನಿಂದನೆ ಆರೋಪದಲ್ಲಿ ಬಂಧಿತನಾಗಿದ್ದ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ನಿವಾಸಿ ನಾಟಿ ವೈದ್ಯ ಅನುರಾಧ ಗೌಡರಿಗೆ ಶನಿವಾರದಂದು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆಲಂಕಾರು ಗ್ರಾಮದ ಕೇಪುಳು ನಿವಾಸಿ ರಾಘವ ಎಂಬವರು ಕಳೆದ ಮಂಗಳವಾರ ಸೊಂಟ ನೋವಿನ ಸಮಸ್ಯೆಗೆ ಮಸಾಜ್ ಮಾಡಿಸಲು ಹೋದ ಸಂದರ್ಭದಲ್ಲಿ ಅನುರಾಧ ಗೌಡರು ತಮ್ಮ ಮನೆಯೊಳಗೆ ಪ್ರವೇಶಿಸುವುದನ್ನು ತಡೆದು ನೀನು ಯಾವ ಜಾತಿಯವನು ಎಂದು ಕೇಳಿ ಅಪಹಾಸ್ಯ ಮಾಡಿ ಅವಾಚ್ಯವಾಗಿ ಬೈದು ಜಾತಿ

ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು Read More »

ಕರಾವಳಿ

ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.27. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮೈಸೂರಿನ ಕೆ.ಆರ್. ಪೇಟೆಯ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢ ಸಾವನ್ನಪ್ಪಿದ ವಿದ್ಯಾರ್ಥಿನಿ ಝೈಬುನ್ನೀಸಾಳ ಸಾವಿನ ಸಮಗ್ರ ತನಿಖೆ ಹಾಗು ಹೆಚ್ಚಿನ ಪರಿಹಾರ ಮೊತ್ತ ನೀಡುವಂತೆ ಆಗ್ರಹಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಸವಾದ್ ಕಲ್ಲರ್ಪೆ ಮಾತನಾಡಿ, ರಾಜ್ಯದಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಿತಿಮೀರುತ್ತಿದೆ. ಸರಕಾರ ಎಚ್ಚೆತ್ತುಕೊಂಡು

ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ Read More »

ಕರಾವಳಿ

ಪಾಲ್ತಾಡು: ವ್ಯಕ್ತಿಯ ಅಪಹರಿಸಿ ಹಲ್ಲೆಗೈದ ಪ್ರಕರಣ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.27. ಕಳೆದ ಡಿಸೆಂಬರ್ ನಲ್ಲಿ ಬೆಳ್ಳಾರೆಯ ಪಾಲ್ತಾಡು ಎಂಬಲ್ಲಿ ವ್ಯಕ್ತಿಯೋರ್ವರನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸಿರುವ ಬೆಳ್ಳಾರೆ ಪೊಲೀಸರು ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಡಿಕೇರಿ ನಿವಾಸಿಗಳಾದ ಅಯ್ಯೂಬ್, ಮಹಮ್ಮದ್ ಮುಸ್ತಫಾ, ಪವನ್ ಎಂದು ಗುರುತಿಸಲಾಗಿದೆ. ಪಾಲ್ತಾಡು ನಿವಾಸಿ ಅಬ್ಬಾಸ್ ಎಂಬವರನ್ನು ಶಾನಿಫ್ ಅವಮಾನಿಸಿದ್ದಕ್ಕೆ ಪ್ರತೀಕಾರವಾಗಿ ಅಬ್ಬಾಸ್ ರ ಪುತ್ರ ಸಿದ್ದೀಕ್ ತನ್ನ ಗೆಳೆಯರ ಮೂಲಕ ಡಿಸೆಂಬರ್ 19 ರಂದು ಶಾನಿಫ್ ರನ್ನು ಬೆಳ್ಳಾರೆಯ ಪಾಲ್ತಾಡಿನಿಂದ ಅಪಹರಿಸಿದ್ದರು. ಪ್ರಕರಣದ ಜಾಡು ಹಿಡಿದ

ಪಾಲ್ತಾಡು: ವ್ಯಕ್ತಿಯ ಅಪಹರಿಸಿ ಹಲ್ಲೆಗೈದ ಪ್ರಕರಣ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಜನವರಿ 31ರಂದು ಚಂದ್ರ ಗ್ರಹಣದ ಹಿನ್ನೆಲೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ.27. ಇದೇ 31ರ ಬುಧವಾರ ಸಂಜೆ ಪೂರ್ಣ ಚಂದ್ರ ಗ್ರಹಣ ಸಂಭವಿಸಲಿರುವುದರಿಂದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.31ರಂದು ಚಂದ್ರ ಗ್ರಹಣದ ನಿಮಿತ್ತ ಶ್ರೀ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 31 ಬುಧವಾರದಂದು 6.30ರಿಂದ ಬೆಳಗ್ಗೆ 9 ಗಂಟೆಯ ತನಕ ಮಾತ್ರ ದರ್ಶನ ಇರುತ್ತದೆ. ಮಧ್ಯಾಹ್ನದ ಮಹಾಪೂಜೆಯು ಬೆಳಗ್ಗೆ 8 ಗಂಟೆಗೆ ನೆರವೇರಲಿದೆ. ಬೆಳಗ್ಗೆ 9 ಗಂಟೆಯ ನಂತರ ದೇವಳದಲ್ಲಿ ಯಾವುದೇ ಸೇವೆಗಳು ನೆರವೇರುವುದಿಲ್ಲ

ಜನವರಿ 31ರಂದು ಚಂದ್ರ ಗ್ರಹಣದ ಹಿನ್ನೆಲೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ Read More »

ಕರಾವಳಿ

ಮಂಗಳೂರು, ಎಟಿಎಂ ದರೋಡೆಗೆ ವಿಫಲ ಯತ್ನ ► ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ದರೋಡೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.27. ನಗರದ ವೆಲೇನ್ಸಿಯಾದಲ್ಲಿರುವ ಎಟಿಎಮ್ ದರೋಡೆಯೊಂದು ಪತ್ರಕರ್ತರ ಸಮಯಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶನಿವಾರ ಮಧ್ಯರಾತ್ರಿ ವೆಲೆನ್ಸಿಯಾ ಕೆನರಾ ಬ್ಯಾಂಕ್ ಎಟಿಎಮ್ ಬಳಿ ಬುರ್ಕಾ ಹಾಕಿಕೊಂಡು ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವ ಕುಳಿತುಕೊಂಡಿರುವುದನ್ನು ನೋಡಿದ ಪತ್ರಕರ್ತರೋರ್ವರು ತಕ್ಷಣವೇ ಪೋಲಿಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಸ್ಥಳಕ್ಕಾಗಮಿಸಿ ಎಟಿಎಂ ದರೋಡೆಯನ್ನು ವಿಫಲಗೊಳಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಘಟನೆಯ ತನಿಖೆ ನಡೆಯುತ್ತಿದೆ.

ಮಂಗಳೂರು, ಎಟಿಎಂ ದರೋಡೆಗೆ ವಿಫಲ ಯತ್ನ ► ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ದರೋಡೆ ಯತ್ನ Read More »

ಕರಾವಳಿ

ಕದಂಬ ಹಿತರಕ್ಷಣಾ ಸಂಘಟನೆಯಿಂದ ರಕ್ತದಾನ ಶಿಬಿರ ► 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸನ್ಮಾನ

(ನ್ಯೂಸ್ ಕಡಬ) newskadaba ಕಡಬ, ಜ.27. ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆಯ 4ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಇಂಡಿಯನ್ ರೆಡ್‌ಕ್ರಾಸ್ ರಕ್ತ ನಿಧಿ ಸೊಸೈಟಿಯ ಸಹಯೋಗದಲ್ಲಿ ಶುಕ್ರವಾರದಂದು ಕಡಬದ ಬಾಬು ಮತ್ತು ಭಾಗೀರಥಿ ಟವರ್‍ಸ್‌ನ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ರಕ್ತವರ್ಗೀಕರಣ ಮತ್ತು ಮಧುಮೇಹ ಪರೀಕ್ಷೆ ನಡೆಯಿತು. ಕಾರ್ಯಕ್ರಮವನ್ನು ದಯಾನಂದ ನಾಯ್ಕ್ ಮೇಲಿನಮನೆ ಹಾಗೂ ಮಹಾಬಲ ನಾಯ್ಕ್ ಮೇಲಿನಮನೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ

ಕದಂಬ ಹಿತರಕ್ಷಣಾ ಸಂಘಟನೆಯಿಂದ ರಕ್ತದಾನ ಶಿಬಿರ ► 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸನ್ಮಾನ Read More »

ಕರಾವಳಿ

ತಣ್ಣೀರುಬಾವಿ ಶಿವರಾಜ್ ಹತ್ಯೆ ಪ್ರಕರಣ ► ಮತ್ತಿಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.26. ಇತ್ತೀಚೆಗೆ ಪಣಂಬೂರು ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ನಡೆದ ಶಿವರಾಜ್ ಕರ್ಕೇರಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತ‌ ಆರೋಪಿಗಳನ್ನು ತಣ್ಣೀರುಬಾವಿ ಕೋರ್ದಬ್ಬು ದೈವಸ್ಥಾನ ಬಳಿಯ ಜೀವನ್ ಪಿರೇರಾ(36) ಹಾಗೂ ಕುದ್ರೋಳಿ ಬೆಂಗ್ರೆ ನಿವಾಸಿ ಸತೀಶ್(29) ಎಂದು ಗುರುತಿಸಲಾಗಿದೆ. ಇವರನ್ನು ಕೊಲೆ ಕೃತ್ಯಕ್ಕೆ ಸಂಚು ರೂಪಿಸಲು ಸಹಕರಿಸಿದ್ದ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದೆ.  

ತಣ್ಣೀರುಬಾವಿ ಶಿವರಾಜ್ ಹತ್ಯೆ ಪ್ರಕರಣ ► ಮತ್ತಿಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ Read More »

ಕರಾವಳಿ

ನಕಲಿ ಅಂಕಪಟ್ಟಿ ತಯಾರಿ ಜಾಲ ಪತ್ತೆ ► ಹಲವು ಸೊತ್ತುಗಳ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.26. ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಭಾರೀ ವಂಚನೆ ನಡೆಸುತ್ತಿದ್ದ ಇಬ್ಬರನ್ನು ಮಹತ್ವದ ಕಾರ್ಯಾಚರಣೆ ನಡೆಸಿ ಹಲವು ಸೊತ್ತುಗಳ ಸಮೇತ ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಶ್ರೀನಿವಾಸ್‌ ರೆಡ್ಡಿ ಮತ್ತು ಸುನೀಲ್‌ ಕುಮಾರ್‌ ಎಂದು ಗುರುತಿಸಲಾಗಿದ್ದು, ಇವರು ಹಲವು ವಂಚಕರಿಗೆ ನಕಲಿ ಅಂಕಪಟ್ಟಿ ತಯಾರಿಸಿ ನೀಡಿ ಹಣ ಮಾಡಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆ ವೇಳೆ ಕಂಪ್ಯೂಟರ್‌, ಜೆರಾಕ್ಸ್‌ ಯಂತ್ರ, ಪ್ರಿಂಟಿಂಗ್‌ ಯತ್ರ ಮತ್ತು

ನಕಲಿ ಅಂಕಪಟ್ಟಿ ತಯಾರಿ ಜಾಲ ಪತ್ತೆ ► ಹಲವು ಸೊತ್ತುಗಳ ಸಹಿತ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ
Scroll to Top