ಪುಣ್ಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.24. ಮೂರ್ಛೆ ರೋಗ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ತನ್ನ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಪುಣ್ಚತ್ತಾರು ಸಮೀಪದ ನೋಲ್ಮೆ ನಿವಾಸಿ ಕುಶಾಲಪ್ಪ ಗೌಡರ ಪುತ್ರಿ ಪವಿತ್ರ (19) ಎಂದು ಗುರುತಿಸಲಾಗಿದೆ. ಪುಣ್ಚತ್ತಾರು ಎಂಬಲ್ಲಿ ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದ ಪವಿತ್ರ ಬುಧವಾರದಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಛಾವಣಿಯ ಅಡ್ಡಕ್ಕೆ ಚೂಡಿದಾರ್ ಶಾಲು ಹಾಕಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. […]

ಪುಣ್ಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

‌ಮಹದಾಯಿ ವಿಚಾರವಾಗಿ ನಾಳೆ (ಜ.25) ಕರ್ನಾಟಕ ಬಂದ್ ► ಶಾಲೆಗಳಿಗೆ ರಜೆ ನೀಡಲು ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.24. ಮಹದಾಯಿ ವಿಚಾರದಲ್ಲಿ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಕರೆ ನೀಡಲಾಗಿರುವ ಜನವರಿ 25 ರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಆಡಳಿತ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದ್ದಾರೆ. ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ್ ಗೆ ಕರೆ ನೀಡಲಾಗಿದ್ದರೂ, ಬಂದ್ ಸಂದರ್ಭದಲ್ಲಿ

‌ಮಹದಾಯಿ ವಿಚಾರವಾಗಿ ನಾಳೆ (ಜ.25) ಕರ್ನಾಟಕ ಬಂದ್ ► ಶಾಲೆಗಳಿಗೆ ರಜೆ ನೀಡಲು ನಿರ್ಧಾರ Read More »

ಕರ್ನಾಟಕ

ಬಲ್ಯ: ನಾಟಿ ಮದ್ದಿಗೆ ತೆರಳಿದವರಿಗೆ ಜಾತಿ ನಿಂದನೆಯ ಆರೋಪ ► ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ.24. ನಾಟಿ ಮದ್ದಿಗೆಂದು ತೆರಳಿದ್ದ ಸಂದರ್ಭದಲ್ಲಿ ಜಾತಿ ನಿಂದನೆಗೈದಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಕಡಬ ಠಾಣೆಗೆ ದೂರು ನೀಡಿದ ಘಟನೆ ಬುಧವಾರದಂದು ನಡೆದಿದೆ. ಆಲಂಕಾರು ಗ್ರಾಮದ ಕೇಪುಳು ನಿವಾಸಿ ರಾಘವ ಎಂಬವರು ಸೊಂಟ ನೋವಿಗೆ ಮಸಾಜ್ ಮಾಡಿಸಲೆಂದು ಮಂಗಳವಾರದಂದು ಬಲ್ಯ ಗ್ರಾಮದ ಪುತ್ತಿಲ ನಿವಾಸಿ ಅನುರಾಧ ಗೌಡ ಎಂಬವರ ಮನಯೊಳಗಡೆ ಹೋದದ್ದಕ್ಕೆ ಅನುರಾಧ ಗೌಡರು ಯಾವ ಜಾತಿಯವನೆಂದು ಕೇಳಿ ಹೀಯಾಳಿಸಿ ಅವ್ಯಾಚ್ಯವಾಗಿ ಬೈದು ಜಾತಿ ನಿಂದನೆ ಮಾಡಿದರೆಂದು ರಾಘವರು ಕಡಬ ಠಾಣೆಗೆ

ಬಲ್ಯ: ನಾಟಿ ಮದ್ದಿಗೆ ತೆರಳಿದವರಿಗೆ ಜಾತಿ ನಿಂದನೆಯ ಆರೋಪ ► ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ

ಬಶೀರ್ ಹತ್ಯೆಗೆ ಜೈಲಿನಲ್ಲೇ ಸಂಚು ಹಾಕಿದ ಆರೋಪಿಗಳು ► ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.24. ಇತ್ತೀಚಿಗೆ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಗೆ ಜೈಲಿನಲ್ಲೇ ಸಂಚು ರೂಪಿಸಲಾಗಿತ್ತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬೇರೆ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಿಥುನ್ ಕಲ್ಲಡ್ಕ, ತಿಲಕರಾಜ್ ಶೆಟ್ಟಿ, ರಾಜು ಅಲಿಯಾಸ್ ರಾಜೇಶ ಎಂಬವರು, ಜೈಲಿನಲ್ಲಿ ಇದ್ದುಕೊಂಡು ಕೊಟ್ಟಾರ ಚೌಕಿಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಚು ರೂಪಿಸಿದ್ದರು. ಅದರಂತೆ ಬಶೀರ್ ಅವರ ಬಗ್ಗೆ ಮಾಹಿತಿ ಇದ್ದ

ಬಶೀರ್ ಹತ್ಯೆಗೆ ಜೈಲಿನಲ್ಲೇ ಸಂಚು ಹಾಕಿದ ಆರೋಪಿಗಳು ► ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಹೇಳಿಕೆ Read More »

ಕರಾವಳಿ

ದೀಪಕ್ ರಾವ್ ಕೊಲೆ ಪ್ರಕರಣ. ► ಆರು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.24. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಂಚು ರೂಪಿಸಿ ಪ್ರಮುಖ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪದಲ್ಲಿ ಮತ್ತೆ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಚು ಹಾಗೂ ಕೃತ್ಯಕ್ಕೆ ನೆರವು ನೀಡಿದ ಆರೋಪದಲ್ಲಿ ಚೊಕ್ಕಬೆಟ್ಟುವಿನ ಮುಹಮ್ಮದ್ ರಫೀಕ್, ಇರ್ಫಾನ್, ಕಾಟಿಪಳ್ಳದ ಮುಹಮ್ಮದ್ ಅನಸ್, ಮುಹಮ್ಮದ್ ಝಾಹೀದ್, ಹಿದಾಯಿತುಲ್ಲಾ ಹಾಗೂ ಚೊಕ್ಕಬೆಟ್ಟುವಿನ ಇಮ್ರಾನ್

ದೀಪಕ್ ರಾವ್ ಕೊಲೆ ಪ್ರಕರಣ. ► ಆರು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ► ಪ್ರತೀ ವಿದ್ಯಾರ್ಥಿಗೆ ಕನಿಷ್ಠ 1 ಜಿಬಿ ಡೇಟಾ ನೀಡಲು ಕೇಂದ್ರ ಸರಕಾರದಿಂದ ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದ್ದು, ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಮಾನವ ಸಂಪನ್ಮೂಲ ಸಚಿವಾಲಯದಿಂದ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ

ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ► ಪ್ರತೀ ವಿದ್ಯಾರ್ಥಿಗೆ ಕನಿಷ್ಠ 1 ಜಿಬಿ ಡೇಟಾ ನೀಡಲು ಕೇಂದ್ರ ಸರಕಾರದಿಂದ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ವ್ಯಕ್ತಿಯನ್ನು ಅರ್ಧ ಮಣ್ಣಿನಲ್ಲಿ ಹೂತು ಉಳಿದರ್ಧಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ► ಕಾಫಿ ನಾಡಿನಲ್ಲಿ ವ್ಯಕ್ತಿಯ ಸಜೀವ ದಹನ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.24. ವ್ಯಕ್ತಿಯ ಅರ್ಧ ದೇಹವನ್ನು ಮಣ್ಣಲ್ಲಿ ಹೂತು ಹಾಕಿ, ಉಳಿದ ಭಾಗಕ್ಕೆ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ಮಂಗಳವಾರದಂದು ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮೂಡಿಗೆರೆ ತಾಲ್ಲೂಕಿನ ಕನ್ನಹಳ್ಳಿ ನಿವಾಸಿ ಸಂಜೀವ್ ಕುಮಾರ್(45) ಎಂದು ಗುರುತಿಸಲಾಗಿದೆ. ಸಂಜೀವ್ ಕುಮಾರ್ ಅರ್ಧ ದೇಹವನ್ನು ಮಣ್ಣಿನಲ್ಲಿ ಹೂಳಲಾಗಿದ್ದು, ಉಳಿದ ಭಾಗಕ್ಕೆ ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆಗೈಯಲಾಗಿದೆ‌ ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ

ವ್ಯಕ್ತಿಯನ್ನು ಅರ್ಧ ಮಣ್ಣಿನಲ್ಲಿ ಹೂತು ಉಳಿದರ್ಧಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ► ಕಾಫಿ ನಾಡಿನಲ್ಲಿ ವ್ಯಕ್ತಿಯ ಸಜೀವ ದಹನ Read More »

ಕರ್ನಾಟಕ

ಪ್ರಧಾನಿ ಮೋದಿಯ ವಿರುದ್ಧ ಧ್ವನಿಯೆತ್ತಿದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ► ಮೂರು ವರ್ಷಗಳಲ್ಲಿ 30 ಪತ್ರ ಬರೆದರೂ ಮೋದಿ ಉತ್ತರಿಸಿಲ್ಲ: ಅಣ್ಣಾ ಹಜಾರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ತಾನು ನಡೆಸಿದ ಚಳವಳಿಯ ಮೂಲಕ ಸಿಎಂ ಅರವಿಂದ್ ಕೇಜ್ರಿವಾಲ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಧ್ವನಿ ಎತ್ತಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅಣ್ಣಾ ಹಜಾರೆ, ನಾನು ಪ್ರಧಾನಿ ಮೋದಿಯವರಿಗೆ 30ಕ್ಕೂ ಅಧಿಕ ಪತ್ರಗಳನ್ನು ಬರೆದಿದ್ದೇನೆ, ಆದರೆ ಒಂದಕ್ಕೂ ಪ್ರತಿಕ್ರಿಯೆ ಕೊಟ್ಟಿಲ್ಲ ಎಂದು ಆರೋಪಿಸಿದರು. ಕಳೆದ ಮೂರು ವರ್ಷಗಳಲ್ಲಿ ನಾನು 30ಕ್ಕೂ

ಪ್ರಧಾನಿ ಮೋದಿಯ ವಿರುದ್ಧ ಧ್ವನಿಯೆತ್ತಿದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ► ಮೂರು ವರ್ಷಗಳಲ್ಲಿ 30 ಪತ್ರ ಬರೆದರೂ ಮೋದಿ ಉತ್ತರಿಸಿಲ್ಲ: ಅಣ್ಣಾ ಹಜಾರೆ Read More »

ರಾಷ್ಟ್ರೀಯ ನ್ಯೂಸ್

ಜಿಯೋಗೆ ಸೆಡ್ಡು ಹೊಡೆದ ಏರ್ ಟೆಲ್ ► ಭರ್ಜರಿ ಆಫರ್ – ಗ್ರಾಹಕರಿಗೆ ಬಂಪರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ಏರ್ ಟೆಲ್ ಮತ್ತು ಜಿಯೋ ಮಧ್ಯೆ ಟೆಲಿಕಾಂ ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಗ್ರಾಹಕರನ್ನು ಆಕರ್ಷಿಸಲು ಅದು ಇನ್ನಿಲ್ಲದ ಕಸರತ್ತು ನಡೆಸುತ್ತಿರುವುದರಿಂದ ಗ್ರಾಹಕ ಮಾತ್ರ ಸಂತೋಷದಿಂದಿದ್ದಾನೆ. ಜಿಯೋಗೆ ಸಡ್ಡು ಹೊಡೆಯುವಂತೆ ಏರ್ ಟೆಲ್ ಇದೀಗ ತನ್ನ ಯೋಜನೆಯನ್ನು ನವೀಕರಿಸಿದ್ದು, ಆಯ್ದ ಗ್ರಾಹಕರಿಗೆ 149 ರೂ.ಗಳ ಯೋಜನೆಯಲ್ಲಿ ಅನಿಯಮಿತ ಸ್ಥಳೀಯ ಹಾಗೂ ಎಸ್‌ಟಿಡಿ ಕರೆಗಳೊಂದಿಗೆ ಪ್ರತಿದಿನ ನೂರು ಎಸ್‌ಎಂಎಸ್ ಉಚಿತವಾಗಿ ಸಿಗಲಿದೆ. 28 ದಿನಗಳ ವ್ಯಾಲಿಡಿಟಿಯೊಂದಿಗೆ 1 ಜಿಬಿ ಡಾಟಾ ಸಿಗಲಿದೆ.

ಜಿಯೋಗೆ ಸೆಡ್ಡು ಹೊಡೆದ ಏರ್ ಟೆಲ್ ► ಭರ್ಜರಿ ಆಫರ್ – ಗ್ರಾಹಕರಿಗೆ ಬಂಪರ್ Read More »

ತಂತ್ರಜ್ಞಾನ

ಸಾಲು ಸಾಲು ರಜೆಗಳಿಂದಾಗಿ ನಾಳೆಯಿಂದ ಬ್ಯಾಂಕ್ ವ್ಯವಹಾರ ಸ್ಥಗಿತ ► ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಬಿಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.24. ಜನವರಿ 25 ರಂದು ರಾಜ್ಯ ಬಂದ್ ಸೇರಿದಂತೆ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ಸಾಲು ಸಾಲು ರಜೆಗಳಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ವಹಿವಾಟು ಸೇರಿದಂತೆ, ಎಟಿಎಂ ಸೇವೆಗಳು ಬಹುತೇಕ ಸ್ಥಗಿತಗೊಳ್ಳಲಿದ್ದು, ಈ ನಿಟ್ಟಿನಲ್ಲಿ ನಿಮಗೆ ಬ್ಯಾಂಕ್ ನಲ್ಲಿ ಏನಾದರೂ ಕೆಲಸವಿದ್ದಲ್ಲಿ ಇಂದೇ ನಿಮ್ಮ ಕೆಲಸಗಳನ್ನು ಮುಗಿಸಿಕೊಂಡು ಬಿಡಿ‌. ಜನವರಿ 25 ಗುರುವಾರ ರಾಜ್ಯ ಬಂದ್ ಇರುವುದರಿಂದ ಅಂದು ಬಂದ್ ಹಿನ್ನೆಲೆಯಲ್ಲಿ ಬ್ಯಾಂಕ್ ಗಳು ಕೆಲಸ ಮಾಡುವುದು ಅನುಮಾನವಾಗಿದ್ದು, ಶುಕ್ರವಾರ 26

ಸಾಲು ಸಾಲು ರಜೆಗಳಿಂದಾಗಿ ನಾಳೆಯಿಂದ ಬ್ಯಾಂಕ್ ವ್ಯವಹಾರ ಸ್ಥಗಿತ ► ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಬಿಡಿ Read More »

ರಾಷ್ಟ್ರೀಯ ನ್ಯೂಸ್
Scroll to Top