ಧಗಧಗನೆ ಉರಿದ ಕೈಕಂಬ ಗುಡ್ಡೆ ► ಸುಮಾರು 4 ಎಕರೆ ಗುಡ್ಡೆ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.14. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಕೈಕಂಬದ ಪೂಂಜಾ ಸ್ಟೇಡಿಯಂನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡು ಸ್ಥಳೀಯರನ್ನು ಭಯ ಭೀತರನ್ನಾಗಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಬಂಟ್ವಾಳ ಸಮೀಪದಲ್ಲಿರುವ ಪೂಂಜಾ ಸ್ಟೇಡಿಯಂನ ಸುಮಾರು 4 ಎಕರೆ ಪ್ರದೇಶವು ಬೆಂಕಿಗಾಹುತಿಯಾಗಿದೆ. ಯಾರೋ ಸ್ಥಳೀಯರು ಹುಲ್ಲುಗಳನ್ನು ನಾಶ ಮಾಡಲು ಬೆಂಕಿಯನ್ನು ಕೊಟ್ಟ ಪರಿಣಾಮ ಬೆಂಕಿ ಸಂಪೂರ್ಣ ಗುಡ್ಡೆಯನ್ನು ಆವರಿಸಿಕೊಂಡಿತ್ತು. ತಕ್ಷಣವೇ ಬಂಟ್ವಾಳ ಅಗ್ನಿಶಾಮಕದಳದವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸೇರಿ ಬೆಂಕಿಯನ್ನು ನಂದಿಸುವಲ್ಲಿ […]

ಧಗಧಗನೆ ಉರಿದ ಕೈಕಂಬ ಗುಡ್ಡೆ ► ಸುಮಾರು 4 ಎಕರೆ ಗುಡ್ಡೆ ಬೆಂಕಿಗಾಹುತಿ Read More »

ಕರಾವಳಿ

ಆ್ಯಪಲ್ ತುಂಡು ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ.14. ಸೇಬು ತುಂಡೊಂದು ಗಂಟಲಲ್ಲಿ ಸಿಕ್ಕಿ ಹಾಕಿಕೊಂಡ ಪರಿಣಾಮ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರದ ನಕ್ಕಲಕುಂಟೆಯ ಶಾಂತಿನಗರ ನಿವಾಸಿ ಆಸೀಫ್ (11) ಎಂದು ಗುರುತಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಆಸೀಫ್ ಶನಿವಾರದಂದು ಸೇಬು ಹಣ್ಣು ತಿನ್ನುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾನೆ. ಆಸೀಫ್ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಜಿಲ್ಲಾ ಆಸ್ಪತ್ರೆಯ ವೈದ್ಯರು ಗಂಟಲಿನಲ್ಲಿ ಸೇಬು ಸಿಕ್ಕಿಹಾಕಿಕೊಂಡಿದ್ದರಿಂದಲೇ ಬಾಲಕ

ಆ್ಯಪಲ್ ತುಂಡು ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು Read More »

ಕರ್ನಾಟಕ

ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ ► ಶಪಥ ಹಾಕಿದ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕೋಲಾರ, ಜ.14. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯದಿದ್ದರೆ ನನ್ನ ಹೆಸರು ಯಡಿಯೂರಪ್ಪನೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದೇವೆ. ನಾವು ಅಧಿಕಾರಕ್ಕೆ ಬಂದ ತಕ್ಷಣ ಅವರ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಶಪಥ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಹೋದ ಕಡೆಯೆಲ್ಲಾ

ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ ► ಶಪಥ ಹಾಕಿದ ಯಡಿಯೂರಪ್ಪ Read More »

ಕರ್ನಾಟಕ

ಟಾರ್ಗೆಟ್ ಗ್ರೂಪ್‌ನ ಇಲ್ಯಾಸ್ ಹತ್ಯೆ ಪ್ರಕರಣ ► ಆರೋಪಿಗಳ ಸುಳಿವು ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ಟಾರ್ಗೆಟ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಕುಡ್ಪಾಡಿಯ ಇಲ್ಯಾಸ್ ಹತ್ಯೆಯ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದಾರೆ. ಎರಡು ಗುಂಪುಗಳಾಗಿ ವಿಭಾಗಿಸಲ್ಪಟ್ಟ ಟಾರ್ಗೆಟ್ ಗ್ರೂಪ್‌ನ ಒಂದು ಬಣದಿಂದ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಬಗ್ಗೆ ಶಂಕೆ ಇದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಇಲ್ಯಾಸ್ ಟಾರ್ಗೆಟ್ ಗ್ರೂಪ್‌ನಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಈ ಗ್ರೂಪ್‌ ದಾವೂದ್ ಹಾಗೂ ಸಫ್ವಾನ್ ಎಂಬ ಗುಂಪು ಪ್ರತ್ಯೇಕಗೊಂಡು

ಟಾರ್ಗೆಟ್ ಗ್ರೂಪ್‌ನ ಇಲ್ಯಾಸ್ ಹತ್ಯೆ ಪ್ರಕರಣ ► ಆರೋಪಿಗಳ ಸುಳಿವು ಲಭ್ಯ Read More »

ಕರಾವಳಿ

ರಾಮಕುಂಜದ ದೀಪಕ್ ಕೆ.ಟಿ‌.ಯವರಿಗೆ ಪಿ.ಎಚ್.ಡಿ ಪದವಿ

(ನ್ಯೂಸ್ ಕಡಬ) newskadaba.com ಕಡಬ, ಜ.14. ಪುತ್ತೂರು ವಿವೇಕಾನಂದ ಇಂಜೀನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ದೀಪಕ್ ಕೆ.ಟಿ ಅವರಿಗೆ ಬೆಂಗಳೂರು ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. ಸುಳ್ಯ ಕೆ.ವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ|ಜ್ಞಾನೇಶ್ ಅವರ ಮಾರ್ಗದರ್ಶನದಲ್ಲಿ ದೀಪಕ್ ಅವರು ಮಂಡಿಸಿರುವ ಇನ್ವೆಸ್ಟಿಗೇಷನ್ ಆನ್ ಡೆನ್ಸಿಫೈಡ್ ಬಂiೆÆೕಮಾಸ್ ಬ್ರಿಕೇಟ್ ಡೆವಲಪ್ಡ್ ಯೂಸಿಂಗ್ ಅರೆಕನಟ್ ಲೀವ್ಸ್‌ ಆ್ಯಂಡ್ ಕೋಕನಟ್ ಲೀವ್ಸ್‌ ಆ್ಯಸ್ ಎ ಸೋರ್ಸ್ ಆಫ್ ರಿನ್ಯೂವೆಬೆಲ್ ಎನರ್ಜಿ ಎಂಬ ಮಹಾ ಪ್ರಬಂಧಕ್ಕೆ

ರಾಮಕುಂಜದ ದೀಪಕ್ ಕೆ.ಟಿ‌.ಯವರಿಗೆ ಪಿ.ಎಚ್.ಡಿ ಪದವಿ Read More »

ಕರಾವಳಿ

ಬಿಲ್ ಪಾವತಿಸಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಅಕ್ರಮವಾಗಿ ಇರಿಸುವಂತಿಲ್ಲ ► ಬಾಂಬೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ರೋಗಿಯನ್ನು ಅಕ್ರಮವಾಗಿ ಇರಿಸಿಕೊಳ್ಳುವಂತಹುದು ಕಾನೂನು ಬಾಹಿರವಾಗಿದ್ದು, ಪ್ರತಿಯೊಬ್ಬನಿಗೂ ಇದರ ಬಗ್ಗೆ ಅರಿವು ಮೂಡಿಸುವಂತೆ ಬಾಂಬೆ ಹೈಕೋರ್ಟ್ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ‌. ಮುಂಬೈ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಸಾಮಾಜಿಕ ಹಿತಾಸಕ್ತಿ ದಾವೆಯನ್ನು ವಿಚಾರಣೆ ಸಡೆಸಿದ ಕೋರ್ಟ್ ‘ಯಾವುದೇ ರೋಗಿಯನ್ನು ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವುದು ಕಾನೂನು ಬಾಹಿರ’ ಎಂದು ಜಸ್ಟಿಸ್ ಎಸ್. ಸಿ. ಧರ್ಮಾಧಿಕಾರಿ ಹಾಗೂ ಭರತ್ ಡಂಗ್ರೆ ಅವರನ್ನೊಳಗೊಂಡ ಪೀಠವು ಹೇಳಿದೆ. ‘ರೋಗಿಗಳಿಗಿರುವ

ಬಿಲ್ ಪಾವತಿಸಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಅಕ್ರಮವಾಗಿ ಇರಿಸುವಂತಿಲ್ಲ ► ಬಾಂಬೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಐರಾವತ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ► ಸಾರಿಗೆ ಸಚಿವ ಎಚ್.ಎಂ. ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ಶನಿವಾರ ಬೆಳಗ್ಗಿನ ಜಾವ ಹಾಸನದ ಶಾಂತಿಗ್ರಾಮದಲ್ಲಿ ನಡೆದ ಕೆಎಸ್ಸಾರ್ಟಿಸಿ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 3 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. ಅಪಘಾತದಲ್ಲಿ ಅಲ್ಲದೆ, ಗಾಯಗೊಂಡಿರುವ ಎಲ್ಲ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮದಿಂದಲೇ ಭರಿಸಲಾಗುವುದು. ಅಲ್ಲದೆ, ಮೃತರ ವಾರಸುದಾರರಿಗೆ ನಿಗಮದಿಂದ ತಲಾ 15 ಸಾವಿರ ರೂ. ಮಧ್ಯಂತರ ಪರಿಹಾರವನ್ನು ಈಗಾಗಲೇ ವಿತರಣೆ ಮಾಡಲಾಗಿದೆ ಎಂದಿದ್ದಾರೆ. ಅಪಘಾತ ಸಂಭವಿಸುವ ಸಂದರ್ಭದಲ್ಲಿ ವಾಹನದ ವೇಗವು

ಐರಾವತ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ► ಸಾರಿಗೆ ಸಚಿವ ಎಚ್.ಎಂ. ರೇವಣ್ಣ Read More »

ಕರ್ನಾಟಕ

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13. ಮೀನು ಹಿಡಿಯಲೆಂದು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ದೊಡ್ಡ ಕೆರೆಯಲ್ಲಿ ಶನಿವಾರದಂದು ನಡೆದಿದೆ. ಪಟ್ಟಣದ ಆಶ್ರಯ ಕಾಲನಿ ನಿವಾಸಿ ಲೋಕೇಶ ನಾಗರಾಜ ಗಣಪ (೧೨ ) ಮೃತಪಟ್ಟಿದ್ದು ಆತನ ಶವ ಪತ್ತೆ ಮಾಡಲಾಗಿದೆ. ಇನ್ನೋರ್ವ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ‌. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಕೆರೆಗಿಳಿದು ಕಾರ್ಯಾಚರಣೆ ನಡೆಸದೇ ಅತ್ಯಾಧುನಿಕ ರಕ್ಷಣಾ ಸಾಮಗ್ರಿಗಳಿಲ್ಲದೇ ಮೃತ ದೇಹದ ಶೋಧ ಕಾರ್ಯ ವಿಳಂಬಗೊಂಡಿದೆ. ಸ್ಥಳಕ್ಕೆ

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಹಾಸನದಲ್ಲಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ್ಯು ► ಸ್ಮಶಾನ ಮೌನವಾದ ಗಂಡಿಬಾಗಿಲು ಪರಿಸರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.13. ಶನಿವಾರದಂದು ಬೆಳಿಗ್ಗೆ ಹಾಸನ ಸಮೀಪದ ಶಾಂತಿಗ್ರಾಮ ಕೃಷಿ ಕಾಲೇಜಿನ ಸಮೀಪ ನಡೆದ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟ ಎಂಟು ಮಂದಿಯಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಗಂಡಿಬಾಗಿಲು ನಿವಾಸಿಗಳಾದ ಬೆಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಡಯಾನಾ, ಸೋನಿಯಾ ಹಾಗೂ ಬಿಜು ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಕುಟುಂಬದ ಇವರು ರಾತ್ರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ

ಹಾಸನದಲ್ಲಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ್ಯು ► ಸ್ಮಶಾನ ಮೌನವಾದ ಗಂಡಿಬಾಗಿಲು ಪರಿಸರ Read More »

ಕರ್ನಾಟಕ

ಮರ್ಧಾಳ: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.13. ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಮಿತ್ತೋಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ‌. ಘಟನೆಯಲ್ಲಿ ಬೈಕ್ ಸವಾರ ಬೆತ್ತೋಡಿ ಸಿ ಆರ್ ಸಿ ನಿವಾಸಿ ಸತ್ಯರಾಜ್(27) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಧಾಳ: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಗಂಭೀರ Read More »

ಕರಾವಳಿ
Scroll to Top