ಕಡಬ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊೖಲ, ಪ್ರ.ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ. ಪುನರಾಯ್ಕೆ

(ನ್ಯೂಸ್ ಕಡಬ) newskadaba.com  ಕಡಬ, ಜ.05. ತಾಲೂಕು ಪರ್ತಕರ್ತರ ಸಂಘದ ಅಧ್ಯಕ್ಷರಾಗಿ ವಿಜಯಕರ್ನಾಟಕ ಪತ್ರಿಕೆಯ ಕಡಬ ವರದಿಗಾರ ಕೆ.ಎಸ್.ಬಾಲಕೃಷ್ಣ ಕೊೖಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಉದಯವಾಣಿ ಪತ್ರಿಕೆಯ ಕಡಬ ವರದಿಗಾರ ನಾಗರಾಜ್ ಎನ್.ಕೆ ಪುನರಾಯ್ಕೆಯಾಗಿದ್ದಾರೆ. ಶುಕ್ರವಾರದಂದು ಕಡಬದ ಪ್ರೆಸ್ ಕ್ಲಬ್ನಲ್ಲಿ ಬಾಲಕೃಷ್ಣ ಕೊೖಲ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಹೊಸದಿಗಂತ ಹಾಗೂ ಉದಯವಾಣಿಯ ಸವಣೂರು ವರದಿಗಾರ ಪ್ರವೀಣ್ ಚೆನ್ನಾವರ, ಜತೆ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಕಡಬ ವರದಿಗಾರ ತಸ್ಲೀಂ ಮರ್ಧಾಳ, ಕೋಶಾಧಿಕಾರಿಯಾಗಿ […]

ಕಡಬ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊೖಲ, ಪ್ರ.ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ. ಪುನರಾಯ್ಕೆ Read More »

ಕರಾವಳಿ

ಬಿಳಿನೆಲೆ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಜ.05. ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರದಂದು ಠಾಣಾ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬಿಳಿನೆಲೆ ಬೈಲು ನಿವಾಸಿ ಪುಟ್ಟಣ್ಣ ಗೌಡ (65) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಲ್ಲಿ ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿದ್ದು, ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ,‌ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಳಿನೆಲೆ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಬೃಹತ್ ದರಕಡಿತದ ತರಕಾರಿ ಮೇಳ ► ಟೊಮ್ಯಾಟೊ, ಸಾಂಬಾರ್ ಸೌತೆ 05 ರೂ. ಉಳಿದಂತೆ ತರಕಾರಿಗಳಿಗೆ 10 ರೂ.

(ನ್ಯೂಸ್ ಕಡಬ) newskadaba.com ಕಡಬ, ಜ.05. ಟೊಮ್ಯಾಟೊ, ಸಾಂಬಾರ್ ಸೌತೆ ಕಿಲೋವೊಂದಕ್ಕೆ 05 ರೂ. ಉಳಿದ ತರಕಾರಿಗಳಿಗೆ 10 ರೂ. ನಂತೆ ದರ ನಿಗದಿಪಡಿಸಲಾಗಿದೆ. ಇದು ಎಲ್ಲೋ ಘಟ್ಟ ಪ್ರದೇಶದಲ್ಲಿನ ತರಕಾರಿಗಳ ದರ ಪಟ್ಟಿ ಎಂದು ಭಾವಿಸಬೇಡಿ. ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಭಾರೀ ದರಕಡಿತದ ತರಕಾರಿ ಮೇಳ ಜನವರಿ 05 ಶುಕ್ರವಾರದಿಂದ ನಡೆಯಲಿದೆ. ಈ ಮೇಳದಲ್ಲಿ ಲೋಡು ಲೋಡು ತರಕಾರಿಗಳನ್ನು ನೇರವಾಗಿ ಬೆಳೆಗಾರರ ಕೈಯಿಂದ ತರಿಸಿಕೊಂಡು ಗ್ರಾಹಕರಿಗೆ ನೀಡಲಾಗುತ್ತದೆ. ಉಳಿದಂತೆ ತರಕಾರಿಗಳಾದ ಬಟಾಟೆ, ಮೂಲಂಗಿ, ನವಿಲುಕೋಸು,

ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಬೃಹತ್ ದರಕಡಿತದ ತರಕಾರಿ ಮೇಳ ► ಟೊಮ್ಯಾಟೊ, ಸಾಂಬಾರ್ ಸೌತೆ 05 ರೂ. ಉಳಿದಂತೆ ತರಕಾರಿಗಳಿಗೆ 10 ರೂ. Read More »

ಕರಾವಳಿ

ಕಾರ್ಕಳ: ಯುವಕನಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ ► ಗಾಯಾಳು ಯುವಕ ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ.05. ಕರಾವಳಿಯಲ್ಲಿ ಕೋಮು ಘರ್ಷಣೆಯ ಬಿಸಿ ಆರುವುದಕ್ಕಿಂತ ಮೊದಲೇ ಯುವಕನೋರ್ವನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಫುಲ್ಕೇರಿ ನಿವಾಸಿ ಮೊಹ್ಸಿನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಬಂಗ್ಲೆಗುಡ್ಡೆ ಜಂಕ್ಷನ್ ನಲ್ಲಿ ನಿಂತಿದ್ದಾಗ ಉಡುಪಿ ಜಿಲ್ಲಾ ಬಜರಂಗದಳದ ಮುಖಂಡ ಮಹೇಶ್ ಶೆಣೈ ನೇತೃತ್ವದಲ್ಲಿ ಬಂದ ಆರೇಳು ಮಂದಿಯ ತಂಡ ಮೊಹ್ಸಿನ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸ್ ದೂರು

ಕಾರ್ಕಳ: ಯುವಕನಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ ► ಗಾಯಾಳು ಯುವಕ ಆಸ್ಪತ್ರೆಗೆ Read More »

ಕರ್ನಾಟಕ

ಪಾಣೆಮಂಗಳೂರು: ಬಸ್-ಸ್ಕೂಟರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಹೀರೋ ಮೆಸ್ಟ್ರೋ ದ್ವಿಚಕ್ರ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾದ ಪರಿಣಾಮ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪ ನಿವಾಸಿಗಳಾದ ಅಝಾದ್(20) ಮತ್ತು ಮಹಮ್ಮದ್ ಹರ್ಷಿದ್ (18) ಎಂದು ಗುರುತಿಸಲಾಗಿದೆ. ಬಂಟ್ವಾಳ ದಿಂದ ಮೆಲ್ಕಾರ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಸ್ನೇಹಿತರಿಬ್ಬರು ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯಾಗಿದೆ. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆಲ್ಕಾರ್

ಪಾಣೆಮಂಗಳೂರು: ಬಸ್-ಸ್ಕೂಟರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ಕೊನೆಗೂ ದೀಪಕ್ ಕುಟುಂಬಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದ ಜಿಲ್ಲಾಡಳಿತ ► ರುದ್ರಭೂಮಿ ತಲುಪಿದ ದೀಪಕ್ ಮೃತದೇಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಬುಧವಾರದಂದು ಮಧ್ಯಾಹ್ನ ಕಾಟಿಪಳ್ಳದಲ್ಲಿ ಬರ್ಬರ ಹತ್ಯೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ದೀಪಕ್ ಅವರ ಮೃತದೇಹವನ್ನು ಸ್ವೀಕರಿಸುವ ಮೊದಲು ಗೃಹ ಸಚಿವರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದ ದೀಪಕ್ ಕುಟುಂಬ ಸದಸ್ಯರು ಹಾಗೂ ಕಾಟಿಪಳ್ಳ ಗ್ರಾಮಸ್ಥರನ್ನು ಮನವೊಲಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಸಿಕಾಂತ್ ಸೆಂಥಿಲ್ ಹಾಗೂ ನಗರ ಪೊಲೀಸ್ ಆಯುಕ್ತ ಸುರೇಶ್ ಯಶಸ್ವಿಯಾಗಿದ್ದಾರೆ. ಸರಕಾರದ ವತಿಯಿಂದ ಆರಂಭದಲ್ಲಿ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿತ್ತು. ಬಡ ಕುಟುಂಬದ ದೀಪಕ್‌ಗೆ 50 ಲಕ್ಷ ರೂ.

ಕೊನೆಗೂ ದೀಪಕ್ ಕುಟುಂಬಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದ ಜಿಲ್ಲಾಡಳಿತ ► ರುದ್ರಭೂಮಿ ತಲುಪಿದ ದೀಪಕ್ ಮೃತದೇಹ Read More »

ಕರಾವಳಿ

ದೀಪಕ್ ರಾವ್ ಹತ್ಯೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆದು ಪ್ರತಿಭಟನೆ ► ರಾಜ್ಯ ಸರಕಾರದ ವಿರುದ್ಧ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜ.04. ಬುಧವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಸುಮಾರು 20 ನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಮುಖಂಡ ರವಿರಾಜ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಹಿಂದೂ ಸಮುದಾಯದ ಮೇಲೆ ಮತಾಂಧ ದುಷ್ಕರ್ಮಿಗಳಿಂದ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವವರ ಹಲ್ಲೆ, ಕೊಲೆಯು ಎಗ್ಗಿಲ್ಲದೆ ನಡೆಯುತ್ತಿದೆ.

ದೀಪಕ್ ರಾವ್ ಹತ್ಯೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆದು ಪ್ರತಿಭಟನೆ ► ರಾಜ್ಯ ಸರಕಾರದ ವಿರುದ್ಧ ಘೋಷಣೆ Read More »

ಕರಾವಳಿ

ಯಾರಿಗೂ ತಿಳಸದೆ ಮನೆಗೆ ತಲುಪಿದ ದೀಪಕ್ ರಾವ್ ಮೃತದೇಹ ► ರಸ್ತೆಯಲ್ಲೇ ಮೃತದೇಹವನ್ನಿಟ್ಟು ಗೃಹ ಸಚಿವರು ಬರಬೇಕೆಂದು ಪ್ರತಿಭಟನಾಕಾರರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಬುಧವಾರದಂದು ಕಾಟಿಪಳ್ಳದ ಕೈಕಂಬದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್‌ ರಾವ್‌ ಮೃತದೇಹವನ್ನು ಪೊಲೀಸರು ಪೊಲೀಸರು ಯಾರಿಗೂ ತಿಳಿಸದೆ ಮೃತರ ಮನೆಗೆ ಆಂಬ್ಯುಲೆನ್ಸ್ ಮೂಲಕ ತಂದಿದ್ದು, ಮನೆಯಲ್ಲಿ ನೆರೆದಿದ್ದವರ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯುತ್ತಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಹೂವಿನಿಂದ ಅಲಂಕರಿಸಿದ್ದ ವಾಹನದೊಂದಿಗೆ ಶವಯಾತ್ರೆ ನಡೆಸಲು ಸಾವಿರಾರು ಹಿಂದೂ ಸಂಘಟನೆ ಕಾರ್ಯಕರ್ತರು ಸಜ್ಜಾಗಿದ್ದರು‌. ಆದರೆ ಎ.ಜೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಇಡಲಾಗಿದ್ದ ಶವವನ್ನು ಹಿಂಬಾಗಿಲಿನಿಂದ ಯಾರಿಗೂ ಹೇಳದೆ

ಯಾರಿಗೂ ತಿಳಸದೆ ಮನೆಗೆ ತಲುಪಿದ ದೀಪಕ್ ರಾವ್ ಮೃತದೇಹ ► ರಸ್ತೆಯಲ್ಲೇ ಮೃತದೇಹವನ್ನಿಟ್ಟು ಗೃಹ ಸಚಿವರು ಬರಬೇಕೆಂದು ಪ್ರತಿಭಟನಾಕಾರರಿಂದ ಆಕ್ರೋಶ Read More »

ಕರಾವಳಿ

ಭಯದ ವಾತಾವರಣದಲ್ಲಿ ಕರಾವಳಿ ► ಬಸ್ಸುಗಳಿಗೆ ಕಲ್ಲೆಸೆತ, ಕೆಲವೆಡೆ ಇರಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಬುಧವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯ ನಂತರ ಜಿಲ್ಲೆಯ ಕೆಲವೆಡೆ ಕೋಮು ಸಂಘರ್ಷಗಳು ಆರಂಭಗೊಂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಬುಧವಾರ ಸಂಜೆ ಕಾಟಿಪಳ್ಳದಲ್ಲಿ ಬಸ್ ಗೆ ಕಲ್ಲೆಸೆಯಲಾಗಿದ್ದು, ಬುಧವಾರದಂದು ರಾತ್ರಿಯೂ ದುಷ್ಕರ್ಮಿಗಳು ಮತ್ತೊಂದು ಬಸ್ಸಿಗೆ ಕಲ್ಲೆಸೆದಿದ್ದಾರೆ. ಅಲ್ಲದೆ ಗುರುವಾರದಂದು ದೀಪಕ್ ರ ಶವಯಾತ್ರೆಗೆ ಸಂಘಟನೆಗಳು ಸಿದ್ಧತೆ ನಡೆಸಿರುವಾಗಲೇ ಸರಕಾರ ಅನುಮತಿಯನ್ನು ನಿರಾಕರಿಸಿ ಕಮೀಷನರ್ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸ್ ಆ್ಯಕ್ಟ್ 35 ರ ಪ್ರಕಾರ ಗುರುವಾರದಂದು ನಿಷೇಧಾಜ್ಞೆ

ಭಯದ ವಾತಾವರಣದಲ್ಲಿ ಕರಾವಳಿ ► ಬಸ್ಸುಗಳಿಗೆ ಕಲ್ಲೆಸೆತ, ಕೆಲವೆಡೆ ಇರಿತ Read More »

ಕರಾವಳಿ

ಕೊಟ್ಟಾರ: ಮಾರಕಾಯುಧಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಬುಧವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯ ನಂತರ ಜಿಲ್ಲೆಯ ಹಲವೆಡೆ ಕೋಮು ಸಂಘರ್ಷಗಳು ಆರಂಭಗೊಂಡಿದ್ದು, ಬುಧವಾರ ರಾತ್ರಿ ಕೊಟ್ಟಾರ ಚೌಕಿಯಲ್ಲಿ ವ್ಯಕ್ತಿಯೊಬ್ಬರಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಲಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಕಾಶಭವನ ನಿವಾಸಿ ಬಶೀರ್ (42) ಎಂದು ಗುರುತಿಸಲಾಗಿದೆ. ಕೊಟ್ಟಾರದಲ್ಲಿರುವ ತನ್ನ ಫಾಸ್ಟ್ ಫುಡ್ ಅಂಗಡಿಯನ್ನು ಮುಚ್ಚಿ ಮನೆಗೆ ತೆರಳುವ ಸಂದರ್ಭ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಈ ವೇಳೆಗೆ ಕರ್ತವ್ಯ

ಕೊಟ್ಟಾರ: ಮಾರಕಾಯುಧಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ► ಓರ್ವ ಗಂಭೀರ Read More »

ಕರಾವಳಿ
Scroll to Top