ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 16. ಬೀದಿ ನಾಯಿಯೊಂದು ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ನ ಕಾನಮೈದಗುರಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಸುರತ್ಕಲ್‌ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಎಂಬವರ‌ ಮಗಳು ರಿದಾ ಫಾತಿಮ (9) ಎಂದು ಗುರುತಿಸಲಾಗಿದೆ‌. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿದಾ ಫಾತಿಮ ಬುಧವಾರದಂದು ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದ ಸಂದರ್ಭ ಬೀದಿನಾಯಿಗಳು ಜಗಳ ಮಾಡಿಕೊಂಡು […]

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

(ನ್ಯೂಸ್‌ ಕಡಬ) newskadaba.com,  ಅ.16:  ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹದಿಹರೆಯದಲ್ಲಿ ಗರ್ಭಧಾರಣೆ ಹೆಚ್ಚಳ: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ POCSO ಜಾಗೃತಿ ಅಭಿಯಾನ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಹೆಣ್ಣುಮಕ್ಕಳಲ್ಲಿ ಗರ್ಭಧಾರಣೆಯ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳು 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಜ್ಜಾಗುತ್ತಿವೆ. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ವಿದ್ಯಾ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ POCSO ಕಾಯ್ದೆಯ ಕುರಿತು ಜಾಗೃತಿ ಮೂಡಿಸಲು ಇತ್ತೀಚೆಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಕಾರ್ಯಕ್ರಮವು

ಹದಿಹರೆಯದಲ್ಲಿ ಗರ್ಭಧಾರಣೆ ಹೆಚ್ಚಳ: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ POCSO ಜಾಗೃತಿ ಅಭಿಯಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ

(ನ್ಯೂಸ್‌ ಕಡಬ) newskadaba.com,  ಅ. 16. ವ್ಯಕ್ತಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ದೂರಿನ ಪ್ರಕಾರ, ಕಳೆದ ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off  ಎಂಬ ಖಾತೆಯಿಂದ ಸಂದೇಶ ಬಂದಿದ್ದು, ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ. ಆ ಸಂದೇಶದಲ್ಲಿ ಚಿನ್ನ, ಬೆಳ್ಳಿ ನಾಣ್ಯಗಳು, ಬಾರ್‌ಗಳು ಮತ್ತು ಇತರ ಚಿನ್ನ-ಸಂಬಂಧಿತ ಉತ್ಪನ್ನಗಳ ಮೇಲೆ ಲಾಭದಾಯಕ ಆದಾಯದ ಭರವಸೆ ನೀಡಲಾಗಿದೆ. ಈ ವೇದಿಕೆಯಲ್ಲಿ “ಚಿನ್ನದ ಬಿಡ್ಡರ್” ಆಗಿ ಕೆಲಸ

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

(ನ್ಯೂಸ್‌ ಕಡಬ) newskadaba.com,  ಅ.16 ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.16-ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ

ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು : ಖ್ಯಾತ ನಾಟಕ ನಿರ್ದೇಶಕ, ಸಾಹಿತಿ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.. ಯುಎಇ ಮೂಲದ ಕವಿ, ನಾಟಕಕಾರ, ರಂಗ ನಿರ್ದೇಶಕ ಮತ್ತು ಸಾಮಾಜಿಕ ಕಾರ್ಯಕರ್ತ ಪಯ್ಯಾರ್ 10 ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಅವರ ‘ಉರೆಟ್ಟ ಕಣ್ಣುದ ಸಿರಿ’ ಕವನ ಸಂಕಲನವು ಓದುಗರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು. ದಶಕಗಳ ಕಾಲದ ವೃತ್ತಿಜೀವನದಲ್ಲಿ,

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು:ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ‌. ರಿದಾ ಫಾತಿಮ ಸಂಜೆಯಸಮಯದಲ್ಲಿ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ಸಂಧರ್ಭದಲ್ಲಿ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು:  ರಾಜ್ಯದಲ್ಲಿರುವ 800  ಶಾಲೆಗಳನ್ನು ಕೆಪಿಎಸ್ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ, ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಬುಧವಾರ(ಅ.15)  ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ, ಏಷ್ಯನ್

ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ. 15. ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ, ಮಂಗಳೂರು-ಹಾಸನ ಮಾರ್ಗದ ಕಾಣಿಯೂರು ರೈಲು ನಿಲ್ದಾಣದ ಅಭಿವೃದ್ಧಿ ಹಾಗೂ ಸ್ಥಳಾಂತರದ ಕುರಿತು ಮಹತ್ವದ ಮನವಿ ಸಲ್ಲಿಸಿದರು. ಮಂಗಳೂರು-ಹಾಸನ ರೈಲು ಮಾರ್ಗದಲ್ಲಿರುವ ಕಾಣಿಯೂರು ನಿಲ್ದಾಣವು ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹತ್ತಿರದಲ್ಲಿದ್ದು, ಪ್ರಯಾಣಿಕರ ಬಳಕೆಯಲ್ಲಿದೆ. ಆದರೆ, ನಿಲ್ದಾಣದ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ Read More »

ಕರಾವಳಿ, ಕರ್ನಾಟಕ
Scroll to Top