ನಿಮ್ಮ ಬೈಕಿನ ನಂಬರ್ ಪ್ಲೇಟ್ ನಲ್ಲಿ ಹೆಸರುಗಳಿವೆಯೇ…? ► ಪೊಲೀಸರು ದಂಡ ವಿಧಿಸುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ಸಂಚಾರಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮತ್ತು ಬೈಕ್ ಸವಾರರು ಹೆಲ್ಮೆಟ್ ಧರಿಸಿ, ಕಾರ್ ಚಾಲಕರು ಸೀಟ್‌‌ ಬೆಲ್ಟ್ ಧರಿಸಿ ಓಡಾಡುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಪೊಲೀಸರು ಇದೀಗ ವಾಹನಗಳ ನಂಬರ್ ಪ್ಲೇಟ್‌‌ಗಳ ಬಗ್ಗೆ ತೀವ್ರ ನಿಗಾ ವಹಿಸುತ್ತಿದ್ದಾರೆ. ನಿಯಮಾನುಸಾರ ಬೈಕ್ ಅಥವಾ ಯಾವುದೇ ವಾಹನದ ನಂಬರ್‌ ಪ್ಲೇಟ್ ಮೇಲೆ ಆರ್‌ಟಿಓ ನೀಡಿರುವ ನಂಬರ್ ಹೊರತಾಗಿ ಮತ್ತೇನು ಬರೆಸುವಂತಿಲ್ಲ. ಆದರೆ ಜಿಲ್ಲೆಯ ಬಹುತೇಕ ಬೈಕ್‌ಗಳ ನಂಬರ್ ಪ್ಲೇಟ್‌‌ ಮೇಲೆ ನಿಯಮ ಉಲ್ಲಂಘಿಸುವಂತಹ […]

ನಿಮ್ಮ ಬೈಕಿನ ನಂಬರ್ ಪ್ಲೇಟ್ ನಲ್ಲಿ ಹೆಸರುಗಳಿವೆಯೇ…? ► ಪೊಲೀಸರು ದಂಡ ವಿಧಿಸುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳಿ Read More »

ಕರ್ನಾಟಕ

ಪಾಕ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಜಾಧವ್ ಭೇಟಿಯಾದ ಕುಟುಂಬ ► ತಾಯಿ, ಪತ್ನಿಯಿಂದ ಸುಮಾರು 45 ನಿಮಿಷಗಳ ಕಾಲ ಮಾತುಕತೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.25. ಬೇಹುಗಾರಿಕೆಯ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಸೋಮವಾರ ಇಸ್ಲಾಮಾಬಾದ್‌ನ ಪಾಕ್ ವಿದೇಶಾಂಗ ಸಚಿವಾಲಯದ ಕಚೇರಿಯಲ್ಲಿ ತನ್ನ ತಾಯಿ ಅವಂತಿ ಜಾಧವ್ ಮತ್ತು ಪತ್ನಿ ಚೇತಂಕುಲ ಜಾಧವ್ ಅವರನ್ನು ಭೇಟಿಯಾಗಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಭೇಟಿಯ ಸಂದರ್ಭ ಅವರ ನಡುವೆ ಗಾಜಿನ ತೆರೆಯಿದ್ದು, ಮಾತನಾಡಲು ಇಂಟರ್‌ಕಾಮ್ ಸೌಲಭ್ಯವನ್ನು ಒದಗಿಸಲಾಗಿತ್ತು. ಐವರು ಅಧಿಕಾರಿಗಳು ಉಪಸ್ಥಿತರಿದ್ದು ದೈಹಿಕ ಸಂಪರ್ಕಕ್ಕೆ ಅವಕಾಶವಿರಲಿಲ್ಲ.

ಪಾಕ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಜಾಧವ್ ಭೇಟಿಯಾದ ಕುಟುಂಬ ► ತಾಯಿ, ಪತ್ನಿಯಿಂದ ಸುಮಾರು 45 ನಿಮಿಷಗಳ ಕಾಲ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

50 ಲಕ್ಷ ಮಿಸ್ ಕಾಲ್ ಲಭಿಸಿದ ಪಕ್ಷಕ್ಕೆ ಚುನಾವಣೆಯಲ್ಲಿ ಲಭಿಸಿದ್ದು 1417 ಮತಗಳು ► ಆರ್.ಕೆ ನಗರ ಉಪಚುನಾವಣೆ: ಬಿಜೆಪಿಯನ್ನು ಟ್ರೋಲ್ ಮಾಡಿದ ಜಿಗ್ನೇಶ್ ಮೇವಾನಿ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್, ಡಿ.25. ತಮಿಳುನಾಡಿನ ಆರ್.ಕೆ.ನಗರದ ಉಪ ಚುನಾವಣೆಯಲ್ಲಿ ಬಿಜೆಪಿ ಪಡೆದಿರುವ 1417 ಮತಗಳನ್ನು ಲೇವಡಿ ಮಾಡಿರುವ ದಲಿತ ನಾಯಕ‌, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ವಿಶ್ವದ ಅತೀ ದೊಡ್ಡ ಮಿಸ್ ಕಾಲ್ ಪಕ್ಷವನ್ನು ತಮಿಳುನಾಡಿನಲ್ಲಿ ನೋಟಾ ಹಿಂದಿಕ್ಕಿದೆ ಎಂದು ವ್ಯಂಗವಾಡಿದರು. ಆರ್.ಕೆ ನಗರದ ಉಪಚುನಾವಣೆ ಫಲಿತಾಂಶದ ಬಳಿಕ ಜಿಗ್ನೇಶ್ ಮೇವಾನಿ ಟ್ವಿಟರ್ ನಲ್ಲಿ ಬಿ.ಜೆ.ಪಿ ಯನ್ನು ವ್ಯಂಗ್ಯವಾಡುತ್ತಾ, ವಿಶ್ವದ ಅತೀ ದೊಡ್ಡ ಮಿಸ್ ಕಾಲ್ ಪಕ್ಷವಾಗಿರುವ ಬಿ.ಜೆ.ಪಿ ಗೆ ತಮಿಳುನಾಡಿನಲ್ಲಿ 50 ಲಕ್ಷಕ್ಕೂ

50 ಲಕ್ಷ ಮಿಸ್ ಕಾಲ್ ಲಭಿಸಿದ ಪಕ್ಷಕ್ಕೆ ಚುನಾವಣೆಯಲ್ಲಿ ಲಭಿಸಿದ್ದು 1417 ಮತಗಳು ► ಆರ್.ಕೆ ನಗರ ಉಪಚುನಾವಣೆ: ಬಿಜೆಪಿಯನ್ನು ಟ್ರೋಲ್ ಮಾಡಿದ ಜಿಗ್ನೇಶ್ ಮೇವಾನಿ Read More »

ರಾಷ್ಟ್ರೀಯ ನ್ಯೂಸ್

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಪರಿಸರದ ಕ್ರೈಸ್ತ ಬಾಂಧವರು ಒಟ್ಟುಗೂಡಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಕ್ರಿಸ್ಮಸ್ ಆಚರಣೆಯು ಡಿಸೆಂಬರ್ 26ನೇ ಮಂಗಳವಾರದಂದು ಕಡಬದಲ್ಲಿ ನಡೆಯಲಿದೆ. ಸಂಜೆ 5.30 ಕ್ಕೆ ಕಡಬದ ಆರೋಗ್ಯ ಮಾತಾ ಶಿಲುಬೆ ಗೋಪುರದ ಬಳಿಯಿಂದ ವಿಜೃಂಭಣೆಯ ಕ್ರಿಸ್ಮಸ್ ಸಂದೇಶ ರ್ಯಾಲಿ ಆರಂಭಗೊಂಡು, ಕಡಬ ಪೇಟೆಯ ಮೂಲಕ ಸಂಚರಿಸಿ ಸಂಜೆ 06.30 ಗಂಟೆಗೆ ಕಡಬ ಸೈಂಟ್ ಜೋಕಿಮ್ಸ್ ದೇವಾಲಯದ ವಠಾರದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರೆ| ಫಾ| ರೊನಾಲ್ಡ್ ಲೋಬೋ

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ಕರಾವಳಿ

ನಿರ್ಜನ ಪ್ರದೇಶದಲ್ಲಿ ಮಧ್ಯರಾತ್ರಿ ಯಾತ್ರಿಕರ ಕಾರಿನ ಟಯರ್ ಪಂಕ್ಚರ್ ► ಸ್ವತಃ ಸ್ಪ್ಯಾನರ್ ಹಿಡಿದು ನೆರವಾದ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ.25. ರಾತ್ರಿ ರಸ್ತೆ ಮಧ್ಯೆ ಕಾರಿನ ಟಯರ್ ಪಂಕ್ಚರ್ ಆಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸಿಗರಿಗೆ ನೆರವಾಗುವ ಮೂಲಕ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮಾನವೀಯತೆ ಮೆರೆದ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನ ಪ್ರವಾಸಿಗರಿದ್ದ ಕಾರೊಂದು ಚಿಕ್ಕಮಗಳೂರು-ಶೃಂಗೇರಿ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಮತ್ತಾವರ ಎಂಬ ಕಾಡು ಪ್ರದೇಶಕ್ಕೆ ತಲುಪಿದಾಗ ಕಾರಿನ ಟಯರ್ ಪಂಕ್ಚರ್ ಆಗಿತ್ತು. ಜನಸಂಖ್ಯೆ ಇರದೆ ಇದ್ದುದರಿಂದ ಪ್ರವಾಸಿಗರು ತುಂಬಾ ಆತಂಕಕ್ಕೆ ಒಳಗಾಗಿದ್ದರು. ಅಷ್ಟರಲ್ಲಿ ಆ ದಾರಿಯಾಗಿ ಕೊಪ್ಪದಿಂದ

ನಿರ್ಜನ ಪ್ರದೇಶದಲ್ಲಿ ಮಧ್ಯರಾತ್ರಿ ಯಾತ್ರಿಕರ ಕಾರಿನ ಟಯರ್ ಪಂಕ್ಚರ್ ► ಸ್ವತಃ ಸ್ಪ್ಯಾನರ್ ಹಿಡಿದು ನೆರವಾದ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ಮಂಗಳೂರು: ಕ್ರಿಸ್‌ಮಸ್ ದಿನದಂದೇ ತಲವಾರು ದಾಳಿ ► ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25. ಯುವಕನೋರ್ವನನ್ನು ತಂಡವೊಂದು ತಲವಾರಿನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಗೋರಿಗುಡ್ಡೆಯ ಪರ್ಪಲ್ ಸ್ಟ್ರೀಟ್ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಗೋರಿಗುಡ್ಡೆ ನಿವಾಸಿ ಮೆರ್ಲಿಕ್ ಡಿಸೋಜ(26) ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ ರೌಡಿ ಮಂಕಿ ಸ್ಟ್ಯಾಂಡ್ ವಿಜಯ್ ಸಹಚರ ಎಂದು ಹೇಳಲಾಗಿದೆ. ಐದು ಮಂದಿ ತಂಡವೊಂದು ನಿನ್ನೆ ತಡರಾತ್ರಿ ಮನೆಗೆ ನುಗ್ಗಿ ಮೆರ್ಲಿಕ್ ಮೇಲೆ ಯದ್ವಾತದ್ವಾ ತಲವಾರು ಬೀಸಿದ್ದರಿಂದ ಗಂಭೀರ

ಮಂಗಳೂರು: ಕ್ರಿಸ್‌ಮಸ್ ದಿನದಂದೇ ತಲವಾರು ದಾಳಿ ► ಯುವಕನ ಬರ್ಬರ ಹತ್ಯೆ Read More »

ಕರಾವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಹೋದಲ್ಲೆಲ್ಲಾ ಹೆಣ ಬೀಳುತ್ತಿದೆ ► ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ.25. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಎಲ್ಲೆಲ್ಲಿ ಪ್ರವಾಸ ಮಾಡುತ್ತಾರೋ ಅಲ್ಲಿ ಕೊಲೆ, ಅತ್ಯಾಚಾರ ಆಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಅವರು ಇತ್ತೀಚೆಗೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಿಜಯಪುರದ ಶಾಲಾ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ವಿಜಯಪುರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊನ್ನಾವರಕ್ಕೆ ಹೋದರು ಪರೇಶ್‌ ಮೇಸ್ತನ ಹತ್ಯೆಯಾಯಿತು. ಇಲ್ಲಿಗೆ ಬಂದು ಹೋದ್ರು

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಹೋದಲ್ಲೆಲ್ಲಾ ಹೆಣ ಬೀಳುತ್ತಿದೆ ► ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ Read More »

ಕರ್ನಾಟಕ

ಸಂವಿಧಾನವನ್ನು ಬದಲಾಯಿಸಲೆಂದೇ ನಾವು ಬಂದಿದ್ದೇವೆ ► ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಿತ ಭಾಷಣ

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ.25. ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಸಂವಿಧಾನವನ್ನು ಬದಲಾಯಿಸಲು ನಾವು ಬಂದಿದ್ದೇವೆ ಎಂದು ಹೇಳುವುದರ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರು ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ, ಜಾತ್ಯಾತೀತರು ಎಂದರೆ ಯಾರೆಂದು ಗೊತ್ತಾಗುವುದಿಲ್ಲ. ಅಪ್ಪ ಅಮ್ಮನ ಗುರುತು ಇಲ್ಲದವರನ್ನು ಜಾತ್ಯಾತೀತರು ಎನ್ನಬಹುದು. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ

ಸಂವಿಧಾನವನ್ನು ಬದಲಾಯಿಸಲೆಂದೇ ನಾವು ಬಂದಿದ್ದೇವೆ ► ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಿತ ಭಾಷಣ Read More »

ಕರಾವಳಿ

ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಮಲೇಷ್ಯಾ ಮರಳು ವಿತರಣೆ: ರಾಜೇಂದ್ರ ಕುಮಾರ್ ► ಕಡಬ ಸಿ.ಎ.ಬ್ಯಾಂಕ್ ನೂತನ ಕಟ್ಟಡ ‘ಯೋಗಕ್ಷೇಮ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.24. ಮಲೇಷಿಯಾದಿಂದ ಮರಳನ್ನು ಆಮದು ಮಾಡಿಕೊಂಡು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೂಲಕ ಜನಸಾಮಾನ್ಯರಿಗೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಅವರು ಭಾನುವಾರದಂದು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸುಮಾರು ಎರಡು ಕೋಟಿ ರೂ. ವೆಚ್ಚದ ಸುಸಜ್ಜಿತ ನೂತನ ಕಟ್ಟಡ ‘ಯೋಗ ಕ್ಷೇಮ’ ಸಹಕಾರಿ ಭವನವನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಸರಕಾರದ ಈಗಿನ ಮರಳು ನೀತಿಯಿಂದಾಗಿ ಜಿಲ್ಲೆಯಲ್ಲಿ ಮರಳಿನ ಅಭಾವ ತಲೆದೋರಿದೆ. ಹೊಸ

ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಮಲೇಷ್ಯಾ ಮರಳು ವಿತರಣೆ: ರಾಜೇಂದ್ರ ಕುಮಾರ್ ► ಕಡಬ ಸಿ.ಎ.ಬ್ಯಾಂಕ್ ನೂತನ ಕಟ್ಟಡ ‘ಯೋಗಕ್ಷೇಮ’ ಲೋಕಾರ್ಪಣೆ Read More »

ಕರಾವಳಿ

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ತುಳುನಾಡಿನ ಜನಪ್ರಿಯ ಭಾಷೆಯಾದ ತುಳುವನ್ನು ಕೇವಲ ಮೂರು ತಿಂಗಳಲ್ಲಿ ಕಲಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರು ಮಾದರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಸುಧೀರ್ ಕುಮಾರ್ ರೆಡ್ಡಿಯವರು ಕಳೆದ ಆರು ತಿಂಗಳ ಹಿಂದೆ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸುವಾಗ ತೆಲುಗು, ತಮಿಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದ್ದರು. ಆದರೆ ಕೆಲವು ಹಿರಿಯರು ಕನ್ನಡ ಭಾಷೆ ಮಾತನಾಡಲಾಗದೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಚಡಪಡಿಸುತ್ತಿದ್ದುದನ್ನು

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ Read More »

ಕರಾವಳಿ
Scroll to Top