ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ

(ನ್ಯೂಸ್‌ ಕಡಬ) newskadaba.com,  ಅ.15: ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಲು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ(PMFME) ಮತ್ತು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ(PMDDKY) ಗಳನ್ನು ರೈತರು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರೈತರಿಗೆ ಕರೆ ನೀಡಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ, ಹೊಸ ಪೀಳಿಗೆಯ GST ಸುಧಾರಣೆ ರೈತರಿಗೂ ಹೆಚ್ಚು […]

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ Read More »

ಕರ್ನಾಟಕ

ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ..!

(ನ್ಯೂಸ್‌ ಕಡಬ) newskadaba.com ಅ. 15. ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಒಂದೇ ದಿನದಲ್ಲಿ 2,850 ರೂ. ಏರಿಕೆಯಾಗುವುದರ ಮೂಲಕ 10 ಗ್ರಾಂಗೆ 1,30,800 ರೂ. ತಲುಪಿದೆ. ಅಖಿಲ ಭಾರತ ಸರಾಫಾ ಸಂಘದ ಪ್ರಕಾರ, 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹ ಸೋಮವಾರ 10 ಗ್ರಾಂಗೆ 1,27,950 ರೂ.ಗೆ ಮುಕ್ತಾಯಗೊಂಡಿತ್ತು. 99.5 ಪ್ರತಿಶತ ಶುದ್ಧ ಚಿನ್ನವು ಮಂಗಳವಾರ 2,850 ರೂ. ಏರಿಕೆಯಾಗಿ 10 ಗ್ರಾಂಗೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ) ದಾಖಲೆಯ 1,30,200 ರೂ. ತಲುಪಿದೆ. ಬಂಗಾರದ ಬೆಲೆ

ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ..! Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಅ. 15. ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು ಸರಿಯಾದ ರೀತಿಯಲ್ಲಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಬೇಕು. ನಿಯಮಗಳನ್ನು ಉಲ್ಲಂಘಿಸ ಬಾರದು ಎಂದು ಹೇಳಿದರು. ಕುಂಬಳಗೂಡು ಠಾಣೆ ಪೊಲೀಸರು, ಈಗಾಗಲೇ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿ ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ಈ

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ Read More »

ಕರ್ನಾಟಕ

ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ

(ನ್ಯೂಸ್‌ ಕಡಬ) newskadaba.com ಅ. 15. ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದಾರೆ. ಇಂದೂ ಸಹ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ದೇವಾಲಯದ ಆವರಣ ಹಾಗೂ ಸುತ್ತಮುತ್ತ ಸರಥಿ ಸಾಲುಗಳಲ್ಲಿ ನಿಂತಿದ್ದ ಭಕ್ತರನ್ನು ಮಾತನಾಡಿಸಿ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಐದು ದಿನಗಳಿಂದ

ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ Read More »

ಕರ್ನಾಟಕ

‘KGF Chapter 3 ಡ್ರಾಫ್ಟ್ ರೆಡಿ

(ನ್ಯೂಸ್‌ ಕಡಬ) newskadaba.com,  ಅ.15: ರಾಕಿಂಗ್ ಸ್ಟಾರ್ ಯಶ್ ರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್ 3 ಕುರಿತು ಕೊನೆಗೂ ದೊಡ್ಡ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಹೌದು.. ಕನ್ನಡ ಸಿನಿಮಾರಂಗವನ್ನು ಭಾರತೀಯ ಸಿನಿರಂಗದಲ್ಲಿ ಮತ್ತೊಂದು ಹಂತಕ್ಕೇರಿಸಿದ್ದ ಕೆಜಿಎಫ್ ಚಿತ್ರದ ಮೂರನೇ ಭಾಗದ ಕುರಿತು ಮಹತ್ವದ ಮಾಹಿತಿ ದೊರೆತಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಕೊನೆಗೂ ಕೆಜಿಎಫ್ ಭಾಗ 3ರ ಕುರಿತು ದೊಡ್ಡ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ‘ಕೆಜಿಎಫ್ 2’

‘KGF Chapter 3 ಡ್ರಾಫ್ಟ್ ರೆಡಿ Read More »

ಸಿನಿಮಾ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಅ. 15. ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ನಡೆದಿದೆ.   ಮೃತ ಬಾಲಕರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿದ್ದು, ಹೊರಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಓರ್ವ ಬಾಲಕ ಈಜಿ ದಡ ಸೇರಿದ ನಂತರ ಪೊಲೀಸರಿಗೆ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಸ್ತಂಭನ: ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ..!

(ನ್ಯೂಸ್‌ ಕಡಬ) newskadaba.com ಅ. 15. ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ(80) ಹೃದಯಸ್ತಂಭನದಿಂದ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ರೈಲಾ ಒಡಿಂಗಾ ಅವರು ಆಯುರ್ವೇದ ಚಿಕಿತ್ಸೆಗೆಂದು ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೃದಯಸ್ತಂಭನ: ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ..! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ

(ನ್ಯೂಸ್‌ ಕಡಬ) newskadaba.com,  ಅ.15  ಮಂಗಳೂರು :  ನವೆಂಬರ್ 1 ,2 ರಂದು ಸೇಂಟ್ ಆಗ್ನೆಸ್ ಕಾಲೇಜಿನ ಪಕ್ಕದಲ್ಲಿರುವ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ಎರಡು ದಿನಗಳ ಮಿಲ್ಲೆಟ್ಸ್ ಉತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವನ್ನು ಹನಿಜೆನಿಕ್ಸ್ ಬೀ ಫಾರ್ಮ್ಸ್, ರೋ ಇಂಟರ್ನ್ಯಾಷನಲ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಪರಿವರ್ತನೆ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಉತ್ಸವದಲ್ಲಿ ಕರ್ನಾಟಕದಾದ್ಯಂತದ ವಿವಿಧ ಆರೋಗ್ಯಕರ ಭಕ್ಷ್ಯಗಳನ್ನು ನೀಡುವ ರಾಗಿ ಆಧಾರಿತ ಆಹಾರ ಮಳಿಗೆಗಳು, ಸ್ಥಳೀಯ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಕಿ ಅನಾಹುತ; ಚಲಿಸುತ್ತಿದ್ದ ಬಸ್ ಗೆ ಬೆಂಕಿ ,20 ಜನ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಅ.15  ಜೈಸಲೇರ್‌: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌‍ ಹಠಾತ್ತನೆ ಹೊತ್ತಿ ಉರಿದು 20 ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌‍ ಜೈಸಲ್ಮೇರ್‌ನಿಂದ ಜೋಧ್‌ಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ವಾಹನದ ಹಿಂಭಾಗದಿಂದ ಹೊಗೆ ಹೊರಬರಲು ಪ್ರಾರಂಭಿಸಿತು.ಇದನ್ನು ಗಮನಿಸಿದ ಚಾಲಕ ಬಸ್‌‍ ಅನ್ನು ನಿಲ್ಲಿಸಿದನು, ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡಿ ಬಸ್‌‍ಗೆ ಆವರಿಸಿತು. ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಗಳಿಗೆ

ಬೆಂಕಿ ಅನಾಹುತ; ಚಲಿಸುತ್ತಿದ್ದ ಬಸ್ ಗೆ ಬೆಂಕಿ ,20 ಜನ ಸಜೀವ ದಹನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top