ಮಂಗಳೂರು: ಖಾಸಗಿ ಜಮೀನಿನಲ್ಲಿ ಗಾಂಜಾ ಗಿಡ ಪತ್ತೆ ► ಪ್ರಕರಣ ದಾಖಲಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ನ.07. ತನ್ನ‌ ಖಾಸಗಿ ಜಮೀನಿನಲ್ಲಿ ವ್ಯಕ್ತಿಯೋರ್ವರು ಗಾಂಜಾ ಗಿಡವನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಮಂಗಳವಾರದಂದು ಮಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಕೋಡಿಕಲ್ ನಿವಾಸಿ ವಿನಿತ್ ಎಂದು ಗುರುತಿಸಲಾಗಿದ್ದು, ಇವರು ತನ್ನ ಜಮೀನಿನಲ್ಲಿ ಗಾಂಜಾ ಗಿಡವನ್ನು ಬೆಳೆಸಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಿದ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು: ಖಾಸಗಿ ಜಮೀನಿನಲ್ಲಿ ಗಾಂಜಾ ಗಿಡ ಪತ್ತೆ ► ಪ್ರಕರಣ ದಾಖಲಿಸಿದ ಪೊಲೀಸರು Read More »

ಕರಾವಳಿ

ಕೋಡಿಂಬಾಳ: ಸಂಚಾರಿ ಆಸ್ಪತ್ರೆ ಶಿಬಿರ ಉದ್ಘಾಟನೆ ► ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ದಾನ ಮಾಡುವ ಶಿಬಿರ ಯಶಸ್ವಿಯಾಗಲಿ- ತುಕಾರಾಮ ಗೌಡ

(ನ್ಯೂಸ್ ಕಡಬ) newskadaba.com ಕಡಬ, ನ.7. ಶ್ರೀಕ್ಷೇ.ಧ.ಗ್ರಾ.ಯೋಜನೆ ಮತ್ತು ಶ್ರೀ ಧರ್ಮಸ್ಥಳ ಮೆಡಿಕಲ್ ಟ್ರಸ್ಟ್‌ನ ಸಹಯೋಗದೊಂದಿಗೆ ಗ್ರಾಮಾಭಿವೃದ್ದಿ ಯೋಜನೆಯ ಬಿಳಿನೆಲೆ ವಲಯದ ಸಹಕಾರದೊಂದಿಗೆ ಕೋಡಿಂಬಾಳದ ರಾಮನಗರ ಶ್ರೀರಾಮ ಭಜನಾಮಂದಿರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರವು ಮಂಗಳವಾರ ಉದ್ಘಾಟನೆಗೊಂಡಿತು. ಕೋಡಿಂಬಾಳ ಓಂತ್ರಡ್ಕ ಸರಕಾರಿ ಉ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ತುಕಾರಾಮ ಗೌಡರವರು ಶಿಬಿರವನ್ನು ಉದ್ಘಾಟಿಸಿ, ಶ್ರೀಕ್ಷೇತ್ರ ಧರ್ಮಸ್ಥಳವು ಅನ್ನದಾನ, ವಿದ್ಯಾದಾನ ಮತ್ತು ಆರೋಗ್ಯದಾನ ಮುಂತಾದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದ ಉನ್ನತಿಯನ್ನು ನಡೆಸುವ ಕಾರ್ಯವನ್ನು ಮಾಡುತ್ತಿದೆ. ಧರ್ಮಾಧಿಕಾರಿ

ಕೋಡಿಂಬಾಳ: ಸಂಚಾರಿ ಆಸ್ಪತ್ರೆ ಶಿಬಿರ ಉದ್ಘಾಟನೆ ► ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ದಾನ ಮಾಡುವ ಶಿಬಿರ ಯಶಸ್ವಿಯಾಗಲಿ- ತುಕಾರಾಮ ಗೌಡ Read More »

ಕರಾವಳಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.7.  ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ ಮಾರಾಟವಿದ್ದು, ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ ಇರಲಿದೆ. 6 ಇಂಚಿನ ಸ್ಕ್ರೀನ್

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ Read More »

ತಂತ್ರಜ್ಞಾನ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.7. ಆವರಣ ಇಲ್ಲದ ಬಾವಿಯೊಂದಕ್ಕೆ ಕಾಡು ಕೋಣವೊಂದು ಬಿದ್ದ ಘಟನೆ ಈದು ಗ್ರಾಮದಲ್ಲಿ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ಈದು ಪರಿಸರದ ಮಲಂಜ ಆನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಸುಮಾರು 20 ಅಡಿ ಆಳದ ಬಾವಿಯೊಳಗಿನಿಂದ ಪ್ರಾಣಿಯೊಂದರ ಕೂಗು ಕೇಳಿ ಬಂದ ಹಿನ್ನಲೆಯಲ್ಲಿ  ಹೋಗಿ ನೋಡಿದಾಗ ಕಾಡುಕೋಣ ಬಾವಿಯಲ್ಲಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿ ಜೆಸಿಬಿ ಮೂಲಕ ಬಾವಿಗೆ ಕಣಿ ತೋಡಿ ಕಾಡು ಕೋಣವನ್ನು ರಕ್ಷಿಸಿದರು.

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.7. ಫಲ್ಗುಣಿ ನದಿಯಲ್ಲಿ ಆಟವಾಡಲು ತೆರಳಿ ನೀರುಪಾಲಾಗಿದ್ದ ಐವರು ಬಾಲಕರ ಪೈಕಿ, ನಾಲ್ವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.  ಸೋಮವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ಐವರು ಒಟ್ಟು ಸೇರಿ ಸಮೀಪದ ಫಲ್ಗುಣಿ ನದಿಗೆ ಆಟಕ್ಕೆಂದು ತೆರಳಿದ್ದ ಅಸ್ಲಾಮ್, ರಮೀಜ್, ಅಜ್ಮಲ್, ಮುಭಾಶಿರ್, ಸಮಾದ್ ಎಂಬವರು ನೀರು ಪಾಲಾದ ಬಾಲಕರು. ಇವರ ಪೈಕಿ ಅಸ್ಲಾಮ್, ರಮೀಜ್, ಅಜ್ಮಲ್, ಸಮಾದ್ ಮೃತದೇಹ ಪತ್ತೆಯಾಗಿದ್ದು, ಮುಭಾಶಿರ್ ನ ಶವದ ಶೋಧ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ Read More »

ಕರಾವಳಿ

ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07. ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಮೃತರನ್ನು ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಇಬ್ಬರು ಕೋಟೆಕಾರು ಶಾಖೆಯ ಕಾವಲು ಸಿಬ್ಬಂದಿಗಳೆನ್ನಲಾಗಿದೆ. ಇವರು ಹೇಗೆ ಶಾಖೆಯ ಒಳಭಾಗದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಸಂಶಯ ಮೂಡಿದೆ. ಜೂನ್‌ 23 ರಂದು ಈ‌ ಶಾಖೆಯಲ್ಲಿ ಚಿನ್ನಾಭರಣ ದರೋಡೆಗೆ ವಿಫಲ ಯತ್ನ ನಡೆದಿತ್ತು. ಆ ನಿಟ್ಟಿನಲ್ಲಿ ಯಾರಾದರೂ ಕೊಲೆ‌ ಮಾಡಿರಬಹುದಾ

ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ Read More »

ಕರಾವಳಿ

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ

(ನ್ಯೂಸ್ ಕಡಬ) newskadaba.com ಕಡಬ, ನ.07. ಹೃದಯ ಸಂಬಂಧಿ ಖಾಯಿಲೆಯಿಂದಾಗಿ ಸೋಮವಾರದಂದು ಮೃತಪಟ್ಟ ನಿವೃತ್ತ ಮುಖ್ಯ ಶಿಕ್ಷಕ, ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ್ ರಾವ್(78)ರವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ ಹುಟ್ಟೂರು ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದ ಬಳಿ ವಾಸವಾಗಿದ್ದ ಅವರ ಮನೆಗೆ ಇಂದು ಬೆಳಿಗ್ಗೆ 8.30ರ ಸುಮಾರಿಗೆ ತರಲಾಯಿತು. ಕಳೆದ ಕೆಲವು ಸಮಯಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಮಕ್ಕಳ ಸಾಹಿತಿಯಾಗಿ, ನಾಟಕಕಾರರಾಗಿ, ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ Read More »

ಕರಾವಳಿ

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ನ.7. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ ಕಾರ್ಯಕ್ರಮ ಭಾನುವಾರ ಸಾಯಂಕಾಲ ನಡೆಯಿತು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಕುಲನಗರದಿಂದ ಆರಂಭಗೊಂಡ ಪಥಸಂಚಲನ ಗೋಳಿತ್ತಡಿ ಮೂಲಕ ಸಾಗಿ ಶಾರದನಗರದಲ್ಲಿ ಸಮಾಪನಗೊಂಡಿತ್ತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯವಾಹ ಶ್ರೀನಿವಾಸ್ ಉಬರಡ್ಕ ಬೌದ್ದಿಕ್ ನೀಡಿದರು. ಪುಷ್ಪರಾಜ್ ಹಳೆನೇರಿಂಕಿ ಸಂಘದ ಪ್ರಾಥನೆ ಹಾಡಿದರು. ಮುಖ್ಯಶಿಕ್ಷಕ ಚರಣ್ ಉಪಸ್ಥಿತರಿದ್ದರು.

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ Read More »

ಕರಾವಳಿ
Scroll to Top