ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಅಂಗಡಿಯ ನೌಕರ ಪ್ರದೀಪ್ ಎಂಬವರ ಮೇಲೆ ಎಸ್ಕೆಎಸ್ಸೆಸ್ಸೆಫ್ ಕಡಬ ವಲಯದ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು ತಿರುಚಿ ತನ್ನ 9741469893 ಸಂಖ್ಯೆಯ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿ ಉಪಯೋಗಿಸಿ ಮಕ್ಕಾವನ್ನು ಅವಮಾನಿಸುವ ಕೃತ್ಯವನ್ನು ಮಾಡಿದ್ದಲ್ಲದೆ ಮುಸ್ಲಿಮರ ಭಾವನೆಯನ್ನು ಕೆರಳಿಸುವಂತಹ […]

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಅ.21. ಟೈಲ್ಸ್ ಲಾರಿ ಪಲ್ಟಿಯಾಗಿ 11 ಜನ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಹೊರವಲಯದ ಸಾಂಗ್ಲಿಯ ಟಸ್ಗಾನ್-ಕವಾಥೆ ಮಹನ್ಕಾಲ್ ರಸ್ತೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಗಳನ್ನು ಮೂಲತಃ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಇಂದಿರಾಬಾಯಿ ನಿಂಬಾಳಕರ (30), ಪರಶುರಾಮ ಪೂಜಾರಿ (30), ಬಸಮ್ಮ ಪೂಜಾರಿ (25), ರೂಪೇಶ್ (25), ಸಂತೋಷ (19), ಅಶೋಕ್ ಬಿರಾದಾರ (50), ಲಕ್ಷ್ಮಿ ಬಾಯಿ ಮಾದರ (30), ಲಕ್ಷ್ಮಣ ಮಾದರ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ Read More »

ಕರ್ನಾಟಕ

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21. ಯುವಕನೋರ್ವನ ಮೇಲೆ ಹಲ್ಲೆ‌ ನಡೆಸಿ ಸ್ವತ್ತುಗಳನ್ನು ದರೋಡೆಗೈದ ಘಟನೆ ಶನಿವಾರ ಮುಂಜಾನೆ ವಿಟ್ಲ ಸಮೀಪದ ಕುಡ್ತಮೊಗೇರು ಎಂಬಲ್ಲಿ ನಡೆದಿದೆ. ಹನೀಫ್ ಎಂಬಾತನೇ ತಂಡದಿಂದ ಹಲ್ಲೆಗೊಳಗಾದ ಯುವಕ. ಕುಡ್ತಮೊಗೇರು ಫ್ಲ್ಯಾಟ್ ನಲ್ಲಿ ಮುಂಜಾನೆ ಮೂರು ಗಂಟೆ ಸುಮಾರಿಗೆ ತಂಡವೊಂದು ಹಲ್ಲೆ ನಡೆಸಿ ಹನೀಫ್ ಬಳಿಯಿದ್ದ ಸ್ವಿಫ್ಟ್ ಕಾರು, ಐದು ಪವನ್ ಚಿನ್ನಾಭರಣ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿರುವ ಹನೀಫ್ ನನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ Read More »

ಕರಾವಳಿ

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಸುಂಕದಕಟ್ಟೆ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ Read More »

ಕರಾವಳಿ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.21. 100 ಸಿಸಿ ವಾಹನಗಳಿಗೆ ಅನ್ವಯವಾಗುವಂತೆ ಹಿಂಬದಿ ಸವಾರರನ್ನು ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಗುಂಡಿಗಳಿಗೆ ಬಿದ್ದು ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹಿಂಬದಿ ಕುಳಿತಿದ್ದ ಮಕ್ಕಳು ಸಾವನ್ನಪ್ಪಿರೋ ಪ್ರಕರಣಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ ಸಾವು ನೋವು ತಪ್ಪಿಸಲು ರಾಜ್ಯ ಸರ್ಕಾರ  ಹೊಸ ಆದೇಶ ತರಲು ನಿರ್ಧರಿಸಿದೆ.  ಈ ಕುರಿತು ಹೈಕೋರ್ಟ್ ಗೆ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದು ಒಂದು ವಾರದೊಳಗೆ ಅಧಿಕೃತ ಆದೇಶ ಹೊರ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!! Read More »

ಕರಾವಳಿ

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.21. ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಿಕೆ ಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದ ಹಿರಿಯೂರಿನವರಾದ ಚಾಲಕ ಶ್ರೀನಿವಾಸ (46), ವೆಂಕಟಮ್ಮ (46), ನಳಿನಿ (30) ಹಾಗೂ ಮತ್ತೊಬ್ಬ ಮಹಿಳೆ ಮೃತ ದುರ್ದೈವಿಗಳು. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಅವರನ್ನ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ತಾಲೂಕಿನಿಂದ ಹೊಸಪೇಟೆಯ ಸಂಬಂಧಿಕರೊಬ್ಬರ ಅಂತಿಮ ದರ್ಶನಕ್ಕಾಗಿ ಕಾರಿನಲ್ಲಿ ಒಟ್ಟು 12

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ Read More »

ಕರ್ನಾಟಕ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.20. ಇದೇ ತಿಂಗಳ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ Read More »

ರಾಷ್ಟ್ರೀಯ ನ್ಯೂಸ್

► ಅಡುಗೆ ಮಾಹಿತಿ ► ರುಚಿಯಾದ ಅಕ್ಕಿ ಪಾಯಸ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಅ.20. ದಕ್ಷಿಣ ಭಾರತದಲ್ಲಿ ಅಕ್ಕಿ ಪಾಯಸ ತುಂಬಾ ಫೇಮಸ್. ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಅಕ್ಕಿ ಪಾಯಸವನ್ನು ಮಾಡ್ತಾರೆ. ಆದರೆ ಕೆಲವರಿಗೆ ಪಾಯಸ ಮಾಡುವ ವಿಧಾನ ತಿಳಿದಿರುವುದಿಲ್ಲ. ಅಕ್ಕಿ ಪಾಯಸ ಮಾಡುವ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ► ಕೆನೆಭರಿತ ಹಾಲು- 1 ಲೀಟರ್ ► ನೆನೆಸಿದ ಬಾಸುಮತಿ ಅಕ್ಕಿ- 1/4 ಬೌಲ್ ► ಸಕ್ಕರೆ- 7 ಚಮಚ ► ಸಣ್ಣಗೆ ಕಟ್ ಮಾಡಿದ ಬಾದಾಮಿ- 2 ಚಮಚ

► ಅಡುಗೆ ಮಾಹಿತಿ ► ರುಚಿಯಾದ ಅಕ್ಕಿ ಪಾಯಸ ಮಾಡುವ ವಿಧಾನ Read More »

ಅಡುಗೆ, ಲೈಫ್‍ಸ್ಟೈಲ್

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 22ರಂದು ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಖ್ಯಮಂತ್ರಿ 148.29 ಕೋಟಿ ರೂ.ಗಳ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ 104.21 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ಉದ್ಘಾಟನೆಗೊಳ್ಳಲಿರುವ ಯೋಜನೆಗಳು: ಬಿಸಿರೋಡ್‌ನಲ್ಲಿ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ Read More »

ಕರಾವಳಿ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20. ಬೈಕಿಗೆ ಢಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಬಸ್ ತಂಗುದಾಣಕ್ಕೆ ಅಪ್ಪಳಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ. ನೆಲಮಂಗಲ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕಿಗೆ ಅತೀ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದ ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top