ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಸರಕಾರದ ಆದೇಶದಂತೆ ಅ.18ರ ವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ:9972294198, ಕಾರ್ಕಳ-ಹೆಬ್ರಿ […]

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ Read More »

ಕರಾವಳಿ

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.14 ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.. ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.. ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದ ಘಟನೆ ನಡೆದಿದೆ.   ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದ  ಮೇರೆಗೆ ಕಾರ್ಯಚರಣೆ ನಡೆಸಿದ ಸಿಐಎಸ್‌ಎಫ್‌ ನ ಸಿಐಡಬ್ಲ್ಯೂ ತಂಡ, ಆತನ ಲಗೇಜ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಅ. 14. ದೇಶದಲ್ಲಿ ಭಾರತೀಯರಿಗಾಗಿ ಗೂಗಲ್ ಮ್ಯಾಪ್ಸ್ ​ಗೆ ಸ್ಪರ್ಧಿಸುವ ಮ್ಯಾಪ್ಸ್ ಎಂಬ ಅಪ್ಲಿಕೇಶನ್ ನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಮ್ಯಾಪ್ಸ್ ಅಪ್ಲಿಕೇಶನ್‌ ನ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ಅದರ ವಿವಿಧ ವೈಶಿಷ್ಟ್ಯಗಳನ್ನು ಇದು ತೋರಿಸುತ್ತದೆ. ಈ ಮ್ಯಾಪ್ಸ್​ ಅಪ್ಲಿಕೇಶನ್ ಅನ್ನು ಸ್ಥಳೀಯ ಕಂಪನಿ ಮ್ಯಾಪ್‌ ಮೈಇಂಡಿಯಾ ಅಭಿವೃದ್ಧಿಪಡಿಸಿದೆ. ಮ್ಯಾಪ್ಸ್ ಗೂಗಲ್ ನಕ್ಷೆಗಳಲ್ಲಿ ಕಂಡುಬರುವ ಎಲ್ಲಾ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಬಳಕೆದಾರರು ತಮ್ಮ ಮಾರ್ಗಗಳಲ್ಲಿ ರಸ್ತೆ

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com ಅ. 14. ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 17ರಿಂದ 20ರ ವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ 2,500 ವಿಶೇಷ ಬಸ್‌ ಗಳನ್ನು ರಸ್ತೆಗಿಳಿಸಲು ಸರಕಾರ ನಿರ್ಧರಿಸಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ,

ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ

(ನ್ಯೂಸ್‌ ಕಡಬ) newskadaba.com  ಅ. 14. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ, ಈ ಕಾರ್ಯಕ್ರಮದ ಬಗ್ಗೆ ದಕ್ಷಿಣ ಕನ್ನಡ ನಿವಾಸಿಗಳಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವುದರ ಜೊತೆಗೆ, ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿದೆ. ಆದರೂ, ಅನೇಕ

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ Read More »

ಕರ್ನಾಟಕ

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com  ಅ. 14. ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್ ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಆರೋಪಿಗಳು ಅವರನ್ನು ಹೆಣ್ಣು ನೋಡುವ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಣಜಿ ತಂಡದ ಉಪನಾಯಕನಾಗಿ ವೈಭವ್ ಸೂರ್ಯವಂಶಿ ಆಯ್ಕೆ

(ನ್ಯೂಸ್‌ ಕಡಬ) newskadaba.com  ಅ. 14. ಇದೇ ಅಕ್ಟೋಬರ್ 15 ರಿಂದ ಪ್ರಾರಂಭವಾಗಲಿರುವ ದೇಶಿ ಟೂರ್ನಿ ರಣಜಿ ಟ್ರೋಫಿಯಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಬಿಹಾರ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ವೈಭವ್ ಸೂರ್ಯವಂಶಿ ಇದುವರೆಗೆ ಬಿಹಾರ ಪರ ಐದು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 10 ಇನ್ನಿಂಗ್ಸ್‌ ಗಳನ್ನಾಡಿ 158 ಎಸೆತಗಳನ್ನು ಎದುರಿಸಿ 100 ರನ್ ಕಲೆ ಹಾಕಿದ್ದಾರೆ. ಈ ಅವಧಿಯಲ್ಲಿ, ಅವರು 18 ಬೌಂಡರಿಗಳು ಮತ್ತು ಒಂದು ಸಿಕ್ಸರ್ ಬಾರಿಸಿದ್ದಾರೆ. ವೈಭವ್ ಸೂರ್ಯವಂಶಿಗೆ ಮೊದಲ

ರಣಜಿ ತಂಡದ ಉಪನಾಯಕನಾಗಿ ವೈಭವ್ ಸೂರ್ಯವಂಶಿ ಆಯ್ಕೆ Read More »

ಕ್ರೀಡಾ ನ್ಯೂಸ್

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com  ಅ. 14. ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಮೆಡಿಕಲ್ ಅಧಿಕಾರಿ- ಮಂಜುನಾಥ್, ಜಿ. ವಿ. ಪಿ.ಯು ಬೋರ್ಡ್

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top