ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸುವುದರೊಂದಿಗೆ ದೇಶಾದ್ಯಂತ ಗಾಂಧಿ ಜಯಂತಿಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಕಡಬ ತಾಲೂಕಿನಾದ್ಯಂತ ಎಲ್ಲಾ ಗ್ರಾ.ಪಂ.ನಲ್ಲಿ ಸಂಘಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪರಿಸರದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು […]

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ,ಅ.03. ಸಮುದ್ರಕ್ಕೆ ಆಟವಾಡಲು ತೆರಳಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಂಜೆ ನೀರಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರು ಸಮುದ್ರದ ಅಲೆಗಳಿಗೆ ಸಿಳುಕಿ ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರು ಬಾಲಕರ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು Read More »

ಕರಾವಳಿ

ಸಬಳೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರಮದಾನ ► ಶ್ರೀರಾಮ ಭಜನಾ ಮಂದಿರದ ವಠಾರ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಅ.03. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಶ್ರೀ ರಾಮ ಭಜನಾ ಮಂದಿರದ ವಠಾರವನ್ನು ಸ್ವಚ್ಛಗೊಳಿಸುವ ಕಾರ್ಯ ಸೋಮವಾರದಂದು ನಡೆಯಿತು. ಆಲಂಕಾರು ಸಿ.ಎ. ಬ್ಯಾಂಕ್ ಉದ್ಯೋಗಿ ರಾಧಾಕೃಷ್ಣ ತುಂಬೆತಡ್ಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛ ಕಾರ್ಯ ದಿನವೊಂದಕ್ಕೆ ಮೀಸಲಾಗದೆ ಪ್ರತಿ ದಿನ ಮನೆ ಮನದಿಂದ ಆರಂಭವಾಗಬೇಕು. ಆ ಮೂಲಕ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡಬೇಕು

ಸಬಳೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರಮದಾನ ► ಶ್ರೀರಾಮ ಭಜನಾ ಮಂದಿರದ ವಠಾರ ಸ್ವಚ್ಚತೆ Read More »

ಕರಾವಳಿ

ಅ.05: ಬಿಜೆಪಿ ಎಸ್ಸಿ ಮೋರ್ಛಾ ವತಿಯಿಂದ ಬೃಹತ್ ಸಮರ್ಥನಾ ಸಮಾವೇಶ ► ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಅ.03. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ಅಕ್ಟೋಬರ್ 05 ರಂದು ಆಲಂಕಾರು ರೈತ ಭವನದಲ್ಲಿ ನಡೆಯಲಿರುವ ಬೃಹತ್ ಸಮರ್ಥನಾ ಸಮಾವೇಶದ ಪೂರ್ವ ಭಾವಿ ಸಭೆಯು ಮರ್ಧಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಶ್ರೀಕೃಷ್ಣ ಶೆಟ್ಟಿ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಸುಳ್ಯ ಮಂಡಲದ ಉಪಾಧ್ಯಕ್ಷರಾದ ಪುಲಸ್ತ್ಯಾ ರೈ, ಕಡಬ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಾಡ್ಯಪ್ಪ ಗೌಡ

ಅ.05: ಬಿಜೆಪಿ ಎಸ್ಸಿ ಮೋರ್ಛಾ ವತಿಯಿಂದ ಬೃಹತ್ ಸಮರ್ಥನಾ ಸಮಾವೇಶ ► ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಹುಲಿಗಳೊಂದಿಗೆ ಹೆಜ್ಜೆ ಹಾಕಿದ ರಮಾನಾಥ ರೈ ► ಹುಲಿಗಳ ತಾಳಕ್ಕೆ ತಕ್ಕಂತೆ ಕುಣಿದ ವೀಡಿಯೋ ನೋಡಬೇಕೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.02. ಹುಲಿವೇಷದಾರಿಗಳೊಂದಿಗೆ ಅರಣ್ಯ ಸಚಿವರು ಹೆಜ್ಜೆ ಹಾಕಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹುಲಿವೇಷ ಕುಣಿತವನ್ನು ಆಯೋಜಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ರಾಜ್ಯ ಪರಿಸರ, ಜೀವಶಾಸ್ತ್ರ ಮತ್ತು ಅರಣ್ಯ ಸಚಿವರೂ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ರಮಾನಾಥ ರೈ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದ ಹುಲಿವೇಷಧಾರಿಗಳೊಂದಿಗೆ ತಾನೂ ಹೆಜ್ಜೆ ಹಾಕಿದರು. ಹುಲಿವೇಷ ಕುಣಿತದೊಂದಿಗೆ ತಾನೂ ಕುಣಿಯುವುದರ ಮೂಲಕ ತನಗೆ ಕುಣಿತ ಎನ್ನುವುದು

ಹುಲಿಗಳೊಂದಿಗೆ ಹೆಜ್ಜೆ ಹಾಕಿದ ರಮಾನಾಥ ರೈ ► ಹುಲಿಗಳ ತಾಳಕ್ಕೆ ತಕ್ಕಂತೆ ಕುಣಿದ ವೀಡಿಯೋ ನೋಡಬೇಕೆ…? Read More »

ಕರಾವಳಿ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!!

(ನ್ಯೂಸ್ ಕಡಬ) newskadaba.com ನಾಗ್ಪುರ,ಅ.02. ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದ್ದು, ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿಯನ್ನು ಜಯಗಳಿಸಿದೆ. ಭಾರತದ ಪಾಳಿಗೆ ಇದೇ ಮೊದಲ ಸರಣಿ ಗೆಲುವಾಗಿದೆ. ಆದಿತ್ಯವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!! Read More »

ಕ್ರೀಡಾ ನ್ಯೂಸ್

ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ►ಪ್ರಯಾಣಿಕರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಹೊಸನಗರ,ಅ.02, ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಗಾಯಗಳು ಆಗಿರುವ ಘಟನೆ ತಾಲೂಕಿನ ಹನಿಯಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಕುಂದಾಪುರದಿಂದ ಶಿವಮೊಗ್ಗ ದತ್ತ ಸಾಗುತ್ತಿದ್ದ ಹನುಮಾನ್ ಕಂಪನಿಯ ಬಸ್ ಹಾಗೂ ಹೊಸನಗರ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಬಸ್ಸುಗಳ ಮುಂಬಾಗ ನಜ್ಜುಗುಜ್ಜಾಗಿದೆ. ಬಸ್ ಗಳ ಚಾಲಕರಿಗೆ ಹಾಗೂ 5 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. 20 ಪ್ರಯಾಣಿಕರು

ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ►ಪ್ರಯಾಣಿಕರಿಗೆ ಗಂಭೀರ ಗಾಯ Read More »

ಕರ್ನಾಟಕ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ವಿಶೇಷ ಕಾರ್ಯಾಚರಣೆ ► ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.02. ದಕ್ಷಿಣಕ್ಕೆ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಯುವ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಮುಂದಾಗಿದೆ. ಅಬಕಾರಿ ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಿ ಕಾರ್ಯಾಚರಿಸಲು ಸೂಚಿಸಲಾಗಿದೆ ಎಂದು ರಾಜ್ಯದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ಅಬಕಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿ ಅಧಿಕಾರಿಗಳ ಜತೆ

ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ವಿಶೇಷ ಕಾರ್ಯಾಚರಣೆ ► ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ Read More »

ಕರಾವಳಿ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು

(ನ್ಯೂಸ್ ಕಡಬ) newskadabacom ಪುತ್ತೂರು, ಅ.01. ಸಾಮಾಜಿಕ ಜಾಲತಾಣಗಳಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಬಗ್ಗೆ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. ಸಂತೋಷ್ ಉಪ್ಪುರ್ ಎನ್ನುವ ವ್ಯಕ್ತಿ ಕೊರಗಜ್ಜನ ಬಗ್ಗೆ ತನ್ನ ಫೇಸ್‌ಬುಕ್‌ ವಾಲ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಅದನ್ನು ಏಂಜೆಲ್ ನಯನ ಪ್ರಜ್ವಲ್ ಮತ್ತು ಕುಂಜತ್ತುಮೊಯಿದಿನ್ ಕುಂಜತ್ತೂರು ಎಂಬವರು ಶೇರ್ ಮಾಡಿ ಕಮೆಂಟ್ಸ್ ಮಾಡಿರುತ್ತಾರೆ. ಕೊರಗಜ್ಜನನ್ನು ನಿಂದಿಸಿದ ಇವರ ಮೇಲೆ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು Read More »

ಕರಾವಳಿ
Scroll to Top