ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com  ಅ. 14. ದೀಪಾವಳಿ ಹಬ್ಬದ ಪ್ರಯುಕ್ತ ರಾಜಧಾನಿಯಿಂದ ಇತರ ಕಡೆಗಳಿಗೆ ಪ್ರಯಾಣಿಕರ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಇವು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ನಡುವೆ ಓಡಾಡಲಿವೆ. ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ಹೊರಡಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್, ಬೆಂಗಳೂರು ಕಂಟೋನ್ಮೆಂಟ್ ವಿಶೇಷ […]

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ Read More »

ಕರ್ನಾಟಕ

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com ಅ. 14. ನಾಳೆಯಿಂದ 2  ದಿನಗಳ ಕಾಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಪ್ರವಾಸ ಕೈಗೊಳ್ಳಲಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ಸಮಯದಲ್ಲಿ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರ್ನಾಟಕ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್‌ ಕಡಬ) newskadaba.com ಅ. 14. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಾಗಿ ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ Read More »

ಕರಾವಳಿ

ನಾಳೆಯಿಂದ ಖಾದಿ ಉತ್ಸವ

(ನ್ಯೂಸ್‌ ಕಡಬ) newskadaba.com  ಅ. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಖಾದಿ ಉತ್ಸವ-2025 ಅಕ್ಟೋಬರ್ 15 ರಿಂದ 24 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ನಗರದ ಲಾಲ್‍ಭಾಗ್ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ  ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್

ನಾಳೆಯಿಂದ ಖಾದಿ ಉತ್ಸವ Read More »

ಕರಾವಳಿ

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ- ಜಿಲ್ಲಾ ಮಟ್ಟದಲ್ಲಿ ನೋಂದಣಿ

(ನ್ಯೂಸ್‌ ಕಡಬ) newskadaba.com  ಅ. 14. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ವಿಕಸಿತ ಭಾರತ ಯುವ ಸಂಸತ್ – 2026  ಕಾರ್ಯಕ್ರಮ ಆರಂಭಗೊಂಡಿದ್ದು, 18 ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರು ನೋಂದಣಿ ಮಾಡಬಹುದಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ ತಮ್ಮ ಭಾಷಣವನ್ನು ಮಂಡಿಸಬಹುದು. ಆಸಕ್ತ ಯುವಕ-ಯುವತಿಯರು ಅಕ್ಟೋಬರ್ 12ರ ವರೆಗೆ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ- ಜಿಲ್ಲಾ ಮಟ್ಟದಲ್ಲಿ ನೋಂದಣಿ Read More »

ಕರಾವಳಿ

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ

(ನ್ಯೂಸ್‌ ಕಡಬ) newskadaba.com ಅ. 14. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಕಂಪನಿಯಾದ ಸ್ರೇಸನ್ ಫಾರ್ಮಾಸ್ಯುಟಿಕಲ್‌ ನ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರದಂದು ರದ್ದುಗೊಳಿಸಿದ್ದಲ್ಲದೇ ಕಂಪನಿಯನ್ನು ಮುಚ್ಚುವಂತೆ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಔಷಧದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ 48.6% ಇರುವುದು ಪತ್ತೆಯಾಗಿದೆ. ಈ ಔಷಧವು ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್‌ ಇರುವ ಸ್ರೇಸನ್ ಕಂಪನಿಯನ್ನು

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com  ಅ. 14. ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರಿಗೆ ಭಾನುವಾರದಂದು ರಾತ್ರಿ 11:59ರ ವೇಳೆಗೆ ವಿಶ್ರಾಂತಿಯಲ್ಲಿದ್ದ ಸಂದರ್ಭ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ Read More »

ಸಿನಿಮಾ

ಸರ್ದಾರ್ ಪಟೇಲ್ 150ನೇ ಜಯಂತಿ- ವಿವಿಧ ಕಾರ್ಯಕ್ರಮಗಳು

(ನ್ಯೂಸ್‌ ಕಡಬ) newskadaba.com  ಅ. 14. ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಸಂಭ್ರಮದ ಭಾಗವಾಗಿ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ್ (MY Bharat) ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಭಾರತದ ರಾಜಕೀಯ ಏಕೀಕರಣದ ಮೂಲಕ ಏಕೀಕೃತ ಭಾರತವನ್ನು ನಿರ್ಮಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಪಾತ್ರವನ್ನು ಯುವಜನರಿಗೆ ತಿಳಿಯಪಡಿಸುವುದು ಮತ್ತು ದೇಶದ ಐಕ್ಯತೆ ಹಾಗೂ ಸಮಗ್ರತೆಯನ್ನು ಕಾಪಾಡುವಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಖಚಿತಪಡಿಸುವುದು ಈ ಕಾರ್ಯಕ್ರಮಗಳ

ಸರ್ದಾರ್ ಪಟೇಲ್ 150ನೇ ಜಯಂತಿ- ವಿವಿಧ ಕಾರ್ಯಕ್ರಮಗಳು Read More »

ಕರ್ನಾಟಕ

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com  ಅ. 14. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಮುನ್ನೂರು ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇದರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 26 ರಂದು ಬೆಳಿಗ್ಗೆ 9 ಗಂಟೆಗೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಶ್ರೀ ರಾಜರಾಜೇಶ್ವರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಯೋಜಿಸಲಾಗುವ ಸ್ಪರ್ಧೆಗಳ

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ Read More »

ಕರಾವಳಿ
Scroll to Top