► ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ.19. ಮೋಸ್ಟ್ ವಾಂಟೆಡ್ ಉಗ್ರ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಕಿರಿಯ ಸಹೋದರ ಇಕ್ಬಾಲ್‌ ಕಸ್ಕರ್‌ ಮಹಾರಾಷ್ಟ್ರದ ಎನ್​ಕೌಂಟರ್​ ಸ್ಪೆಷಲಿಸ್ಟ್​ ಪ್ರದೀಪ್ ಶರ್ಮಾ ನೇತೃತ್ವದಲ್ಲಿ ಥಾಣೆಯ ಆಂಟಿ-ಎಕ್​ಸ್ಟಾರ್ಶನ್ ಸೆಲ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ‌ಮುಂಬೈನ ನಗ್ಪದಾ ಪ್ರದೇಶದಲ್ಲಿ ಅಡಗಿದ್ದ ಇಕ್ಬಾಲ್‌ ಕಸ್ಕರ್ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ದೊಡ್ಡ-ದೊಡ್ಡ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಈತ ಥಾಣೆ, ಉಲ್ಲಾಸ್​ನಗರ್, ದೊಂಬಿವ್ಲಿ ಪ್ರದೇಶಗಳಲ್ಲಿ ಉದ್ಯಮಿಗಳು ಹಾಗೂ ಬಿಲ್ಡರ್​ಗಳನ್ನ ಹೆದರಿಸಿ, ಅವರಿಂದ ಕೋಟ್ಯಾಂತರ ರೂಪಾಯಿ ಹಣ […]

► ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಪೊಲೀಸ್ ಬಲೆಗೆ Read More »

ರಾಷ್ಟ್ರೀಯ ನ್ಯೂಸ್

ಜಲ್ಲಿ ಮಿಕ್ಸರ್ – ಸ್ಕೂಟಿ ಡಿಕ್ಕಿ ►ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19 ಜಲ್ಲಿ ಮಿಕ್ಸರ್ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ವೆಂಕಟರಮಣಪ್ಪ(45) ಹಾಗು ವೆಂಕಟಪ್ಪ(43) ಮೃತ ದುರ್ದೈವಿಗಳಾಗಿದ್ದು, ಇವರು ರಾಮಸಾಗರ ನಿವಾಸಿಗಳು ಎಂಬುವುದಾಗಿ ತಿಳಿದುಬಂದಿದೆ. ರೈಲ್ವೆ ಬ್ರಿಡ್ಜ್ ನಿಂದಾಗಿ ಕಿರಿದಾಗಿರುವ ರಾಷ್ಟ್ರೀಯ ಹೆದ್ದಾರಿ-7 ಸರ್ವಿಸ್ ರಸ್ತೆ ಇಲ್ಲದೆ ಇರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಜಲ್ಲಿ ಮಿಕ್ಸರ್ – ಸ್ಕೂಟಿ ಡಿಕ್ಕಿ ►ಇಬ್ಬರು ಮೃತ್ಯು Read More »

ಕರ್ನಾಟಕ

ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.18. ಪೆಟ್ರೋಲ್ ಡೀಸೆಲ್ ದರವನ್ನು‌ ಜಿಎಸ್ಟಿ ಅಡಿಗೆ ತರುವ ಮೂಲಕ ಭಾರಿ ಪ್ರಮಾಣದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಏಕೆಂದರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಈಗ ವಿಧಿಸುತ್ತಿರುವ ವ್ಯಾಟ್‌ ಸೇರಿದಂತೆ ಬಹುತೇಕ ಎಲ್ಲ ತೆರಿಗೆಗಳು ರದ್ದಾಗಲಿವೆ. ಪ್ರಸ್ತುತ ಶೇ.70ರಷ್ಟು ಪಾಲು ವಿವಿಧ ರೀತಿಯ ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ವಿಧಿಸಲಾಗುತ್ತಿದ್ದು, ಒಂದು ವೇಳೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ಶೇ.70ರಷ್ಟಿರುವ ತೆರಿಗೆ ರದ್ದಾಗಿ ಶೇ.12 ಅಥವಾ ಶೇ.18 ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹೀಗಾದಲ್ಲಿ

ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ Read More »

ರಾಷ್ಟ್ರೀಯ ನ್ಯೂಸ್

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.19. ಖಾಸಗಿ ಸುದ್ದಿ ವಾಹಿನಿಯ ವರದಿಗಾರರೋರ್ವರು ಹೊನ್ನಾವರ ಬಂದರಿನಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟ ಖೇದಕರ ಘಟನೆ ಹೊನ್ನಾವರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಹೊನ್ನಾವರ ಮೂಲದ ಮಂಜು ಹೊನ್ನಾವರ್ (34) ಸಾವನ್ನಪ್ಪಿದ ದುರ್ದೈವಿ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಬಂದರಿನಲ್ಲಿ ಈ ಘಟನೆ ನಡೆದಿದೆ. ಟಿ.ವಿ.9 ಹಾಗೂ ಸಮಯ ಟಿ.ವಿ ಯಲ್ಲಿ ಮಂಜು ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು Read More »

ಕರ್ನಾಟಕ

ಕೋಟ: ಕಾರು ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಸೆ.18. ಇಲ್ಲಿಗೆ ಸಮೀಪದ ಕೋಟ ಎಂಬಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಕೋಟ ಸಮೀಪದ ಮುರ್ಕಾಯಿ ಎಂಬಲ್ಲಿ ಬ್ಯಾರಿಕೇಡ್ ಸಮೀಪ ಎಪಿಎಂ ಬಸ್ ಕಂಡಕ್ಟರ್ ಗುಲ್ವಾಡಿ ನಿವಾಸಿ ಇಸ್ಮಾಯಿಲ್ ಸಾಹೇಬ್ ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟರು. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಟ: ಕಾರು ಢಿಕ್ಕಿ ► ಓರ್ವ ಮೃತ್ಯು Read More »

ಕರ್ನಾಟಕ

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಭಾರತೀಯ ಜನತಾ ಪಾರ್ಟಿಯ ಕಡಬ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕೃಷ್ಣ ಶೆಟ್ಟಿ, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಕಡಬ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ., ಉದಯಕುಮಾರ್, ಫಯಾಜ್ ಕೆನರಾ, ತ್ಯಾಗರಾಜ ನಂದುಗುರಿ, ಶ್ರೀಧರ, ನಿತಿನ್, ಉಮೇಶ್

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ.18. ರಾಷ್ಟ್ರೀಯ ಹೆದ್ದಾರಿ 66 ರ ಹೊಸಂಗಡಿ ಸಮೀಪದ ಚೆಕ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಅಪಾಚಿ ಬೈಕೊಂದು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಜೊತೆಗಿದ್ದ ಸಂಬಂಧಿಕನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನನ್ನು ಬಂದ್ಯೋಡು ಸಮೀಪದ ಅಡ್ಕ ಭಗವತೀ ಕ್ಷೇತ್ರ ನಿವಾಸಿ ನಿತಿನ್ ಕುಮಾರ್(22) ಎಂದು ಗುರುತಿಸಲಾಗಿದೆ. ಈತನ

ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.18, ಮಹಿಳೆಯರ ರಕ್ಷಣೆಗೆಂದು 18 ವರ್ಷದ ಯುವಕನೊಬ್ಬ ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ. ಹೈದರಾಬಾದ್ ನ ಹಿಮಾಯತ್ ನಗರದ ಸಿದ್ದಾರ್ಥ್ ಮಂಡಲ ಎಂಬ ಯುವಕ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ್ದಾನೆ. ಈತ ಉದ್ಯಮಿ ಶ್ರೀರಾಮ್ ಮಂಡಲ ಹಾಗೂ ಶಶಿಕಲಾ ಮಂಡಲ ಅವರ ಪುತ್ರ. ಮಹಿಳೆಯರ ರಕ್ಷಣೆಗೆಂದು ತಯಾರಿಸಿದ ಈ ಶೂ ನ ವಿಶೇಷತೆ ಏನಂತಿರಾ..??? ಹೌದು ಈ ಶೂ ಅಥವಾ ಚಪ್ಪಲಿ ಧರಿಸಿದ್ದ ವೇಳೆ ಯಾರಾದ್ರೂ ನಿಮ್ಮ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದರೆ

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!! Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18, ಮಾಜಿ ಸಚಿವ ಖಮರುಲ್‌ ಇಸ್ಲಾಂ(69) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. 1974ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ ಇವರು ಕಲುಬುರಗಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, 3 ಬಾರಿ ಮುಸ್ಲಿಂ ಲೀಗ್‌ನಿಂದ ಹಾಗೂ 3 ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು.  ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ ಅವರನ್ನು ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಡಲಾಗಿತ್ತು.

ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ Read More »

ಕರ್ನಾಟಕ

ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ.18,: ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಕಸ್ಮಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಗಳು ಸುಟ್ಟು ಸುಮಾರು 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಹಾನಿಯಾಗಿದೆ. ರಾಘವೇಂದ್ರ ಸ್ವಾಮಿ ಮಠದ ಬಳಿ ಶಾರ್ಟ್ ಸರ್ಕ್ಯೂಟ್‍ನಿಂದ ಈ ಘಟನೆ ನಡೆದಿದ್ದು, 5 ಅಂಗಡಿಗಳು ಹೊತ್ತಿ ಉರಿದಿವೆ. ತುಂಗಭದ್ರಾ ನದಿ ತೀರದಲ್ಲಿರುವ ಪೂಜೆ ಸಾಮಗ್ರಿ, ಆಟಿಕೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಗುರು, ಭೀಮಣ್ಣ, ಜಗಂ ಮಹೇಶ್, ಆದಿ, ಬಂದೇಜಿ ರಾವ್ ಎಂಬವರಿಗೆ ಸೇರಿದ ಅಂಗಡಿಗಳು

ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ! Read More »

ಕರ್ನಾಟಕ
Scroll to Top