ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಅ. 14. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ […]

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್- ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

(ನ್ಯೂಸ್‌ ಕಡಬ) newskadaba.com  ಅ. 14. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟಗೊಂಡಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ) ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ, ಅ. 30 ರಂದು  ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವೆಂಬರ್ 9ರಂದು  ಬೆಳಿಗ್ಗೆ 9 ರಿಂದ ಮಧ್ಯಾಹ್ನ 3

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ Read More »

ಕರ್ನಾಟಕ

ಬಾರ್ಬಡೋಸ್ ಸಂಸತ್ತಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

(ನ್ಯೂಸ್‌ ಕಡಬ) newskadaba.com  ಅ. 14.  68ನೇ ಅಂತರರಾಷ್ಟ್ರೀಯ ಕಾಮನ್‍ ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‍ ಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು.

ಬಾರ್ಬಡೋಸ್ ಸಂಸತ್ತಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್

(ನ್ಯೂಸ್‌ ಕಡಬ) newskadaba.com ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಆರೋಪದಡಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತರನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ (39) ಮತ್ತು ಹೊಸಬೆಟ್ಟುವಿನ ರಾಫಿಲ್ (45) ಎಂದು ಗುರುತಿಸಲಾಗಿದೆ. ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಆರೋಪಿಗಳು ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಲು ಯತ್ನಿಸಿದ್ಧರು ಎನ್ನಲಾಗಿದೆ. ನಂತರ ವಿದ್ಯಾರ್ಥಿನಿಯರು ಹೇಗೋ ತಪ್ಪಿಸಿ ಮನೆಗೆ ತಲುಪಿದ್ದರು.

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com ಅ. 14. ಉಡುಪಿ ಆರ್ ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರದಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿರುವ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರಿಂದ ಕೇಳಿಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ Read More »

ಕರಾವಳಿ

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ!

(ನ್ಯೂಸ್‌ ಕಡಬ) newskadaba.com,  ಅ .13:  ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜಿಂಗ್‌ನಲ್ಲಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಾರ್ಜಿಂಗ್‌ನಲ್ಲಿದ್ದ ಎಲೆಕ್ಟ್ರಿಕ್ ಬೈಕ್ ಒಂದು ಇದ್ದಕ್ಕಿದ್ದಂತೆ ಸ್ಪೋಟಗೊಂಡು ಬೆಂಕಿಗಾಹುತಿಯಾಗಿದೆ. ಸ್ಪೋಟದಿಂದಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಅ .13:  ‘ಕಾಂತಾರ: ಚಾಪ್ಟರ್ 1’ ಚಿತ್ರದಿಂದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಭಾರತದ ಸಿನಿಮಾ ರಂಗದಲ್ಲಿ ತಮ್ಮದೇ ಆದ ಶಕ್ತಿಶಾಲಿ ಸ್ಥಾನವನ್ನು ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಇಟ್ಟುಕೊಂಡಿದ್ದ ನಿರೀಕ್ಷೆಗಳಿಗಿಂತ ಬಹಳ ಹೆಚ್ಚು ಪ್ರತಿಸ್ಪಂದನೆ ಬಂದಿದೆ. ವಿಶೇಷವೆಂದರೆ, ಈ ಸಿನಿಮಾ ಕನ್ನಡದಲ್ಲಷ್ಟೇ ಅಲ್ಲದೆ ಹಿಂದಿ ಪ್ರೇಕ್ಷಕರಲ್ಲಿಯೂ ಭಾರೀ ಸದ್ದು ಮಾಡಿದೆ. ಇದರ ಪೂರೈಕೆಯಾಗಿ, ರಿಷಬ್ ಶೆಟ್ಟಿಗೆ ಮುಂಬೈನಲ್ಲಿ ಲಭಿಸಿದ ಅದ್ದೂರಿ ಸ್ವಾಗತ ಸಾಕ್ಷಿಯಾಗಿದ್ದು, ಅಭಿಮಾನಿಗಳು ಕಾರಿನ

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13:  ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13 ಮಂಗಳೂರು: 2 ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ

(ನ್ಯೂಸ್‌ ಕಡಬ) newskadaba.com,  ಅ .13:  ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ತಕ್ಷಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿಗಳು ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈ ವರ್ಷ ಅತಿವೃಷ್ಟಿಯಿಂದ ಬೀದರ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top