ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ನೂಜಿಬಾಳ್ತಿಲ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ವಲಯಮಟ್ಟದ ಚದುರಂಗ ಆಟದಲ್ಲಿ ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. 17ರ ವಯೋಮಿತಿಯಲ್ಲಿ ನಡೆದ ಚದುರಂಗ ಆಟದಲ್ಲಿ  ದಿಲೀಪ್ ಕುಮಾರ್ ಆರ್ 4ನೇ ಸ್ಥಾನ, ಜಿತೇಶ್ ಕುಮಾರ್.ಎಸ್ 5ನೇ ಸ್ಥಾನ ಪಡೆದುಕೊಂಡಿರುತ್ತಾರೆ. 14ರ ವಯೋಮಿತಿಯಲ್ಲಿ ಅಭಿನವ್ ಪಿ.ಎಸ್ ಪ್ರಥಮ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಮನೀಶ್ ರೈ ದ್ವಿತೀಯ ಸ್ಥಾನ, ಹುಡುಗಿಯರ ವಿಭಾಗದಲ್ಲಿ […]

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ರೆಂಜಿಲಾಡಿ ನೂಜಿಬಾಳ್ತಿಲ ಗ್ರಾಮದ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಶ್ರೀ ಗಣೇಶೋತ್ಸವ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ನಡೆಯಿತು. ಬೆಳಿಗ್ಗೆ ಸುಪ್ರಭಾತ, ಗಣಹೋಮ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಟೆ, ಭಜನಾಕಾರ್ಯಕ್ರಮ ನಡೆದು ಬಳಿಕ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಸಂಜೆ ಓಕುಳಿ ಏಲಂ ಬಳಿಕ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದ ಎದುರು ಅಶ್ವಥ ಕಟ್ಟೆಯಲ್ಲಿ ಶ್ರೀದೇವರ ಪೂಜೆ ನಡೆಸಲಾಯಿತು. ಗೋಳಿಯಡ್ಕದಿಂದ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ Read More »

ಕರಾವಳಿ

ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ► ಬೆಳಗ್ಗಿನ ಉಪಹಾರ ಉಚಿತ ► ಶೆಟ್ಟಿ ಕ್ಯಾಂಟೀನ್

(ನ್ಯೂಸ್ ಕಡಬ) newskadaba.com ಕೋಲಾರ, ಆ.31. ಕರ್ನಾಟಕದ ಮೂಲೆ ಮೂಲೆಯಿಂದಲೂ ಕ್ಯಾಂಟೀನ್ ಸದ್ದು ಜೋರಾಗಿದೆ. ಕಾಂಗ್ರೆಸ್ ಪಕ್ಷದಿಂದ “ಇಂದಿರಾ ಕ್ಯಾಂಟೀನ್”,  ಜೆಡಿಎಸ್‍ನ “ಅಪ್ಪಾಜಿ ಕ್ಯಾಂಟೀನ್”  ಇದೀಗ ಬಿಜೆಪಿ ಮುಖಂಡರ “ಕೃಷ್ಣಯ್ಯ ಶೆಟ್ಟಿ ಕ್ಯಾಂಟೀನ್” ಹೀಗೆ ಕ್ಯಾಂಟೀನ್ ಗಳ ಕಾರುಬಾರು ಜೋರಾಗಿಯೇ ಇದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿಯವರು, ತಮ್ಮದೇ ಹೆಸರಿನಲ್ಲಿ ಕ್ಯಾಂಟೀನ್ ಶುರು ಮಾಡಿದ್ದಾರೆ. ಕೆಲವು ಸಮಯದಿಂದ ಕ್ಷೇತ್ರದಿಂದ ದೂರ ಉಳಿದಿದ್ದ ಕೃಷ್ಣಯ್ಯಶೆಟ್ಟಿಯವರು ಮತ್ತೆ ಮಾಲೂರು ಕ್ಷೇತ್ರದಲ್ಲಿ

ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ► ಬೆಳಗ್ಗಿನ ಉಪಹಾರ ಉಚಿತ ► ಶೆಟ್ಟಿ ಕ್ಯಾಂಟೀನ್ Read More »

ಕರಾವಳಿ

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಆ.31. ಹುಚ್ಚು ನಾಯಿ ದಾಳಿಯಿಂದಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾಸನ ಬೇಲೂರು ಪಟ್ಟಣದ ಬಡಾವಣೆಗಳಲ್ಲಿ ಬುಧವಾರ ರಾತ್ರಿ ನಡೆದಿದೆ.   ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಬೇಲೂರು ಮತ್ತು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಸೇರಿ ಬೈಕ್ ಗಳ ಮೂಲಕ ನಾಯಿ ಹಿಡಿಯಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಈವರಗೆ ನಾಯಿಯನ್ನು ಹಿಡಿಯಲು ಸಾಧ್ಯವಾಗಿಲ್ಲ.

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ಇಲ್ಲಿನ ಸ್ಥಳೀಯ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಪಬ್ಲಿಕ್ ಟಾಯ್ಲೆಟ್ ಒಳಗೆ ಸರಸವಾಡುತ್ತಿದ್ದ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಪ್ರಸಂಗ ವಿಟ್ಲ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕರು ಅನುಮಾನಗೊಂಡು ಬಾಗಿಲು ತಟ್ಟಿದಾಗ ವಿದ್ಯಾರ್ಥಿ ಹೊರಬಂದಿದ್ದಾನೆ. ಆ ಬಳಿಕ ಮುಖಕ್ಕೆ ಬಟ್ಟೆ ಹಾಕಿಕೊಂಡಿದ್ದ ವಿದ್ಯಾರ್ಥಿನಿಯೂ ಹೊರಬಂದು ಓಡಿ ಪರಾರಿಯಾಗಿದ್ದಾಳೆ. ಇಬ್ಬರೂ ಸಾರ್ವಜನಿಕರ ಕೈಗೆ ಸಿಕ್ಕಿರುವ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ Read More »

ಕರಾವಳಿ

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31. ಖಾಸಗಿ ಬಸ್ ಹಾಗು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ಲಾರಿ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ Read More »

ಕರ್ನಾಟಕ

ಆಲಂಕಾರು ವಿಶೇಷ ಗ್ರಾಮ ಸಭೆ ► ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಆ.31. ಒಂದೆಡೆ ಅಬಕಾರಿ ಅಧಿಕಾರಿಗಳು ಕಾನೂನಿನ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದರೆ ಇನ್ನೊಂದೆಡೆ ಮದ್ಯದಂಗಡಿ ಮುಚ್ಚಿಸುವಂತೆ ಏರು ಧ್ವನಿಯಲ್ಲಿ ಆಗ್ರಹಿಸಿದ ನಾಗರೀಕರು ಈ ಮದ್ಯೆ ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಎಚ್ಚರಿಕೆಯ ನಿರ್ಣಯ ಅಂಗಿಕಾರ ವಾಗ್ವದ, ಆಣೆಪ್ರಮಾಣದ ಸನ್ನಿವೇಶ ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಬುಧವಾರ ವ್ಯಕ್ತವಾಯಿತು. ಸಭೆಯು ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಳಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಆಲಂಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಕಾರು ಪೇಟೆಯಲ್ಲಿ ಗ್ರಾಮಸ್ಥರ ಆಕ್ಷೇಪಗಳ

ಆಲಂಕಾರು ವಿಶೇಷ ಗ್ರಾಮ ಸಭೆ ► ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ Read More »

ಕರಾವಳಿ

ಅಪಘಾತವನ್ನು ಆಹ್ವಾನಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಹೊಂಡಗಳು ► ಪಾದಚಾರಿಗಳ, ವಾಹನ ಚಾಲಕರ ಸಮಸ್ಯೆಯನ್ನು ಕೇಳುವವರು ಯಾರು..?

(ನ್ಯೂಸ್ ಕಡಬ) newskadaba.com ಮಾಣಿ, ಆ.31. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಿಂದ ಕಲ್ಲಡ್ಕವರೆಗಿನ ಹಳೀರ, ಸೂರಿಕುಮೇರು, ಕುದ್ರೆಬೆಟ್ಟು ಎಂಬಲ್ಲಿ ಅಪಾಯಕಾರಿ ಹೊಂಡಗಳು ತಲೆ ಎತ್ತಿದ್ದು ಹಲವಾರು ಅಪಘಾತಗಳಿಗೆ ಕಾರಣವಾಗುತ್ತಿದೆ. ಮಳೆಗಾಲದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರೆಲ್ಲಾ ರಸ್ತೆಗಳಲ್ಲೇ ಹೋಗುತ್ತಿರುವುದರಿಂದ ವಾಹನ ಚಾಲಕರಿಗೆ ರಸ್ತೆಯು ಸರಿಯಾಗಿ ಗೋಚರಿಸದೆ ಇಂತಹಾ ಹೊಂಡಗಳಿಗೆ ಬಿದ್ದು ಹಾಗೂ ಕೆಲವೊಂದು ಹೊಂಡಗಳು ಹತ್ತಿರ ತಲುಪಿದ ನಂತರ ಗೋಚರಿಸುವುದರಿಂದ ಕೂಡಲೇ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುವ ವಾಹನಗಳು ಡಿಕ್ಕಿಯಾಗಿ ಹಲವಾರು

ಅಪಘಾತವನ್ನು ಆಹ್ವಾನಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಹೊಂಡಗಳು ► ಪಾದಚಾರಿಗಳ, ವಾಹನ ಚಾಲಕರ ಸಮಸ್ಯೆಯನ್ನು ಕೇಳುವವರು ಯಾರು..? Read More »

ಕರಾವಳಿ

ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ದುಬೈ, ಆ.31. ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಇದರ ಮಹಾ ಸಭೆಯು ರಿಯಾಝ್ ಕಾಣಿಯೂರು ಇವರ ಅಧ್ಯಕ್ಷತೆಯಲ್ಲಿ ದುಬೈ ಅಲ್ ಅಮಾನ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2017 – 2018 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶಾಫಿ ಮೂಸಾ ಬೆಳ್ಳಾರೆ, ಅಧ್ಯಕ್ಷರಾಗಿ ನಝೀರ್ ಬೆದ್ರಾಜೆ, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶರೀಫ್ ಕಲ್ಪಡ, ಜೊತೆ ಕಾರ್ಯದರ್ಶಿ ಯಾಗಿ ಇಸ್ಮಾಯಿಲ್ ಮಾಲೆಂಗ್ರಿ,

ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ಭೀಕರ ಮಳೆಯಿಂದಾಗಿ ತತ್ತರಿಸಿರುವ ಮುಂಬೈ ಜನತೆ ನೆರೆಯ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಆಘಾತಕ್ಕೆ ಸಿದ್ಧವಾಗಬೇಕಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೆ ಆಸ್ಸಾಂ, ಬಿಹಾರ ರಾಜ್ಯಗಳು ಪ್ರವಾಹಕ್ಕೀಡಾಗಿದ್ದು, ಮಂಗಳವಾರದ ಮಳೆಗೆ ಮಹಾರಾಷ್ಟ್ರದಲ್ಲೂ ನೆರೆ ನೀರಿನಿಂದ ಜನತೆ ತತ್ತರಿಸಿದ್ದಾರೆ. ಪರಿಸ್ಥಿತಿ ಹೀಗಿದ್ದು 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವಿಪರೀತ ಮಳೆಯಾಗಲಿದ್ದು, 14 ನದಿಗಳು

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ Read More »

ರಾಷ್ಟ್ರೀಯ ನ್ಯೂಸ್
Scroll to Top