ನಾಳೆ ಕಡಬದಲ್ಲಿ ಬಳ್ಳೇರಿ ಬಿಲ್ಡರ್ಸ್ ನೂತನ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.23. ಇಂಜಿನಿಯರ್ ಮನೋಜ್ ಕೃಷ್ಣ ಬಳ್ಳೇರಿಯವರ ನೂತನ ಕಛೇರಿ ಬಳ್ಳೇರಿ ಬಿಲ್ಡರ್ಸ್ ಕಡಬದ ಮುಖ್ಯ ರಸ್ತೆಯ ಭಾಗೀರಥಿ ಟವರ್ಸ್ ನಲ್ಲಿ ಆಗಸ್ಟ್ 25ನೇ ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಶುಭಾರಂಭಗೊಳ್ಳಲಿದೆ. ಸುಂದರವಾದ ಕಟ್ಟಡ ನಿರ್ಮಾಣಕ್ಕೆ ರಚನಾತ್ಮಕ ಸಲಹೆ, ಎಸ್ಟಿಮೇಶನ್, ಪ್ಲಾನಿಂಗ್, ಇಂಟೀರಿಯರ್ ಡಿಸೈನಿಂಗ್, ಮಾಡೆಲಿಂಗ್ ಸೇವೆಗಳಿಗಾಗಿ ಸಂಪರ್ಕಿಸುವಂತೆ ಮನೋಜ್ ಕೃಷ್ಣ ಬಳ್ಳೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಕಡಬದಲ್ಲಿ ಬಳ್ಳೇರಿ ಬಿಲ್ಡರ್ಸ್ ನೂತನ ಕಛೇರಿ ಶುಭಾರಂಭ Read More »

ಕರಾವಳಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .23, ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ ನಲ್ಲಿ  ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ. ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…? Read More »

ಕರಾವಳಿ

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಆ .23, ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಕೊಕ್ಕಡ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ರೈ ಹೇಳಿದರು. ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 23ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪ ಸಮಾರಂಭದಲ್ಲಿ ಮಾತನಾಡಿ ಅವರು, ನಾವು ನಮ್ಮ ಜೀವನದ ಉದ್ದೇಶವನ್ನು ಅರಿತುಕೊಂಡು ಜೀವನ ನಡೆಸಿದಾಗ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ, ನಾವು ಪ್ರಕೃತಿಗೆ ವಿರುದ್ದವಾಗಿ ಬದುಕಬಾರದು, ನಮ್ಮ ಆಂತರಿಕ ಪ್ರವೃತ್ತಿ ಉತ್ತಮವಾಗಿರಬೇಕು,

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ Read More »

ಕರಾವಳಿ

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, 10 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಬೇಡಿಕೆಯ ಬಹುಭಾಷಾ ನಟಿ ಪ್ರಿಯಾಮಣಿ ತನ್ನ ಬಾಲ್ಯದ ಗೆಳೆಯ ಮುಂಬೈ ಮೂಲದ ಉದ್ಯಮಿ ಮುಸ್ತಫಾ ರಾಜ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ Read More »

ಕರ್ನಾಟಕ

ಸೆಪ್ಟೆಂಬರ್ 01 ರಂದು ಬಕ್ರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಇಸ್ಲಾಂ ಕ್ಯಾಲೆಂಡರ್ ಪ್ರಕಾರ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವು ಕೇರಳದ ಕಾಪಾಡ್‌ನಲ್ಲಿ ಮಂಗಳವಾರದಂದು ಆಗಿರುವುದರಿಂದ ಸೆಪ್ಟೆಂಬರ್ 01, 2017ನೇ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಳ್ಳಾಲ ಖಾಝಿ ಫಝಲ್ ಕೋಯಮ ತಂಙಳ್ ಕೂರತ್ ಪಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 01 ರಂದು ಬಕ್ರೀದ್ Read More »

ಕರಾವಳಿ

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ರ ಚುನಾವಣೆಯಲ್ಲೂ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದ ಸಿದ್ಧರಾಮಯ್ಯ ಇದೀಗ ರಾಗ ಬದಲಿಸಿದ್ದು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯುತ್ತದೆ. ನಂತರ ಮುಖ್ಯಮಂತ್ರಿ ಯಾರೆಂಬುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಣ್ಣಗಾಗಿದ್ದಾರೆ. ಇಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ ನಂತರ ಸಿ.ಎಂ. ಸಿದ್ಧರಾಮಯ್ಯ ತಣ್ಣಗಾದಂತಿದೆ.  ಈ

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು Read More »

ಕರ್ನಾಟಕ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅವರು ಮಂಗಳವಾರದಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಆ.22. ವಿದ್ಯುತ್ ಮಾರ್ಗದಲ್ಲಿನ ತುರ್ತು ಕಾಮಗಾರಿ ನಡೆಯಲಿರುವುದರಿಂದ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ಆ.24 ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ Read More »

ಕರಾವಳಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ‌ ಸಜಿಪ ಮುನ್ನೂರು ಆಲಾಡಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಶರೀಫ್ (22) ಹಾಗೂ ಕೃತ್ಯಕ್ಕೆ ಸಹಕರಿಸಿದ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ಜಬ್ಬಾರ್(29) ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ Read More »

ಕರಾವಳಿ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.22, ಕಾರಣಾಂತರಗಳಿಂದ 20 ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಮಂಡ್ಯ ಜಿಲ್ಲೆಯ ಸೈಯದ್ ಅಬ್ಬಾಸ್ ಮತ್ತು ಅವರ ಪುತ್ರ ಸೈಯದ್ ಅತಿಕ್ ಅವರು ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮೈಸೂರಿನ ದೇವರಾಜ ಮೊಹಲ್ಲಾದ ಆರ್ಯ ಭವನದಲ್ಲಿ “ಘರ್ ವಾಪಸಿ” ಕಾರ್ಯಕ್ರಮ ನಡೆಯಿತು. ಮೂಲತಃ ಹಿಂದೂ ಧರ್ಮದವರಾಗಿದ್ದ ಸೈಯದ್ ಅಬ್ಬಾಸ್ ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮವನ್ನು ತ್ಯಜಿಸಿ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾದರು. ಸಾಂಪ್ರದಾಯಿಕವಾಗಿ ಜನಿವಾರ ಧರಿಸಿ ಹೋಮ, ಹವನ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ Read More »

ಕರ್ನಾಟಕ
Scroll to Top