ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಜು.25: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್‌!ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆಂದು ವರದಿಯಾಗಿದೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಆರಂಭಗೊಂಡಿರುವ ಸಿಜೆಪಿ ನೇತೃತ್ವದ ಪ್ರತಿಭಟನೆಯು, […]

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶಾಲಾ ಬಸ್ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ – ಅಪಾಯಕಾರಿ ಮರಗಳ ಕೊಂಬೆ ತೆರವು

(ನ್ಯೂಸ್‌ ಕಡಬ) newskadaba.com,  ಜು.25:ಬರಿಮಾರು ಗ್ರಾಮದ ಕಲ್ಲೆಟ್ಟಿ ಬಳಿ ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಮೃತಪಟ್ಟ ಭೀಕರ ದುರಂತದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಬಂಟ್ವಾಳ ಪಟ್ಟಣ ಹಾಗೂ ಬಿ.ಸಿ.ರೋಡ್ ಸುತ್ತಮುತ್ತಲಿನ ರಸ್ತೆಬದಿಯ ಅಪಾಯಕಾರಿ ಮರಗಳು ಮತ್ತು ಚಾಚಿಕೊಂಡಿದ್ದ ಬೃಹತ್ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಆರಂಭಗೊಂಡಿದೆ. ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆವರಣ ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಕೊಂಬೆಗಳನ್ನು ಕತ್ತರಿಸಿ ತೆರವುಗೊಳಿಸಲಾಗಿದೆ.ಕಾರ್ಯಾಚರಣೆಯ ವೇಳೆಯಲ್ಲಿ

ಬಂಟ್ವಾಳ: ಶಾಲಾ ಬಸ್ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ – ಅಪಾಯಕಾರಿ ಮರಗಳ ಕೊಂಬೆ ತೆರವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪರೀಕ್ಷಾ ಅಕ್ರಮಗಳ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ​ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ವಿಪಕ್ಷಗಳ ತೀವ್ರ ಆಕ್ರೋಶ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಅಭಿಯಾನದ ಪ್ರಮುಖ ಆಗ್ರಹವಾಗಿತ್ತು. ​ ದೇಶದ ಏಕತೆ ಕಾಪಾಡಲು, ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ತಡೆಯಲು ಮತ್ತು ವಿದ್ಯಾರ್ಥಿಗಳು

ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಮಾದಕ ವಸ್ತು ಸಾಗಾಟ ಜಾಲದ ಪ್ರಮುಖ ಆರೋಪಿ ವಿದ್ಯಾನಗರ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.25: ಕಾಸರಗೋಡು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಚೆಂಗಳ ಸಮೀಪದ ಫೋರ್ಥ್ ಮೈಲ್ ನಿವಾಸಿ ಮೊಹಮ್ಮದ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಜಿಲ್ಲೆಯ ವಿವಿಧ ಭಾಗಗಳಲ್ಲಿ ದೀರ್ಘಕಾಲದಿಂದ ಮಾದಕ ದ್ರವ್ಯ ಸಾಗಾಟದ ಜಾಲ ನಡೆಸುತ್ತಿದ್ದ ಆರೋಪವಿದೆ.ವಿದ್ಯಾನಗರ, ಮೇಲ್ಪರಂಬ ಹಾಗೂ ಅಡೂರು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಮಾದಕ ದ್ರವ್ಯ ಕಾಯ್ದೆ (NDPS Act) ಅಡಿಯಲ್ಲಿ ಹಲವು ಪ್ರಕರಣಗಳು

ಕಾಸರಗೋಡು: ಮಾದಕ ವಸ್ತು ಸಾಗಾಟ ಜಾಲದ ಪ್ರಮುಖ ಆರೋಪಿ ವಿದ್ಯಾನಗರ ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹಗರಣವನ್ನು ಖಂಡಿಸಿ ‘ವಿ ದಿ ಪೀಪಲ್ ಆಫ್ ಇಂಡಿಯಾ’ ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಹಂಪನಕಟ್ಟೆಯ ಮಿಲಾಗ್ರಿಸ್ ಸರ್ಕಲ್‌ನಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಮೆರವಣಿಗೆ ನಡೆಸಿ, ಶಾಂತಿಯುತ ಸಮಾವೇಶ ನಡೆಸಲಾಯಿತು. ನೀಟ್ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ Read More »

ಕರಾವಳಿ

ಕೃಷಿ ಭೂಮಿಯಲ್ಲಿ ಸಿಕ್ಕಿತು ಅಪರೂಪದ ನಿಧಿ: ನೆಲಮಂಗಲದಲ್ಲಿ ಬಯಲಾಯ್ತು ಗಂಗರ ರಾಜಧಾನಿ ‘ಮಣ್ಣೆ’ ಕಾಲದ ಇತಿಹಾಸ!

(ನ್ಯೂಸ್‌ ಕಡಬ) newskadaba.com,  ಜು.25:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರಸಂದ್ರ ಗ್ರಾಮದ ರಂಗಸ್ವಾಮಯ್ಯ ಎಂಬುವವರ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ 8ನೇ ಶತಮಾನದ ಗಂಗರ ಕಾಲದ ಅಪರೂಪದ ಶಿಲಾಶಾಸನ ಹಾಗೂ ವೀರಗಲ್ಲು ಪತ್ತೆಯಾಗಿದೆ.ಖ್ಯಾತ ಇತಿಹಾಸ ತಜ್ಞ ಬಾಲಸುಬ್ರಹ್ಮಣ್ಯ ರಾವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಇದು ಹಳೆಯ ಕನ್ನಡ ಲಿಪಿಯಲ್ಲಿರುವ ಗಂಗರ ಕಾಲದ ಅತ್ಯಮೂಲ್ಯ ಶಾಸನ ಎಂದು ದೃಢಪಡಿಸಿದ್ದಾರೆ. ಗಂಗರ ರಾಜಧಾನಿ ‘ಮಣ್ಣೆ’ (ಮಾನ್ಯಪುರ) ಕಾಲದಲ್ಲಿ, ನಾಡಗೌಡ ಮಾರಮ್ಮನ ಸೇವಕನಾಗಿದ್ದ ಸಿವಮರೆನಾದಿ ಎಂಬ ವೀರನು ಗ್ರಾಮಕ್ಕೆ

ಕೃಷಿ ಭೂಮಿಯಲ್ಲಿ ಸಿಕ್ಕಿತು ಅಪರೂಪದ ನಿಧಿ: ನೆಲಮಂಗಲದಲ್ಲಿ ಬಯಲಾಯ್ತು ಗಂಗರ ರಾಜಧಾನಿ ‘ಮಣ್ಣೆ’ ಕಾಲದ ಇತಿಹಾಸ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತಿಭಟನಾ ಸ್ಥಳಕ್ಕೆ ಆಹಾರ, ಸ್ವಯಂಸೇವಕರು ಬರದಂತೆ ತಡೆದ ದಿಲ್ಲಿ ಪೊಲೀಸ್: CJP ಆರೋಪ

(ನ್ಯೂಸ್ ಕಡಬ) newskadaba.com ಜು. 25. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಹಾರ ಮತ್ತು ಸ್ವಯಂಸೇವಕರು ತೆರಳದಂತೆ ಪೊಲೀಸರು ತಡೆಯುತ್ತಿದ್ದಾರೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆರೋಪಿಸಿದೆ. ಈ ಕುರಿತು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಅವರು ಟ್ವಿಟರ್ ಮೂಲಕ ವಾಟ್ಸಾಪ್ ಸಂದೇಶದ ಸ್ಕ್ರೀನ್‌ ಶಾಟ್ ಹಂಚಿಕೊಂಡಿದ್ದು, ದೆಹಲಿ ಪೊಲೀಸರು 5 ಕಿಲೋ ಮೀಟರ್ ದೂರದಲ್ಲೇ ಚೆಕ್‌ ಪೋಸ್ಟ್ ನಿರ್ಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ. ​ಪೊಲೀಸರ

ಪ್ರತಿಭಟನಾ ಸ್ಥಳಕ್ಕೆ ಆಹಾರ, ಸ್ವಯಂಸೇವಕರು ಬರದಂತೆ ತಡೆದ ದಿಲ್ಲಿ ಪೊಲೀಸ್: CJP ಆರೋಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಓರ್ವ ಭಾರತೀಯ ನಾಗರಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜು.25: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ MV OMORFI ಎಂಬ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ ನಡೆದಿದ್ದು, ಭಾರತೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ಈ ಮಾಹಿತಿಯನ್ನು ಖಚಿತಪಡಿಸಿದೆ. ದಾಳಿಯ ಸಮಯದಲ್ಲಿ ಹಡಗಿನಲ್ಲಿ ಒಟ್ಟು 10 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಅವರಲ್ಲಿ ಮೂವರು ಭಾರತೀಯ ಪ್ರಜೆಗಳಾಗಿದ್ದರು.ಘಟನೆಯಲ್ಲಿ ಓರ್ವ ಭಾರತೀಯ ಪ್ರಜೆ ಅಸುನೀಗಿದ್ದು, ಹಡಗಿನಲ್ಲಿದ್ದ ಉಳಿದ ಇಬ್ಬರು

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಓರ್ವ ಭಾರತೀಯ ನಾಗರಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅನ್ನಭಾಗ್ಯ’ ಫಲಾನುಭವಿಗಳಿಗೆ ‘ಇಂದಿರಾ ಕಿಟ್’: ಸಿಗದಿದ್ದರೆ ನೇರ ಖಾತೆಗೆ ಹಣ जमा!

(ನ್ಯೂಸ್‌ ಕಡಬ) newskadaba.com,  ಜು.25: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಸಿನಂತೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ತೆರಿಗೆ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ಪಡಿತರ ತಡೆಹಿಡಿಯಲಾದ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗಿದೆ.ಬಿಪಿಎಲ್ ಕುಟುಂಬದ ಮುಖ್ಯಸ್ಥೆ ನಿಧನರಾದರೆ, ಅವರ ಸ್ಥಾನಕ್ಕೆ ಸೊಸೆ ಅಥವಾ

‘ಅನ್ನಭಾಗ್ಯ’ ಫಲಾನುಭವಿಗಳಿಗೆ ‘ಇಂದಿರಾ ಕಿಟ್’: ಸಿಗದಿದ್ದರೆ ನೇರ ಖಾತೆಗೆ ಹಣ जमा! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top