ಇನ್ನೂ ಕಡಿಮೆಯಾಗಲಿರುವ ಮೊಬೈಲ್ ಕರೆದರಗಳು ► ಕಂಪೆನಿಗಳ ದರ ಸಮರದಲ್ಲಿ ಗ್ರಾಹಕರಿಗೆ ಸುಗ್ಗಿ

(ನ್ಯೂಸ್ ಕಡಬ) newskadaba.com ನವದೆಹಲಿ ಆ.13. ಟೆಲಿಕಾಂ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಕಾಲಿಟ್ಟ ನಂತರ ಎಲ್ಲಾ ಕಂಪೆನಿಗಳು ದರ ಸಮರದಲ್ಲಿ ಪೈಪೋಟಿಯನ್ನು ನಡೆಸುತ್ತಿರುವುದರ ಮಧ್ಯೆಯೇ ಶೀಘ್ರದಲ್ಲಿ ಟೆಲಿಕಾಂ ಕಂಪೆನಿಗಳು ಕರೆ ದರವನ್ನು ಇನ್ನಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಇಂಟರ್‍ಕನೆಕ್ಟ್ ಯೂಸೇಜ್ ಚಾರ್ಜ್ (ಐಯುಸಿ) ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಪ್ರಸ್ತುತ ಪ್ರತಿ ನಿಮಿಷಕ್ಕೆ 14 ಪೈಸೆ ಐಯುಸಿ ಇದ್ದು ಇದನ್ನು 10 ಪೈಸೆಗೆ ಇಳಿಸಲು ಟ್ರಾಯ್ […]

ಇನ್ನೂ ಕಡಿಮೆಯಾಗಲಿರುವ ಮೊಬೈಲ್ ಕರೆದರಗಳು ► ಕಂಪೆನಿಗಳ ದರ ಸಮರದಲ್ಲಿ ಗ್ರಾಹಕರಿಗೆ ಸುಗ್ಗಿ Read More »

ರಾಷ್ಟ್ರೀಯ ನ್ಯೂಸ್

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ ► ಅಪಪ್ರಚಾರ ನಡೆಸಿದರೆ ಕಠಿಣ ಕಾನೂನು ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.13. ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಸರಕಾರ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ. ಈ ಬಗ್ಗೆ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷಕ ಆರ್.ಕೆ‌. ದತ್ತ ಸ್ಪಷ್ಟಪಡಿಸಿದರು. ಶನಿವಾರದಂದು ರಾಜ್ಯ ಪೊಲೀಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಣೇಶ ಹಬ್ಬ ಆಚರಣೆಗೆ ಸರಕಾರವು ಡೆಪಾಸಿಟ್ ಇಟ್ಟು ಗಣೇಶ ಕೂರಿಸುವಂತೆ ಸೂಚಿಸಿದೆ ಎಂಬ ಹೇಳಿಕೆ ನೀಡಿದೆ ಎಂದು ಕೆಲವರು ಅಪಪ್ರಚಾರ

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ ► ಅಪಪ್ರಚಾರ ನಡೆಸಿದರೆ ಕಠಿಣ ಕಾನೂನು ಕ್ರಮ Read More »

ಕರ್ನಾಟಕ

ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕೋಲಾರ, ಆ.12. ಲಾರಿಯೊಂದು‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಹೃದಯ ವಿದ್ರಾವಕ‌ ಘಟನೆ ಶನಿವಾರದಂದು ನಡೆದಿದೆ. ಮಾಲೂರಿನಿಂದ ಕೋಲಾರದ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ಒಟ್ಟು 9 ಮಂದಿಯಿದ್ದರು. ಘಟನೆಯಲ್ಲಿ ರಮೇಶ್(35) ಹಾಗೂ ನಾಗರಾಜ್ (34) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಲಾರಿಯ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಇನ್ನುಳಿದ 6 ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಅರ್ಕುಳ: ಬೈಕ್, ರಿಕ್ಷಾ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ಇಲ್ಲಿಗೆ ಸಮೀಪದ ಅರ್ಕುಳ ಎಂಬಲ್ಲಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾ ಹಾಗೂ ಬೈಕ್ ಬೆಂಕಿಗಾಹುತಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅರ್ಕುಳ ಕೋಟೆಪುರ ನಿವಾಸಿ ಎ.ಕೆ.ರಹ್ಮತುಲ್ಲಾ ಎಂಬವರಿಗೆ ಸೇರಿದ ಅಟೋರಿಕ್ಷಾ ಮತ್ತು ಅವರ ಸಹೋದರರಾದ ಎ.ಕೆ.ಅನ್ಸಾರ್ ಅಲಿ, ಎಕೆ ಹಾಶಿರ್ ಅಲಿ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಅವರು ಎಂದಿನಂತೆ ತಮ್ಮ ಮನೆಯ ಅಂಗಳದಲ್ಲಿ ಪಾರ್ಕ್ ಮಾಡಿದ್ದರೆನ್ನಲಾಗಿದೆ. ತಡರಾತ್ರಿ ನೆರೆಕರೆಯವರು ವಾಹನಕ್ಕೆ ಬೆಂಕಿ ಹೊತ್ತಿದ್ದನ್ನು ಕಂಡು

ಅರ್ಕುಳ: ಬೈಕ್, ರಿಕ್ಷಾ ಬೆಂಕಿಗಾಹುತಿ Read More »

ಕರಾವಳಿ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.12: ತಾಯಿಯ ಅನಾರೋಗ್ಯದಿಂದ ಬೇಸತ್ತು, ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಪತ್ರ ಬರೆದಿಟ್ಟು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಇಂದ್ರಾಳಿ ಬಳಿ ಶುಕ್ರವಾರ ರಾತ್ರಿ ವೇಳೆಯಲ್ಲಿ ನಡೆದಿದ್ದು, ಶನಿವಾರ ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿಟ್ಟೂರಿನ ಪ್ರತೀಕ್ ಕುಮಾರ್ (22) ಎಂದು ಗುರುತಿಸಲಾಗಿದೆ. ಎಂದಿನಂತೆ ನಿನ್ನೆ ಸಂಜೆ 6:30ಕ್ಕೆ ಕೆಲಸ ಮುಗಿಸಿ ಮನೆಗೆ ಬಂದ ಪ್ರತೀಕ್ ಆ ಬಳಿಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಾಡಿದ ಬಳಿಕ ಆತನ ಮೃತದೇಹ ಇಂದ್ರಾಳಿ ರೈಲ್ವೆ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ Read More »

ಕರ್ನಾಟಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯದ ಕ್ರಿಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.12. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯದ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಈದ್-ಮಿಲನ್ (ಕ್ರಿಡೋತ್ಸವ) ಕಾರ್ಯಕ್ರಮವು ಕಳಾರದ ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ಕೆಸರಿನಲ್ಲಿ ಓಟ ಸೇರಿದಂತೆ ಸುಮಾರು ಎಂಟು ರೀತಿಯ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪಿಎಫ್ಐ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯಾಧ್ಯಕ್ಷರಾದ ಬಶೀರ್ ಕೊರುಂದೂರು ಫಾತಿಹಾದೊಂದಿಗೆ ಉದ್ಘಾಟಿಸಿದರು. ಪಿಎಫ್ಐ ನೆಲ್ಯಾಡಿ ವಿಭಾಗದ ಅಧ್ಯಕ್ಷರು ಸಾದಿಕ್ ಅತ್ತಾಜೆ ವಂದಿಸಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯದ ಕ್ರಿಡೋತ್ಸವ Read More »

ಕರಾವಳಿ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ‍ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತನನ್ನು ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ Read More »

ಕರ್ನಾಟಕ

ಕಲ್ಲಡ್ಕ ಭಟ್ ಅಧೀನದ ಶಾಲಾ ಅನುದಾನ ರದ್ದು ► ರಾಜ್ಯ ಸರಕಾರದ ವಿರುದ್ಧ ತಟ್ಟೆ ಹಿಡಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.11. ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಮತ್ತು ಪುಣಚ ಶ್ರೀದೇವಿ ಶಾಲೆಗಳಿಗೆ ಕೊಲ್ಲೂರು ಮೂಕಾಂಬಿಕಾ ದೇವಾಲಯದಿಂದ ದತ್ತು ಯೋಜನೆಯಡಿ ನೀಡಲಾಗುತ್ತಿದ್ದ ಅನುದಾನವನ್ನು ರದ್ದುಗೊಳಿಸಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಶುಕ್ರವಾರದಂದು ವಿದ್ಯಾರ್ಥಿಗಳು ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಮುಂಭಾಗದಲ್ಲಿ ಬಟ್ಟಲು ಹಿಡಿದು ಪ್ರತಿಭಟನೆಗೆ ಕುಳಿತ ವಿದ್ಯಾರ್ಥಿಗಳಿಗೆ ಪೋಷಕರು, ಸಂಘಟನೆಯ ಮುಖಂಡರು ಸಾಥ್ ನೀಡಿದರು. ವಿವಿಧ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾತನಾಡಿ ಸಿದ್ದರಾಮಯ್ಯ ಸರಕಾರದ

ಕಲ್ಲಡ್ಕ ಭಟ್ ಅಧೀನದ ಶಾಲಾ ಅನುದಾನ ರದ್ದು ► ರಾಜ್ಯ ಸರಕಾರದ ವಿರುದ್ಧ ತಟ್ಟೆ ಹಿಡಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕರಾವಳಿ

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11. ಸ್ವಾಮೀಜಿಗಳು, ಯೋಗಿಗಳು ಮುಖ್ಯಮಂತ್ರಿಯಾಗುತ್ತಾರೆ. ಆದರೆ ಮುಸ್ಲಿಮರಲ್ಲಿರುವ ಉಸ್ತಾದರುಗಳು, ಧಾರ್ಮಿಕ ಮುಂದಾಳುಗಳು ಕನಿಷ್ಠ ಗ್ರಾಮ ಪಂಚಾಯತ್ ಹಂತಕ್ಕೆ ಕೂಡಾ ತಲುಪುತ್ತಿಲ್ಲ. ಇದು ನಿಜಕ್ಕೂ ವಿಷಾದನೀಯವಾಗಿದ್ದು, ಇದಕ್ಕಾಗಿ ನಿಮಗೆ ಭಾರತೀಯ ಜನತಾ ಪಾರ್ಟಿಯು ವೇದಿಕೆ ಕಲ್ಪಿಸಿ ಕೊಡುತ್ತದೆ ಎಂದು ಫಝಲ್ ಅಸೈಗೋಳಿ ಹೇಳಿದರು. ಅವರು ಗುರುವಾರದಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾ ವತಿಯಿಂದ ಬೋಳಿಯಾರಿನಲ್ಲಿ ನಡೆದ ಮುಸ್ಲಿಮ್ ಧಾರ್ಮಿಕ ಗುರುಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಮುಸ್ಲಿಮರಿಗೆ ಬಿಜೆಪಿ ಎಂದರೆ ಆಗುವುದಿಲ್ಲ. ಕಾಂಗ್ರೆಸ್ ಅಂಥಹಾ ಒಂದು ಮನೋಭಾವವನ್ನು

ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ Read More »

ಕರಾವಳಿ
Scroll to Top