ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ.11. ನಗರದ ಭೂತನಾಳ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಯಾದಗಿರ ಜಿಲ್ಲೆಯ ಸುರಪುರ ತಾಲೂಕಿನ ಚಂದಾಪುರ ಎಲ್ ಟಿ ನಿವಾಸಿ ಶಂಕರ್ ತಿಪ್ಪಣ್ಣ ರಾಠೋಡ್(19) ಎಂದು ಗುರುತಿಸಲಾಗಿದೆ. ಈತ ಸುರಪುರದಲ್ಲಿ ಡಿಎಡ್ ಓದುತ್ತಿದ್ದು, ಎರಡು ದಿನಗಳ ಹಿಂದೆ ಆತನ ಸ್ನೇಹಿತನನ್ನು ಭೇಟಿಯಾಗಲು ಬಂದು ನಿನ್ನೆ ರಾತ್ರಿ ಹಾಸ್ಟೇಲ್ ನಲ್ಲೇ ಸ್ನೇಹಿತರೊಂದಿಗೆ ಉಳಿದುಕೊಂಡಿದ್ದ ಎನ್ನಲಾಗಿದೆ. ಶಂಕರ್ […]

ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ

(ನ್ಯೂಸ್ ಕಡಬ) newskadaba.com ಮುಂಬೈ, ಆ.11. ಸಾವಿರಾರು ಕೋಟಿ ರುಪಾಯಿಗಳ ಒಡೆಯ, ದೇಶದ ಸಿರಿವಂತರಲ್ಲಿ ಒಬ್ಬರಾಗಿದ್ದ ರೇಮಂಡ್ ವಸ್ತ್ರ ಕಂಪನಿಯ ಮಾಲೀಕ ದೇಶದ ಅತಿ ಶ್ರೀಮಂತ ವ್ಯಕ್ತಿಗಳ ಪೈಕಿ ಒಬ್ಬರಾದ ವಿಜಯಪತ್ ಸಿಂಗಾನಿಯಾ ಅವರು ಇದೀಗ ‘ದಿವಾಳಿ’ಯಾಗಿ ಬೀದಿಗೆ ಬಂದಿದ್ದು, ಹಣಕಾಸು ನೆರವಿಗಾಗಿ ಮಗನ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ್ದಾರೆ. ರೇಮಂಡ್ಸ್ ಲಿಮಿಟೆಡ್ ಎಂಬ ವಸ್ತ್ರೋದ್ಯಮ ಸ್ಥಾಪಿಸಿ ಪುರುಷರ ಮನೆ ಮಾತಾಗಿದ್ದ ರೇಮಂಡ್ ಕಂಪೆನಿಯ ಮಾಲೀಕ ಇಂದು ಮಗನ ನಿರ್ಲಕ್ಷದಿಂದ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತಾಗಿದೆ ಎಂದು ಮುಂಬೈ ಮಿರರ್

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ Read More »

ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಾರವಾರ, ಆ.10. ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆಂದು ಬಿಜಾಪುರ ಜಿಲ್ಲೆಯ ಜಮನಾಳ ನಿವಾಸಿಗಳು 9 ಮಂದಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ

ಕತರ್ ಗೆ ಹೋಗಲು ಇನ್ಮುಂದೆ ವೀಸಾ ಬೇಡ ► ಉಚಿತ ಪ್ರವೇಶ ನೀಡಿದ ಕತರ್ ಸರಕಾರ

(ನ್ಯೂಸ್ ಕಡಬ) newskadaba.com ದೋಹಾ ಕತರ್, ಆ.09. ಪ್ರವಾಸೋದ್ಯಮ ಮತ್ತು ವಾಯುಯಾನಕ್ಕೆ ಒತ್ತು ನೀಡಿ ಪ್ರವಾಸಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಕತರ್ ದೇಶವು ಭಾರತ ಸೇರಿದಂತೆ 80 ದೇಶಗಳಿಗೆ ವೀಸಾ ಇಲ್ಲದೆ ಪ್ರವೇಶಿಸಲು ಅನುಮತಿ ಘೋಷಿಸಿದೆ. ಯೂರೋಪ್ ನ ದೇಶಗಳು, ಭಾರತ, ಲೆಬನಾನ್, ನ್ಯೂಝಿಲ್ಯಾಂಡ್, ದಕ್ಷಿಣ ಆಫ್ರಿಕಾ, ಅಮೆರಿಕ, ಬ್ರಿಟನ್, ಕೆನಡ ಸೇರಿದಂತೆ 80 ದೇಶಗಳ ಪ್ರಜೆಗಳು ಇನ್ಮುಂದೆ ಕತರ್ ದೇಶಕ್ಕೆ ತೆರಳಲು ಪಾಸ್‌ಪೋರ್ಟ್ ಕೈಯಲ್ಲಿ ಇದ್ದರೆ ಸಾಕಾಗುತ್ತದೆ. ನೇರವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣಿಸಬಹುದಾಗಿದೆ‌. ಎರಡು ತಿಂಗಳ ಹಿಂದೆ

ಕತರ್ ಗೆ ಹೋಗಲು ಇನ್ಮುಂದೆ ವೀಸಾ ಬೇಡ ► ಉಚಿತ ಪ್ರವೇಶ ನೀಡಿದ ಕತರ್ ಸರಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ

(ನ್ಯೂಸ್ ಕಡಬ) newskadaba.com ಹಾಸನ, ಆ.09. ಕೇವಲ ಮೂರು ತಿಂಗಳ ಹಿಂದೆ ಆದ ಪರಿಚಯ ಪ್ರೇಮಕ್ಕೆ ತಿರುಗಿ ಹುಡುಗಿ ಮನೆಯವರ ತೀವ್ರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾಗಿ ಕೇವಲ 12 ದಿನದಲ್ಲಿ ಗಂಡನನ್ನು ತೊರೆದು ಹೆಂಡತಿ ಮನೆಯವರೊಂದಿಗೆ ತೆರಳಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ರಸ್ತೆಯ ನಿವಾಸಿ ಶೇಖರಪ್ಪ ಎಂಬುವರ ಪುತ್ರ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಗುರು ಹಾಗೂ ಪಟ್ಟಣದ ಮಾರುತಿ ನಗರದ ಚಂದ್ರೇಗೌಡ ಎಂಬುವರ ಪುತ್ರಿ ಅಂತಿಮ ಬಿ.ಎ. ಓದುತ್ತಿದ್ದ ಶೋಭಾ ಪರಸ್ಪರ ಪ್ರೀತಿಸಿ ಹುಡುಗಿ ಮನೆಯವರ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ Read More »

ಕರ್ನಾಟಕ

ಕಳಾರ: ಬೈಕ್ – ಆ್ಯಕ್ಟಿವಾ ಢಿಕ್ಕಿ ► ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.09. ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಬೈಕ್ ಹಾಗೂ ಹೋಂಡಾ ಆ್ಯಕ್ಟಿವಾ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಅಪರಾಹ್ನ ನಡೆದಿದೆ. ಘಟನೆಯಲ್ಲಿ ಹೋಂಡಾ ಆ್ಯಕ್ಟಿವಾ ಸವಾರ ಕಡಬ ಕುಟ್ರುಪ್ಪಾಡಿ ನಿವಾಸಿ ಪದ್ಮಯ್ಯ ಗೌಡ(48) ಹಾಗೂ ಬೈಕ್ ಸವಾರ ಕಾಣಿಯೂರು ಸಮೀಪದ ಬರೆಪ್ಪಾಡಿ ಕಾೖಮಣ ನಿವಾಸಿ ಪದ್ಮಯ್ಯ(55) ರವರು ಗಾಯಗೊಂಡಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳಾರ: ಬೈಕ್ – ಆ್ಯಕ್ಟಿವಾ ಢಿಕ್ಕಿ ► ಸವಾರರಿಗೆ ಗಾಯ Read More »

ಕರಾವಳಿ

ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ 30ಕ್ಕೂ ಅಧಿಕ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ‘ಜಸ್ಟೀಸ್ ಫಾರ್ ಕಾವ್ಯಾ’ ಹೋರಾಟ ಸಮಿತಿ ದ.ಕ. ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರದಂದು ಬೃಹತ್ ಪ್ರತಿಭಟನೆ ನಡೆಯಿತು. ಜ್ಯೋತಿ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು, ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾವ್ಯಾ ಸಾವಿನ ಪ್ರಕರಣದ

ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ Read More »

ಕರಾವಳಿ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ

(ನ್ಯೂಸ್ ಕಡಬ) newskadaba.com ಗುಜರಾತ್, ಆ.09. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾಗೆ ತೀವ್ರ ಮುಖಭಂಗವಾಗಿದೆ. ತಮ್ಮ ತವರು ರಾಜ್ಯ ಗುಜರಾತ್‍ನಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಬೇಕೆಂಬ ಬಿಜೆಪಿಯ ತುಡಿತಕ್ಕೆ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೂಡಿದಂತಹ ಪ್ರತಿತಂತ್ರ ಫಲ ನೀಡಿದೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ Read More »

ರಾಷ್ಟ್ರೀಯ ನ್ಯೂಸ್

ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಆ.09. ಇನ್ನೋವಾ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಕೋಲಾರದಲ್ಲಿ ನಡೆದಿದೆ. ಕೋಲಾರ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ಎದುರಿನಿಂದ ಬರುತ್ತಿದ್ದ ಇನ್ನೋವಾಗೆ ಕೋಲಾರ ತಾಲೂಕಿನ ಪಟ್ನಾ ಗ್ರಾಮದ ಬಳಿ ಮುಖಾಮುಖಿ ಢಿಕ್ಕಿಯಾದುದರಿಂದ ಬೆಂಗಳೂರು ರಾಮಮೂರ್ತಿ ನಗರ ನಿವಾಸಿ ರೂಪಾ(28) ಎಂಬವರು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಘಟನೆಯಲ್ಲಿ ಕೋಲಾರ ನಗರಸಭೆ 27 ನೇ ವಾರ್ಡ್ ಸದಸ್ಯೆ ಸಾಕಮ್ಮ ಹಾಗೂ ಪ್ರಭಾಕರ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೋಲಾರದ ಖಾಸಗಿ

ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ವಿಟ್ಲ: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.08. ಗ್ರೈಂಡರ್ ನಲ್ಲಿ ತೆಂಗಿನಕಾಯಿ ರುಬ್ಬುತ್ತಿದ್ದ ವೇಳೆ ಶಾಲು ಸಿಕ್ಕಿ ಹಾಕಿಕೊಂಡು ಮಹಿಳೆಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ವಿಟ್ಲದ ಕಂಬಳಬೆಟ್ಟು ಕೊಳಂಬೆ ನಿವಾಸಿ ಅಬ್ಬಾಸ್ ಎಂಬವರ ಪತ್ನಿ ಹಲೀಮಮ್ಮ(45) ಮೃತಪಟ್ಟ ದುರ್ದೈವಿ. ಮಂಗಳವಾರದಂದು ಗ್ರೈಂಡರ್ ನಲ್ಲಿ ತೆಂಗಿನಕಾಯಿ ರುಬ್ಬುತ್ತಿದ್ದ ವೇಳೆ ಶಾಲು ಸಿಲುಕಿದ್ದರಿಂದ ತೀವ್ರ ಗಾಯಗೊಂಡ ಹಲೀಮಮ್ಮರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಟ್ಲ: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು Read More »

ಕರಾವಳಿ
Scroll to Top