ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.08. ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹೋದರ ಬಾಗಪ್ಪ ಎಂಬವರ ಮೇಲೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಬಾಗಪ್ಪನಿಗೆ ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಅದರಂತೆ ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬಂಟಿಯಾಗಿಯೇ ಬರುತ್ತಿದ್ದನೆನ್ನಲಾಗಿದೆ‌. ಇಂದು ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ […]

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ Read More »

ಕರ್ನಾಟಕ

ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07. ನೂತನ ಪಶ್ಚಿಮ ವಲಯ ಐಜಿಪಿಯಾಗಿ 1998ರ ಬ್ಯಾಚಿನ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ರವರನ್ನು ನೇಮಕಗೊಳಿಸಿ ಆದೇಶ ನೀಡಿದೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಹರಿಶೇಖರನ್ ರವರನ್ನು ಕೇಂದ್ರ ವಿಭಾಗ ಬೆಂಗಳೂರಿಗೆ ವರ್ಗಾಯಿಸಿರುವ ವರ್ಗಾಯಿಸಿರುವ ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಿದೆ.

ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ Read More »

ಕರ್ನಾಟಕ

 ಕಂಡಕಂಡಲ್ಲಿ ವಾಹನ ನಿಲ್ಲಿಸಿದರೆ ಲೈಸನ್ಸ್ ರದ್ದು ► ವಾಹನ ಚಾಲಕರಿಗೆ ಆರ್‍ಟಿಓ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.07. ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್‍ ತಂಗುದಾಣಗಳಲ್ಲಿಯೇ ಬಸ್ಸುಗಳನ್ನು ನಿಲ್ಲಿಸಬೇಕಲ್ಲದೆ ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಕಂಡುಬಂದಲ್ಲಿ ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರ್‍ಟಿಓ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ ಹಾಗೂ ಅಪಘಾತಗಳು ನಡೆಯುವ ಸಂಭವವಿರುತ್ತದೆ. ವಾಹನಗಳನ್ನು ರಸ್ತೆ ಮಧ್ಯದಲ್ಲಿ ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ಸು ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲಾಗುವುದು. ಬಸ್ಸಿನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು

 ಕಂಡಕಂಡಲ್ಲಿ ವಾಹನ ನಿಲ್ಲಿಸಿದರೆ ಲೈಸನ್ಸ್ ರದ್ದು ► ವಾಹನ ಚಾಲಕರಿಗೆ ಆರ್‍ಟಿಓ ಎಚ್ಚರಿಕೆ Read More »

ಕರಾವಳಿ

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಆ.07. ತಾಲೂಕು ವ್ಯಾಪ್ತಿಯ ಇಚಿಲಂಪಾಡಿ ಪಾತಡ್ಕ ಎಂಬಲ್ಲಿ ಮಹಿಳೆಯೋರ್ವರು ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಚಿಲಂಪಾಡಿ ಗ್ರಾಮದ ಪಾತಡ್ಕ ನಿವಾಸಿ ಮಹಾಬಲ ಪೂಜಾರಿ ಎಂಬವರ ಪತ್ನಿ ಹೇಮಲತಾ ಎಂದು ಗುರುತಿಸಲಾಗಿದೆ. ಇವರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದರೆಂದು ತಿಳಿದುಬಂದಿದೆ.

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ವಾಮಾಚಾರ ಪ್ರಕರಣಕ್ಕೆ ತಿರುವು ► ಕಿರುಕುಳ ಆರೋಪದಲ್ಲಿ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ.07. ಮನೆಯ ಮುಂದೆ ಸ್ಥಳೀಯರೊಬ್ಬರು ವಾಮಾಚಾರ ಮಾಡಿರುವುದಲ್ಲದೆ, ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ಅವರು ಪತ್ನಿ ಅಮೀನ ಅವರು ಭಾನುವಾರ ಕಡಬ ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಕಡಬ ಅಡ್ಡಗದ್ದೆ ನಿವಾಸಿ ಸ್ಯಾಮುವೆಲ್ ಜೋಸ್ ಎಂಬವರ ಪತ್ನಿ ಸಿನಿ ಜೋಸ್ ಎಂಬವರು ಸೋಮವಾರ ಕಡಬ ಠಾಣೆಗೆ ದೂರು ನೀಡಿ ತನ್ನ ಗಂಡನಿಗೆ ನಿರಂತರ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಖಾದರ್ ಸಾಹೇಬ್ ದಂಪತಿಯ ವಿರುದ್ಧ

ವಾಮಾಚಾರ ಪ್ರಕರಣಕ್ಕೆ ತಿರುವು ► ಕಿರುಕುಳ ಆರೋಪದಲ್ಲಿ ಠಾಣೆಗೆ ದೂರು Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ನಡೆದು ತಿಂಗಳು ಕಳೆದರೂ ಪ್ರಕರಣವನ್ನು ಭೇದಿಸುವಲ್ಲಿ ವಿಫಲವಾದ ರಾಜ್ಯ ಸರಕಾರದ ವಿರುದ್ದ ಅಗೋಸ್ತು. 8 ಮಂಗಳವಾರದಂದು ಹಿಂದೂ ಹಿತರಕ್ಷಣಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಏಕಕಾಲದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಅದರಂತೆ ಸಲುವಾಗಿ ಕಡಬದ ಮುಖ್ಯ ಪೇಟೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4 ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.  

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ Read More »

ಕರಾವಳಿ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬಿಜಾಪುರ, ಆ.07. ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಚಕ್ರವೊಂದು ಹಠಾತ್ತಾಗಿ ಕಳಚಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಿಂದಗಿ ತಾಲ್ಲೂಕಿನ ರಾಂಪೂರ ಗ್ರಾಮದ ಸಮೀಪದಲ್ಲಿ 40 ಕ್ಕೂ ಹೆಚ್ಚಿನ ಪ್ರಯಾಣಿಕರು ಸಾಗುತ್ತಿದ್ದ ಬಸ್ಸಿನ ಮುಂಭಾಗದ ಬಲ ಬದಿಯ ಚಕ್ರ ಕಳಚಿ ಬಂದಿದ್ದರಿಂದಾಗಿ ಒಂದು ಕ್ಷಣ ಪ್ರಯಾಣಿಕರು ಉಸಿರು ಬಿಗಿ ಹಿಡಿಯುವಂತಾಗಿತ್ತು. ಅಪಾಯದ ಮುನ್ಸೂಚನೆ ಅರಿತ ಚಾಲಕ ಸಮಯ ಪ್ರಜ್ಞೆಯಿಂದ ಬಸ್ಸನ್ನು ಹತೋಟಿಗೆ ತಂದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ನಿರುಪಯುಕ್ತ ಬಸ್ಸುಗಳನ್ನು ಓಡಿಸುತ್ತಿರುವ ಸಿಂದಗಿ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರ್ನಾಟಕ

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆಯು ಕುಟುಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ವಿ. ತೀರ್ಥಾರಾಮರವರು ಮಾತನಾಡಿ, ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ವಿಸ್ತಾರಕರಾಗಿ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಪ್ರತೀ ಮನೆಗೂ ತಿಳಿಸುವ ಬಗ್ಗೆ ಮಾರ್ಗದರ್ಶನ

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ Read More »

ಕರಾವಳಿ

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.07. ಮಚ್ಚಿನಿಂದ ಬಡಿದು ಮಹಿಳೆಯೋರ್ವರನ್ನು ಕೊಲೆಗೈದ ಘಟನೆ ವಿಜಯಪುರ ನಗರದ ಇಟಂಗಿಹಾಳ ದೊಡ್ಡಿ ಎಂಬಲ್ಲಿ ಸೋಮವಾರ ಅಪರಾಹ್ನ ನಡೆದಿದೆ. ಸುರವಂತ ಬಾಯಿ ಮಾನ್ವಾರ್ (30) ಕೊಲೆಯಾದ ಮಹಿಳೆ. ರಾವಸಾಬ್ ಕಾಳೆ (35) ಎಂಬಾತ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ರಾವಸಾಬ್ ಹಾಗೂ ಸುರವಂತಬಾಯಿ ನಡುವೆ ಕಳೆದ 5 ವರ್ಷಗಳಿಂದ ಅಕ್ರಮ ಸಂಬಂಧವಿತ್ತೆನ್ನಲಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ನಡುವೆ ವಾಗ್ವಾದ ನಡೆದಿದ್ದು, ಸೋಮವಾರದಂದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಬಗ್ಗೆ ಬಿಜಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ Read More »

ಕರ್ನಾಟಕ

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07.  ಮೂಕ ಜೀವಿಯಾದ ಗೂಬೆಯನ್ನು ಬಳಸಿಕೊಮಡು ಸಿನಿಮೀಯ ಶೈಲಿಯಲ್ಲಿ ಮನೆ ದರೋಡೆ ನಡೆಸುತ್ತಿರುವ ತಂಡವನ್ನು ಬಂಧಿಸಿರುವ ರಾಜ್ಯ ಸಿಐಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಟನ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಶ್ರೀಮಂತರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ, ದೂರದ ಕಾಡುಗಳಿಂದ ಗೂಬೆಗಳನ್ನು ಹಿಡಿದು ತಂದು ಮನೆಯವರಿಗೆ ಗೊತ್ತಾಗದ ಹಾಗೇ ಒಳಗೆ ಬಿಡುತ್ತಿದ್ದರು. ನಂತರ ಇದೇ ತಂಡದ ಸದಸ್ಯರು ಹೋಗಿ ನಿಮ್ಮ ಮನೆಗೆ ಗೂಬೆ ನುಗ್ಗಿದೆ. ಅದು ಅನಿಷ್ಟದ ಸಂಕೇತವಾಗಿದ್ದು,

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು Read More »

ಕರ್ನಾಟಕ
Scroll to Top