ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.31. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೃತದೇಹ ಸೋಮವಾರದಂದು ಸೇತುವೆಯ ಸುಮಾರು 300 ಮೀಟರ್ ಕೆಳಗಡೆ ಕಂಡುಬಂದಿದೆ. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬೆಳಿಗ್ಗೆ ಮನೆಯಿಂದ ಹೊರಟ್ಟಿದ್ದ ಅವರು ಕಡಬಕ್ಕೆ ಬಂದು ಅಲ್ಲಿಂದ […]

ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ Read More »

ಕರಾವಳಿ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ

(ನ್ಯೂಸ್ ಕಡಬ) newskadaba.com ಕಡಬ, ಜು.31. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮ ಪಂಚಾಯತ್ ಅಧೀನದಲ್ಲಿರುವ ನೆಟ್ಟಣ ಪೇಟೆಯಲ್ಲಿನ ಸಾರ್ವಜನಿಕ ಬಸ್ಸು ನಿಲ್ದಾಣದಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೋಡೋದಕ್ಕೆ ಅಸಹ್ಯ ಅನಿಸುತ್ತಿದೆ. ದಕ್ಷಿಣ ಭಾರತದ ಪ್ರಮುಖ ದೇವಸ್ಥಾನವಾದ ಕುಕ್ಕೇ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣವು ಇದೇ ನೆಟ್ಟಣದಲ್ಲಿದೆ. ರೈಲಿನಲ್ಲಿ ಆಗಮನಿಸುವ ಪ್ರಯಾಣಿಕರು ಬಸ್ಸಿಗಾಗಿ ಕಾಯಬೇಕೆಂದರೆ ಇದೇ ಬಸ್ಸು ನಿಲ್ದಾಣವನ್ನೇ ಆಶ್ರಯಿಸಬೇಕಾಗಿದೆ‌. ಇಲ್ಲಿ ಕಸಕಡ್ಡಿಗಳು ಸೇರಿದಂತೆ ಮದ್ಯದ ಬಾಟಲಿಗಳನ್ನು ಹಾಕಿರುವುದರಿಂದ ಪ್ರಜ್ಞಾವಂತರನ್ನು ಮುಜುಗರಕ್ಕೀಡುಮಾಡುತ್ತಿದೆ‌. ತಕ್ಷಣವೇ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು.31. ನಮ್ಮೊಳಗಿನ ಅಜ್ಞಾನವನ್ನು ದೂರ ಮಾಡಿ ಜ್ಞಾನವನ್ನು ತುಂಬಿಸಿಕೊಳ್ಳಲು ಉತ್ತಮ ಶಿಕ್ಷಣ ಅಗತ್ಯ ಎಂದು ಪುತ್ತೂರು ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧುನಿಕ ಜೀವನಕ್ಕೆ ಒಗ್ಗಿಕೊಂಡು ನಮ್ಮ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಜ್ಞಾನದ ಅರಿವು ಬೇಕು. ವಿದ್ಯಾರ್ಥಿ ದಿಸೆಯಲ್ಲಿ ಮಾಡಿದ ಸಾಧನೆ ಉತ್ತಮ ಭವಿಷ್ಯಕ್ಕೆ ನಾಂದಿಯಾಗುತ್ತದೆ. ಸಂಘಟಿತ ನಾಯಕತ್ವ ಬೆಳವಣಿಗೆಗೆ ವಿದ್ಯಾರ್ಥಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ Read More »

ಕರಾವಳಿ

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ Read More »

ಕರಾವಳಿ

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಹೆತ್ತವರು ಮತ್ತು ಶಿಕ್ಷಕರ ನಿರಂತರ ಪ್ರೊತ್ಸಾಹ ಅಗತ್ಯ. ವಿದ್ಯಾರ್ಥಿಗಳು ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ಶಿಕ್ಷಣ ಸಂಸ್ಥೆಯ ತರಬೇತಿಯೊಂದಿಗೆ ಹೆತ್ತವರ ಸೂಕ್ತ ಮಾರ್ಗದರ್ಶನವೂ ಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಜೋಹಾರಾ ನಿಸಾರ್ ಅಹ್ಮದ್ ಹೇಳಿದರು. ಅವರು ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ಕೊಡುವುದರೊಂದಿಗೆ ಸಚ್ಚಾರಿತ್ರ್ಯವಂತರಾಗಿ ಉತ್ತಮ ನಡೆ-ನುಡಿಯನ್ನು ಅಳವಡಿಸಿಕೊಳ್ಳಬೇಕು.

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ Read More »

ಕರಾವಳಿ

ಕಡಬ: ಬೈಕ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು ► ರಸ್ತೆ ದಾಟುತ್ತಿದ್ದಾಗ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ಇಲ್ಲಿನ ಮುಖ್ಯ ಪೇಟೆಯ ಪಂಜ ರಸ್ತೆಯಲ್ಲಿ ಪಾದಚಾರಿ ವೃದ್ಧರೋರ್ವರಿಗೆ ಬೈಕೊಂದು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಕಡಬ ಸಮುದಾಯ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ದೇವಪ್ಪ ಗೌಡ (80) ಎಂಬವರಿಗೆ ಪಂಜಕ್ಕೆ ತೆರಳುತ್ತಿದ್ದ ಬೈಕ್ ಢಿಕ್ಕಿಯಾದುದರಿಂದ ಗಾಯಗಳಾಗಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಡಬ: ಬೈಕ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು ► ರಸ್ತೆ ದಾಟುತ್ತಿದ್ದಾಗ ನಡೆದ ಘಟನೆ Read More »

ಕರಾವಳಿ

ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಠಾಣಾ ವ್ಯಾಪ್ತಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್ ಶರೀಫ್ ಹಾಗೂ ಸಹ ಸವಾರ ಕಕ್ಕೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.30. ಅಕ್ರಮವಾಗಿ ಜಾನುವಾರು ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ  ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ತಣ್ಣೀರುಪಂಥ ನಿವಾಸಿಗಳಾದ ಬಶೀರ್ (32) ಹಾಗೂ ಜೈನುದ್ದೀನ್ (28) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಇಳಂತಿಲ ಕ್ರಾಸ್ ಬಳಿ ಮಾರುತಿ ಓಮ್ನಿಯೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ 300 ಕೆ.ಜಿ. ಜಾನುವಾರು ಮಾಂಸ ಪತ್ತೆಯಾಗಿದೆ. ಓಮ್ನಿ ಕಾರು ಹಾಗೂ ಜಾನುವಾರು ಮಾಂಸವನ್ನು ವಶಕ್ಕೆ ತೆಗೆದುಕೊಂಡ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ Read More »

ಕರಾವಳಿ

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ಇಲ್ಲಿನ ಬಲ್ಯ ಗ್ರಾಮದ ಕೆಮ್ಮತ ಕೂಟೇಲು ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆವೊಂದು ತೇಲಾಡುವ ಸ್ಥಿತಿಯಲ್ಲಿ ಭಾನುವಾರ ಅಪರಾಹ್ನ ಪತ್ತೆಯಾಗಿದೆ. ಮಹಿಳೆಯು ಕೆಂಪು ಬಣ್ಣದ ಚೂಡಿದಾರ್ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಳೆದೆರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಸ್ಥಳೀಯ ವ್ಯಕ್ತಿಯೋರ್ವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ

ಇನ್ನೂ ಪತ್ತೆಯಾಗದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ► ಶೋಧ ಕಾರ್ಯದಲ್ಲಿ ತೊಡಗಿದ ಅಗ್ನಿಶಾಮಕ ದಳ

(ನ್ಯೂಸ್ ಕಡಬ) newskadaba.com ಕಡಬ, ಜು.30. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ವ್ಯಕ್ತಿಯೋಬ್ಬರು ಹಾರಿದ್ದು, ಅವರು ನದಿ ನೀರಿನಲ್ಲಿ ನಾಪತ್ತೆಯಾದ ಘಟನೆ ಜು.29ರಂದು ಮಧ್ಯಾಹ್ನ ವೇಳೆ ನಡೆದಿತ್ತು. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿದ ವ್ಯಕ್ತಿ. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಪಾಲರವರು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್‌ ಒಂದರಲ್ಲಿ ಉದ್ಯೋಗದಲ್ಲಿದ್ದು ಒಂದು ವಾರದ ಹಿಂದೆಯಷ್ಟೆ ಊರಿಗೆ ಬಂದಿದ್ದರು.

ಇನ್ನೂ ಪತ್ತೆಯಾಗದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ► ಶೋಧ ಕಾರ್ಯದಲ್ಲಿ ತೊಡಗಿದ ಅಗ್ನಿಶಾಮಕ ದಳ Read More »

ಕರಾವಳಿ
Scroll to Top