ಅಂಗಡಿ ತೆರೆಯುವುದಕ್ಕೂ ಮೊದಲೇ ಕ್ಯೂ ►ನಮ್ಮೂರಲ್ಲೂ ಇಂತಹ ಮಳಿಗೆ ಇದೆಯೆಂದರೆ ನಂಬುತ್ತೀರಾ…?
ಅಂಗಡಿ ತೆರೆಯುವುದಕ್ಕೂ ಮೊದಲೇ ಕ್ಯೂ ►ನಮ್ಮೂರಲ್ಲೂ ಇಂತಹ ಮಳಿಗೆ ಇದೆಯೆಂದರೆ ನಂಬುತ್ತೀರಾ…? Read More »
ಕರಾವಳಿ(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಸ್ವಾತಂತ್ರ್ಯಾನಂತರದ ಅತಿ ದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜುಲೈ 1ರಿಂದ ಜಾರಿಗೆ ಬಂದಿದೆ. ಜಿಎಸ್ಟಿ ಜೊತೆ ಆಧಾರ್ ಕಾರ್ಡಿಗೆ ಸಂಬಂಧಿಸಿದಂತೆ ಜುಲೈ 1ರಿಂದ ಇತರೇ ಕ್ಷೇತ್ರಗಳಲ್ಲೂ ಕೆಲ ಬದಲಾವಣೆಯಾಗಿದೆ. ಹೀಗಾಗಿ ದೇಶದಲ್ಲಿ ಮತ್ತು ವಿಶ್ವದಲ್ಲಿ ಏನು ಬದಲಾವಣೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. 1. ಐಟಿ ರಿಟರ್ನ್: ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು
ಜಿಎಸ್ಟಿ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದು ನಿಮಗೆ ತಿಳಿದಿದೆಯಾ…? Read More »
ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಕಡಬ, ಜು.02. ಕಡಬ ಪಂಜ ರಸ್ತೆಯಲ್ಲಿನ ಸರಕಾರಿ ಸ್ವಾಮ್ಯದ ಮದ್ಯದಂಗಡಿಯಲ್ಲಿ ಪಾನಪ್ರಿಯರು ಮದ್ಯ ಖರೀದಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಭಾನುವಾರವೂ ಕಂಡುಬಂದಿದೆ. ಹೆದ್ದಾರಿ ಬದಿಗಳಲ್ಲಿನ ಮದ್ಯದಂಗಡಿಗಳನ್ನು ಮುಚ್ಚಬೇಕೆಂಬ ಸುಪ್ರಿಂಕೋರ್ಟ್ ಅದೇಶದಂತೆ ಕಡಬ ಪೇಟೆಯಲ್ಲಿನ ಎರಡು ಮದ್ಯದಂಗಡಿ ಹಾಗೂ ಕಡಬಕ್ಕೆ ಸಮೀಪದಲ್ಲಿರುವ ಆಲಂಕಾರು ಮತ್ತು ನೆಟ್ಟಣ ಪೇಟೆಯಲ್ಲಿನ ಮದ್ಯದಂಗಡಿ ಬಂದ್ ಮಾಡಲಾಗಿತ್ತು. ಆದರೆ ಕಡಬದಲ್ಲಿನ ಸರಕಾರಿ ಮದ್ಯದಂಗಡಿ ಹೆದ್ದಾರಿಯಿಂದ 200 ಮೀಟರ್ ಗಿಂತಲೂ ದೂರ ಇದೆ. ಹೀಗಾಗಿ ಈ ವೈನ್ ಶಾಪ್ನಲ್ಲಿ ಭಾರಿ ವ್ಯಾಪಾರ
ಭಾನುವಾರವೂ ಕಡಬದ ಮದ್ಯದಂಗಡಿಗೆ ಮುಗಿಬಿದ್ದ ಜನತೆ ► ಎಣ್ಣೆ ಹಾಕಲು ಸರತಿ ಸಾಲಿನಲ್ಲಿ ನಿಂತ ಮದ್ಯಪ್ರಿಯರು Read More »
ಕರಾವಳಿ(ನ್ಯೂಸ್ ಕಡಬ) newskadaba.com ಮ0ಗಳೂರು ಜು.02. ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 2 ರವರೆಗೆ ವಿಧಿಸಲಾಗಿದ್ದ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 4 ರ ಮಧ್ಯರಾತ್ರಿವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ,
ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ವಿಟ್ಲ, ಜು.02. ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರು ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾಗಿದ್ದರಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಇಂದು ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅನ್ವರ್ ಕರೋಪಾಡಿ(ಮೃತ ಜಲೀಲ್ ರವರ ಸಹೋದರ) ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಭಟ್ ಕೋಡ್ಲ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ. ಮತದಾನವು ಮಿತ್ತನಡ್ಕ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿದ್ದು, ಮತದಾನ ಕೇಂದ್ರದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.02. ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯ ನಡುವಿನ ಕಿತ್ತಾಟಕ್ಕೆ ಮಧ್ಯಸ್ಥಿಕೆ ವಹಿಸೋಕೆ ಬಂದ ಎಬಿವಿಪಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರಿಗೆ ಎಸ್ಪಿ ಅಣ್ಣಾಮಲೈ ಚಾರ್ಜ್ ತೆಗೆದುಕೊಂಡಿದ್ದಾರೆ. ಎಸ್ಪಿ ಅಣ್ಣಾಮಲೈ ಅವರು ವಿದ್ಯಾರ್ಥಿಗಳು ಹಾಗೂ ಮ್ಯಾನೇಜ್ಮೆಂಟ್ ಜೊತೆ ಮಾತುಕತೆ ನಡೆಸುತ್ತಿದ್ದ ವೇಳೆ ಒಳಹೋಗಲು ಯತ್ನಿಸಿದ ಸಂಘಟನಾ ಕಾರ್ಯಕರ್ತರಿಗೆ, ಇದು ಕಾಲೇಜು. ನಿಮಗೆ ಅನುಮತಿ ಹಾಗೂ ದೂರು ಕೊಟ್ಟೋರು ಯಾರೆಂದು ಕಿಡಿಕಾರಿ ಸ್ವತಃ ಎಸ್ಪಿಯವರೇ ಕಾರ್ಯಕರ್ತರನ್ನು ಹೊರದೂಡಿದ್ದಾರೆ. ಇದಕ್ಕೂ
ABVP ಕಾರ್ಯಕರ್ತರಿಗೆ ಸಿಂಹಸ್ವಪ್ನವಾದ ಎಸ್ಪಿ ಅಣ್ಣಾಮಲೈ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. SDPI ಮುಖಂಡ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಎಂಬಾತನನ್ನು ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಜೂನ್ 21ರಂದು ಬೆಂಜನಪದವು ಬಳಿ ಅಶ್ರಫ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಕೊಲೆಗೆ ಸಂಚು ನಡೆಸಿದ ಇಬ್ಬರಲ್ಲಿ ಒಬ್ಬನಾದ ದಿವ್ಯರಾಜ್ ಶೆಟ್ಟಿ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ, ಹತ್ಯೆಗೆ ಸಂಚು ರೂಪಿಸಿದ್ದ ಮುಖಂಡ ಭರತ್ ಕುಮ್ಡೇಲುವನ್ನು ಇಂದು
ಅಶ್ರಫ್ ಕಲಾಯಿ ಕೊಲೆ ಪ್ರಕರಣ ►ಪ್ರಮುಖ ಆರೋಪಿ ಭರತ್ ಬಂಧನ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಜೂ.30. ಹೆದ್ದಾರಿ ಬದಿಗಳಲ್ಲಿ ಕಾರ್ಯಾಚರಿಸುತ್ತಿದ್ದ ಬಾರ್ ಗಳನ್ನು 220 ಮೀಟರ್ ದೂರಕ್ಕೆ ಸ್ಥಳಾಂತರಿಸಬೇಕೆನ್ನುವ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಕಡಬದಲ್ಲಿನ ಎರಡು ಖಾಸಗಿ ಬಾರ್ಗಳು, ನೆಟ್ಟಣ, ಆಲಂಕಾರು, ಪಂಜ ಸೇರಿದಂತೆ ಪರಿಸರದ ಎಲ್ಲಾ ಬಾರ್ಗಳನ್ನು ಮುಚ್ಚಲ್ಪಟ್ಟ ಕಾರಣದಿಂದ ಕಡಬ ಸರಕಾರಿ ಪ್ರಾಯೋಜಿತ ಎಂಎಸ್ಐಎಲ್ ಬಾರ್ ನಲ್ಲಿ ಸರತಿ ಸಾಲಿನಲ್ಲಿ ನಿಂತು ಗ್ರಾಹಕರು ಮದ್ಯಕ್ಕಾಗಿ ಕಾಯುತ್ತಿದ್ದ ದೃಶ್ಯ ಶನಿವಾರ ಸಂಜೆ ಕಂಡುಬಂದಿತು.
ಕಡಬದ MSIL ಮದ್ಯದಂಗಡಿ ಫುಲ್ ರಶ್ Read More »
ಕರಾವಳಿ(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.01. ಶನಿವಾರದಿಂದ GST ಜಾರಿಯಾದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.42 ರು, ಮತ್ತು ಡೀಸೆಲ್ ದರ 3.57 ರು ಕಡಿತವಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಬೆಂಗಳೂರಿನಲ್ಲಿ 57.80 ರು. ಇದ್ದ ಡೀಸೆಲ್ ದರ, ಶನಿವಾರ ಬೆಳಗ್ಗೆ 6 ಗಂಟೆಗೆ ಅನ್ವಯವಾಗುವಂತೆ 54.23 ರು.ಗೆ ಇಳಿಕೆಯಾಗಿದೆ. 67.66 ರು. ಇದ್ದ ಪೆಟ್ರೋಲ್ ದರ 64.24 ರು.ಗಳಿಗೆ ಇಳಿಕೆಯಾಗಿದೆ. ಅಂದರೆ ಡೀಸೆಲ್ಗೆ 3.57 ರೂ.
GST ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಕಡಬ, ಜು.01. ಇಲ್ಲಿನ ಮುಖ್ಯಪೇಟೆಯಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿನ ಎಲ್ಲಾ ತರದ ಸಿದ್ಧ ಉಡುಪುಗಳನ್ನು ಖಾಲಿ ಮಾಡುವ ಸಲುವಾಗಿ ಜುಲೈ 02, 2017ನೇ ಭಾನುವಾರದಿಂದ ‘ಸ್ಟಾಕ್ ಕ್ಲಿಯರೆನ್ಸ್ ಸೇಲ್’ ನಡೆಯಲಿದೆ. ಅದರಂತೆ ಮಕ್ಕಳ ಸಿದ್ಧ ಉಡುಪಗಳು, ಲೇಡೀಸ್ ಟಾಪ್, ನೈಟಿ, ಲೆಗ್ಗಿಂಗ್ಸ್, ಸ್ಕೂಲ್ ಬ್ಯಾಗ್, ಟೀ-ಶರ್ಟ್, ವ್ಯಾನಿಟಿ ಬ್ಯಾಗ್, ಕೊಡೆ, ಸಾರಿಗಳು ಸೇರಿದಂತೆ ಮಳಿಗೆಯಲ್ಲಿರುವ ಎಲ್ಲಾ ವಿಧದ ಉಡುಪುಗಳನ್ನು ವಿಶೇಷ ಡಿಸ್ಕೌಂಟ್ಗಳೊಂದಿಗೆ ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.
ಜುಲೈ 02.ರಿಂದ ಕಡಬದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ Read More »
ಕರಾವಳಿ