ಯಾವ ಗುಂಪಿನ ರಕ್ತ ಯಾರಿಗೆ ಹೊಂದುತ್ತದೆಯೆಂದು ತಿಳಿಯಬೇಕೇ…?
ಯಾವ ಗುಂಪಿನ ರಕ್ತ ಯಾರಿಗೆ ಹೊಂದುತ್ತದೆಯೆಂದು ತಿಳಿಯಬೇಕೇ…? Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ
ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ
ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಮತ್ತು ಬುಧವಾರದಂದು ಬೆಂಜನಪದವಿನಲ್ಲಿ SDPI ಮುಖಂಡನ ಕೊಲೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.21 ನೇ ಬುಧವಾರ ಮಧ್ಯರಾತ್ರಿಯಿಂದ ಜೂ.27 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.27 ರವರೆಗೆ ನಿಷೇಧಾಜ್ಞೆಯನ್ನು
ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ಕೋಮು ಗಲಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈಯವರಿಗೆ ವಹಿಸಲಾಗಿದೆ. ಬಂಟ್ವಾಳ ವೃತ್ತನಿರೀಕ್ಷಕರನ್ನಾಗಿ ಬೆಳಿಯಪ್ಪರವರನ್ನು ನೇಮಿಸಲಾಗಿದ್ದು,
ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.21. SDPI ಮುಖಂಡ ಕಲಾಯಿ ಅಶ್ರಫ್ ಬರ್ಬರವಾಗಿ ಕೊಲೆಗೀಡಾದ ನಂತರ ಜಿಲ್ಲೆಯ ಅಲ್ಲಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಶಾಂತಿಪ್ರಿಯರನ್ನು ಆತಂಕಕ್ಕೀಡುಮಾಡಿದೆ. ಕಳೆದ ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕದಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚನೆ ನೀಡುತ್ತಿದ್ದಾಗ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಸಂಗಡಿಗರು ಬಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎರಡೂ ಕೋಮಿನ ಜನರು ಸೇರತೊಡಗಿದ್ದರಿಂದ ಪರಿಸ್ಥಿತಿ ಕೈ ಮೀರುವುದನ್ನರಿತ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದರು. ಅಶ್ರಫ್
SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ Read More »
ಕರಾವಳಿ(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಪಡೆದಿದ್ದ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಘೋಷಿಸಿದ್ದಾರೆ. ಜೂ.20ರವರೆಗೆ ಪಡೆದುಕೊಂಡಿರುವ ಪ್ರತೀ ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಇದರಿಂದಾಗಿ ಸುಮಾರು 22,27,506 ರೈತರು ಪ್ರಯೋಜನ ಪಡೆಯಲಿದ್ದಾರೆ. ಇದರಿಂದ ರಾಜ್ಯ ಸರಕಾರಕ್ಕೆ 8,165 ಕೋಟಿ ರೂ. ಹೊರೆ ಬೀಳಲಿದೆ ಎಂದವರು ಹೇಳಿದರು.
ರಾಜ್ಯ ಸರಕಾರದಿಂದ ರೈತರ ಸಾಲಮನ್ನಾ ಘೋಷಣೆ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.21. ಎಸ್ಡಿಪಿಐ ಅಮ್ಮುಂಜೆ ವಲಯಾಧ್ಯಕ್ಷ ಮಲ್ಲೂರು ಅಮ್ಮುಂಜೆಯ ಕಲಾಯಿ ನಿವಾಸಿ ಅಶ್ರಫ್(35) ಎಂಬವರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ. ಕಲಾಯಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿದ ಬಳಿಕ ಹದಗೆಟ್ಟಿದ್ದ ಕಲಾಯಿ ರಸ್ತೆಯನ್ನು ಸಾರ್ವಜನಿಕರೊಂದಿಗೆ ಸೇರಿ ಶ್ರಮದಾನ ಮಾಡಿ, ನಂತರ ತನ್ನ ರಿಕ್ಷಾದಲ್ಲಿ ಬಾಡಿಗೆಗೆಂದು ಕಳ್ಳಿಗೆ ಗ್ರಾಮದ ಬೆಂಜನಪದವಿನ ಕರಾವಳಿ ಸೈಟ್
ಎಸ್ಡಿಪಿಐ ಅಮ್ಮುಂಜೆ ವಲಯಾಧ್ಯಕ್ಷರ ಬರ್ಬರ ಕೊಲೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಈ ಹಿಂದೆ ಉಡುಪಿ ಎಸ್ಪಿಯಾಗಿ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಿದ್ದ ಪ್ರಸ್ತುತ ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಳ್ಳುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳನ್ನು ತಡೆಯಲು ಹಾಗೂ ನೈಜ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೊಂಡಿದ್ದ ವೀಡಿಯೋ ಇದೀಗ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…? Read More »
ಕರಾವಳಿ