ಮಹಾರಾಷ್ಟ್ರ: ರೈತರ ಸಾಲ ಸಂಪೂರ್ಣ ಮನ್ನಾ

(ನ್ಯೂಸ್ ಕಡಬ) newskadaba.com ಮುಂಬೈ, ಜೂ.11. ಜೂ.1ರಂದು ಸಾಲಮನ್ನಾ ಹಾಗೂ ಇತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಹಾರಾಷ್ಟ್ರದಲ್ಲಿ ರೈತರು ಸರಕಾರದ ವಿರುದ್ಧ ಭಾರೀ ಪ್ರತಿಭಟನೆಯನ್ನು ಆರಂಭಿಸಿದ್ದರ ಪರಿಣಾಮ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಮಹಾರಾಷ್ಟ್ರ ಸರಕಾರ ಘೋಷಿಸಿದ್ದು, ಈ ಬಗೆಗಿನ ಮಾನದಂಡಗಳನ್ನು ನಿರ್ಧರಿಸಲು ಶೀಘ್ರವೇ ಸಮಿತಿಯೊಂದನ್ನು ರಚಿಸಲಿದೆ. “ಸಾಲಮನ್ನಾ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಸರಕಾರ ಒಪ್ಪಿಗೆ ನೀಡಿದೆ. ಒಂದು ವೇಳೆ ಇದರಲ್ಲಿ ಸರಕಾರ ವಿಫಲವಾದಲ್ಲಿ ಮತ್ತೆ ಜುಲೈ 25ರಂದು ನಾವು ಹೋರಾಟ ಆರಂಭಿಸಲಿದ್ದೇವೆ’ ಎಂದು ರೈತ ಮುಖಂಡರು […]

ಮಹಾರಾಷ್ಟ್ರ: ರೈತರ ಸಾಲ ಸಂಪೂರ್ಣ ಮನ್ನಾ Read More »

ರಾಷ್ಟ್ರೀಯ ನ್ಯೂಸ್

ಗೋಳಿತ್ತಡಿ: ಭಿನ್ನ ಕೋಮಿನ ಜೋಡಿಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಇಲ್ಲಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಪೇಟೆಯಲ್ಲಿ ಶನಿವಾರ ರಾತ್ರಿ ಅನ್ಯಕೋಮಿನ ವ್ಯಕ್ತಿಯ ಜೊತೆ ಮುಸ್ಲಿಂ ಮಹಿಳೆಯೋರ್ವಳು ಬೈಕಿನಲ್ಲಿ ತೆರಳಿದ್ದನ್ನು ಪ್ರಶ್ನಿಸಿ ಸ್ಥಳೀಯರ ತಂಡವೊಂದು ಹಲ್ಲೆ ನಡೆಸಿದೆ ಎಂದು ಕಡಬ ಠಾಣೆಗೆ ದೂರು ನೀಡಿದ ಘಟನೆ ಭಾನುವಾರದಂದು ನಡೆದಿದೆ. ಕೊೖಲ ಗ್ರಾಮದ ಕುದುಲೂರು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿದ್ದ ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ಸೆಲ್ವಂ ಎಂಬವರ ಪುತ್ರ ಬಾಲರಾಜ್(48) ಶನಿವಾರ ಉಪ್ಪಿನಂಗಡಿಯಿಂದ ಕುದುಲೂರಿಗೆ ಬರುವಾಗ ಸೋಮವಾರಪೇಟೆಯ ಮುಸ್ಲಿಂ ಮಹಿಳೆಯನ್ನು ಬೈಕಿನಲ್ಲಿ

ಗೋಳಿತ್ತಡಿ: ಭಿನ್ನ ಕೋಮಿನ ಜೋಡಿಗೆ ತಂಡದಿಂದ ಹಲ್ಲೆ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಪುಟಾಣಿಗಳಿಗೆ ಮೊಟ್ಟೆ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ವತಿಯಿಂದ ಅಂಗನವಾಡಿ ಪುಟಾಣಿಗಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಪುಟಾಣಿಗಳಿಗೆ ಮೊಟ್ಟೆ ವಿತರಿಸಿ ಮಾತನಾಡಿ, ಸರಕಾರ ಮಕ್ಕಳ ಆರೋಗ್ಯ ಹಾಗೂ ಅವರ ಪೋಷಣೆಗೆ ಸಹಕರಿಸುತ್ತಿದೆ. ಅಗತ್ಯ ಪೋಷಕಾಂಶವುಳ್ಳ ಮೊಟ್ಟೆ ಮಕ್ಕಳ ಆರೋಗ್ಯಪುರ್ಣ ಬೆಳವಣಿಗೆಗೆ ಪುರಕ ಎಂದರು. ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಮಾತನಾಡಿ, ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ಸರಕಾರ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಪುಟಾಣಿಗಳಿಗೆ ಮೊಟ್ಟೆ ವಿತರಣೆ Read More »

ಕರಾವಳಿ

ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಸಾಲವನ್ನು ಮನ್ನಾ ಮಾಡಬೇಕು,‌ ಮಧ್ಯಪ್ರದೇಶದ ಮಂದಸೌರ್ ನಲ್ಲಿ ನಡೆದ ಗೋಲಿಬಾರ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ನಾಳೆ (ಜೂ.12 ನೇ ಸೋಮವಾರ) ರಾಜ್ಯ ಬಂದ್ ಗೆ ಕರೆ ನೀಡಿದೆ. ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರೈತರು ಮಧ್ಯಪ್ರದೇಶದ ಮಂದಸೌರ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಪೊಲೀಸರು ಗೋಲಿಬಾರ್ ಮಾಡಿಸುವ ಮೂಲಕ ಹಲವು ರೈತರ ಸಾವಿಗೆ ಕಾರಣವಾಗಿದ್ದು, ಇದನ್ನು ಖಂಡಿಸಿ

ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್ Read More »

ಕರ್ನಾಟಕ

ಹಿಂದೂವಿನ ಶವ ಮೇಲಕ್ಕೆತ್ತಿದ ಮುಸ್ಲಿಂಗೆ ಸಹಕರಿಸಿದ ಕ್ರಿಶ್ಚಿಯನ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.11. ನದಿಯಲ್ಲಿ ಮುಳುಗಿ ಮೃತಪಟ್ಟ ಹಿಂದೂ ವ್ಯಕ್ತಿಯ ಮೃತದೇಹವನ್ನು ಮೇಲಕ್ಕೆತ್ತಿದ ಮುಸ್ಲಿಮರಿಗೆ ಶವವನ್ನು ಆಸ್ಪತ್ರೆಗೆ ಸಾಗಿಸಲು ಕ್ರಿಶ್ಚಿಯನ್ ಸಹೋದರನೋರ್ವ ತನ್ನ ಅಂಬ್ಯುಲೆನ್ಸ್ ನ್ನು ನೀಡಿ ಸಹಕರಿಸಿದ ಮಾನವೀಯ ಘಟನೆಗೆ ಬಂಟ್ವಾಳದ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗೂಡಿನ ಬಳಿ ಶನಿವಾರ ಸಾಕ್ಷಿಯಾಯಿತು. ಸದಾ ಒಂದಿಲ್ಲೊಂದು ಕೋಮು ಪ್ರಚೋದಿತ ಘಟನೆಗಳಿಂದ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಮಾನವೀಯ ಘಟನೆಗಳೂ ನಡೆಯುತ್ತದೆ ಎಂಬುವುದಕ್ಕೆ ಪುಷ್ಟಿ ನೀಡಿತು. ಪುದು

ಹಿಂದೂವಿನ ಶವ ಮೇಲಕ್ಕೆತ್ತಿದ ಮುಸ್ಲಿಂಗೆ ಸಹಕರಿಸಿದ ಕ್ರಿಶ್ಚಿಯನ್ Read More »

ಕರಾವಳಿ

ಉದ್ಯಾವರ: ಮೂವರು ವಿದ್ಯಾರ್ಥಿಗಳು ನೀರು ಪಾಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜೂ.10. ಸ್ನಾನಕ್ಕೆಂದು ಕೆರೆಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಇಲ್ಲಿನ ಉದ್ಯಾವರ ಬಿ.ಎಸ್ ನಗರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ಬಾಲಕರನ್ನು ಪಿ.ಟಿ. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (7), ಮುಹಮ್ಮದ್ ಎಂಬವರ ಪುತ್ರ ಅಸ್ಲಂ (8) , ಅಹ್ಮದ್ ಹಸ್ಸನ್ ಕುಂಞಿ ಎಂಬವರ ಪುತ್ರ ಅಬ್ದುಲ್ ಅಫ್ರೀದ್ (12) ಎಂದು ಗುರುತಿಸಲಾಗಿದೆ. ಶನಿವಾರ ಶಾಲೆ ಬಿಟ್ಟು ಮನೆಯಿಂದ ತೆರಳಿದ ವಿದ್ಯಾರ್ಥಿಗಳು ಇಲ್ಲಿಗೆ ಸಮೀಪದ ಕೆರೆಯೊಂದರಲ್ಲಿ ಸ್ನಾನಕ್ಕಿಳಿದಿದ್ದು ಈ

ಉದ್ಯಾವರ: ಮೂವರು ವಿದ್ಯಾರ್ಥಿಗಳು ನೀರು ಪಾಲು Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಅಂಗಡಿಯಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.10. ಇಲ್ಲಿನ ಸಿಂಡಿಕೇಟ್ ಬ್ಯಾಂಕ್ ಬಳಿ ಇರುವ ಬಾಲಾಜಿ ಮೊಬೈಲ್ ಅಂಗಡಿಯ ಹಂಚು ತೆಗೆದು ಒಳನುಗ್ಗಿದ ಕಳ್ಳರು 5 ಸಾವಿರ ನಗದಿನೊಂದಿಗೆ ದುರಸ್ತಿಗೆ ಬಂದಿದ್ದ ಎರಡು ಹಳೆಯ ಮೊಬೈಲ್ ಪೋನ್ ಗಳನ್ನು ಕದ್ದೊಯ್ದ ಘಟನೆ ಕಳೆದ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ 5 ಸಾವಿರ ರೂಪಾಯಿ ನಗದು ಹಾಗೂ ದುರಸ್ತಿಗೆ ಬಂದಿದ್ದ ಎರಡು ಹಳೆಯ ಮೊಬೈಲ್ ಪೋನ್ಗಳನ್ನು ಕದ್ದೊಯ್ದಿದ್ದಾರೆ. ಕಳವಾದ ಮೊಬೈಲ್ ಪೋನ್ಗಳ ಮೌಲ್ಯ ಆರು ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಶನಿವಾರ ಬೆಳಗ್ಗೆ ಅಂಗಡಿಯ ಬಾಗಿಲು ತೆರೆದಾಗ

ಉಪ್ಪಿನಂಗಡಿ: ಮೊಬೈಲ್ ಅಂಗಡಿಯಿಂದ ಕಳ್ಳತನ Read More »

ಕರಾವಳಿ

ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಬಿಜೆಪಿ ಕಾರ್ಯಕರ್ತರು ಅಧಿಕಾರದ ಆಸೆಯಿಲ್ಲದೆ ಪಕ್ಷದ ವಿಚಾರಗಳಿಗೆ ಮಹತ್ವ ನೀಡಿ ಸಂಘಟನೆ ಮೂಲಕ ಪಕ್ಷ ಬೆಳೆಸುತ್ತಿದ್ದಾರೆ. ಅಧುನಿಕ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಕೇಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಚಾರಕ್ಕೆ ಒತ್ತು ಕೊಡುವ ಸರಕಾರ ನಮ್ಮನ್ನಾಳುತ್ತಿದೆ. ಅಭಿವೃದ್ದಿಯೆನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಅಭಿವೃದ್ದಿಯ ದೂರದೃಷ್ಟಿಯಿಲ್ಲದೆ

ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ Read More »

ಕರಾವಳಿ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಪವಿತ್ರ ಮಾಸವಾದ ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ನಮ್ಮ ಸಹೋದರ ಸಹೋದರಿಯರು ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಉಪವಾಸ ಮಾಡುತ್ತಾರೆ. ಸೂರ್ಯೋದಯವಾಗುವುದಕ್ಕೆ ಮೊದಲೇ ಆಹಾರ ಸೇವಿಸಿ ಬಳಿಕ 12 ರಿಂದ 14 ಗಂಟೆಗಳ ಕಾಲ ನೀರು ಕೂಡ ಸೇವಿಸದೆ ಸೂಯಾಸ್ತವಾದ ಬಳಿಕವೇ ಆಹಾರ ಸೇವಿಸುತ್ತಾರೆ, ಹಾಗಾಗಿ ಒಂದು ಊಟಕ್ಕೂ ಮತ್ತೊಂದು ಊಟಕ್ಕೂ 12 ರಿಂದ 14 ಗಂಟೆಗಳ ಬಹಳ ಅಂತರವಿರುತ್ತದೆ. ಈ ಸಮಯದ ಅಂತರ ಜಾಸ್ತಿ ಇರುವ ಕಾರಣ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಎಡೆಬಿಡದೆ ಸುರಿಯತ್ತಿರುವ ಮಳೆ: ಕಳಾರ ಶಾಲಾ ಕಟ್ಟಡ ಕುಸಿತ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಳಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುಸಿದಿರುವ ಘಟನೆ ಶನಿವಾರದಂದು ನಡೆದಿದೆ. ಕಟ್ಟಡವು ಶಿಥಿಲಗೊಂಡಿದ್ದರಿಂದ ಪಕ್ಕದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿತ್ತೆನ್ನಲಾಗಿದೆ. ಆದರೆ ಬೇರೆ ತರಗತಿಗಳಿಗೆ ಹೊಂದಿಕೊಂಡ ಈ ಕಟ್ಟಡದ ಬಳಿಯಿಂದಾಗಿ ವಿದ್ಯಾರ್ಥಿಗಳು ಸಾಗುತ್ತಿದ್ದರು. ಶನಿವಾರದಂದು ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಆ ಸಮಯದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳು ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ. 1997ರಲ್ಲಿ ಸ್ಥಾಪಿಸಲಾದ ಕಟ್ಟಡವು ಅಕ್ರಮ ಕಾಮಗಾರಿಯಿಂದಾಗಿ ಶಿಥಿಲಗೊಂಡಿದ್ದು, ಅದನ್ನು

ಎಡೆಬಿಡದೆ ಸುರಿಯತ್ತಿರುವ ಮಳೆ: ಕಳಾರ ಶಾಲಾ ಕಟ್ಟಡ ಕುಸಿತ Read More »

ಕರಾವಳಿ
Scroll to Top