ರಾಜ್ಯದ 1,642 ಸರ್ಕಾರಿ ಪ್ರೌಢಶಾಲೆಗಳಲ್ಲಿ AI ಕೋರ್ಸ್ ಪ್ರಾರಂಭ: ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಜು.25: ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ 21ನೇ ಶತಮಾನದ ತಾಂತ್ರಿಕ ಕೌಶಲ, ಸೃಜನಶೀಲತೆ ಹಾಗೂ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ 1,642 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವಿಷಯವನ್ನು ಬೋಧಿಸಲು ನಿರ್ಧರಿಸಲಾಗಿದೆ. ವಿಷಯ ಬದಲಾವಣೆಗಳು ಈ ಹಿಂದೆ ಇದ್ದ ಬ್ಯೂಟಿ ಆಂಡ್ ವೆಲ್‌ನೆಸ್, ರಿಟೇಲ್ ಹಾಗೂ ಫ್ಯಾಷನ್ ಡಿಸೈನಿಂಗ್ ಕೋರ್ಸ್‌ಗಳ ಬದಲಿಗೆ, ತೃತೀಯ ಭಾಷೆಯ ಸ್ಥಾನದಲ್ಲಿ ಎಐ ಕೌಶಲ ಶಿಕ್ಷಣವನ್ನು […]

ರಾಜ್ಯದ 1,642 ಸರ್ಕಾರಿ ಪ್ರೌಢಶಾಲೆಗಳಲ್ಲಿ AI ಕೋರ್ಸ್ ಪ್ರಾರಂಭ: ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು  ಶುಕ್ರವಾರದಂದು ಅನಿರೀಕ್ಷಿತ  ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮೊಡಂಕಾಪು ದೇವಸ್ಥಾನದಲ್ಲಿ ಕಳವು — 57,000 ರೂ. ಮೌಲ್ಯದ ಪೂಜಾ ಸಾಮಗ್ರಿಗಳು ಗಾಯಬ್!

(ನ್ಯೂಸ್‌ ಕಡಬ) newskadaba.com,  ಜು.25:  ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಕಳ್ಳರು ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ. ಬೆಳ್ಳಿ ವಸ್ತುಗಳು, ಒಂದು ಕಾಣಿಕೆ ಪಾತ್ರೆ, 10 ಸಾಂಪ್ರದಾಯಿಕ ದೀಪಗಳು, 10 ಹಿತ್ತಾಳೆ ಕಲಶಗಳು, 5 ಹಿತ್ತಾಳೆ ತಟ್ಟೆಗಳು, ತಾಮ್ರದ ಹಾಗೂ ಉಕ್ಕಿನ ಪಾತ್ರೆಗಳು ಸೇರಿ ಒಟ್ಟು ₹57,000 ಮೌಲ್ಯದ ಸಾಮಗ್ರಿಗಳು.ಮೂವರು ಕಳ್ಳರು ಕದ್ದ ವಸ್ತುಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಪರಾರಿಯಾಗುತ್ತಿರುವ ದೃಶ್ಯ ದೇವಸ್ಥಾನದ ಸಿಸಿಟಿವಿ

ಬಂಟ್ವಾಳ: ಮೊಡಂಕಾಪು ದೇವಸ್ಥಾನದಲ್ಲಿ ಕಳವು — 57,000 ರೂ. ಮೌಲ್ಯದ ಪೂಜಾ ಸಾಮಗ್ರಿಗಳು ಗಾಯಬ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗಾವಕಾಶ: ಜುಲೈ 30ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 25. ಎಕ್ಸ್‍ ಪರ್ಟ್ ಕಾಲೇಜು, ಕ್ಯಾಲಿಬರ್ ಹಾಗೂ ಕೋಜೆಂಟ್ ಇ-ಸರ್ವಿಸಸ್ ಕಂಪೆನಿಯ ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಕಸ್ಟಮರ್ ಸಪೋರ್ಟ್ ಅಸೋಸಿಯೇಟ್ ಮತ್ತು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಡೀಲ್ ಪ್ರಜಾಸೌಧದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಪಿ.ಯು.ಸಿ, ಡಿಪ್ಲೊಮಾ, ಯಾವುದೇ ಪದವಿ ಹಾಗೂ ಮೇಲ್ಪಟ್ಟ

ಉದ್ಯೋಗಾವಕಾಶ: ಜುಲೈ 30ರಂದು ಸಂದರ್ಶನ Read More »

ಕರಾವಳಿ

ಶಾಲಾ ಪ್ರವೇಶ ಪರೀಕ್ಷೆಗೆ ಸಮ್ಮತಿ, ಮಕ್ಕಳ ಕಲಿಕಾ ಮೌಲ್ಯಮಾಪನಕ್ಕೆ ವಿರೋಧ ಶಿಕ್ಷಣ ವ್ಯವಸ್ಥೆಯ ಈ ದ್ವಂದ್ವ ನೀತಿ ಏಕೆ? ✍🏻 ಮೊಯ್ದಿನ್ ಕುಟ್ಟಿ

(ನ್ಯೂಸ್ ಕಡಬ) newskadaba.com ಜು. 25. ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಇಂದು ಒಂದು ಗಂಭೀರ ವಿರೋಧಾಭಾಸ ಕಾಣಿಸುತ್ತಿದೆ. ಒಂದೆಡೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ನವೋದಯ, ಸೈನಿಕ್, ಮಿಲಿಟರಿ ಹಾಗೂ ವಿವಿಧ ವಸತಿ ಶಾಲೆಗಳು ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತಿವೆ. ಈ ಪದ್ಧತಿಯನ್ನು ಸರ್ಕಾರಗಳು, ಅಧಿಕಾರಿಗಳು, ಶಿಕ್ಷಣ ತಜ್ಞರೆನ್ನುವವರು ಹಾಗೂ ಸಮಾಜದ ಬಹುಪಾಲು ಜನರು ಒಪ್ಪಿಕೊಂಡಿದ್ದಾರೆ     ಆದರೆ ಮತ್ತೊಂದೆಡೆ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 5ನೇ ಅಥವಾ 7ನೇ ತರಗತಿಯ ವಿದ್ಯಾರ್ಥಿಗಳ

ಶಾಲಾ ಪ್ರವೇಶ ಪರೀಕ್ಷೆಗೆ ಸಮ್ಮತಿ, ಮಕ್ಕಳ ಕಲಿಕಾ ಮೌಲ್ಯಮಾಪನಕ್ಕೆ ವಿರೋಧ ಶಿಕ್ಷಣ ವ್ಯವಸ್ಥೆಯ ಈ ದ್ವಂದ್ವ ನೀತಿ ಏಕೆ? ✍🏻 ಮೊಯ್ದಿನ್ ಕುಟ್ಟಿ Read More »

ವಿಶೇಷ ಲೇಖನಗಳು

ಕಡಬದಲ್ಲೊಂದು ಸ್ವಾರಸ್ಯಕರ ಘಟನೆ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕೀ- ನಾಲ್ಕು ಗಂಟೆ ಹುಡುಕಾಟ

(ನ್ಯೂಸ್ ಕಡಬ) newskadaba.com ಜು. 25. ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿಯೊಂದು ಕಾರಿನ ಕೀ ಚರಂಡಿಗೆ ಸೇರುವಂತೆ ಮಾಡಿದ್ದು, ಬಳಿಕ ಕೀಗಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ಹುಡುಕಾಟ ನಡೆಸಿದ ಸ್ವಾರಸ್ಯಕರ ಘಟನೆ ಶುಕ್ರವಾರ ಕಡಬ ಸಂತೆಕಟ್ಟೆ ಬಳಿ ನಡೆದಿದೆ.   ಮಾಹಿತಿಯ ಪ್ರಕಾರ, ಈಶ್ವರಮಂಗಲ ಮೂಲದ ಯುವಕನೊಬ್ಬ ಸ್ನೇಹಿತನ ಕಾರಿನಲ್ಲಿ ಕಡಬಕ್ಕೆ ಆಗಮಿಸಿದ್ದು, ಜನ್ಮದಿನದ ಶುಭಾಶಯ ತಿಳಿಸಲು ಸಂತೆಕಟ್ಟೆ ಸಮೀಪದ ಖಾಸಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಚಯದ ಯುವತಿಯನ್ನು ಭೇಟಿ ಮಾಡಿದ್ದಾನೆ ಎನ್ನಲಾಗಿದೆ. ಕಚೇರಿ

ಕಡಬದಲ್ಲೊಂದು ಸ್ವಾರಸ್ಯಕರ ಘಟನೆ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕೀ- ನಾಲ್ಕು ಗಂಟೆ ಹುಡುಕಾಟ Read More »

ಕರಾವಳಿ

ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 24. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರದಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ

(ನ್ಯೂಸ್ ಕಡಬ) newskadaba.com ಜು. 24. ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಭಾರತದ ಎಲ್ಲಾ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳ (ಎನ್‌ಐಟಿ) ಪೈಕಿ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಅಖಿಲ ಭಾರತ ಅಂತರ್ ಎನ್‌ಐಟಿ (ಎಐಐಎನ್‌ಐಟಿ) ಕ್ರೀಡಾಕೂಟದಲ್ಲಿ ಭಾಗವಹಿಸಿದ ಎನ್‌ಐಟಿಗಳ ಪೈಕಿ ಗರಿಷ್ಠ 144 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದಿದೆ. ಈ ಸಾಧನೆಯೊಂದಿಗೆ ಅಥ್ಲೆಟಿಕ್ಸ್, ತಂಡ ಕ್ರೀಡೆಗಳು, ರಾಕೆಟ್ ಕ್ರೀಡೆಗಳು ಮತ್ತು ಶಕ್ತಿ ಆಧಾರಿತ ಕ್ರೀಡೆಗಳಲ್ಲಿ ಎನ್‌ಐಟಿಕೆ ರಾಷ್ಟ್ರಮಟ್ಟದಲ್ಲಿ ಅಗ್ರಸ್ಥಾನ ಪಡೆದಿದ್ದು,

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ!!

(ನ್ಯೂಸ್ ಕಡಬ) newskadaba.com ಜು. 24. ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿದ್ದ 26 ದಿನಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ ಮುಂಜಾನೆ ಅಂತ್ಯಗೊಂಡಿದೆ. ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ತಮ್ಮ ಉಪವಾಸವನ್ನು ಕೊನೆಗೊಳಿಸಿದರು. ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆಗಳಿಗೆ ಸ್ಪಂದಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ!! Read More »

ರಾಷ್ಟ್ರೀಯ ನ್ಯೂಸ್
Scroll to Top