ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com,  ಸೆ. 30 ಬಳ್ಳಾರಿ: ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಕರ್ತವ್ಯದಲ್ಲಿದ್ದ ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಭದ್ರತಾ ಕರ್ತವ್ಯದಲ್ಲಿದ್ದ ಶ್ರೀನಿವಾಸ್ ರಾವ್ ದಿಢೀರನೆ ದಿಢೀರನೆ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣವೇ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ […]

ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ ಹೃದಯಾಘಾತದಿಂದ ಸಾವು Read More »

ಕರಾವಳಿ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್..!

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ವ್ಯಾಪಕ ಪ್ರತಿಭಟನೆಗಳಿಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ, ಸೋಮವಾರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.ಅತಿಥಿ ಉಪನ್ಯಾಸಕರ ನೇಮಕ ವಿಚಾರ ಸಂಬಂಧ ಸೆಪ್ಟೆಂಬರ್ 29 ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದ ಪತ್ರ ಬರೆದಿದ್ದಾರೆ. ಪತ್ರದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲಿನ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್..! Read More »

ಕರಾವಳಿ

ಬೆಂಗಳೂರು- ಮೈಸೂರು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು: ಈ ಬಾರಿ ಮೈಸೂರು ದಸರಾ  ನೋಡಲೆಂದು ಹೊರಟವರಿಗೆ ಕೆಎಸ್‌ಆರ್‌ಟಿಸಿ ಶಾಕ್‌ ನೀಡಿದೆ. ಬೆಂಗಳೂರು- ಮೈಸೂರು ಬಸ್​ ಟಿಕೆಟ್​ ದರ ಹೆಚ್ಚಳವಾಗಿದೆ. ಸಾಲು ಸಾಲಾಗಿ ರಜೆಗಳು ಬಂದಿರುವುದರಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಟಿಕೆಟ್‌ ಬೇಡಿಕೆ ಹತ್ತು ಪಟ್ಟು ಹೆಚ್ಚಿದೆ. ಹೀಗಾಗಿ ಕೆಎಸ್​​​ಆರ್​ಟಿಸಿ ಮಾತ್ರವಲ್ಲ, ಖಾಸಗಿ ಬಸ್​​ಗಳು ಕೂಡ ಹಬ್ಬವನ್ನೇ ನೆಪವಾಗಿ ಇಟ್ಟುಕೊಂಡು ಪ್ರಯಾಣ ದರ ಏರಿಕೆ ಮಾಡಿವೆ. ಎಷ್ಟು ಏರಿಕೆ? ಕೆಎಸ್ಆರ್ಟಿಸಿ ನಿಗಮ 20ರಿಂದ 30 ರುಪಾಯಿ ಟಿಕೆಟ್

ಬೆಂಗಳೂರು- ಮೈಸೂರು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಭಾರಿ ಏರಿಕೆ Read More »

ಕರ್ನಾಟಕ

ಅಕ್ಟೋಬರ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ 21 ದಿನ ರಜೆ

(ನ್ಯೂಸ್‌ ಕಡಬ) newskadaba.com,  ಸೆ. 30 ನವದೆಹಲಿ: ಅಕ್ಟೋಬರ್ 2025 ಭಾರತದಾದ್ಯಂತ ದಸರಾ, ದೀಪಾವಳಿ ಗಾಂಧಿ ಜಯಂತಿ ಕಾರಣಕ್ಕೆ ರಜಾದಿನಗಳಿವೆ. ಈ ತಿಂಗಳಲ್ಲಿ ಹಲವು ದಿನ ಬ್ಯಾಂಕ್‌ ರಜೆ ಇರುವುದರಿಂದ, ಗ್ರಾಹಕರು ತಮ್ಮ ಬ್ಯಾಂಕಿಂಗ್ ಕೆಲಸಗಳನ್ನು ಪ್ಲ್ಯಾನ್ ಮಾಡಿಕೊಳ್ಳಬೇಕು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಕ್ಟೋಬರ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಬ್ಯಾಂಕ್‌ಗಳಿಗೆ ಒಟ್ಟು 21 ರಜೆಗಳಿವೆ. ಡಿಜಿಟಲ್ ಬ್ಯಾಂಕಿಂಗ್ ಸೇವೆ ರಜಾದಿನಗಳಂದು ಬ್ಯಾಂಕ್ ಶಾಖೆಗಳು ಮುಚ್ಚಿರುತ್ತವೆಯಾದರೂ, ಮೊಬೈಲ್ ಆ್ಯಪ್, ಇಂಟರ್‌ನೆಟ್ ಬ್ಯಾಂಕಿಂಗ್, ಯುಪಿಐ ಪಾವತಿಗಳು ಮತ್ತು ಎಟಿಎಂ ವಹಿವಾಟುಗಳು

ಅಕ್ಟೋಬರ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ 21 ದಿನ ರಜೆ Read More »

ರಾಷ್ಟ್ರೀಯ ನ್ಯೂಸ್

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ : ಜನಪ್ರಿಯ ಕೊಂಕಣಿ ನಟ ಸುನಿಲ್ ಪಿಂಟೋ(47) ಅವರು ಸೋಮವಾರ ಸಂಜೆ ಹೊಸಪೇಟೆಯ ತಮ್ಮ ಕೃಷಿ ಜಮೀನಿನಲ್ಲಿರುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಸುನಿಲ್ ಅವರು ಯುವಕನಾಗಿರುವಾಗಲೇ ಮನರಂಜನಾ ಲೋಕಕ್ಕೆ ಪ್ರವೇಶಿಸಿ, ನಾಟಕಗಳು ಮತ್ತು ಹಾಸ್ಯ ಸರಣಿಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಬಳಿಕ ದುಬೈಗೆ ತೆರಳಿದ ನಂತರ, ಅವರು ಮೂಡಬಿದಿರೆಯ ‘ಉದೆಂತಿಚೆ ನೆಕೆತ್ರಾಂ’ ತಂಡದ ಸದಸ್ಯರಾದರು. ಅಲ್ಲಿ ಪ್ರದೀಪ್ ಬಾರ್ಬೋಜಾ ನಿರ್ದೇಶನದ ನಾಟಕಗಳಲ್ಲಿ ಅಭಿನಯಿಸುವ ಅವಕಾಶ ಪಡೆದರು. ರಂಗಭೂಮಿಯ ಮೇಲಿನ ಅವರ ಈ ಪ್ರೀತಿಯೇ

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಾಸನದ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ: ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ(ಸೆ.29) ರಾತ್ರಿ ಈ ಘಟನೆ ನಡೆದಿದೆ .ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಇನ್ನೂ ಈ  ವೇಳೆ ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿನ ಮನೆಯವರು ಭಯಭೀತರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ

ಹಾಸನದ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ!

(ನ್ಯೂಸ್‌ ಕಡಬ) newskadaba.com,  ಸೆ. 30 ಚಂಡೀಗಡ: ಗುರುಗ್ರಾಮದಲ್ಲಿ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳವಾಡಿ ಬಳಿಕ ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) 3

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ

(ನ್ಯೂಸ್‌ ಕಡಬ) newskadaba.com,  ಸೆ. 30 ಹೈದರಬಾದ್‌: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. ದೇಶಾದ್ಯಂತ 6 ಸಾವಿರಕ್ಕೂ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಕಾಣಲಿದೆ.ಈ ಸಿನಿಮಾದ ಬಜೆಟ್ 150 ಕೋಟಿ ರೂಪಾಯಿ ಮೀರಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ರಿಷಬ್ ಶೆಟ್ಟಿ ಹಾಗೂ ತಂಡ ಹೈದರಾಬಾದ್​​​ಗೆ ತೆರಳಿ ಸಿನಿಮಾ ಪ್ರಚಾರ ಮಾಡಿದೆ. ಈ ಸಂದರ್ಭದಲ್ಲಿ ವೇದಿಕೆ ಮೇಲೆ ರಿಷಬ್ ಅವರು ಕನ್ನಡದಲ್ಲೇ ಮಾತನಾಡಿದರು ಅನ್ನೋದು ವಿಶೇಷ.

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲೆ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು :  ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ಸೆಕ್ಷನ್ 420 ಅಡಿ ಕೇಸ್ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಕೆಲ ಪುಂಡರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ, ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದಾರೆ. ಅಂತವರನ್ನು ಮಟ್ಟ ಹಾಕಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಪಶ್ಚಿಮ ವಿಭಾಗ ಒಂದರಲ್ಲೇ 40ಕ್ಕೂ ಹೆಚ್ಚು

ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ ನೀಡಿರುವ ಪತಿಯ ಮನೆಯರು, ಆಕೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆನೇಕಲ್‌ನ ನಾರಾಯಣಪುರದಲ್ಲಿ ಈ ನಡೆದಿದೆ. ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ.5 ವರ್ಷಗಳ ಹಿಂದೆ ಅರುಣ್ ಜತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗೆ 4 ವರ್ಷದ ಹೆಣ್ಣು ಮಗು ಕೂಡ ಇದೆ.

ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top