ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಸೆ.29 ಬಂಟ್ವಾಳ: ಮನೆಯಲ್ಲಿ ಮೊಬೈಲ್ ಫೋನ್ ಇಟ್ಟು ನಾಪತ್ತೆಯಾಗಿದ್ದ ಉದ್ಯಮಿಯೊಬ್ಬರು ಮಂತ್ರಾಲಯ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತಂದಿದ್ದಾರೆ.ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಸಜಿಪನಡದ ಕಂದೂರು ನಿವಾಸಿ, ಸದಾನಂದ (50) ಎಂದು ಗುರುತಿಸಲಾಗಿದೆ. ಅವರು ಕಂದೂರಿನಲ್ಲಿ ಎಸ್.ಕೆ. ಸುವರ್ಣ ಸೌಂಡ್ಸ್ ಅಂಡ್ ಲೈಟಿಂಗ್ ಅಂಗಡಿಯ ಮಾಲೀಕರಾಗಿದ್ದಾರೆ. ಸೆಪ್ಟೆಂಬರ್ 16ರಂದು ಸಂಜೆ 4:30ರ ಸುಮಾರಿಗೆ ಸದಾನಂದ ಅವರು ತಮ್ಮ ಮೊಬೈಲ್ ಫೋನ್ ಅನ್ನು ಮನೆಯ ಬಳಿ ಇರುವ ಟೆಂಪೋದಲ್ಲಿ […]

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಬೆಂಗಳೂರಿನ ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶರಧಿ ರೈ ಅವರು ಆಶಾ ದಿಲೀಪ್ ರೈ ಸುಳ್ಯ ಮೆ ದಂಪತಿ ಪುತ್ರಿ. ಅವರು ಶ್ರೀವಾಣಿ ವಿಜಯ ಹೈ ಸ್ಕೂಲ್ ಕೊಡ್ಲಮೊಗರಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.   .  

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಆರ್‌ಬಿಐ ಉಪಗವರ್ನರ್ ಆಗಿ 3 ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.. ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು, ಅದಾದ ನಂತರ  ಅ.9ರಿಂದ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆರ್‌ಬಿಐನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  

ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಮೃತಪಟ್ಟವರನ್ನು ಆನಂದ (32) ಹಾಗೂ ಅನಂತ (27) ಎಂದು ಗುರುತಿಸಲಾಗಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ಆನಂದ

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ!

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಘನಘೋರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ ಧನುಶ್ರೀ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆಯಲ್ಲಿ ಟಿಪ್ಪರ್ ಹರಿದಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮುಂಬೈ: ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕನು ತನ್ನ ಅಮ್ಮ ಪಲ್ಲವಿ ಧುಮ್ಡೆ (40) ಬಳಿ ಚಿಕನ್ ಬೇಕೆಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ

(ನ್ಯೂಸ್‌ ಕಡಬ) newskadaba.com, ಸೆ.29 :  ಸರದೇಶಪಾಂಡೆರವರು, ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಜನಪ್ರಿಯರಾಗಿದ್ದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಅವರ ನಿಧನಕ್ಕೆ ಕುಟುಂಬ ವರ್ಗ, ಅವರ ಅಭಿಮಾನಿಗಳು, ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.29 ಭೂಪಾಲ್‌ – ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಭಮ್‌ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ಇವರಿಬ್ಬರು ಪ್ರೇಮ ವಿವಾಹವಾಗಿದ್ದು, ಕೌಟುಂಬಿಕ ಕಲಹಗಳಿಂದ ಜಿಗುಪ್ಸೆಗೊಂಡಿದ್ದರು. ಬೆಳಗ್ಗೆ ಕೂಡ ಜಗಳವಾಡಿ ರೋಶ್ನಿ ಮಗುವಿನೊಂದಿಗೆ

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ.ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಬಂಧಿತ ಆರೋಪಿ. ಆರೋಪಿಯಿಂದ 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ

ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್ 2025 ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಣೆ – ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ: ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ.. ಜೊತೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ ಚಾಂಪಿಯನ್ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಪಡೆದುಕೊಂಡಿದೆ. ರನ್ನರ್ ಅಪ್ ಪಾಕ್ ತಂಡ ಕೇವಲ 1.3 ಕೋಟಿ ರೂ. ಬಹುಮಾನ ತನ್ನದಾಗಿಸಿಕೊಂಡಿದೆ. ಈ ಬಾರಿ ಏಷ್ಯಾಕಪ್ ಪಂದ್ಯದಲ್ಲಿ ಭಾರತ ತಂಡವು ಪಾಕ್ ತಂಡಕ್ಕೆ 3 ಬಾರಿ ಸೋಲುಣಿಸಿದೆ. ಮೊದಲ ಸುತ್ತಿನ

ಏಷ್ಯಾಕಪ್ 2025 ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಣೆ – ಬಿಸಿಸಿಐ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top