ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು :  ಪ್ರತಿ ವರ್ಷ ನಾಡಹಬ್ಬ ದಸರಾ ಸಮಯದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಕೆ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ. […]

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಕಾರ್ಕಳ : ಕಾರ್ಕಳದ ಕ್ರೈಸ್ಟ್‌ಕಿಂಗ್  ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು: ಸಾರಿಗೆ ನಿಗಮಗಳ ಆರ್ಥಿಕ ಸುಸ್ಥಿರತೆ ಖಚಿತಪಡಿಸಿಕೊಳ್ಳಲು ಮತ್ತು ದರ ಏರಿಕೆಯನ್ನು ರಾಜಕೀಯಗೊಳಿಸದಂತೆ ಕರ್ನಾಟಕ ಕೆಇಆರ್ ಸಿ ಮಾದರಿಯಲ್ಲಿ ರಾಜ್ಯದ ಸಾರಿಗೆ ನಿಗಮಗಳ ಬಸ್ ದರವನ್ನು ಪರಿಷ್ಕರಿಸಲು ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳ ಹೊರತಾಗಿಯೂ., ಇಲ್ಲಿಯವರೆಗೂ ಪ್ರಯಾಣ ದರ ಪರಿಷ್ಕರಣೆ ರಾಜಕೀಯ ಪರಿಗಣನೆಗಳಿಂದಾಗಿ ವಿಳಂಬವಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಡೀಸೆಲ್ ವೆಚ್ಚ ದುಪ್ಪಟ್ಟು ಆಗಿದೆ. 2014 ರಲ್ಲಿ ದಿನಕ್ಕೆ ರೂ.

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು : ದಸರಾ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

(ನ್ಯೂಸ್‌ ಕಡಬ) newskadaba.com,  ಸೆ.22 ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಸಾಹಿತಿ ಬಾನು ಮುಷ್ತಾಕ್ ಅವರು ಸೋಮವಾರ(ಸೆ.22) ಬೆಳಗ್ಗೆ ಉದ್ಘಾಟಿಸಿದರು. ಇದಕ್ಕೂ ಮೊದಲು ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಸನ್ಮಾನಿಸಿದರು. ನಾಡದೇವಿಗೆ ಬಾನು ಮುಷ್ತಾಕ್ ಅವರು ಪೂಜೆ ಸಲ್ಲಿಸಿ ಭಕ್ತಿಯಿಂದ

ಮೈಸೂರು : ದಸರಾ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ

(ನ್ಯೂಸ್‌ ಕಡಬ) newskadaba.com,  ಸೆ.22 ಮಂಗಳೂರು : ಈ ಹಿಂದೆ 2 ಪ್ರತ್ಯೇಕ ಅಪಘಾತಗಳಿಗೆ ಕಾರಣವಾಗಿ, ಮೂವರ ಸಾವಿಗೆ ಕಾರಣವಾಗಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೀಗ ಮತ್ತೊಂದು ಅಪಘಾತದಲ್ಲಿ ಭಾಗಿಯಾಗಿದ್ದು, ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಸೆಪ್ಟೆಂಬರ್ 20ರಂದು ಬಂಟ್ವಾಳ ತಾಲೂಕಿನ ಮಣಿಮೂಲೂರು ಗ್ರಾಮದ ಉಜಿರಂಡಿಪಲ್ಕೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೀಕ್ಷಿತ್ ಮತ್ತು ಧನುಷ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ, ಇದೇ ಬಸ್ ಹಿಂದೆ 2 ಪ್ರಾಣಾಂತಿಕ ಅಪಘಾತಗಳಿಗೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್,

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ಬೆಂಗಳೂರಿನ ರಸ್ತೆಗಳ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಗುಂಡಿಗಳ ಸಮಸ್ಯೆ ಇದೀಗ ಸರ್ಕಾರದ ಗಮನಸೆಳೆದಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಅಕ್ಟೋಬರ್ 31ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಗಡುವು ನೀಡಿದ್ದು, ಈ ಕಾರ್ಯಕ್ಕೆ ಹೆಚ್ಚುವರಿ ರೂ. 750 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್, Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೆ.23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ನಟ ಮೋಹನ್ ಲಾಲ್, ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ 2ನೇ

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.22 ಬಂಟ್ವಾಳ :  ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ಕದ್ದ ಆರೋಪದ ಮೇಲೆ ಕೇರಳ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಝೀರ್ ಪುನ್ನಯ್ಯಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಂದಾಪುರದ ರಂಗನಾಥ ಬೆಳ್ಳಾಲ ಅವರು ತಮ್ಮ ಕಾರನ್ನು ಮಾರಾಟ ಮಾಡಿ 1.60 ಲಕ್ಷ ರೂ. ಹಣದೊಂದಿಗೆ ಮತ್ತೊಂದು ಉಪಯೋಗಿಸಿದ ಕಾರು ಖರೀದಿಸಲು ಆಗಸ್ಟ್ 14 ರಂದು ಬಿ.ಸಿ.

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಜಿಎಸ್‌ಟಿ ಪರಿಷ್ಕರಣೆಯಾದ ಬೆನ್ನಲ್ಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆ ಮಾಡುವ ಮೂಲಕ ಕೆಎಂಎಫ್ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ಪನ್ನಿರ್

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಟಲಲ್ಲಿ ಸಿಲುಕಿದ ಚೂಯಿಂಗ್ ಗಮ್ – ಉಸಿರುಗಟ್ಟುತ್ತಿದ್ದ ಬಾಲಕಿ ಬಚಾವ್‌

(ನ್ಯೂಸ್‌ ಕಡಬ) newskadaba.com,  ಸೆ.20  ಕೇರಳ : ಕೇರಳದಲ್ಲಿ ಒಂದು ಮಾನವೀಯ ದೃಶ್ಯವೊಂದು ಸುದ್ದಿ ಸದ್ದು ಮಾಡುತ್ತಿದೆ. ಚೂಯಿಂಗ್ ಗಮ್ ಗಂಟಲಲ್ಲಿ ಸಿಕ್ಕಿಕೊಂಡು ಉಸಿರುಗಟ್ಟುತ್ತಿದ್ದ ಹುಡುಗಿಯನ್ನು  ಯುವಕರು ಸಮಯಕ್ಕೆ ಸರಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲೇ  ಪಕ್ಕದಲ್ಲಿದ್ದ  3-4 ಯುವಕರು ಗುಂಪಿನಲ್ಲಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ಸಮಯದಲ್ಲಿ ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕಿ ಚೂಯಿಂಗ್ ಗಮ್ ಚೀಪುತ್ತಾ ಹೋಗುತ್ತಿದ್ದು, ಏಕಾಏಕಿ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಆಕೆ ಉಸಿರುಗಟ್ಟುವ ಸ್ಥಿತಿಗೆ ತಲುಪಿದಳು. ತಕ್ಷಣವೇ ಆತಂಕದಿಂದ ಸಹಾಯಕ್ಕೆ ಕೂಗಿದ ಬಾಲಕಿಗೆ ಯುವಕರು ಬೆಂಬಲ

ಗಂಟಲಲ್ಲಿ ಸಿಲುಕಿದ ಚೂಯಿಂಗ್ ಗಮ್ – ಉಸಿರುಗಟ್ಟುತ್ತಿದ್ದ ಬಾಲಕಿ ಬಚಾವ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top