ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ

(ನ್ಯೂಸ್‌ ಕಡಬ) newskadaba.com,  ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ಕುಮಾರಸ್ವಾಮಿ ಲೇಔಟ್‌, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್‌ ಹಾಗೂ ರಾಮಮೂರ್ತಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್‌, 56 ಗ್ರಾಂ […]

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್‌ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಮುಂದಾಗಿದೆ. ನೇಪಾಳದ

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಏಷ್ಯಾಕಪ್ 2025 ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು: ಟಿ20 ಮಾದರಿಯಲ್ಲಿ ನಡೆಯುವ ಏಷ್ಯಾಕಪ್ 2025 ಇಂದು ಪ್ರಾರಂಭವಾಗಲಿದ್ದು, ಅದರಲ್ಲಿ ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವೆ ನಡೆಯಲಿದೆ. ಈ ಪಂದ್ಯ ಗ್ರೂಪ್ ಬಿಗೆ ಸೇರಿದ್ದು, ಇದರಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳೂ ಸೇರಿವೆ. ಇನ್ನು ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ಒಮಾನ್ ಹಾಗೂ ಯುಎಇ ತಂಡಗಳಿವೆ. ಇಂದು ನಡೆಯಲಿರುವ ಪಂದ್ಯವು ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 8 ಗಂಟೆಗೆ ಆರಂಭವಾಗಲಿದೆ.. ಇದುವರೆಗೆ

ಇಂದಿನಿಂದ ಏಷ್ಯಾಕಪ್ 2025 ಪ್ರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು : ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿಯ ಹೆಸರಘಟ್ಟದಲ್ಲಿ “ಕ್ವಾಂಟಮ್ ಸಿಟಿ (ಕ್ಯೂ-ಸಿಟಿ)” ಗಾಗಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಇದರಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳು ಮತ್ತು ಶೈಕ್ಷಣಿಕ-ಕೈಗಾರಿಕಾ ಸಹಯೋಗಕ್ಕಾಗಿ ಮೂಲಸೌಕರ್ಯಗಳು ಇರಲಿದದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ. 2035 ರ ವೇಳೆಗೆ ಕರ್ನಾಟಕವು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ದಿಟ್ಟ ಉಪಕ್ರಮಗಳ ಮೂಲಕ 20 ಬಿಲಿಯನ್ ಡಾಲರ್‌ಗಳ ಕ್ವಾಂಟಮ್ ಆರ್ಥಿಕತೆಯನ್ನು

ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ತ್ರಿಕೋನ ಪ್ರೇಮ ಸಾವಿನಲ್ಲಿ ಅಂತ್ಯ; ಚಲಿಸುತ್ತಿದ್ದ ರೈಲಿನ ಕೆಳಗೆ ತಳ್ಳಿ ಯುವಕನನ್ನು ಕೊಲೆ ಮಾಡಿದ ಗೆಳೆಯರು!

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು: ಬಳಿ 20 ವರ್ಷದ ಯುವಕನೊಬ್ಬನನ್ನು ಆತನ ಇಬ್ಬರು ಸ್ನೇಹಿತರು ಚಲಿಸುವ ರೈಲಿನಿಂದ ಮುಂದೆ ತಳ್ಳಿ ಕೊಲೆ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡನೆಕುಂಡಿಯಲ್ಲಿ ನಡೆದಿದೆ. ಮೃತನನ್ನು ವಿಜಯಪುರದ ಇಸ್ಮಾಯಿಲ್ ಪಟವೇಗರ್ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಪುನೀತ್ ಮತ್ತು ಪ್ರತಾಪ್ ಆರೋಪಿಗಳು. ಪೊಲೀಸರು ಪುನೀತ್ ಎಂಬಾತನನ್ನು ಬಂಧಿಸಿದ್ದು, ಪ್ರತಾಪ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೂವರೂ ಬೈಯಪ್ಪನಹಳ್ಳಿಯಲ್ಲಿ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಮತ್ತು ಖಾಸಗಿ ಕಂಪನಿಯೊಂದರ

ಬೆಂಗಳೂರು: ತ್ರಿಕೋನ ಪ್ರೇಮ ಸಾವಿನಲ್ಲಿ ಅಂತ್ಯ; ಚಲಿಸುತ್ತಿದ್ದ ರೈಲಿನ ಕೆಳಗೆ ತಳ್ಳಿ ಯುವಕನನ್ನು ಕೊಲೆ ಮಾಡಿದ ಗೆಳೆಯರು! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರಿನ ಸನ್ ರೂಫ್ ಮೋಜಿಗಾಗಿ ಬಳಸಿದರೆ ಜೈಲು ಶಿಕ್ಷೆ!

(ನ್ಯೂಸ್‌ ಕಡಬ) newskadaba.com ಸೆ. 09. ಕಾರಿನ ಸನ್ ರೂಫ್​ನಲ್ಲಿ ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ತಗುಲಿದ್ದ ಘಟನೆ ಸಂಬಂಧಿಸಿ ಯಲಹಂಕ ಸಂಚಾರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 125(a) ಮತ್ತು 281 ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ. ಕಾರಿನ ಸನ್ ರೂಫ್​ನಲ್ಲಿ ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ಬಡಿದಿದ್ದು, ಅದೃಷ್ಟವಶಾತ್, ಕೂದಲೆಳೆ ಅಂತರದಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದ. ಸದ್ಯ ಪ್ರಕರಣ ದಾಖಲಿಸಿರುವ ಯಲಹಂಕ ಪೊಲೀಸರು ಕಾನೂನು ರೀತಿ

ಕಾರಿನ ಸನ್ ರೂಫ್ ಮೋಜಿಗಾಗಿ ಬಳಸಿದರೆ ಜೈಲು ಶಿಕ್ಷೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ನನಗೆ ವಿಷ ನೀಡಿ’ – ನ್ಯಾಯಾಧೀಶರ ಮುಂದೆ ದರ್ಶನ್‌ ಹೈಡ್ರಾಮಾ

(ನ್ಯೂಸ್‌ ಕಡಬ) newskadaba.com ಸೆ. 09. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಠಿಣ ಪರಿಸ್ಥಿತಿಯಲ್ಲಿ ದಿನದೂಡುತ್ತಿದ್ದು ಅವರು ನ್ಯಾಯಾಧೀಶರ ಎದುರು ಮನವಿಯೊಂದನ್ನು ಸಲ್ಲಿಸಿದ್ದು, ಮನವಿ ಆಲಿಸಿದ ನ್ಯಾಯಾಧೀಶರು ಒಂದು ಕ್ಷಣ ನಿಶ್ಶಬ್ದರಾಗಿದ್ದಾರೆ. ಮತ್ತೊಮ್ಮೆ ಜೈಲಿಗೆ ಮರಳಿದ ದರ್ಶನ್ ಗೆ ಈ ಬಾರಿ ಯಾವುದೇ ವಿಶೇಷ ಸೌಲಭ್ಯ ಪಡೆಯದಂತೆ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರಿಂದ, ಅವರು ಸಾಮಾನ್ಯ ಕೈದಿಗಳಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಠಿಣ ನಿಯಮಗಳ ನಡುವೆ ಬದುಕುತ್ತಿದ್ದಾರೆ.

‘ನನಗೆ ವಿಷ ನೀಡಿ’ – ನ್ಯಾಯಾಧೀಶರ ಮುಂದೆ ದರ್ಶನ್‌ ಹೈಡ್ರಾಮಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಡ್ಯನಡ್ಕ ಒಕ್ಕೂಟದ ವತಿಯಿಂದ ಜನತಾ ಶಾಲೆಯಲ್ಲಿ ವಾರ್ಷಿಕೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಸೆ. 09. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮವು ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಧ್ಯೇಯಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಈ ವಿದ್ಯಾಸಂಸ್ಥೆಯ ಸಂಚಾಲಕಿ ಶ್ರೀಮತಿ ಡಾ.ಅಶ್ವಿನಿ ಕೃಷ್ಣಮೂರ್ತಿ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಕರ ರೈ ವಹಿಸಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀ ಚಂದ್ರಶೇಖರ್ ಇವರು ಭಾಗವಹಿಸಿದ್ದರು. ಅಪರಾಹ್ನ ನಡೆದ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಡ್ಯನಡ್ಕ ಒಕ್ಕೂಟದ ವತಿಯಿಂದ ಜನತಾ ಶಾಲೆಯಲ್ಲಿ ವಾರ್ಷಿಕೋತ್ಸವ ಆಚರಣೆ Read More »

ಕರಾವಳಿ

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಾಜಿ ಶಾಸಕನಿಗೆ 30 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು :  ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಮಾಜಿ ಶಾಸಕರನ್ನು ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ತಿಳಿಸಿದ ಖದೀಮರು, ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲು ಆಗಸ್ಟ್ 12ರಂದು

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಾಜಿ ಶಾಸಕನಿಗೆ 30 ಲಕ್ಷ ರೂ. ವಂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 09. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿ ಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬರವರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಚುನಾವಣಾ ಉಸ್ತುವಾರಿಗಳಾಗಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ಶಾಕಿರ್ ಅಳಕೆಮಜಲು, ಅಶ್ರಫ್

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ Read More »

ಕರಾವಳಿ
Scroll to Top