ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಆಸ್ಪತ್ರೆ ಸ್ಥಾನಮಾನ ನಿರಾಕರಿಸಿದ ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.04 ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಪ್ರತಿ ವರ್ಷ ಸುಮಾರು 30,000 ರೋಗಿಗಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆಸ್ಪತ್ರೆಯನ್ನು ಮೂಲಸೌಕರ್ಯಗಳ ವಿಷಯದಲ್ಲಿ ಈಗಾಗಲೇ ಮೇಲ್ದರ್ಜೆಗೇರಿಸಲಾಗಿದೆ, ಮತ್ತು ನೆರೆಯ ಜಿಲ್ಲೆಗಳಿಗೆ ಸೇವೆ ಸಲ್ಲಿಸಲು ಇದನ್ನು ಪ್ರಾದೇಶಿಕ ಆಸ್ಪತ್ರೆ ಎಂದು ಘೋಷಿಸಬೇಕೆಂಬ ನಿರಂತರ ಬೇಡಿಕೆ ಕೇಳಿಬಂದಿತ್ತು. ಆದರೆ, ಒಂದು ಜಿಲ್ಲಾ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಪರಿವರ್ತಿಸಲು ಯಾವುದೇ ಮಾರ್ಗಸೂಚಿಗಳು ಇಲ್ಲ ಎಂದು ರಾಜ್ಯ […]

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಆಸ್ಪತ್ರೆ ಸ್ಥಾನಮಾನ ನಿರಾಕರಿಸಿದ ರಾಜ್ಯ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು ಹೊದಿಸಿ, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ಯೂಷನ್‌ ಬದಲು ಗೋಬಿ ತಿನ್ನಲು ಹೋದ ಬಾಲಕ; ಎಲ್ಲಿಗೆ ಹೋಗಿದ್ದೆ ಅಂತ ಅಪ್ಪ ಕೇಳಿದ್ದಕ್ಕೆ ಕಿಡ್ನಾಪ್ ಕಥೆ ಕಟ್ಟಿದ ಮಗ!

(ನ್ಯೂಸ್‌ ಕಡಬ) newskadaba.com,  ಸೆ.04 ಚಾಮರಾಜನಗರ  : ಜಿಲ್ಲಾ ಕೇಂದ್ರ ಚಾಮರಾಜನಗರ ಪಟ್ಟಣದಲ್ಲಿ ನಡೆದ ಘಟನೆ ಎಲ್ಲರನ್ನೂ ಆಶ್ಚರ್ಯಕ್ಕೆ ಗುರಿಮಾಡಿದೆ. ಕೇವಲ 10 ವರ್ಷದ ಬಾಲಕನೊಬ್ಬ, ಟ್ಯೂಷನ್‌ಗೆ ಹೋಗುವುದರ ಬದಲು ಗೋಬಿ ತಿನ್ನಲು ಹೋಗಿದ್ದಕ್ಕಾಗಿ ಮನೆಯವರಿಗೆ ಮತ್ತು ಪೊಲೀಸರಿಗೆ ಸುಳ್ಳು ಕಿಡ್ನಾಪ್ ಕಥೆ ಕಟ್ಟಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಹೀಗಿದೆ: ಮನೆಗೆ ಬಂದು ಬಾಲಕ, ‘ನನ್ನನ್ನು ಅಪರಿಚಿತರು ಕಿಡ್ನಾಪ್ ಮಾಡಿ ಇದೀಗ ಬಂದು ಬಿಟ್ಟು ಹೋಗಿದ್ದಾರೆ’ ಎಂದು ಹೇಳಿದ್ದಾನೆ. ಪೋಷಕರು ಮಗನ ಮಾತು ನಂಬಿ ತಕ್ಷಣವೇ ಪೊಲೀಸರಿಗೆ

ಟ್ಯೂಷನ್‌ ಬದಲು ಗೋಬಿ ತಿನ್ನಲು ಹೋದ ಬಾಲಕ; ಎಲ್ಲಿಗೆ ಹೋಗಿದ್ದೆ ಅಂತ ಅಪ್ಪ ಕೇಳಿದ್ದಕ್ಕೆ ಕಿಡ್ನಾಪ್ ಕಥೆ ಕಟ್ಟಿದ ಮಗ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.04 ನವದೆಹಲಿ: ದೇಶದ ಅರ್ಥ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯಲ್ಲಿ, ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ. ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. “ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಇನ್ನು ಮುಂದೆ

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

(ನ್ಯೂಸ್‌ ಕಡಬ) newskadaba.com,  ಸೆ.04 ಮಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗಾಗಿ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಕನ್ನಡ ಪುಸ್ತಕಗಳನ್ನು ಎಡನೀರು ಮಠದಲ್ಲಿ ಬುಧವಾರ ರಾತ್ರಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಪ್ರೊ. ಕೆ.ಸಿ ಶಿವಪ್ಪಅವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಹೊರನಾಡು ಗಡಿ ಕನ್ನಡಿಗರ ಶೈಕ್ಷಣಿಕ ಮತ್ತು ಔದ್ಯೋಗಿಕ

ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ

(ನ್ಯೂಸ್‌ ಕಡಬ) newskadaba.com,  ಸೆ. 4 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್  ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು  ತಮ್ಮ ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ ʼಕೊತ್ತಲವಾಡಿʼ ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಸೆಪ್ಟೆಂಬರ್ 5 ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ನಲ್ಲೂ ವೀಕ್ಷಿಸಬಹುದಾಗಿದೆ ʼಕೊತ್ತಲವಾಡಿʼ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.04 ಮಲ್ಪೆ:  ಮಲ್ಪೆ ಬಂದರಿನ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಲಕ್ಷ್ಮೀ ಎಂಬವರ ಮಗ ಲೊಕೇಶ (36) ಎಂದು ಗುರುತಿಸಲಾಗಿದೆ. ಶಾಂತಿ ಎಂಬವರ ಜಲ ರಕ್ಷಾ ಹೆಸರಿನ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಸೆ.1ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳುವಾಗ ಬೋಟಿನ ಬಲೆಯನ್ನು ಬಿಡಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಕೂಡಲೇ ಅವರನ್ನು

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೌರ ವಿದ್ಯುತ್ ಸ್ಥಾವರ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಮುಂಬೈ: ನಾಗ್ಪುರದ ಕಲ್ಮೇಶ್ವರ ತೆಹಸಿಲ್‌ನ ಬಜಾರ್ ಗ್ರಾಮದ ಬಳಿಯ ಚಂದೂರ್ ಗ್ರಾಮದ ಬಳಿ ಇರುವ ಸೌರ ಸ್ಥಾವರದಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ. ಸೆಪ್ಟೆಂಬರ್ 4 (ಗುರುವಾರ) ಬೆಳಗಿನ ಜಾವ 1:00 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ ಬಜಾರ್‌ಗಾಂವ್‌ನಲ್ಲಿರುವ ಸೌರ ಸ್ಫೋಟಕಗಳ ಆರ್‌ಡಿಎಕ್ಸ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಕಂಪನಿಯಲ್ಲಿ 900 ರಿಂದ 6,000

ಸೌರ ವಿದ್ಯುತ್ ಸ್ಥಾವರ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು- ಟ್ರಕ್‌ ನಡುವೆ ಭೀಕರ ಅಪಘಾತ; ಐವರು ಉದ್ಯಮಿಗಳು ಸ್ಥಳದಲ್ಲಿಯೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.04 ಪಾಟನಾ: ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿಯ ಪಾಟ್ನಾ-ಗಯಾ-ದೋಭಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 83 ರಲ್ಲಿ ಗುರುವಾರ ನಡೆದ ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ದಾರುಣವಾಗಿ ಅಂತ್ಯ ಕಂಡಿದ್ದಾರೆ. ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಉದ್ಯಮಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತವು ಬೆಳಗಿನ ಜಾವ 12.45 ರ ಸುಮಾರಿಗೆ ಸಂಭವಿಸಿದ್ದು, ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ ಕಾರಿನ ಮುಂಭಾಗವು ಟ್ರಕ್‌ಗೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರು- ಟ್ರಕ್‌ ನಡುವೆ ಭೀಕರ ಅಪಘಾತ; ಐವರು ಉದ್ಯಮಿಗಳು ಸ್ಥಳದಲ್ಲಿಯೇ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top