ಹಾವು ಕಡಿತ ಔಷಧಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ

(ನ್ಯೂಸ್ ಕಡಬ) newskadaba.com ಜು. 21. ಹಾವು ಕಡಿತಕ್ಕೆ ಈ ಔಷಧಿ ಲಭ್ಯವಿದೆ ಎಂಬ ಶೀರ್ಷಿಕೆಯಡಿಯಲ್ಲಿ Snake Venom Antiserum ಎಂಬ ಲಸಿಕೆಯ ಫೋಟೋದೊಂದಿಗೆ, “ನಿಮ್ಮಲ್ಲಿ ಯಾರಿಗಾದರೂ ಹಾವು ಕಚ್ಚಿದರೆ 108 ಕ್ಕೆ ಕರೆ ಮಾಡಿ ಅವರು ನಿಮ್ಮ ಮನೆಗೆ ಬಂದು ಈ ಇಂಜೆಕ್ಷನ್ ನೀಡುತ್ತಾರೆ. ನೀವು ಅಪಾಯದಿಂದ ಪಾರಾಗುತ್ತೀರಿ. ಈ ಮಾಹಿತಿಗಳನ್ನು ಎಲ್ಲಾ ಗುಂಪುಗಳಿಗೆ ಹಂಚಿಕೊಳ್ಳಿ” ಎಂಬ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗುತ್ತಿದೆ. ಈ ವರದಿ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನಸಾಮಾನ್ಯರಿಗೆ ನೀಡುತ್ತಿದೆ, […]

ಹಾವು ಕಡಿತ ಔಷಧಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ Read More »

ಕರ್ನಾಟಕ

ಪಿಂಚಣಿ ಸಣ್ಣ ಉಳಿತಾಯ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಜು. 21. ನಗರದ ಹಂಪನಕಟ್ಟೆ ಜನತಾ ಬಜಾರ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಪಡೀಲ್ “ಪ್ರಜಾ ಸೌಧ” ಜಿಲ್ಲಾಡಳಿತ ಕೇಂದ್ರದ  2 ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪಿಂಚಣಿ ಸಣ್ಣ ಉಳಿತಾಯ ಕಚೇರಿ ಸ್ಥಳಾಂತರ Read More »

ಕರಾವಳಿ

ಎಸ್.ಐ.ಆರ್: ಜಿಲ್ಲೆಯಲ್ಲಿ 9.93 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 21. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 19 ರ ವರೆಗೆ 18,03,575 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 9,93,147 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-143697, ಮೂಡಬಿದ್ರೆ-125028, ಮಂಗಳೂರು ನಗರ ಉತ್ತರ-126346, ಮಂಗಳೂರು ನಗರ ದಕ್ಷಿಣ-128809, ಮಂಗಳೂರು-155497, ಬಂಟ್ವಾಳ-128708, ಪುತ್ತೂರು-133645, ಸುಳ್ಯ-147770.

ಎಸ್.ಐ.ಆರ್: ಜಿಲ್ಲೆಯಲ್ಲಿ 9.93 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 21. ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ  ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಆಸಕ್ತಿ ಹಾಗೂ ಸ್ಫೂರ್ತಿಯನ್ನು ಹೆಚ್ಚಿಸಿದೆ ಎಂದು ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್ ಹೇಳಿದರು. ಅವರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಯುವ ವಿಜ್ಞಾನಿಗಳಾದ ನೀವೆಲ್ಲರೂ ಸ್ಪಷ್ಟವಾದ

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 21. 2026-27ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು, ವಿವಿಧ ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಕಲವ್ಯ ಪ್ರಶಸ್ತಿ-2025, ಜೀವಮಾನ ಸಾಧನೆ ಪ್ರಶಸ್ತಿ -2025, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-2025, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2025, ಗುರಿ-ಒಲಂಪಿಕ್ ಪದಕ- 2026-27, ನಗದು ಪುರಸ್ಕಾರ- 2025, ಶೈಕ್ಷಣಿಕ ಶುಲ್ಕ ಮರು ಪಾವತಿ- 2026-27, ಕ್ರೀಡಾ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ Read More »

ಕರಾವಳಿ

ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಜುಲೈ 24ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜು. 21. ಭಾರತೀಯ ಹಜ್ ಕಮಿಟಿಯು ಹಜ್ 2027 ಯಾತ್ರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 24, 2026ರ ರಾತ್ರಿ 11:59ರವರೆಗೆ ವಿಸ್ತರಿಸಿದೆ. ಇದರ ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಿವಿಧ ರಾಜ್ಯ ಹಜ್ ಸಮಿತಿಗಳ ವಿನಂತಿ, ಕೋಟಾ ಪೂರ್ಣಗೊಳ್ಳದಿರುವುದು ಹಾಗೂ ಪಾಸ್‌ಪೋರ್ಟ್ ವಿಳಂಬದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಯಾತ್ರಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಹಜ್ ಸಮಿತಿ ಸದಸ್ಯ ಶರಫ್ಫುಸ್ಸಾದಾತ್

ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಜುಲೈ 24ರ ವರೆಗೆ ಅವಧಿ ವಿಸ್ತರಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

​B.Sc ನರ್ಸಿಂಗ್ ಮತ್ತು GNM ಮುಗಿದಿದೆಯೇ? 400 ಸ್ಟಾಫ್ ನರ್ಸ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಜು. 21. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಟಾಫ್ ನರ್ಸ್ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ. ​ನೇಮಕಾತಿ ವಿವರಗಳು ​ಇಲಾಖೆ: ಕರ್ನಾಟಕ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು. ​ಹುದ್ದೆಯ ಹೆಸರು: ಸ್ಟಾಫ್ ನರ್ಸ್ / ನರ್ಸಿಂಗ್ ಆಫೀಸರ್ (Staff Nurse / Nursing Officer) ​ಒಟ್ಟು ಹುದ್ದೆಗಳು: 400 ​ಅರ್ಜಿ ಅವಧಿ: 1 ತಿಂಗಳು ​ಗರಿಷ್ಠ ವಯೋಮಿತಿ: 45 ವರ್ಷಗಳು ​ವಿದ್ಯಾರ್ಹತೆ: B.Sc

​B.Sc ನರ್ಸಿಂಗ್ ಮತ್ತು GNM ಮುಗಿದಿದೆಯೇ? 400 ಸ್ಟಾಫ್ ನರ್ಸ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಎಸ್.ಸಿ/ಎಸ್.ಟಿ ಪದವೀಧರರಿಗೆ ಡಿಜಿಟಲ್ ಮಾಧ್ಯಮ ಸ್ಥಾಪಿಸಲು ಧನ ಸಹಾಯ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 21. ಪತ್ರಿಕೋದ್ಯಮ ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿಯನ್ನು ಪಡೆಯಲು ಉರ್ವಸ್ಟೋರ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ (ದೂರವಾಣಿ ಸಂಖ್ಯೆ: 0824-2451237 & 9480843030) ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ

ಎಸ್.ಸಿ/ಎಸ್.ಟಿ ಪದವೀಧರರಿಗೆ ಡಿಜಿಟಲ್ ಮಾಧ್ಯಮ ಸ್ಥಾಪಿಸಲು ಧನ ಸಹಾಯ- ಅರ್ಜಿ ಆಹ್ವಾನ Read More »

ಕರಾವಳಿ

ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ

(ನ್ಯೂಸ್ ಕಡಬ) newskadaba.com ಜು. 21. ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಅದರಂತೆ ರೂರಲ್ ರಿಸೋರ್ಸಸ್ ಡೆವಲಪ್‍ ಮೆಂಟ್

ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ Read More »

ಕರಾವಳಿ

ತಮ್ಮನ ಕೊಲೆ ಮಾಡಿ ಪೊದೆಯಲ್ಲಿ ಅಡಗಿದ್ದ ಅಣ್ಣ

(ನ್ಯೂಸ್‌ ಕಡಬ) newskadaba.com,  ಜು .21 ಮಂಗಳೂರು: ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವಿಚಾರಕ್ಕೆ ಉಂಟಾದ ಜಗಳದಿಂದಾಗಿ ಮಲಗಿದ್ದ ಸ್ವಂತ ತಮ್ಮನನ್ನೇ ಕೊಡಲಿಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಮೂಲದ, ಪ್ರಸ್ತುತ ಮಂಗಳೂರಿನ ಚೊಕ್ಕಬೆಟ್ಟು ನಿವಾಸಿ ಸೋಮನಾಥ (21) ಎಂದು ಗುರುತಿಸಲಾಗಿದೆ. ಜುಲೈ 19ರಂದು ರಾತ್ರಿ ಸುಮಾರು 11:00 ಗಂಟೆಗೆ ಕಿರಿಯ ಸಹೋದರ ಮಲ್ಲಿಕಾರ್ಜುನ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಅಣ್ಣ ಸೋಮನಾಥ ಅದನ್ನು ವಿರೋಧಿಸಿದ್ದಾನೆ. ಈ

ತಮ್ಮನ ಕೊಲೆ ಮಾಡಿ ಪೊದೆಯಲ್ಲಿ ಅಡಗಿದ್ದ ಅಣ್ಣ Read More »

ಕರಾವಳಿ
Scroll to Top