ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 01. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 01 ಮತ್ತು ಸೆ. 4ರಿಂದ ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನ ಎಚ್ಚರಿಕೆ ನೀಡಲಾಗಿದ್ದು, ಸೆ. 2 ಮತ್ತು ಸೆ.3ಕ್ಕೆ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ […]

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಸು ಇಳಿಕೆಯತ್ತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ

ತುಸು ಇಳಿಕೆಯತ್ತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ..! Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಹನ ಸವಾರರಿಗೆ ಬಿಗ್ ಶಾಕ್ ಎನ್ನುವಂತೆ ನಿನ್ನೆ ಮಧ್ಯರಾತ್ರಿಯಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ದರ ಏರಿಕೆಯಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಈ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಟೋಲ್ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿತ್ತು. ಅದರಂತೆ ಇಂದು ಮಧ್ಯರಾತ್ರಿಯಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್-75ರಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಿದೆ. ಹೀಗಾಗಿ ಲಘು ವಾಹನಗಳಿಗೆ ರೂ.10

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ..! Read More »

ಕರ್ನಾಟಕ

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೀನಾದ ಟಿಯಾಂಜಿನ್‌ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮಾತನಾಡಿದರು. ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು. ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ 8 ಮಾತ್ರೆಗಳನ್ನು ಉಪಯೋಗಿಸದಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಸೆ. 01. ಉತ್ತಮ ಗುಣಮಟ್ಟವಲ್ಲವೆಂದು 8 ಮಾತ್ರೆಗಳನ್ನು ಉಪಯೋಗಿಸಬಾರದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಕಟನೆ ಹೊರಡಿಸಿದೆ. ವರದಿಯ ಪ್ರಕಾರ, ಹೆಲ್ತಿ ಲೈಫ್ ಫಾರ್ಮಾ ಪ್ರೈ. ಲಿಮಿಟೆಡ್‍ ನ ಕ್ಯಾಲ್ಸಿಯಂ ಅಂಡ್ ವಿಟಮಿನ್ ಡಿ3 ಟ್ಯಾಬ್ಲೆಟ್ಸ್ ಐಪಿ, ಭವ್ಯ ಇಂಡಸ್ಟ್ರೀಸ್‍ ನ ಆಕ್ಟಿವ್ ಅಲೂವೆರಾ ಮತ್ತು ನಿಮ್ ಸೋಪ್, ರಾಜ್‍ದೀಪ್ ಫಾರ್ಮಸ್ಯೂಟಿಕಲ್ಸ್‌ ಲೈಫೋಜೆಸಿಕ್, ಮೈಕ್ರೋ ಫಾರ್‌ ಮುಲೇಷನ್ಸ್‌ ನ ಅಮೋಕ್ಸಿಲಿನ್ ಮತ್ತು ಪೋಟ್ಯಾಷಿಯಂ ಕ್ಲಾವುಲನೇಟ್ ಟ್ಯಾಬ್ಲೆಟ್ಸ್ ಐಪಿ, ಫಾರ್ಮಾಕೇರ್‌

ಈ 8 ಮಾತ್ರೆಗಳನ್ನು ಉಪಯೋಗಿಸದಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನಾಭರಣ ಪ್ರಿಯರಿಗೆ ಬಿಗ್‌ ಶಾಕ್; ತಲೆ ಗಿರ್ ಅನ್ನುವಷ್ಟು ಏರಿಕೆಯಾದ ಬೆಲೆ

(ನ್ಯೂಸ್‌ ಕಡಬ) newskadaba.com ಸೆ.01. ಇಂದು ಬೆಳಗ್ಗೆಯಷ್ಟೇ ಜನರಿಗೆ ಎಲ್‌ಪಿಜಿ ದರ ಇಳಿಕೆಯ ಗುಡ್‌ ನ್ಯೂಸ್ ಸಿಕ್ಕಿತ್ತು. ಇದೀಗ ಇದರ ಬೆನ್ನಲ್ಲೇ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ತಲೆ ಗಿರ್ ಅನ್ನುವಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ. ಚಿನ್ನವನ್ನು ಸುರಕ್ಷಿತ ಹೂಡಿಕೆ ಮತ್ತು ಆಪತ್ಕಾಲದ ನೆಂಟ ಎಂದು ಕರೆಯಲಾಗುತ್ತದೆ. ಈ ಹಿನ್ನೆಲೆ ದರ ಎಷ್ಟೇ ಏರಿಕೆಯಾದ್ರೂ ಚಿನ್ನದ ಬೇಡಿಕೆ ಮಾತ್ರ ಕಡಿಮೆಯಾಗಲಿಲ್ಲ. ಇತ್ತೀಚಿನ ದಿನಗಳಲ್ಲಿ ಚಿನ್ನದ ಜೊತೆ ಬೆಳ್ಳಿ ಮೇಲಿನ ಹೂಡಿಕೆಯೂ ಹೆಚ್ಚಾಗುತ್ತಿದೆ. ದೇಶದಲ್ಲಿಂದು 22 ಕ್ಯಾರಟ್ ಚಿನ್ನದ

ಚಿನ್ನಾಭರಣ ಪ್ರಿಯರಿಗೆ ಬಿಗ್‌ ಶಾಕ್; ತಲೆ ಗಿರ್ ಅನ್ನುವಷ್ಟು ಏರಿಕೆಯಾದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

(ನ್ಯೂಸ್‌ ಕಡಬ) newskadaba.com ಸೆ. 01. ಊಟ ಮಾಡುತ್ತಿದ್ದ ಸಂದರ್ಭ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಮೃತ ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, ಅಮಿತ್ ಮಾಳಸೇರ್ (38 )ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಅಮಿತ್ ಎಂದಿನಂತೆ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಮೃತ್ಯು, ಐದು ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com ಸೆ.01. ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟು, ಐದು ಮಂದಿ ಗಾಯಗೊಂಡಿರುವ ಘಟನೆ ಲಕ್ನೋದ ಗುಡಂಬಾದ ಮೆಹ್ತಾ ಪ್ರದೇಶದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಗುಡಂಬಾದ ಬೆಹ್ತಾ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐದು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ಉತ್ತರ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಮೃತ್ಯು, ಐದು ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top