ನಾಳೆ‌(ಆ. 29) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ‌ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಹವಾಮಾನ ಇಲಾಖೆಯು ದ.ಕ. ಜಿಲ್ಲೆಗೆ ಆಗಸ್ಟ್ 29ರಂದು ರೆಡ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ‌(ಆ. 29) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ‌ ಘೋಷಣೆ Read More »

ಕರಾವಳಿ

ಜಮ್ಮು: 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ..!

(ನ್ಯೂಸ್‌ ಕಡಬ) newskadaba.com, ಆ.28  ಶ್ರೀನಗರ:  ಜಮ್ಮುವಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 380 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಹಲವು ಕಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮುವಿನಲ್ಲಿ ನಿನ್ನೆ ದಾಖಲೆಯ 380 ಮಿ.ಮೀ ಮಳೆಯಾಗಿದೆ ಎಂದು ಎಂಇಟಿ ಕಾಶ್ಮೀರ ನಿರ್ದೇಶಕ ಡಾ. ಮುಖ್ತಾರ್ ಅಹ್ಮದ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ತಿಳಿಸಿದ್ದಾರೆ. “1988 ರಲ್ಲಿ ಜಮ್ಮುವಿನಲ್ಲಿ ದಾಖಲಾಗಿದ್ದ 270 ಮಿ.ಮೀ ಮಳೆಯ ಹಿಂದಿನ ದಾಖಲೆಯನ್ನು ಇದು ಮುರಿದಿದೆ. ಇದು ಜಮ್ಮುವಿನಲ್ಲಿ 24

ಜಮ್ಮು: 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಹಬ್ಬಕ್ಕೆ ತುಳು ಸಿನಿಮಾ ‘ಪಿಚ್ಚರ್’ ಟೈಟಲ್ ಪೋಸ್ಟರ್ ರಿಲೀಸ್

(ನ್ಯೂಸ್‌ ಕಡಬ) newskadaba.com, ಆ.28: ಗಣೇಶ ಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಮೂವೀಸ್ ಕಡೆಯಿಂದ ಬಿಗ್‌ ಅಪ್‌ಡೇಟ್‌ ಲಭಿಸಿದೆ.  ತುಳು ಮೂವಿ ನಿರ್ಮಾಣಕ್ಕೆ ಸಜ್ಜಾಗಿರುವ ಗೋಲ್ಡನ್‌ ಮೂವೀಸ್‌ ತಂಡ ಇದೀಗ ಗಣೇಶ ಚತುರ್ಥಿಯ ದಿನದಂದು ಟೈಟಲ್‌ ಪೋಸ್ಟರ್‌ ಹಂಚಿಕೊಂಡು ಸಂಭ್ರಮಿಸಿದೆ. ಪ್ರೊ ಡಕ್ಶನ್‌ ನಂಬರ್‌ ವನ್‌ ಎಂದು ತಾತ್ಕಾಲಿಕ ಶೀರ್ಷಿಕೆ ನೀಡಿದ್ದ ಚಿತ್ರಕ್ಕೆ ಪಿಚ್ಚರ್‌ ಎಂಬ ಶೀರ್ಷಿಕೆ ನೀಡಿ ಸಮಾಜಿಕ ಜಾಲತಾಣದಲ್ಲಿ ಟೈಟಲ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ನೇತೃತ್ವದ ಗೋಲ್ಡನ್ ಮೂವೀಸ್ ಇದೀಗ ತುಳು ಸಿನಿಮಾ ನಿರ್ಮಾಣಕ್ಕಿಳಿದಿದೆ.

ಗಣೇಶ ಹಬ್ಬಕ್ಕೆ ತುಳು ಸಿನಿಮಾ ‘ಪಿಚ್ಚರ್’ ಟೈಟಲ್ ಪೋಸ್ಟರ್ ರಿಲೀಸ್ Read More »

ಕರಾವಳಿ, ಸಿನಿಮಾ

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

(ನ್ಯೂಸ್‌ ಕಡಬ) newskadaba.com, ಆ.28: ನವದೆಹಲಿ: ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕೆಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಒತ್ತಾಯಿಸಿದ್ದು, ಇಡೀ ದೇಶ ಈ ನಿರ್ಧಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲಿನ ಶೇಕಡಾ 11 ರಷ್ಟು ಸುಂಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಇದು ಇಲ್ಲಿನ ಸ್ಥಳೀಯ ರೈತರ ವ್ಯವಹಾರದ ಮೇಲೆ

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ!

(ನ್ಯೂಸ್‌ ಕಡಬ) newskadaba.com, ಆ.28: ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ (Pranam Devaraj) ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಕನ್ನಡ ಸಿನಿಮಾಸಕ್ತರು ಉಪಸ್ಥಿತರಿದ್ದರು. ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರ ಆಗಸ್ಟ್ 22

‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ! Read More »

ಕರ್ನಾಟಕ, ಸಿನಿಮಾ

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..!

(ನ್ಯೂಸ್ ಕಡಬ) newskadaba.com ಆ. 28. ಕಳೆದ ವರ್ಷವಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ, ಆದರೆ ವಿವಿಧ ಲೀಗ್‌ಗಳ ಸುತ್ತಲಿನ ಆಟದ ಅನ್ವೇಷಣೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಈವರೆಗಿನ ಅದ್ಭುತ ನೆನಪುಗಳು ಮತ್ತು ಸಂಬಂಧಗಳಿಗಾಗಿ

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..! Read More »

ಕ್ರೀಡಾ ನ್ಯೂಸ್

ಮಂಗಳೂರು: ದ.ಕ. ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ವಕೀಲ ಸುನೀತ್ ಆರ್ ಡಿ’ಸಾ ಕುಲಶೇಖರ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ಕುಲಶೇಖರ್‌ನ ವಕೀಲ ಸುನೀತ್ ಆರ್ ಡಿ’ಸಾ ಅವರು ದಕ್ಷಿಣ ಕನ್ನಡ (ದ.ಕ.) ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕುಲಶೇಖರ ಮೂಲದವರಾದ ಡಿ’ಸಾ ಅವರು ತಮ್ಮ ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಹೊಂದಿದ್ದರು. ಕಾಲೇಜು ವಿದ್ಯಾರ್ಥಿ ಒಕ್ಕೂಟ, ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್‌ನಲ್ಲಿ ವಿವಿಧ ಸ್ಥಾನಗಳನ್ನು ನಿರ್ವಹಿಸಿದ್ದಾರೆ. ಸುನೀತ್ ಆರ್ ಡಿ’ಸಾ ಅವರು ಕಳೆದ 16 ವರ್ಷಗಳಿಂದ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ನೊಂದಿಗೆ ಸಂಬಂಧ

ಮಂಗಳೂರು: ದ.ಕ. ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ವಕೀಲ ಸುನೀತ್ ಆರ್ ಡಿ’ಸಾ ಕುಲಶೇಖರ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಣಾಜೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ಪ್ರಥಮ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರಶ್ಮಿ ವಿದ್ಯಾಲಯ ಸವಣೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಡ್ಯ ಕೊಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿರುತ್ತಾಳೆ. ಇವಳು ಕೊಣಾಜೆ ರಾಮಣ್ಣ ಆಚಾರಿ ಮತ್ತು ಪ್ರೇಮಲತಾ ದಂಪತಿ ಪುತ್ರಿ.

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಣಾಜೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ಪ್ರಥಮ Read More »

ಕ್ರೀಡಾ ನ್ಯೂಸ್

ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ   ಬಂಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರ್ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲೆ  ಮಾಡಲಾಗಿದೆ. ಗುರೆಜ್ ವಲಯದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜೆಕೆಪಿ ನೀಡಿದ ಗುಪ್ತಚರ ಮಾಹಿತಿಯ ಆಧಾರದ

ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.28: ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top