ರಾಜ್ಯದಲ್ಲಿ 18 ದಿನ ದಸರಾ ರಜೆ- ಯಾವಾಗ ತಿಳಿಯಬೇಕೇ..??

(ನ್ಯೂಸ್ ಕಡಬ) newskadaba.com ಆ. 28. ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ಭರ್ಜರಿ ರಜೆ ಸಿಗಲಿದೆ. ಈಗಾಗಲೇ ರಾಜ್ಯ ಶಿಕ್ಷಣ ಇಲಾಖೆ ದಸರಾ ರಜೆ ಪಟ್ಟಿ ಘೋಷಿಸಿದ್ದು, ಶಾಲಾ ಮಕ್ಕಳಿಗೆ ದಸರಾ ರಜೆ ಭಾರೀ ಖುಷಿ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2025ರ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು 18 ದಿನಗಳು ಇರಲಿವೆ. ಸಾಮಾನ್ಯವಾಗಿ ದಸರಾ ಹಬ್ಬದ […]

ರಾಜ್ಯದಲ್ಲಿ 18 ದಿನ ದಸರಾ ರಜೆ- ಯಾವಾಗ ತಿಳಿಯಬೇಕೇ..?? Read More »

ಕರ್ನಾಟಕ

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಜಮ್ಮು–ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್‌ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ. ಉಗ್ರರ ನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಹಾಗೂ ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌ Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ತಮ್ಮ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ

(ನ್ಯೂಸ್‌ ಕಡಬ) newskadaba.com, ಆ.28  ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 11 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ ದೇರಾಜೆ ಬಸ್

ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಮುಖ್ಯ ವೈದ್ಯರ ನಂತರ ಆರೋಗ್ಯ ಅಧಿಕಾರಿಯನ್ನು ಭೇಟಿಯಾದ ಎಸ್ಡಿಪಿಐ ನಿಯೋಗ

(ನ್ಯೂಸ್ ಕಡಬ) newskadaba.com ಆ. 28. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ|| ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿತು.   ನಿಯೋಗದಲ್ಲಿ SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಹಾಗೂ

ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಮುಖ್ಯ ವೈದ್ಯರ ನಂತರ ಆರೋಗ್ಯ ಅಧಿಕಾರಿಯನ್ನು ಭೇಟಿಯಾದ ಎಸ್ಡಿಪಿಐ ನಿಯೋಗ Read More »

ಕರಾವಳಿ

ಸಾಲ ಬಾಧೆಯಿಂದ ಮಗುವಿಗೆ ವಿಷಪ್ರಾಶನ ಮಾಡಿ ದಂಪತಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಸಾಲ ಬಾಧೆಯಿಂದ ಬಳಲುತ್ತಿದ್ದ ದಂಪತಿಯು ತಮ್ಮ 4 ತಿಂಗಳ ಮಗುವಿಗೆ ವಿಷಪ್ರಾಶನ ಮಾಡಿ ಕೊನೆಗೆ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ವರದಿಯಾಗಿದೆ. ಆ.27ರಂದು ಬೆಳಗ್ಗೆ ಮೂವರ ಶವಗಳು ಪ್ರತ್ಯೇಕ ಕೋಣೆಗಳಲ್ಲಿ ಕಂಡುಬಂದಿವೆ. ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಸಾಲದ ಸುಳಿಯಲ್ಲಿ ಸಿಲುಕಿದ್ದರು. ಈ ದಂಪತಿಗೆ ನಾಲ್ಕು ತಿಂಗಳ ಗಂಡು ಮಗು ಕೂಡ ಇತ್ತು. ಘಟನಾ ಸ್ಥಳದಲ್ಲಿ

ಸಾಲ ಬಾಧೆಯಿಂದ ಮಗುವಿಗೆ ವಿಷಪ್ರಾಶನ ಮಾಡಿ ದಂಪತಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. 1,500ನೇ ವರ್ಷದ ಮೀಲಾದ್ ಕಾರ್ಯಕ್ರಮದ ಪ್ರಯುಕ್ತ ಸುನ್ನೀ ಮೇನೇಜ್ಮೆಂಟ್ ಅಸೋಸಿಯೇಷನ್ (ಎಸ್.ಎಂ.ಎ) ಬೈತಡ್ಕ ರೀಜನಲ್ ವತಿಯಿಂದ ಮೊಹಲ್ಲಾ ಸಂಗಮ ಕಾರ್ಯಕ್ರಮವು ಮಂಗಳವಾರ ರಾತ್ರಿ ಬೈತಡ್ಕ ಮದ್ರಸ ಸಭಾಂಗಣದಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿರವರ ಅಧ್ಯಕ್ಷತೆಯಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ಮಷಿ ಹಾಗೂ ಕಲಂ ಬಳಸಿ ಬರಹ ಮೂಲಕ ಹೃಸ್ವ ಅವಧಿಯಲ್ಲಿ ಪರಿಶುದ್ಧ ಕುರ್‌ಆನ್ ನ 30 ಕಾಂಡ ಬರೆದು ಅದ್ಭುತ ಸಾಧನೆ ಮಾಡಲು ತನ್ನ ಮಗಳಾದ ಸಜ್‌ಲ

SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ 8ನೇ ತರಗತಿಯ ಲಿಖಿತ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪೂಜನ್ ಡಿ.ಆರ್ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ಸ್ ಸ್ಪರ್ಧೆಯಲ್ಲಿ 9ನೇ ತರಗತಿಯ ದಿಗಂತ್ ಪ್ರಥಮ ಸ್ಥಾನ, ಅಥ್ಲೆಟಿಕ್ಸ್

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

IPL 2026: ಕೆಎಲ್‌ ರಾಹುಲ್‌ ಖರೀದಿಗೆ ಮುಂದಾದ ಕೋಲ್ಕತ್ತಾ..!

(ನ್ಯೂಸ್‌ ಕಡಬ) newskadaba.com, ಆ.28:‌‌ ಮುಂದಿನ ಸೀಸನ್‌ಗಾಗಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ಫ್ರಾಂಚೈಸಿ ಹೊಸ ನಾಯಕನ ಹುಡುಕಾಟದಲ್ಲಿದೆ. ಹಾಗಾಗಿ ಕೋಲ್ಕತ್ತಾ ಕೆಎಲ್‌ ರಾಹುಲ್‌ ಅವರನ್ನು ಟ್ರೇಡ್‌ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್‌ ಜೊತೆ ಮಾತುಕತೆ ಮುಂದುವರೆಸಿದೆ ಎಂದು ವರದಿಯಾಗಿದೆ. ಕಳೆದ ಸೀಸನ್‌ನಲ್ಲಿ ಅಂಜಿಕ್ಯ ರಹಾನೆ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಕೆಕೆಆರ್‌ ನಿರೀಕ್ಷಿತವಾದ ಪ್ರದರ್ಶನ ನೀಡಿರಲಿಲ್ಲ. ಹಾಗಾಗಿ ಮುಂದಿನ ಐಪಿಎಲ್‌ ಹರಾಜಿಗೂ ಮುನ್ನ ಕೆಲ ಆಟಗಾರರನ್ನು ತಂಡದಿಂದ ಕೈಬಿಡಲು ತೀರ್ಮಾನಿಸಿದೆ. ಮುಂದಿನ ಸೀಸನ್‌ಗೆ ಕೆಕೆಆರ್‌ ತಂಡಕ್ಕೆ ಉತ್ತಮ ನಾಯಕನ ಅವಶ್ಯಕತೆ ಇದೆ.

IPL 2026: ಕೆಎಲ್‌ ರಾಹುಲ್‌ ಖರೀದಿಗೆ ಮುಂದಾದ ಕೋಲ್ಕತ್ತಾ..! Read More »

ಕ್ರೀಡಾ ನ್ಯೂಸ್

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.28 ಬೆಂಗಳೂರು :  ಬೆಳಕಿಗೆ, ಗಾಳಿಗೆ,  ನೀರಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top