ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ […]

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌

(ನ್ಯೂಸ್‌ ಕಡಬ) newskadaba.com, ಆ.21:‌ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ. ನನ್ನ ಪ್ರೀತಿಯ ಅಭಿಮಾನಗಳೇ, ಆ.23, ಪ್ರತಿ ವರ್ಷ ನನ್ನ ಬರ್ತ್‌ಡೇ ಅಂದ್ರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ, ಈ ಸಲ ನಾನು

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌ Read More »

ಸಿನಿಮಾ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಬೆಂಗಳೂರು: ಚಿನ್ನದ ದರದಲ್ಲಿ ಕಳೆದೆರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯ ಸರ್ಕಾರದ 2025-26ನೇ ಸಾಲಿನ ₹3,352.57 ಕೋಟಿ ಮೊತ್ತದ ಪೂರಕ ಅಂದಾಜು (ಮೊದಲನೇ ಕಂತು) ಅನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಅವರು ಪೂರಕ ಅಂದಾಜು ಮಂಡಿಸಿದರು. ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶಕ್ಕೆ 10 ಕೋಟಿ ರು. ವೆಚ್ಚ ಮಾಡಿರುವ ಬಗ್ಗೆ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಜರುಗಿದ ಸಚಿವ ಸಂಪುಟ

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಿ.ಎಲ್‌ ಸಂತೋಷ್‌ ವಿರುದ್ದ ಅವಹೇಳನ: ಮಹೇಶ್‌ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.21:‌ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ವಿರುದ್ದ ಅವೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ‌ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡದಿದ್ದಾರೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋವೊಂದರಲ್ಲಿ ತಿಮರೋಡಿ ಬಿಎಲ್‌ ಸಂತೋಷ‌ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಬಗ್ಗೆ ರಾಜೀವ್‌ ಕುಲಾಲ್‌ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಬಿಎಸ್‌ಎನ್ 196(1), 352,353(2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮದ

ಬಿ.ಎಲ್‌ ಸಂತೋಷ್‌ ವಿರುದ್ದ ಅವಹೇಳನ: ಮಹೇಶ್‌ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ Read More »

ಕರಾವಳಿ

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್

(ನ್ಯೂಸ್‌ ಕಡಬ) newskadaba.com, ಆ.21:‌ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ.

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್ Read More »

ಕರ್ನಾಟಕ

ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದ ಆಟಗಾರರಿವರು…

(ನ್ಯೂಸ್‌ ಕಡಬ) newskadaba.com, ಆ.21: ಏಷ್ಯಾಕಪ್‌ ಟೂರ್ನಿಗೆ 15 ಸದಸ್ಯರುಗಳ ಟೀಂ ಇಂಡಿಯಾವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳ ಪೈಕಿ ಟಿ20 ವಿಶ್ವಕಪ್‌ ಆಡಿದ 8 ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ.  ಏಷ್ಯಾಕಪ್‌ 2025ರ ತಂಡಗಳಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಹೀಗಿವೆ. ಏಷ್ಯಾ ಕಪ್‌ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್‌ ಗಿಲ್‌ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್‌ ಶರ್ಮಾ, ಅರ್ಷದೀಪ್‌ ಸಿಂಗ್‌, ವರುಣ್ ಚಕ್ರವರ್ತಿ,

ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದ ಆಟಗಾರರಿವರು… Read More »

ಕ್ರೀಡಾ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಆ.21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್‌ಐಟಿ ತನಿಖೆ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಆ.21 ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್‌ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದೆ. ಟಿಎನ್‌ಐಇ ಜೊತೆ ಮಾತನಾಡಿದ ಪಾಂಡೆ, “ಅತ್ಯಂತ ಸೂಕ್ಷ್ಮ” ಮತ್ತು

ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್‌ಐಟಿ ತನಿಖೆ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

(ನ್ಯೂಸ್‌ ಕಡಬ) newskadaba.com, ಆ.21: ಮದ್ರಸಕ್ಕೆ ತೆರಳುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರದ ರಶೀದ್ ಅವರ ಪುತ್ರ ಅಬೂಬಕ್ಕರ್ ರಫಾನ್ ಗಾಯಗೊಂಡ ಬಾಲಕ. ಬೆಳಿಗ್ಗೆ ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ನಾಯಿ ಅಟ್ಟಾಡಿಸಿ ದಾಳಿ ನಡೆಸಿದೆ ಎನ್ನಲಾಗಿದೆ. ಬಾಲಕನ ಬೊಬ್ಬೆ ಕೇಳಿ ಸ್ಥಳೀಯರು ದಾವಿಸಿ ಬರುತ್ತಿದ್ದಂತೆ ನಾಯಿ ತಪ್ಪಿಸಿಕೊಂಡಿದೆ. ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು: ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top