ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.08: ಇಂದು ಕ್ವಿಟ್‌ ಇಂಡಿಯಾ ಚಳವಳಿ ದಿನ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ವೊಂದನ್ನು ಮಾಡಿದ್ದಾರೆ. ಮಹಾತ್ಮ ಗಾಂಧಿಯವರ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು ಎಂದಿದ್ದಾರೆ. ಶತಮಾನಗಳ‌ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು ಮಾತ್ರವಲ್ಲ, ಇನ್ನು ಹೆಚ್ಚು ಕಾಲ ಹಿಂಸೆ, ದೌರ್ಜನ್ಯಗಳ ಮೂಲಕ […]

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..!

(ನ್ಯೂಸ್‌ ಕಡಬ) newskadaba.com, ಆ.08: ಟೀಂ ಇಂಡಿಯಾ ಆಟಗಾರ ಧ್ರುವ್‌ ಜುರೆಲ್‌ ಅವರನ್ನು ದುಲೀಪ್‌ ಟ್ರೋಫಿಯಲ್ಲಿ ಕೇಂದ್ರ ವಲಯದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ದುಲೀಪ್‌ ಟ್ರೋಫಿ ಆ.28ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. 24 ವರ್ಷದ ಧ್ರುವ್‌ ಜುರೆಲ್‌, ಈವರೆಗೆ ಭಾರತ ತಂಡದ ಪರ 5 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಈ ಪೈಕಿ ಅವರು 1 ಅರ್ಧಶತಕದೊಂದಿಗೆ 255 ರನ್‌ ಗಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಓವಲ್‌ ಟೆಸ್ಟ್‌ನಲ್ಲಿ ಧ್ರುವ್‌ ಜುರೆಲ್‌ ಆಡಿದ್ದರು. ಗಾಯಗೊಂಡ ರಿಷಭ್‌ ಪಂತ್‌ ಬದಲಿಗೆ ಅವರು ಆಡುವ

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..! Read More »

ಕ್ರೀಡಾ ನ್ಯೂಸ್

ಮತಗಳ್ಳತನ ಆರೋಪ – ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಆ.08: ರಾಹುಲ್ ಗಾಂಧಿ ನೇತೃತ್ವದ ಆರೋಪದ ವಿರುದ್ಧ ಬಿಜೆಪಿಯಲ್ಲೂ ಮತ್ತು ಜೆಡಿಎಸ್‌ನಲ್ಲೂ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ. ಈ ಆರೋಪಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಚುನಾವಣಾ ಆಯೋಗದ ಮೇಲಿನ ಅವಿಶ್ವಾಸ ಭಾವನೆಯಿಂದ ಪ್ರಜಾಪ್ರಭುತ್ವದ ಮೇಲೆ ವಿಷದ ಬೂದು ಎರಚಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ, ಮತ ಚಲಾವಣೆಯಲ್ಲಿ ಭ್ರಷ್ಟಾಚಾರ

ಮತಗಳ್ಳತನ ಆರೋಪ – ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು

(ನ್ಯೂಸ್‌ ಕಡಬ) newskadaba.com, ಆ.08: ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ರೋಷನ್ ಸಲ್ಡಾನಾ ಮತ್ತು ಅವರ ಪತ್ನಿಗೆ ಸೇರಿದ ಆಸ್ತಿಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ. ನಗರದ ಐದು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಡಿಮೆ ಬಡ್ಡಿದರದಲ್ಲಿ ಸಾಲ ವ್ಯವಸ್ಥೆ ಮಾಡುವ ನೆಪದಲ್ಲಿ ವಿವಿಧ ಉದ್ಯಮಿಗಳಿಂದ ಹಣ ಸಂಗ್ರಹಿಸಿ, ಸ್ಟಾಂಪ್ ಡ್ಯೂಟಿಗೆ ಹಣವನ್ನು ಪಡೆದು, ಭರವಸೆ ನೀಡಿದ ಸಾಲಗಳನ್ನು ನೀಡುವಲ್ಲಿ ವಿಫಲರಾದ ಆರೋಪದ ಮೇಲೆ ರೋಷನ್ ಸಲ್ಡಾನಾ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ ಚಾಪ್ಟರ್‌ 1: ಕನಕವತಿ ಪೋಸ್ಟರ್‌ ರಿಲೀಸ್

(ನ್ಯೂಸ್‌ ಕಡಬ) newskadaba.com, ಆ.08:‌ ಕಾಂತಾರ ಚಿತ್ರದ ಪ್ರೀಕ್ವೆಲ್‌ ಆಗಿರುವ ಕಾಂತಾರ: ಚಾಪ್ಟರ್‌ 1 ಚಿತ್ರದ ನಾಯಕಿಯಾಗಿ ರುಕ್ಮಿಣಿ ವಸಂತ್‌ ಅಭಿನಯಿಸುತ್ತಿದ್ದಾರೆ.‌ ವರಮಹಾಲಕ್ಷ್ಮೀ ಹಬ್ಬದ ಈ ಶುಭದಿನದಂದು ಅವರ ಪಾತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಇದರಿಂದ ಅಭಿಮಾನಿಗಳಲ್ಲಿ ರುಕ್ಮಿಣಿ ವಸಂತ್‌ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಕಾಂತಾರ: ಚಾಪ್ಟರ್‌1 ಚಿತ್ರದಲ್ಲಿ ರುಕ್ಮಿಣಿ ವಸಂತ್‌ ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ಅವರು ಯುವರಾಣಿ ರೀತಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನ ಹಿಂಭಾಗ ನೋಡಿದರೆ ರಾಜರ ಆಸ್ಥಾನದ ರೀತಿ

ಕಾಂತಾರ ಚಾಪ್ಟರ್‌ 1: ಕನಕವತಿ ಪೋಸ್ಟರ್‌ ರಿಲೀಸ್ Read More »

ಸಿನಿಮಾ

ಡಿಸಿಎಂ ಡಿಕೆಶಿ ಚಲಾಯಿಸಿದ ಸ್ಕೂಟರ್‌ನಲ್ಲಿ 34 ಬಾರಿ ಸಂಚಾರ ನಿಯಮ ಉಲ್ಲಂಘನೆ – ದಂಡ ಪಾವತಿಸಿದ ಮಾಲೀಕರು

(ನ್ಯೂಸ್‌ ಕಡಬ) newskadaba.com, ಆ.08: ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸವಾರಿ ಮಾಡಿದ ಸ್ಕೂಟರ್ ವಿರುದ್ಧ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು 18,500 ರೂ. ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ವೆಬ್‌ಸೈಟ್ ತಿಳಿಸಿದೆ. ಆದರೆ, ಆ ಸ್ಕೂಟರ್ ಡಿಕೆ ಶಿವಕುಮಾರ್ ಅವರಿಗೆ ಸೇರಿಲ್ಲ ಮತ್ತು ತಪಾಸಣೆಯ ಸಮಯದಲ್ಲಿ ಮಾತ್ರ ಅವರು ಅದನ್ನು ಚಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ. ಶಿವಕುಮಾರ್

ಡಿಸಿಎಂ ಡಿಕೆಶಿ ಚಲಾಯಿಸಿದ ಸ್ಕೂಟರ್‌ನಲ್ಲಿ 34 ಬಾರಿ ಸಂಚಾರ ನಿಯಮ ಉಲ್ಲಂಘನೆ – ದಂಡ ಪಾವತಿಸಿದ ಮಾಲೀಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ

(ನ್ಯೂಸ್‌ ಕಡಬ) newskadaba.com, ಆ.08:‌ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ. ಗುರುವಾರ ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ Read More »

ಕರ್ನಾಟಕ

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com, ಆ.08:‌ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ

Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.08:‌ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ಗದಗ, ಬಾಗಲಕೋಟೆ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ವಿಜಯಪುರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಳಗಾವಿ, ಯಾದಗಿರಿ,

Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

ಪತ್ರಕರ್ತರ ಮೇಲೆ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದ ಸಿಎಂ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ಪತ್ರಕರ್ತರು ಹಾಗೂ ಯೂಟ್ಯೂಬರ್‌ಗಳ ಮೇಲೆ ಹಲ್ಲೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಲಾಲ್‌ಬಾಗ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ದೆಹಲಿಯಲ್ಲಿ ಇಂಡಿಯಾ ರಾಜಕೀಯ ಮೈತ್ರಿಕೂಟದ ನಾಯಕರಿಗೆ ಔತಣಕೂಟ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರ ಮತಗಳ್ಳತನದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಕರ್ತರ ಮೇಲೆ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top