ರಾಜ್ಯಾದ್ಯಂತ ಇನ್ನೂ 5 ದಿನ ವ್ಯಾಪಕ ಮಳೆ ಮುಂದುವರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.07: ರಾಜ್ಯದಲ್ಲಿ ನೈಋತ್ಯ ಮುಂಗಾರು ಚೇತರಿಕೆಯಾಗಿದ್ದು, ರಾಜ್ಯದಲ್ಲಿ ಉತ್ತಮ ಹಾಗೂ ವ್ಯಾಪಕ ಮಳೆಯಾಗುತ್ತಿದೆ. ಕಳೆದ ವಾರ ದುರ್ಬಲಗೊಂಡಿದ್ದ ಮುಂಗಾರು ಈ ವಾರ ಚುರುಕಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಹಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಕೆಲವೆಡೆ […]

ರಾಜ್ಯಾದ್ಯಂತ ಇನ್ನೂ 5 ದಿನ ವ್ಯಾಪಕ ಮಳೆ ಮುಂದುವರಿಕೆ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.07: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲಾದ ‘ಕರ್ತವ್ಯ ಭವನ-3’ ವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಇದು ಸೆಂಟ್ರಲ್ ವಿಸ್ಟಾ ಪುನಾರ್ವಿಕಾಸ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಹತ್ತು ನವೀನ ಭವನಗಳ ಪೈಕಿ ಮೊದಲನೆಯದು. ಈ ಭವನ ಉದ್ಘಾಟನೆಯೊಂದಿಗೆ, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಒಂದೆಡೆ ಏಕತ್ರಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ನಿರ್ಣಾಯಕ ಮುಂದಿನ ಹಂತ ಶುರುವಾಗಿದೆ. ಈಗಲೂ ದೆಹಲಿಯ ವಿಭಿನ್ನ ಭಾಗಗಳಲ್ಲಿ ಹರಡಿರುವ ಸಚಿವಾಲಯಗಳು ಶೀಘ್ರದಲ್ಲೇ ಈ ನವೀನ ಕಟ್ಟಡಗಳಿಗೆ

ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು: ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ

(ನ್ಯೂಸ್‌ ಕಡಬ) newskadaba.com, ಆ.07: ಮೈಸೂರು: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಾರಿ ಚಲಿಸುತ್ತಿದ್ದಾಗಲೇ ಸೇತುವೆ ಕುಸಿದುಬಿದ್ದ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಇಟ್ನಾ ಸಮೀಪದ ಕಬಿನಿ ಬಲದಂಡೆ ನಾಲೆ ಬಳಿ ನಡೆದಿದೆ. ಪುರದಕಟ್ಟೆ ಮಾರ್ಗವಾಗಿ ನಂಜನಗೂಡಿಗೆ ಭತ್ತ ಹೊತ್ತೊಯ್ಯುತ್ತಿದ್ದ ಲಾರಿ ಸೇತುವೆ ಮೇಲೆ ಸಾಗುತ್ತಿದ್ದಾಗಲೇ ಹಠಾತ್ ಆಗಿ ಸೇತುವೆ ಕುಸಿದಿದೆ.  ಲಾರಿಯಲ್ಲಿದ್ದ ಲೋಡರ್ಸ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಬಿನಿ ಬಲದಂಡೆ ನಿರ್ಮಾಣವಾದಾಗ ಕಟ್ಟಿದ್ದ ಸೇತುವೆ ಇದ್ದಾಗಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಶಿಥಿಲಗೊಂಡಿತ್ತು. ‌ಲಾರಿಯನ್ನು ಮೇಲೆತ್ತುವುದರ

ಮೈಸೂರು: ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ…

(ನ್ಯೂಸ್‌ ಕಡಬ) newskadaba.com, ಆ.06:‌ ಹೆಚ್ಚಿನ ಮಂದಿಗೆ ದಿನ ಆರಂಭವಾಗುವುದೇ ಬೆಳಗ್ಗಿನ ಒಂದು ಕಪ್‌ ಚಹಾ ಕುಡಿಯುವುದರಿಂದ ಕೆಲವರಂತೂ ದಿನಕ್ಕೆ 3-4 ಬಾರಿ ಚಹಾ ಕುಡಿಯುತ್ತಾರೆ. ಆದರೆ, ಹೆಚ್ಚಿನವರು ಚಹಾ ಮಾಡುವುದರಿಂದ ಹಿಡಿದು ಕುಡಿಯುವ ತನಕ ಒಂದಷ್ಟು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ ಎಂದು ಪೌಷ್ಟಿಕ ತಜ್ಞೆ ಕಿರಣ್‌ ಕುಕ್ರೇಜಾ ಹೇಳಿದ್ದಾರೆ. ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಚಹಾ ಸೋಸಲು ಪ್ಲಾಸ್ಟಿಕ್‌ ಜರಡಿಯನ್ನು ಬಳಸುತ್ತಾರೆ. ಆದರೆ, ಇದು ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಬೀರುತ್ತದೆ.

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ… Read More »

ಲೈಫ್‍ಸ್ಟೈಲ್

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಇಂದು 13ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಿದ್ದಾರೆ.ಈ ಮೊದಲು ಬಂಗ್ಲಗುಡ್ಡದಲ್ಲಿ ತಾನು ತೋರಿಸಿದ್ದ ಜಾಗ ಹೊರತುಪಡಿಸಿ ಮತ್ತೊಂದು ಸ್ಥಳಕ್ಕೆ ಎಸ್‌‍ಐಟಿ ಅಧಿಕಾರಿಗಳನ್ನು ಅನಾಮಧೇಯ ವ್ಯಕ್ತಿ ಕರೆದುಕೊಂಡು ಹೋಗಿದ್ದರು. ಅಲ್ಲಿ ಭೂಮಿಯ ಮೇಲ್ಭಾಗದಲ್ಲೇ ಹಲವಾರು ಅಸ್ಥಿಗಳು ದೊರೆತ್ತಿದ್ದವು ಅವುಗಳನ್ನು ಜಪ್ತಿ ಮಾಡಿರುವ ಎಸ್‌‍ಐಟಿ ಅಧಿಕಾರಿಗಳು ಬಹುಶಃ ಬಂಗ್ಲಗುಡ್ಡದ ಮೇಲೆ ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿರಬಹುದು, ಹೀಗಾಗಿ ಭೂಮಿಯ ಮೇಲ್ಭಾಗದಲ್ಲಿ ಸಿಕ್ಕಿರುವ ಅಸ್ತಿಗಳ ಕುರಿತು

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು

(ನ್ಯೂಸ್‌ ಕಡಬ) newskadaba.com, ಆ.06:‌ ಜಾರ್ಖಂಡ್‌ನಲ್ಲಿ ನಡೆಸಿದ್ದ ಚುನಾವಣೆ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಹೈಕೋರ್ಟ್‌ ನಿರ್ದೇಶನದಂತೆ ರಾಹುಲ್‌ ಗಾಂಧಿ ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾದರು. ರಾಹುಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್‌ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. 2018ರ ಸಾರ್ವಜನಿಕ ಸಭೆಯೊಂದರಲ್ಲಿ ಅಮಿತ್‌ ಶಾ

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು Read More »

ರಾಷ್ಟ್ರೀಯ ನ್ಯೂಸ್

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌

(ನ್ಯೂಸ್‌ ಕಡಬ) newskadaba.com, ಆ.06:‌ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಕೆಜೆ ಜಾರ್ಜ್‌ ವಿರುದ್ದ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೆಜೆ ಜಾರ್ಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್‌ಪಿ ಮತ್ತು ದೂರುದಾರರಾದ

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌ Read More »

ಕರ್ನಾಟಕ

ಇದು ಮೋದಿ ಕಾಲ, ಎಲ್ಲ ವೇಗವಾಗಿ ನಡೆಯುತ್ತೆ: ತೇಜಸ್ವಿ ಸೂರ್ಯ

(ನ್ಯೂಸ್‌ ಕಡಬ) newskadaba.com, ಆ.06:‌ ನಾನು ಹೊಸ ತಲೆಮಾರಿನವನು, ಹಾಗಾಗಿ ಕೆಲಸ ಬೇಗ ಆಗಬೇಕು ಎನ್ನುವವನು. ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತದೆ. ಆದರೆ, ವಿಳಂಬ ಮಾಡುವುದೇ ಕಾಂಗ್ರೆಸ್ಸಿಗರ ಕಥೆ ಎಂದು ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಹಳದಿ ಲೈನ್‌ ಮೆಟ್ರೋ ಏಕೆ ಆತುರದಲ್ಲಿ ಮಾಡಿದರು ಎಂದು ಬೈಯುತ್ತಿರುವವರು, ಇವರು ಸಮಸ್ಯೆಗಳು ಇದ್ದಾಗ ಎಲ್ಲಿಗೆ ಹೋಗಿದ್ದರು. 4 ವರ್ಷ ಮೆಟ್ರೋಗೆ ಎಂಡಿ ಇರಲಿಲ್ಲ. ಬಿಎಂಆರ್‌ಸಿಎಲ್‌ ಎರಡು

ಇದು ಮೋದಿ ಕಾಲ, ಎಲ್ಲ ವೇಗವಾಗಿ ನಡೆಯುತ್ತೆ: ತೇಜಸ್ವಿ ಸೂರ್ಯ Read More »

ಕರ್ನಾಟಕ

ಆಡ್ವಾಣಿ ದಾಖಲೆ ಮುರಿದ ಅಮಿತ್‌ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ

(ನ್ಯೂಸ್‌ ಕಡಬ) newskadaba.com, ಆ.07: ನವದೆಹಲಿ: ಇತ್ತೀಚೆಗಷ್ಟೇ ನರೇಂದ್ರ ಮೋದಿ ಅತೀ ಸುದೀರ್ಘವಾಗಿ ಪ್ರಧಾನಿಯಾಗಿ ಮುಂದುವರಿಯುವ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ರೆಕಾರ್ಡ್‌ಯನ್ನು ಮುರಿದಿದ್ದರು. ಇದೀಗ ಇದರ ಬೆನ್ನಲ್ಲೇ ಗೃಹಸಚಿವ ಅಮಿತ್‌ ಶಾ ಕೂಡ ಅತೀ ಹೆಚ್ಚು ವರ್ಷಗಳ ಕಾಲ ಗೃಹಸಚಿವರಾಗಿ ಮುಂದುವರಿಯುವ ಮೂಲಕ ದಾಖಲೆ ಬರೆದಿದ್ದಾರೆ. ಕೇಂದ್ರ ಗೃಹ ಸಚಿವರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅಮಿತ್ ಶಾ ಅವರು 2,258 ದಿನಗಳನ್ನು ಪೂರೈಸಿದ್ದಾರೆ. ಆ ಮೂಲಕ ಅವರು ಗೃಹ ಸಚಿವ ಹುದ್ದೆಯಲ್ಲಿ 2,256 ದಿನಗಳನ್ನು

ಆಡ್ವಾಣಿ ದಾಖಲೆ ಮುರಿದ ಅಮಿತ್‌ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top