ಆಧಾರ್ ಬಳಕೆದಾರರಿಗೆ ಭರ್ಜರಿ ಕೊಡುಗೆ: ಇನ್ಮುಂದೆ ಮನೆಯಲ್ಲೇ ಕುಳಿತು ಉಚಿತವಾಗಿ ಇಮೇಲ್ ಐಡಿ ಲಿಂಕ್ ಮಾಡಿ!

(ನ್ಯೂಸ್‌ ಕಡಬ) newskadaba.com,  ಜು.04 : ಬಳಕೆದಾರರ ಅನುಕೂಲಕ್ಕಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ  ಹೊಸ ಆಧಾರ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಇದರ ಮೂಲಕ ಸಾರ್ವಜನಿಕರು ನೇರವಾಗಿ ತಮ್ಮ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನವೀಕರಿಸಬಹುದು. ಜುಲೈ 1, 2026 ರಿಂದ ಜಾರಿಗೆ ಬಂದಿರುವ ಈ ಇಮೇಲ್ ಅಪ್ಡೇಟ್ ಸೌಲಭ್ಯವು ಮುಂದಿನ 6 ತಿಂಗಳವರೆಗೆ ಸಂಪೂರ್ಣ ಉಚಿತವಾಗಿರುತ್ತದೆ.ಇನ್ಮುಂದೆ ಇಮೇಲ್ ನವೀಕರಣಕ್ಕಾಗಿ ಸಾರ್ವಜನಿಕರು ಆಧಾರ್ ಕೇಂದ್ರಗಳಿಗೆ ಭೌತಿಕವಾಗಿ ಭೇಟಿ ನೀಡುವ ಅಗತ್ಯವಿಲ್ಲ. ಈ ಹೊಸ ಆಧಾರ್ ಆ್ಯಪ್ […]

ಆಧಾರ್ ಬಳಕೆದಾರರಿಗೆ ಭರ್ಜರಿ ಕೊಡುಗೆ: ಇನ್ಮುಂದೆ ಮನೆಯಲ್ಲೇ ಕುಳಿತು ಉಚಿತವಾಗಿ ಇಮೇಲ್ ಐಡಿ ಲಿಂಕ್ ಮಾಡಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ; ಬೆಳ್ಳಿ ಬೆಲೆಯಲ್ಲಿ ಸ್ಥಿರತೆ: ಇಂದಿನ ಮಾರುಕಟ್ಟೆ ದರ ಹೀಗಿದೆ

(ನ್ಯೂಸ್‌ ಕಡಬ) newskadaba.com,  ಜು.04 ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. ಪ್ರತಿ ಗ್ರಾಂ 22 ಕ್ಯಾರಟ್ ಚಿನ್ನದ ದರದಲ್ಲಿ 25 ರೂಪಾಯಿ ಹಾಗೂ 24 ಕ್ಯಾರಟ್ ಚಿನ್ನದ ದರದಲ್ಲಿ 27 ರೂಪಾಯಿ ಕಡಿತವಾಗಿದೆ. 22 ಕ್ಯಾರಟ್ ಚಿನ್ನ: 1 ಗ್ರಾಂ: ₹13,450 10 ಗ್ರಾಂ (1 ತೋಲ): ₹1,34,500 100 ಗ್ರಾಂ: ₹13,45,000 24 ಕ್ಯಾರಟ್ ಚಿನ್ನ (ಅಪರಂಜಿ): 1 ಗ್ರಾಂ: ₹14,673 10 ಗ್ರಾಂ: ₹1,46,730 100 ಗ್ರಾಂ: ₹14,67,300 ಪ್ರಮುಖ

ಚಿನ್ನದ ದರದಲ್ಲಿ ಕೊಂಚ ಇಳಿಕೆ; ಬೆಳ್ಳಿ ಬೆಲೆಯಲ್ಲಿ ಸ್ಥಿರತೆ: ಇಂದಿನ ಮಾರುಕಟ್ಟೆ ದರ ಹೀಗಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಲಡ್ಕ: ಸಿಕ್ಕಿದ ಪರ್ಸ್ ಅನ್ನು ವಾರಸುದಾರರಿಗೆ ತಲುಪಿಸಿ ಮಾನವೀಯತೆ ಮೆರೆದ ಆಟೋ ಚಾಲಕ

(ನ್ಯೂಸ್‌ ಕಡಬ) newskadaba.com,  ಜು.04 ಬಂಟ್ವಾಳ: ಕಲ್ಲಡ್ಕದ ಸರ್ವಿಸ್ ರಸ್ತೆಯಲ್ಲಿ ಕಳೆದುಹೋಗಿದ್ದ ನಗದು ಮತ್ತು ಪ್ರಮುಖ ದಾಖಲೆಗಳಿದ್ದ ಪರ್ಸ್ ಅನ್ನು ಅದರ ನಿಜವಾದ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಆಟೋ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರ್ನೆಯ ಆಟೋ ಚಾಲಕ ರುದ್ರೇಶ್ ಪೆರ್ನೆ ಅವರಿಗೆ ಕಲ್ಲಡ್ಕದಲ್ಲಿ ಬಿದ್ದಿದ್ದ ಪರ್ಸ್ ಒಂದು ದೊರೆತಿತ್ತು.ಪರ್ಸ್‌ನಲ್ಲಿದ್ದ ಮಾಹಿತಿಯ ಆಧಾರದ ಮೇಲೆ ರುದ್ರೇಶ್ ಅವರು ತಕ್ಷಣವೇ ಅದರ ಮಾಲೀಕರನ್ನು ಸಂಪರ್ಕಿಸಿದ್ದಾರೆ. ಮಾಲೀಕರಾದ ಬೆಂಗಳೂರು ಮೂಲದ ಹಫೀಜ್ (ಮೇಲ್ಕಾರ್‌ನ ಭಗವತಿ ಸ್ಟೀಲ್ಸ್ ಉದ್ಯೋಗಿ)

ಕಲ್ಲಡ್ಕ: ಸಿಕ್ಕಿದ ಪರ್ಸ್ ಅನ್ನು ವಾರಸುದಾರರಿಗೆ ತಲುಪಿಸಿ ಮಾನವೀಯತೆ ಮೆರೆದ ಆಟೋ ಚಾಲಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಚ್ಚಿಲ ಕಡಲತೀರಕ್ಕೆ ಕೊಚ್ಚಿ ಬಂದ ಮಲ್ಪೆಯ ಮೀನುಗಾರಿಕಾ ದೋಣಿ: ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ವರದಿ

(ನ್ಯೂಸ್‌ ಕಡಬ) newskadaba.com,  ಜು.04 ಸಮುದ್ರದಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೀಡಾಗಿದ್ದ ಮಲ್ಪೆ ನೋಂದಣಿಯ ‘ಮಂಜು ಮಾತಾ’ ಎಂಬ ಗಿಲ್‌ನೆಟ್ ಮೀನುಗಾರಿಕಾ ದೋಣಿಯು ಶುಕ್ರವಾರ ಸಂಜೆ ಉಚ್ಚಿಲ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದ್ದು, ಸಾರ್ವಜನಿಕರ ಸಹಾಯದಿಂದ ದಡಕ್ಕೆ ಎಳೆಯಲಾಗಿದೆ. ಜೂನ್ 29 ರಂದು ಮಲ್ಪೆ ಬಂದರಿನಿಂದ ತೆರಳಿದ್ದ ಈ ದೋಣಿಯ ತಳಭಾಗದಲ್ಲಿ ಸೋರಿಕೆ ಕಂಡುಬಂದು ನೀರು ನುಗ್ಗಿದ್ದರಿಂದ ಅಪಘಾತಕ್ಕೀಡಾಗಿತ್ತು.ಭಾರತೀಯ ಕರಾವಳಿ ಕಾವಲು ಪಡೆಯು ತಕ್ಷಣ ಕಾರ್ಯಪ್ರವೃತ್ತರಾಗಿ ದೋಣಿಯಲ್ಲಿದ್ದ ಆರೂ ಜನ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿತ್ತು. ಆದರೆ ದೋಣಿಯನ್ನು ಮೇಲೆತ್ತಲಾಗದೆ ಸಮುದ್ರದಲ್ಲೇ

ಉಚ್ಚಿಲ ಕಡಲತೀರಕ್ಕೆ ಕೊಚ್ಚಿ ಬಂದ ಮಲ್ಪೆಯ ಮೀನುಗಾರಿಕಾ ದೋಣಿ: ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟ್‌ನ ಗುಂಡ್ಯ ಬಳಿ ಭೀಕರ ಅಪಘಾತ: ಕಂಟೈನರ್ ಡಿಕ್ಕಿಯಾಗಿ ಕಾರು ಜಖಂ, ಚಾಲಕ ಪ್ರಾಣಾಪಾಯದಿಂದ ಪಾರು!

(ನ್ಯೂಸ್‌ ಕಡಬ) newskadaba.com,  ಜು.04 :ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಕಂಟೈನರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಬೇಲೂರು ತಾಲೂಕಿನ ಸೋಂಪುರ ನಿವಾಸಿ ಹರ್ಷ ಟಿ. ಅವರು ಮಂಗಳೂರಿನಲ್ಲಿ ಓದುತ್ತಿರುವ ತಮ್ಮ ಮಗಳನ್ನು ಕರೆತರಲು ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಗುಂಡ್ಯದ ತಿರುವು ರಸ್ತೆಯಲ್ಲಿ ಕಂಟೈನರ್ ಚಾಲಕನು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು

ಶಿರಾಡಿ ಘಾಟ್‌ನ ಗುಂಡ್ಯ ಬಳಿ ಭೀಕರ ಅಪಘಾತ: ಕಂಟೈನರ್ ಡಿಕ್ಕಿಯಾಗಿ ಕಾರು ಜಖಂ, ಚಾಲಕ ಪ್ರಾಣಾಪಾಯದಿಂದ ಪಾರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆಯಲ್ಲಿ ಜೆಸಿಬಿ ಗುತ್ತಿಗೆದಾರನ ಶವ ಪತ್ತೆ: ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣ ಲಭ್ಯ

(ನ್ಯೂಸ್‌ ಕಡಬ) newskadaba.com,  ಜು.04 ಮೂಡುಬಿದಿರೆ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ಎಂಬಲ್ಲಿ ಕಳೆದ ಒಂದು ದಿನದಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ, ಹಿಟಾಚಿ ಹಾಗೂ ಜೆಸಿಬಿ ಗುತ್ತಿಗೆದಾರರಾದ ಕಾರ್ತಿಕ್ ಶೆಟ್ಟಿ (34) ಅವರ ಮೃತದೇಹವು ಶನಿವಾರ ಅವರ ಮನೆಯ ಸಮೀಪದ ಶೆಡ್ ಹೊರಗಡೆ ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹೃದಯಾಘಾತದಿಂದ ಮರಣ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ತಿಳಿದುಬರಬೇಕಿದೆ.

ಮೂಡುಬಿದಿರೆಯಲ್ಲಿ ಜೆಸಿಬಿ ಗುತ್ತಿಗೆದಾರನ ಶವ ಪತ್ತೆ: ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣ ಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

NEET PG 2026 ಅಧಿಕೃತ ವೇಳಾಪಟ್ಟಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಜು.04 ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS), ಪೋಸ್ಟ್‌ ಗ್ರಾಜುಯೇಟ್ ಮೆಡಿಕಲ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ NEET PG 2026 ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಕಂಪ್ಯೂಟರ್ ಆಧಾರಿತ (CBT) ಮೋಡ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪ್ರಮುಖ ದಿನಾಂಕಗಳು: ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ಜುಲೈ 1, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 21, 2026 (ರಾತ್ರಿ 11:55 ರವರೆಗೆ) ಪರೀಕ್ಷಾ ನಗರಗಳ

NEET PG 2026 ಅಧಿಕೃತ ವೇಳಾಪಟ್ಟಿ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ; ಅಪಘಾತದ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧ

(ನ್ಯೂಸ್‌ ಕಡಬ) newskadaba.com,  ಜು.04 ಉಪ್ಪಿನಂಗಡಿ: ರಸ್ತೆ ಅಪಘಾತದ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶಿರಾಡಿ ಗ್ರಾಮದ ಪಿ.ವಿ. ಜೋಸ್ (64) ಎಂಬುವವರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಗುರುವಾರ ಮನೆಯಲ್ಲಿದ್ದ ರಬ್ಬರ್ ಕೃಷಿಯ ಆಸಿಡ್ ಸೇವಿಸಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಶಿರಾಡಿ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ; ಅಪಘಾತದ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಸ್ ಹತ್ತಿದಾಗಿನಿಂದ ಮನೆ ತಲುಪುವವರೆಗೆ ಮಕ್ಕಳ ಸುರಕ್ಷತೆ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್‌ ಕಡಬ) newskadaba.com, ಜು.03 : ಮಕ್ಕಳು ಶಾಲಾ ಆವರಣದಲ್ಲಿ ಮಾತ್ರವಲ್ಲ, ಶಾಲಾ ಬಸ್ ಹತ್ತಿದಾಗಿನಿಂದ ಕೊನೆಯ ಸ್ಟಾಪ್‌ನಲ್ಲಿ ಇಳಿದು ಮನೆ ತಲುಪುವವರೆಗೆ ಅವರ ಸುರಕ್ಷತೆಯ ಸಂಪೂರ್ಣ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಮಕ್ಕಳಿಗೆ ಬಸ್ ಸೌಕರ್ಯ ನೀಡಿ ನಾವೇನೋ ಉಪಕಾರ ಮಾಡುತ್ತಿದ್ದೇವೆ ಎಂಬ ಧೋರಣೆಯನ್ನು ಒಪ್ಪಲು ಸಾಧ್ಯವಿಲ್ಲ. ಇದು ಶಾಸನದ ಅಡಿ ಕಡ್ಡಾಯಗೊಳಿಸಲಾದ ಗಂಭೀರ ಬಾಧ್ಯತೆಯಾಗಿದೆ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸ್ಪಷ್ಟಪಡಿಸಿದೆ.

ಶಾಲಾ ಬಸ್ ಹತ್ತಿದಾಗಿನಿಂದ ಮನೆ ತಲುಪುವವರೆಗೆ ಮಕ್ಕಳ ಸುರಕ್ಷತೆ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಮಹತ್ವದ ತೀರ್ಪು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿ ಮುಗಿದರೂ ಕತ್ತಲಲ್ಲೇ ರಸ್ತೆ; ಸವಾರರ ಆತಂಕ

(ನ್ಯೂಸ್‌ ಕಡಬ) newskadaba.com, ಜು.03 : ಬಹುನಿರೀಕ್ಷಿತ ಉಡುಪಿಯ ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇಲ್ಲಿನ ಬೀದಿ ದೀಪಗಳು ರಾತ್ರಿಯ ವೇಳೆ ಕಾರ್ಯನಿರ್ವಹಿಸುತ್ತಿಲ್ಲ. ಅಂಡರ್‌ಪಾಸ್ ಹಾಗೂ ಸರ್ವಿಸ್ ರಸ್ತೆಗಳು ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳ ಸುರಕ್ಷತೆಗೆ ಆತಂಕ ಎದುರಾಗಿದೆ.ಮಳೆಗಾಲದ ಕಾರಣ ರಸ್ತೆ ಬದಿಯ ಹೊಂಡ ಹಾಗೂ ನೀರು ನಿಂತಿರುವ ಜಾಗಗಳು ಕತ್ತಲಲ್ಲಿ ಕಾಣಿಸದೆ ಅಪಘಾತಗಳ ಭಯ ಹೆಚ್ಚಾಗಿದೆ. ಮೂಲಸೌಕರ್ಯ ಸಿದ್ಧವಿದ್ದರೂ ಅತ್ಯಗತ್ಯ ಸೌಲಭ್ಯ ಕಲ್ಪಿಸದ ಅಧಿಕಾರಿಗಳ ನಡೆಗೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದು, ಸಾರ್ವಜನಿಕರ

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿ ಮುಗಿದರೂ ಕತ್ತಲಲ್ಲೇ ರಸ್ತೆ; ಸವಾರರ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top