ಕರಾವಳಿಯಲ್ಲಿ ಜುಲೈ 4 ರಿಂದ ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಶಾಲೆ-ಕಾಲೇಜುಗಳಿಗೆ ರಜೆ

(ನ್ಯೂಸ್‌ ಕಡಬ) newskadaba.com, ಜು.03 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸದ್ಯ ಮಳೆ ಕೊಂಚ ಕಡಿಮೆಯಾಗಿದ್ದರೂ, ಜುಲೈ 4 ರಿಂದ 10 ರವರೆಗೆ ಕರಾವಳಿಯುದ್ದಕ್ಕೂ ವ್ಯಾಪಕ ಹಾಗೂ ತೀವ್ರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತಗಳು ಕಟ್ಟೆಚ್ಚರ ವಹಿಸಿವೆ.ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಜಿಲ್ಲೆಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 3ರ ಶುಕ್ರವಾರದಂದು ರಜೆ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಸುರಿದ […]

ಕರಾವಳಿಯಲ್ಲಿ ಜುಲೈ 4 ರಿಂದ ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಶಾಲೆ-ಕಾಲೇಜುಗಳಿಗೆ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತದಾರರ ಪಟ್ಟಿ ಪರಿಷ್ಕರಣೆ: ಬಿಎಲ್‌ಒಗಳು ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಲು ಮುಖ್ಯ ಚುನಾವಣಾಧಿಕಾರಿ ಆದೇಶ

(ನ್ಯೂಸ್‌ ಕಡಬ) newskadaba.com, ಜು.03 ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಬಿಎಲ್‌ಒಗಳು (BLO) ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಆದೇಶಿಸಿದ್ದಾರೆ. ಕಚೇರಿಗಳಲ್ಲಿ ಅಥವಾ ಒಂದೇ ಸ್ಥಳದಲ್ಲಿ ಫಾರ್ಮ್‌ಗಳನ್ನು ವಿತರಿಸುತ್ತಿರುವುದರ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂತಹ ನಿಯಮಬಾಹಿರ ಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ನಮೂನೆಗಳನ್ನು ಭರ್ತಿ ಮಾಡಲು ತೊಂದರೆ ಪಡುವ ಮತದಾರರಿಗೆ

ಮತದಾರರ ಪಟ್ಟಿ ಪರಿಷ್ಕರಣೆ: ಬಿಎಲ್‌ಒಗಳು ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಲು ಮುಖ್ಯ ಚುನಾವಣಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯೂಸರ್‌ನೇಮ್ ಭದ್ರತೆ: ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರದ ನೋಟಿಸ್!

(ನ್ಯೂಸ್‌ ಕಡಬ) newskadaba.com, ಜು.03 ಮೆಸೇಜಿಂಗ್ ಆ್ಯಪ್‌ಗಳ ‘ಯೂಸರ್‌ನೇಮ್’ ವೈಶಿಷ್ಟ್ಯದ ಭದ್ರತೆಗೆ ಸಂಬಂಧಿಸಿದಂತೆ ವಾಟ್ಸಾಪ್‌ಗೆ ನೋಟಿಸ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಟೆಲಿಗ್ರಾಂ ಮತ್ತು ಸಿಗ್ನಲ್ ಸಂಸ್ಥೆಗಳಿಗೂ ನೋಟಿಸ್ ಜಾರಿ ಮಾಡಿದೆ.ಯೂಸರ್‌ನೇಮ್ ಆಧಾರಿತ ಖಾತೆ ವ್ಯವಸ್ಥೆ, ಅದರ ಭದ್ರತಾ ಕ್ರಮಗಳು ಹಾಗೂ ದುರುಪಯೋಗ ತಡೆಗೆ ಕೈಗೊಂಡಿರುವ ತಾಂತ್ರಿಕ ಕ್ರಮಗಳ ಬಗ್ಗೆ ವಿವರವಾದ ವರದಿ ಸಲ್ಲಿಸಲು ಸರ್ಕಾರ ಆದೇಶಿಸಿದೆ. ಫೋನ್ ಸಂಖ್ಯೆ ಇಲ್ಲದೆ ಕೇವಲ ಯೂಸರ್‌ನೇಮ್ ಮೂಲಕ ಸಂಪರ್ಕಿಸುವ ವ್ಯವಸ್ಥೆಯಿಂದ ನಕಲಿ ಖಾತೆಗಳ ಸೃಷ್ಟಿ, ಫಿಶಿಂಗ್, ಆನ್‌ಲೈನ್ ವಂಚನೆ

ಯೂಸರ್‌ನೇಮ್ ಭದ್ರತೆ: ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರದ ನೋಟಿಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಯಲಾಯ್ತು ಆರೋಪಿಗಳ ಸಂಚು!

(ನ್ಯೂಸ್‌ ಕಡಬ) newskadaba.com, ಜು.03 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದ ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಸಾಕ್ಷಿ ನಾಶಪಡಿಸಲು ಮತ್ತು ಸಾಕ್ಷ್ಯ ನುಡಿಯದಂತೆ ತಡೆಯಲು ಆರೋಪಿಗಳು ಸಂಚು ರೂಪಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ತುಮಕೂರಿನ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮುಖ ಸಾಕ್ಷಿ ಸಂದೀಪ್‌ನನ್ನು ಜೂನ್ 25ರಂದು ಆಕರ್ಷ್ ಎಂಬಾತ ಮಾತನಾಡಬೇಕೆಂದು ಕರೆದಿದ್ದನು. ಬಳಿಕ ಆತನನ್ನು ಕಾರಿನಲ್ಲಿ ಕೂರಿಸಿಕೊಂಡು ನಾಲ್ವರು ಆರೋಪಿಗಳು ಕೋರ್ಟ್‌ನಲ್ಲಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಯಲಾಯ್ತು ಆರೋಪಿಗಳ ಸಂಚು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ- ಕಂಬಳಕ್ಕೆ ವಿವಿಧ ಸಂಘಟನೆಗಳ ವಿರೋಧ

(ನ್ಯೂಸ್ ಕಡಬ) newskadaba.com ಜು. 03. ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಕೆಲವೊಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ, ಕಂಬಳ ಆಯೋಜನೆಯ ಸಾಧಕ-ಬಾಧಕಗಳ ಬಗ್ಗೆ, ಚರ್ಚಿಸಲಾಯಿತು. ಕಂಬಳ ಕ್ರೀಡೆಯ ಆಯೋಜನೆ ವಿರುದ್ಧ ವಿವಿಧ ಹಂತದ ಕಾರ್ಯಕ್ರಮ ರೂಪಿಸಲು ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಕ್ರಿಯಾ ಸಮಿತಿ ರಚಿಸಲು ನಿರ್ಣಯಿಸಲಾಯಿತು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು ದಸರಾ- ಕಂಬಳಕ್ಕೆ ವಿವಿಧ ಸಂಘಟನೆಗಳ ವಿರೋಧ Read More »

ಕರ್ನಾಟಕ

ಗ್ರಾಹಕರಿಗೆ ಶಾಕ್: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯ ಏರಿಕೆ!

(ನ್ಯೂಸ್‌ ಕಡಬ) newskadaba.com, ಜು.03 : ಇಂದಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪ್ರಸ್ತುತ ಮಾರುಕಟ್ಟೆ ದರದ ವಿವರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಪ್ರತಿ ಗ್ರಾಂಗೆ): ₹13,475 ಬೆಳ್ಳಿ (ಪ್ರತಿ ಗ್ರಾಂಗೆ): ₹245 ಚಿನ್ನದ ಬೆಲೆಯಲ್ಲಿ ಪವನ್‌ಗೆ ₹1,800 ಹಾಗೂ ಬೆಳ್ಳಿ ಬೆಲೆಯಲ್ಲಿ ಪ್ರತಿ ಗ್ರಾಂಗೆ ₹6 ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.  

ಗ್ರಾಹಕರಿಗೆ ಶಾಕ್: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಪಾಲನೆಗಾಗಿ ಆರೋಪಿ ಕೃಷ್ಣ ಜಿ. ರಾವ್ ಅಥವಾ ಅವರ ಪೋಷಕರು ಪ್ರತಿತಿಂಗಳ ಎರಡನೇ ದಿನದೊಳಗೆ ₹75,000 ಅನ್ನು ತಪ್ಪದೇ ಪಾವತಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸೂಚಿಸಿದೆ. ​ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಲು

ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ Read More »

ಕರಾವಳಿ

ಜಾಲ್ಸೂರು ಮಾಬಲಡ್ಕ ನದಿತೀರದಲ್ಲಿ ವಾಗ್ವಾದ, ಹಲ್ಲೆ: ಸುಳ್ಯ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲು

(ನ್ಯೂಸ್‌ ಕಡಬ) newskadaba.com, ಜು.03 ಜಾಲ್ಸೂರು ಗ್ರಾಮದ ಮಾಬಲಡ್ಕ ನದಿತೀರದಲ್ಲಿ ಯುವಕ ಮತ್ತು ಯುವತಿಯೊಂದಿಗೆ ಸ್ಥಳೀಯರು ವಾಗ್ವಾದ ನಡೆಸಿ, ಅದು ಹಲ್ಲೆಗೆ ತಿರುಗಿದ ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ಪರಸ್ಪರ ದೂರು-ಪ್ರತಿದೂರು ದಾಖಲಾಗಿವೆ. ಜೂನ್ 30ರಂದು ಜಾಲ್ಸೂರು ಗ್ರಾಮದ ಮಾಬಲಡ್ಕ ನದಿತೀರದಲ್ಲಿ ಈ ಘಟನೆ ನಡೆದಿದೆ.ಜಯನಗರ ನಿವಾಸಿ ಭವಿಷ್ ಅವರು ತಾನು ಸ್ನೇಹಿತೆಯೊಂದಿಗೆ ಫೋಟೋ ತೆಗೆಯುತ್ತಿದ್ದಾಗ ಮೂವರು ಸ್ಥಳೀಯರು ಬಂದು ನಿಂದಿಸಿ, ಮೋಟಾರ್‌ಸೈಕಲ್ ತಡೆದು ಕೀ ಕಸಿದುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ

ಜಾಲ್ಸೂರು ಮಾಬಲಡ್ಕ ನದಿತೀರದಲ್ಲಿ ವಾಗ್ವಾದ, ಹಲ್ಲೆ: ಸುಳ್ಯ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ: ಕೆಇಎ ಮುಖಾಂತರ ಪಾರದರ್ಶಕ ಪ್ರಕ್ರಿಯೆ – ಗೃಹ ಸಚಿವ

(ನ್ಯೂಸ್‌ ಕಡಬ) newskadaba.com, ಜು.03 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಇಡೀ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖಾಂತರ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ನೇಮಕಾತಿಯು ಡಿಟೆಕ್ಟಿವ್ ಸಬ್‌-ಇನ್‌ಸ್ಪೆಕ್ಟರ್, ನಾಗರಿಕ ಮತ್ತು ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್, ಹಾಗೂ ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳನ್ನು ಒಳಗೊಂಡಿದೆ.ಒಟ್ಟು

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ: ಕೆಇಎ ಮುಖಾಂತರ ಪಾರದರ್ಶಕ ಪ್ರಕ್ರಿಯೆ – ಗೃಹ ಸಚಿವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಜುಲೈ 7ರಂದು ಸಾವಯವ ಗೊಬ್ಬರ ಹರಾಜು ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com ಜು. 03. ಕೃಷಿ ಇಲಾಖೆಯ ವಶದಲ್ಲಿರುವ ʻʻಸಮೃದ್ದಿ ಸಂಪೂರ್ಣ ಸಾವಯವ ಗೊಬ್ಬರ” ಎಂಬ ಹೆಸರಿನ ಸಾವಯವ ಗೊಬ್ಬರದ ಹರಾಜು ಪ್ರಕ್ರಿಯೆಯನ್ನು ಜುಲೈ 7ರಂದು ಬೆಳಿಗ್ಗೆ 11.30 ಗಂಟೆಗೆ ಸುಳ್ಯ ಪ್ರೈಮರಿ ಅಗ್ರಿಕಲ್ಚರಲ್ ಕ್ರೆಡಿಟ್ ಕೊ- ಆಪರೇಟಿವ್ ಸೊಸೈಟಿಯಲ್ಲಿ ನಡೆಸಲಾಗುತ್ತದೆ. ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ಅಧಿಕೃತವಾಗಿ ರಸಗೊಬ್ಬರ ಪರವಾನಿಗೆ ಹೊಂದಿರುವ ಮಾರಾಟಗಾರರು ಹಾಜರಾಗಬೇಕು. ರಸಗೊಬ್ಬರಗಳನ್ನು ಇರುವ ಸ್ಥಿತಿಯಲ್ಲಿಯೇ ಹರಾಜು ಮಾಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಜುಲೈ 7ರಂದು ಸಾವಯವ ಗೊಬ್ಬರ ಹರಾಜು ಪ್ರಕ್ರಿಯೆ Read More »

ಕರಾವಳಿ
Scroll to Top