ಕಬಕ: ತಡರಾತ್ರಿ ನಿಯಮ ಮೀರಿ ತೆರೆದಿದ್ದ ಹೋಟೆಲ್ ಬಂದ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಹಕನ ವಿರುದ್ಧ ಕಾನೂನು ಕ್ರಮ

(ನ್ಯೂಸ್‌ ಕಡಬ) newskadaba.com,   ಜು.01: ಕಬಕ ಜಂಕ್ಷನ್ ಬಳಿ ನಿಯಮಬಾಹಿರವಾಗಿ ತಡರಾತ್ರಿವರೆಗೆ ತೆರೆದಿದ್ದ ಹೋಟೆಲ್ ಮುಚ್ಚುವಂತೆ ಸೂಚಿಸಿದ ಗಸ್ತು ಪೊಲೀಸರೊಂದಿಗೆ ಗ್ರಾಹಕರೊಬ್ಬರು ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿ, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಜೂನ್ 18ರ ತಡರಾತ್ರಿ 1:30ರ ಸುಮಾರಿಗೆ ಮೊಹಮ್ಮದ್ ಆಸಿಫ್ ಮಾಲೀಕತ್ವದ ‘ಕೆಎಸ್ ಅಲ್ಫಾ ಕಾರ್ನರ್’ ಹೋಟೆಲ್ ನಿಯಮ ಮೀರಿ ತೆರೆದಿರುವುದನ್ನು ಗಮನಿಸಿದ ಪೊಲೀಸರು ಅದನ್ನು ಮುಚ್ಚಲು ಸೂಚಿಸಿದರು. ಈ ವೇಳೆ ಹೋಟೆಲ್‌ನಲ್ಲಿದ್ದ ಗ್ರಾಹಕ, ಕಬಕ ನಿವಾಸಿ ಉಜ್ವಲ್ ಕುಮಾರ್ ಪ್ರಭು (45) […]

ಕಬಕ: ತಡರಾತ್ರಿ ನಿಯಮ ಮೀರಿ ತೆರೆದಿದ್ದ ಹೋಟೆಲ್ ಬಂದ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಹಕನ ವಿರುದ್ಧ ಕಾನೂನು ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ”

(ನ್ಯೂಸ್ ಕಡಬ) newskadaba.com ಜೂ. 27. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ ಒಂದರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ

(ನ್ಯೂಸ್‌ ಕಡಬ) newskadaba.com,   ಜು.01:: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ ಬೆನ್ನಲ್ಲೇ, ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದೆ. ಜುಲೈ 1ರಿಂದ ಜಾರಿಗೆ ಬರುವಂತೆ 19 ಕೆ.ಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹183.50 ಕಡಿತಗೊಳಿಸಲಾಗಿದೆ.ಈ ಇಳಿಕೆಯಿಂದಾಗಿ ₹3,113.50 ಇದ್ದ ಸಿಲಿಂಡರ್ ಬೆಲೆ ಈಗ ₹2,930 ಕ್ಕೆ ತಲುಪಿದೆ. 14.2 ಕೆ.ಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಲಕ್ಸುರಿ ಬಸ್ ಐವರು ಸಜೀವ ದಹನ, ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,   ಜು.01::ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಏಳು ಮಂದಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.ಹರಿದ್ವಾರದಿಂದ ಮಧ್ಯಪ್ರದೇಶದ ಇಂದೋರ್‌ಗೆ ಹೊರಟಿದ್ದ ‘ಹ್ಯಾನ್ಸ್ ಟ್ರಾವೆಲ್ಸ್’ ಸಂಸ್ಥೆಗೆ ಸೇರಿದ ಬಸ್, ಕೊಲಾವಾ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 39 ಪ್ರಯಾಣಿಕರಿದ್ದರು. ದೌಸಾ ಪೊಲೀಸ್ ವರಿಷ್ಠಾಧಿಕಾರಿ

ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಲಕ್ಸುರಿ ಬಸ್ ಐವರು ಸಜೀವ ದಹನ, ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ದರೋಡೆ ಪ್ರಕರಣ: ಬಂಟ್ವಾಳದಲ್ಲಿ ಪತ್ತೆಯಾಯ್ತು ಆಭರಣ ವ್ಯಾಪಾರಿಯ ಕಾರು, ಸೀಟ್ ಕವರ್‌ಗಳು ಚಿಂದಿ!

(ನ್ಯೂಸ್‌ ಕಡಬ) newskadaba.com,   ಜು.01:ಮಂಗಳೂರಿನ ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ಆಭರಣ ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ವ್ಯಾಪಾರಿಯಿಂದ ಕದ್ದಿದ್ದ ಕಾರು ಬಂಟ್ವಾಳದ ಬೆಂಜನಪದವಿನಲ್ಲಿ ಪತ್ತೆಯಾಗಿದೆ. ಆದರೆ, ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನ ಸೀಟುಗಳ ಒಳಗೆ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಸಂಪೂರ್ಣವಾಗಿ ಹರಿದು ಹಾಕಿರುವುದು ಪೊಲೀಸರ ಪರಿಶೀಲನೆ ವೇಳೆ ಕಂಡುಬಂದಿದೆ.ದರೋಡೆಗೊಳಗಾದ ವ್ಯಾಪಾರಿಯ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ.

ಮಂಗಳೂರು ದರೋಡೆ ಪ್ರಕರಣ: ಬಂಟ್ವಾಳದಲ್ಲಿ ಪತ್ತೆಯಾಯ್ತು ಆಭರಣ ವ್ಯಾಪಾರಿಯ ಕಾರು, ಸೀಟ್ ಕವರ್‌ಗಳು ಚಿಂದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಂಕಿತ ಉಗ್ರನಿಗೆ ನಕಲಿ ಪಾಸ್‌ಪೋರ್ಟ್ ನೆರವು ಮಂಗಳೂರಿನ ಟ್ರಾವೆಲ್ ಏಜೆಂಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,   ಜು.01: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ ದಳಕ್ಕೆ ಬೇಕಾಗಿದ್ದ ಶಂಕಿತ ಉಗ್ರ ಇಬ್ರಾಹಿಂ ಖಲೀಲ್ ಸೇರಿದಂತೆ ಸುಮಾರು 15 ಜನರಿಗೆ ನಕಲಿ ದಾಖಲೆ ಸೃಷ್ಟಿಸಿ ಪಾಸ್‌ಪೋರ್ಟ್ ಪಡೆಯಲು ನೆರವಾದ ಆರೋಪ ಎದುರಿಸುತ್ತಿರುವ ಟ್ರಾವೆಲ್ ಏಜೆಂಟ್ ಯು.ಎಂ. ಹೈದರ್ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದ್ದು, “ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಇಂತಹ ಗಂಭೀರ ಪ್ರಕರಣಗಳಲ್ಲಿ ಕೇವಲ ಅಂಗವಿಕಲತೆ

ಶಂಕಿತ ಉಗ್ರನಿಗೆ ನಕಲಿ ಪಾಸ್‌ಪೋರ್ಟ್ ನೆರವು ಮಂಗಳೂರಿನ ಟ್ರಾವೆಲ್ ಏಜೆಂಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಮನೆಮೇಲೆ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳಾದ 7 ವರ್ಷದ ಅನಾಮಿಕ, 3 ವರ್ಷದ ತನು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಎಂಸು ಗುರುತಿಸಲಾಗಿದೆ.

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್‌ ವತಿಯಿಂದ ‘ಪಿಲ್ಯ ಮೆಗಾ ಆಫರ್ ಸೀಸನ್-3’ಗೆ ಚಾಲನೆ 50 ಆಕರ್ಷಕ ಬಹುಮಾನ ಸಹಿತ 101 ಬಹುಮಾನ ಗೆಲ್ಲುವ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com ​ಕಡಬ, ಜು. 03. ಕಡಬದ ವಸ್ತ್ರ ಮಳಿಗೆಗಳಲ್ಲಿ ಒಂದಾದ ‘ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್’ ತನ್ನ ಗ್ರಾಹಕರಿಗಾಗಿ ಪ್ರತೀ ವರ್ಷದಂತೆ ಈ ವರ್ಷವೂ ಅತ್ಯಂತ ಆಕರ್ಷಕ ಬಹುಮಾನಗಳನ್ನು ಒಳಗೊಂಡಿರುವ ‘ಪಿಲ್ಯ ಮೇಗಾ ಆಫರ್ ಸೀಸನ್-3’ ಅನ್ನು ಪ್ರಸ್ತುತಪಡಿಸುತ್ತಿದೆ.   ಕಳೆದ ಎರಡು ಸೀಸನ್‌ಗಳಲ್ಲಿ ಸಾರ್ವಜನಿಕರಿಂದ ಪಡೆದ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ಈ ವರ್ಷದ ಆಫರ್‌ ನಲ್ಲಿ ಮಾರುತಿ K10 ಕಾರು, ನಾಲ್ಕು ದ್ವಿಚಕ್ರ ವಾಹನಗಳು ಸೇರಿದಂತೆ 101 ಬೃಹತ್ ಬಹುಮಾನಗಳನ್ನು

ಕಡಬ: ಪಿಲ್ಯ ಫ್ಯಾಶನ್‌ ವತಿಯಿಂದ ‘ಪಿಲ್ಯ ಮೆಗಾ ಆಫರ್ ಸೀಸನ್-3’ಗೆ ಚಾಲನೆ 50 ಆಕರ್ಷಕ ಬಹುಮಾನ ಸಹಿತ 101 ಬಹುಮಾನ ಗೆಲ್ಲುವ ಸುವರ್ಣಾವಕಾಶ Read More »

ಕರಾವಳಿ

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 30. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆಯನ್ನು ಆಯೋಜಿಸಲಾಯಿತು. ಖಗೋಳಶಾಸ್ತ್ರಜ್ಞ ಡಾ. ರಮೇಶ್ ಎಂ. ಭಟ್ ಉದ್ಘಾಟಿಸಿ ಮಾತನಾಡಿ, ಕ್ಷುದ್ರಗ್ರಹಗಳ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಅವುಗಳ ವೈಜ್ಞಾನಿಕ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು. ಕ್ಷುದ್ರಗ್ರಹಗಳ ಉಗಮ, ರಾಸಾಯನಿಕ ಅಂಶಗಳು, ಕುಬ್ಜ ಗ್ರಹಗಳು, ಉಲ್ಕೆಗಳು ಮತ್ತು ಧೂಮಕೇತುಗಳು ಸೌರಮಂಡಲದಲ್ಲಿ ಚಲಿಸುವ ಪಥಗಳ ಬಗ್ಗೆ ವಿವರಿಸಿದರು. ವಿವಿಧ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳು

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »

ಕರಾವಳಿ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

(ನ್ಯೂಸ್ ಕಡಬ) newskadaba.com ಜೂ. 30. ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ. ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು ವಿಳಂಬವಾದಲ್ಲಿ ಅಥವಾ ತಿರಸ್ಕೃತಗೊಂಡಲ್ಲಿ ಅಥವಾ ಅಧಿಸೂಚಿತ ಸೇವೆಗೆ 15 ಸಂಖ್ಯೆಯ ಸಕಾಲ ಸ್ವೀಕೃತಿ ಸಂಖ್ಯೆ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ Read More »

ಕರಾವಳಿ
Scroll to Top