ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಇವರು ಶಿವಾಜಿ ಮಹಾರಾಜರ ಹುಟ್ಟು, ನಡೆದು ಬಂದ ದಾರಿ ಮತ್ತು ಅವರು ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಪಟ್ಟ ಶ್ರಮಗಳ ಕುರಿತು ಮಕ್ಕಳಿಗೆ ಕಥೆಯ ಮೂಲಕ ವಿವರಿಸಿದರು. ದೇಶಪ್ರೇಮ, ಭಕ್ತಿ ಮತ್ತು ಗೌರವವನ್ನು ಬೆಳಿಸಿಕೊಳ್ಳಲು ಶಿವಾಜಿ ಮಹಾರಾಜರು ನಮಗೆ ಮಾದರಿಯಾಗಿದ್ದಾರೆ […]

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

ಕರಾವಳಿ

ಸುಳ್ಯ ಶಾಸಕಿಯಿಂದ ಸರ್ಕಾರದ ಅನುದಾನ ದುರ್ಬಳಕೆ ಆರೋಪ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕುಮಾರಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲಾಗಿರುವ ರೂ. 25 ಕೋಟಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ದುರ್ಬಳಕೆ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದ್ದಾರೆ. ಈ ಕುರಿತು ಶುಕ್ರವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲದೆ ಬಿಜೆಪಿ ಬೆಂಬಲಿತ ಮುಖಂಡರು ಹಾಗೂ ಸಂಘ-ಸಂಸ್ಥೆಗಳ

ಸುಳ್ಯ ಶಾಸಕಿಯಿಂದ ಸರ್ಕಾರದ ಅನುದಾನ ದುರ್ಬಳಕೆ ಆರೋಪ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ Read More »

ಕರಾವಳಿ

ಎಸ್.ಸಿ/ಎಸ್.ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ, ವೆಬ್‍ಸೈಟ್ http://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷಗಳ ಮಿತಿಯೊಳಗೆ ಇರಬೇಕು. ವಿದ್ಯಾರ್ಥಿಯ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. 2025-26ನೇ ಸಾಲಿನಿಂದ ಮ್ಯಾನೇಜ್‍ ಮೆಂಟ್

ಎಸ್.ಸಿ/ಎಸ್.ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ
crime, arrest, suspected

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಜೂ. 27. ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್‌ (32) ಎಂದು ಗುರುತಿಸಲಾಗಿದೆ. ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣೆಯ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಒಟ್ಟು 72,186 ಹುದ್ದೆಗಳ ನೇಮಕಾತಿ  ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ  ಮಹತ್ವದ ಆದೇಶ ಹೊರಡಿಸಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿದೆ. ಈ ಸಂಬಂಧ ಇನ್ನೂ

72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ Read More »

ಉದ್ಯೋಗ, ಕರ್ನಾಟಕ

ಪಾಸ್ಪೋರ್ಟ್: SIR ನ ಪ್ರಮುಖ ಅಧಿಕೃತ ದಾಖಲೆ

(ನ್ಯೂಸ್ ಕಡಬ) newskadaba.com ಜೂ. 27. ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಮತದಾರರು ಸಲ್ಲಿಸಬಹುದಾದ 12 ಮಾನ್ಯ ದಾಖಲೆಗಳಲ್ಲಿ ಒಂದಾಗಿ ಭಾರತೀಯ ಪಾಸ್‌ಪೋರ್ಟ್ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪಾಸ್‌ ಪೋರ್ಟ್ ಕಾಯ್ದೆ 1967ರ ಅಡಿಯಲ್ಲಿ ಪಾಸ್‌ ಪೋರ್ಟ್ ಪೌರತ್ವದ ಪುರಾವೆಯಲ್ಲ ಎಂಬ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯಿಂದ ಉಂಟಾಗಿದ್ದ ವಿವಾದದ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ. ಬಿಹಾರ ಮತ್ತು ಅಸ್ಸಾಂನ ವಿಶೇಷ ಪರಿಷ್ಕರಣೆ

ಪಾಸ್ಪೋರ್ಟ್: SIR ನ ಪ್ರಮುಖ ಅಧಿಕೃತ ದಾಖಲೆ Read More »

ಕರಾವಳಿ

ಜುಲೈ 9ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ

(ನ್ಯೂಸ್ ಕಡಬ) newskadaba.com ಜೂ. 27. ಆಟೋರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಸಭೆಯನ್ನು ಜುಲೈ 9ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 9ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ Read More »

ಕರಾವಳಿ

ಅಲ್ಪಸಂಖ್ಯಾತರ ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 27. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP)ಯಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‍ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ

ಅಲ್ಪಸಂಖ್ಯಾತರ ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮುಂಗಾರು ಬೆಳೆ ವಿಮೆ ಯೋಜನೆ: ರೈತರ ನೋಂದಣಿಗೆ ಆಗಸ್ಟ್ 14 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಜೂ. 27. ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಇಂಡಸ್ ಇಂಡ್ ಜನರಲ್ ಇನ್ಸುರೆನ್ಸ್ ಕಂಪನಿ ಲಿ. (ರಿಲಯನ್ಸ್ ಜನರಲ್ ಇನ್ಶುರೆನ್ಸ್ ಕಂಪನಿ ಲಿ.) ಅನ್ನು  ನಿಗಧಿಪಡಿಸಲಾಗಿರುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೋಂದಣಿ ಪ್ರಾರಂಭವಾಗಿದ್ದು ಆಗಸ್ಟ್

ಮುಂಗಾರು ಬೆಳೆ ವಿಮೆ ಯೋಜನೆ: ರೈತರ ನೋಂದಣಿಗೆ ಆಗಸ್ಟ್ 14 ಕೊನೆಯ ದಿನ Read More »

ಕರಾವಳಿ

ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ನಟಿ ಕೃಷಿ ತಾಪಂಡ ಅಧಿಕೃತ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜೂ.26  ಬೆಂಗಳೂರು: ಆರ್.ಆರ್. ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಗೆಳತಿ ಹಾಗೂ ನಟಿ ಕೃಷಿ ತಾಪಂಡ ಪೊಲೀಸರಿಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕೃಷಿ ತಾಪಂಡ ಅವರು ವೈಯಕ್ತಿಕ ಕಾರಣಗಳಿಗಾಗಿ ಮೂರು ದಿನಗಳ ಕಾಲ ‘ಕ್ಷೇಮವನ’ಕ್ಕೆ ತೆರಳಿದ್ದರು. ಬುಧವಾರ ರಾತ್ರಿ 11 ಗಂಟೆಗೆ ಫ್ಲ್ಯಾಟ್‌ಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ತಮ್ಮ ಬಳಿಯಿದ್ದ ಪರ್ಯಾಯ ಕೀ ಬಳಸಿ ಒಳಹೋದಾಗ ವೈಶಾಖ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು

ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ನಟಿ ಕೃಷಿ ತಾಪಂಡ ಅಧಿಕೃತ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top