ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆ

(ನ್ಯೂಸ್ ಕಡಬ) newskadaba.com ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮತ್ತು ವಿ. ಒನ್. ಅಕ್ವಾ ಸೆಂಟರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ-2026 ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ  ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, […]

ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆ Read More »

ಕರಾವಳಿ

21 ವರ್ಷದೊಳಗಿನವರಿಗೆ ಸಿಗರೇಟ್ ಮಾರುವಂತಿಲ್ಲ ನಿರಂತರ ತಪಾಸಣೆಗೆ ಎಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಆ. 28. 21 ವರ್ಷದ ಒಳಗಿನ ವ್ಯಕ್ತಿಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆ 2024ಕ್ಕೆ ತಂದಿರುವ ತಿದ್ದುಪಡಿ ಅನ್ವಯ 21 ವರ್ಷದೊಳಗಿನ ಯಾವುದೇ ವ್ಯಕ್ತಿಗಳಿಗೆ ಸಿಗರೇಟ್

21 ವರ್ಷದೊಳಗಿನವರಿಗೆ ಸಿಗರೇಟ್ ಮಾರುವಂತಿಲ್ಲ ನಿರಂತರ ತಪಾಸಣೆಗೆ ಎಡಿಸಿ ಸೂಚನೆ Read More »

ಕರ್ನಾಟಕ

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಆ. 28. ಕಾಡಾನೆಗಳ ಹಿಂಡೊಂದು ಇದೀಗ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಐತ್ತೂರು ಗ್ರಾಮದ ಕೋರಿಯಾರ್ ಸಮೀಪದ ತೋಟದಲ್ಲಿ ಬೀಡುಬಿಟ್ಟಿರುವುದು ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.   ಒಂದು ಮರಿಯಾನೆ ಸೇರಿದಂತೆ ಒಟ್ಟು ಆರು ಕಾಡಾನೆಗಳು ಈ ಹಿಂಡಿನಲ್ಲಿರುವುದು ಕಂಡುಬಂದಿದೆ. ಮೊದಲಿಗೆ ಬಳ್ಪ ಗ್ರಾಮದ ಪಠೋಳಿ ಭಾಗದಲ್ಲಿ ಕಾಡಾನೆಗಳು ಸಂಚರಿಸಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬಳಿಕ ಪಠೋಳಿಯಿಂದ ಕಣ್ಕಲ್ ಭಾಗದತ್ತ ತೆರಳಿದ ಆನೆಗಳು, ದಾರಿಯುದ್ದಕ್ಕೂ ಬೈನೆ ಮರಗಳನ್ನು ಮುರಿದು

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 28. ಖಾಸಗಿ ತರಬೇತಿ ವಿಮಾನ ಅಪಘಾತ ಸಂಭವಿಸಿದ ಪರಿಣಾಮ ಉಡುಪಿ ಮೂಲದ ತರಬೇತಿ ಪೈಲಟ್ ಓರ್ವ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.   ಮೃತ ಯುವಕನನ್ನು ಅಭಿಷೇಕ್ ಪೂಜಾರಿ(22) ಎಂದು ಗುರುತಿಸಲಾಗಿದೆ. ಅಭಿಷೇಕ್ ಪೂಜಾರಿಯವರು ಮೂಲತಃ ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ. ವರದಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Theft, crime, Robbery

ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಆ. 28. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆಯ ಮನೆಯೊಂದರಿಂದ 84,800 ರೂ. ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಈ ಸಂಬಂಧ ಕಡಬ ಗ್ರಾಮ ನಿವಾಸಿ ತಮನ್ನಾ ಜಬೀನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.   ದೂರುದಾರರ ಪ್ರಕಾರ, ಪಿರ್ಯಾದುದಾರರು ತಮ್ಮ ಗಂಡ, ಮಕ್ಕಳು ಹಾಗೂ ಕುಟುಂಬ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ತಮ್ಮ ರೂಮ್‌ನಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣವನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಆಗಸ್ಟ್ 18ರಂದು

ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವು ಶುಕ್ರವಾರದಂದು ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಶ್ರೀ ಪೂರ್ಣ ಆಯುರ್ವೇದ ಚಿಕಿತ್ಸಾಲಯ ಇದರ ವೈದ್ಯರಾದ ಡಾ| ಸುರೇಶ್ ಕುಮಾರ್ ಕೂಡೂರು ಇವರು ರಕ್ಷೆಯಲ್ಲಿರುವ ಸಾವಿರಾರು ನೂಲು ಸೇರಿ ಒಂದು ಹೂವಿನ ಆಕಾರವನ್ನು ಪಡೆದು ಬಲವಾದಂತೆ ನಾವು ಕೂಡ ಜಾತಿ ಬಣ್ಣ ಯಾವುದೇ ಬೇಧವಿಲ್ಲದೇ ಭಾರತ ಮಾತೆಯನ್ನು ವಿಶ್ವಗುರು ಮಾಡುವಲ್ಲಿ ಒಂದಾಗಬೇಕು ಎಂದು ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

ಕರಾವಳಿ

ಉದ್ಯೋಗಾವಕಾಶ: ಆಗಸ್ಟ್ 31ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಆ. 27. ಮೆಡ್ ಪ್ಲಸ್ ಕಂಪೆನಿಯ ವತಿಯಿಂದ ಬೆಂಗಳೂರಿನಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಫಾರ್ಮಾಸಿ ಎಡ್,ಸಿ.ಎಸ್.ಎ(ಕಸ್ಟಮರ್ ಸರ್ವಿಸ್ ಅಸೋಸಿಯೆಟ್/ ಫಾರ್ಮಾಸಿ ಅಸಿಸ್ಟೆಂಟ್) ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30ರ ವರೆಗೆ ಪಡೀಲ್ ಜಿಲ್ಲಾಡಳಿತ ಕೇಂದ್ರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಹಾಗೂ ಡಿ.ಫಾರ್ಮಾ/ಬಿ.ಫಾರ್ಮಾ (ಪಿ.ಸಿ.ಐ. ಸರ್ಟಿಫಿಕೇಟ್) ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಕಂಪನಿ

ಉದ್ಯೋಗಾವಕಾಶ: ಆಗಸ್ಟ್ 31ರಂದು ಸಂದರ್ಶನ Read More »

ಉದ್ಯೋಗ, ಕರ್ನಾಟಕ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ಆ. 27. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.    ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್ Read More »

ಕರಾವಳಿ, ಕರ್ನಾಟಕ

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com ಆ. 27. “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 3.0 ಎಂಬ 3ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಆಗಸ್ಟ್ 1 ರಿಂದ ನಡೆಯಲಿದೆ.      ಇದರ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ–ಸ್ವಾಧೀನ ಪ್ರಕರಣಗಳು

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ Read More »

ಕರ್ನಾಟಕ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು

(ನ್ಯೂಸ್ ಕಡಬ) newskadaba.com ಆ. 27. ಕೇಂದ್ರ ಸರ್ಕಾರದ ಪಿಎಂ ಬಸ್ ಸೇವಾ ಯೋಜನೆಯಡಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳು ಹಂಚಿಕೆಯಾಗಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರದ ಜೊತೆಗೆ ಉಡುಪಿ, ಮೂಡುಬಿದಿರೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಮಾರ್ಗಗಳಲ್ಲೂ ಬಸ್‌ ಗಳನ್ನು ಓಡಿಸಲು ಉದ್ದೇಶಿಸಲಾಗಿದೆ. ಸದ್ಯದ ಯೋಜನೆಯಂತೆ ಮಂಗಳೂರು–ಉಡುಪಿ ಮಾರ್ಗಕ್ಕೆ 10, ಮೂಡುಬಿದಿರೆ ಮಾರ್ಗಕ್ಕೆ 10, ವಿಮಾನ ನಿಲ್ದಾಣಕ್ಕೆ 2 ಹಾಗೂ ಪಡೀಲ್‌ ಗೆ 4 ಬಸ್‌ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಕುಂಟಿಕಾನ ಮತ್ತು ಬಾಳೆಪುಣಿಯಲ್ಲಿ ತಲಾ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು Read More »

ಕರಾವಳಿ, ಕರ್ನಾಟಕ
Scroll to Top