26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳದ ಯುವಕ ‘ಸಲೀಂ’ ಆಗಿ ಮರಳಿ ಮನೆಗೆ!

(ನ್ಯೂಸ್‌ ಕಡಬ) newskadaba.com,   ಜೂ. 12  ಕಳೆದ 26 ವರ್ಷಗಳ ಹಿಂದೆ ಧರ್ಮಸ್ಥಳದ ಅಶೋಕನಗರದಿಂದ ನಾಪತ್ತೆಯಾಗಿದ್ದ ಯುವಕನೊಬ್ಬ ಪವಾಡಸದೃಶ ರೀತಿಯಲ್ಲಿ ಮರಳಿ ಮನೆಗೆ ಬಂದಿದ್ದಾನೆ.2000ನೇ ಇಸವಿಯಲ್ಲಿ ತನ್ನ 19ನೇ ವಯಸ್ಸಿನಲ್ಲಿ ಸರ್ಕಸ್ ತಂಡದ ಜೊತೆ ಮಹಾರಾಷ್ಟ್ರಕ್ಕೆ ತೆರಳಿದ್ದ ಸತೀಶ್, ಕಾಲಕ್ರಮೇಣ ತನ್ನ ಊರು-ಕುಟುಂಬವನ್ನು ಮರೆತಿದ್ದನು. ಮಹಾರಾಷ್ಟ್ರದಲ್ಲೇ ನೆಲೆಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ‘ಸಲೀಂ ಅಬ್ದುಲ್ ಅನ್ಸಾರಿ’ ಆಗಿದ್ದ ಆತ, ಮದುವೆಯಾಗಿ ಇಬ್ಬರು ಮಕ್ಕಳ ತಂದೆಯಾಗಿದ್ದಾನೆ. ಸದ್ಯ ಆತನಿಗೆ ಕನ್ನಡ, ತುಳು ಮರೆತುಹೋಗಿದ್ದು, ಕೇವಲ ಹಿಂದಿ ಮಾತ್ರ ಮಾತನಾಡುತ್ತಿದ್ದಾನೆ. […]

26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳದ ಯುವಕ ‘ಸಲೀಂ’ ಆಗಿ ಮರಳಿ ಮನೆಗೆ! Read More »

ಕರಾವಳಿ

ಶಿಕ್ಷಣಕ್ಕೆ ಸಿಗಲಿದೆ ಬಲ: ವಿದ್ಯಾರ್ಥಿ-ವಿದ್ಯಾರ್ಥಿನಿಯರಿಬ್ಬರಿಗೂ ಉಚಿತ ಬಸ್ ಪಾಸ್ ಭಾಗ್ಯ!

(ನ್ಯೂಸ್‌ ಕಡಬ) newskadaba.com,   ಜೂ. 12 ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿನಿಯರ ಜೊತೆಗೆ ಗಂಡುಮಕ್ಕಳಿಗೂ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಗ್ಯಾರಂಟಿ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ವಾಪಸ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.ವಿದ್ಯಾರ್ಥಿಗಳು ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕಚೇರಿಗಳಲ್ಲಿ

ಶಿಕ್ಷಣಕ್ಕೆ ಸಿಗಲಿದೆ ಬಲ: ವಿದ್ಯಾರ್ಥಿ-ವಿದ್ಯಾರ್ಥಿನಿಯರಿಬ್ಬರಿಗೂ ಉಚಿತ ಬಸ್ ಪಾಸ್ ಭಾಗ್ಯ! Read More »

ಕರಾವಳಿ

ಬ್ರೇಕಿಂಗ್: ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟ್‌ನಲ್ಲಿ ಹೆವಿ ವೆಹಿಕಲ್ಸ್ ಬ್ಯಾನ್!

(ನ್ಯೂಸ್‌ ಕಡಬ) newskadaba.com,   ಜೂ. 12:ಮಳೆಗಾಲದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ-169ಎ) ಇದೇ ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಹುಲಿಕಲ್ ಘಾಟಿಯಲ್ಲಿ ಭೂಕುಸಿತದ ನಂತರ ನಡೆಯುತ್ತಿರುವ ದುರಸ್ತಿ ಕಾಮಗಾರಿ ಪೂರ್ಣಗೊಳ್ಳದ ಕಾರಣ, ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ನಾಗರಿಕರು ತುರ್ತು ಚಿಕಿತ್ಸೆಗಾಗಿ ಮಣಿಪಾಲ್, ಉಡುಪಿ, ಮಂಗಳೂರಿಗೆ ತೆರಳಲು ಈ

ಬ್ರೇಕಿಂಗ್: ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟ್‌ನಲ್ಲಿ ಹೆವಿ ವೆಹಿಕಲ್ಸ್ ಬ್ಯಾನ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಪೊಲೀಸ್ ವಶಕ್ಕೆ!

(ನ್ಯೂಸ್‌ ಕಡಬ) newskadaba.com,   ಜೂ. 12 ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬುವವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಹೋದರಿಯ ನಿವಾಸದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.’ಬಿರುವೆರ್ ಕುಡ್ಲ’ ಸಂಘಟನೆಯ ರಾಕೇಶ್ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಪೊಲೀಸ್ ವಶಕ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಮೋದಿ ಆಡಳಿತವೇ ಪರಿಹಾರ’: ಬಿ.ಯಾವಿ.ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com,  ಜೂ.11:ಬೆಂಗಳೂರು: ಹಿಂದಿನ ಯುಪಿಎ ಸರ್ಕಾರದ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತದಿಂದ ಬೇಸತ್ತಿದ್ದ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಸೂಕ್ತ ಪರಿಹಾರ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಯಾವಿ.ವಿಜಯೇಂದ್ರ ಹೇಳಿದ್ದಾರೆ. ಯುಪಿಎ ಅವಧಿಯ ₹12 ಲಕ್ಷ ಕೋಟಿಗೂ ಅಧಿಕ ಮೊತ್ತದ ಹಗರಣಗಳಿಗೆ ಹೋಲಿಸಿದರೆ, ಮೋದಿ ಅವರ ಆಡಳಿತಾವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ.ಜಾಗತಿಕ ಸವಾಲುಗಳ ಮಧ್ಯೆಯೂ ಭಾರತ ಇಂದು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ರಕ್ಷಣಾ

‘ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಮೋದಿ ಆಡಳಿತವೇ ಪರಿಹಾರ’: ಬಿ.ಯಾವಿ.ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಕಂಬ ದುರಸ್ತಿ ಮುಗಿಸಿ ತೆರಳುತ್ತಿದ್ದಾಗ ದುರಂತ: ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com, ಜೂ.11 ಬಂಟ್ವಾಳ: ಪಾಣೆಮಂಗಳೂರು ಮೆಸ್ಕಾಂ ಶಾಖೆಯ ಸಹಾಯಕ ಮೆಕಾನಿಕ್, ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ (55) ಬುಧವಾರ ಕರ್ತವ್ಯದ ಅವಧಿಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಂಭೂರು ಸಮೀಪದ ಕುಂದಾಯಗೋಳಿಯಲ್ಲಿ ವಿದ್ಯುತ್ ಕಂಬ ದುರಸ್ತಿ ಮುಗಿಸಿ, ಮತ್ತೊಂದು ಇಲಾಖಾ ಕೆಲಸಕ್ಕೆ ಸಹೋದ್ಯೋಗಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದಾಗ ಅವರು ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದಾರೆ. ತಕ್ಷಣ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವಿದ್ಯುತ್ ಕಂಬ ದುರಸ್ತಿ ಮುಗಿಸಿ ತೆರಳುತ್ತಿದ್ದಾಗ ದುರಂತ: ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಆಸ್ಪತ್ರೆಗಳ ಲೂಟಿಗೆ ಬೀಳುತ್ತಾ ಬ್ರೇಕ್? ಆಯುಷ್ಮಾನ್ ಭಾರತ್ ರೋಗಿಗಳಿಗೆ ಇಲ್ಲಿದೆ ಬಿಗ್ ಅಪ್ಡೇಟ್!

(ನ್ಯೂಸ್‌ ಕಡಬ) newskadaba.com, ಜೂ.11 : ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡಿದರೆ ಆಸ್ಪತ್ರೆ ಮತ್ತು ‘ಆರೋಗ್ಯ ಮಿತ್ರ’ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ.ವಿಶೇಷ ವಾರ್ಡ್ ಆಯ್ಕೆ ಮಾಡುವ ರೋಗಿಗಳಿಗೆ ಯೋಜನೆ ವಿಸ್ತರಣೆ ಚಿಂತನೆ; ರೋಗಿ ಬರೆದ ಹೆಚ್ಚುವರಿ ಶುಲ್ಕ ಮಾತ್ರ ಪಾವತಿಸಬೇಕು. ವಿಮಾ ಕ್ಲೈಮ್ ಅನುಮೋದನೆ ತಡ ಮಾಡುವ ವೈದ್ಯರು ಹಾಗೂ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸಚಿವರ ಕಡಕ್ ವಾರ್ನಿಂಗ್.ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾರ್ಯವೈಖರಿ ಹಾಗೂ ವೈದ್ಯರ ಸಮಯಪಾಲನೆಗೆ DHO ಕಚೇರಿಯಿಂದಲೇ

ಖಾಸಗಿ ಆಸ್ಪತ್ರೆಗಳ ಲೂಟಿಗೆ ಬೀಳುತ್ತಾ ಬ್ರೇಕ್? ಆಯುಷ್ಮಾನ್ ಭಾರತ್ ರೋಗಿಗಳಿಗೆ ಇಲ್ಲಿದೆ ಬಿಗ್ ಅಪ್ಡೇಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಜೂ.11 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಸುಮಾರು 1.48 ಲಕ್ಷ ಮೃತ ಫಲಾನುಭವಿಗಳ ಖಾತೆಗೂ ಕಳೆದ ಐದು ತಿಂಗಳಿಂದ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.”ಚುನಾವಣೆಗೂ ಮುನ್ನ ಯಾವುದೇ ಷರತ್ತಿಲ್ಲದೆ ಪ್ರತಿ ತಿಂಗಳು ₹2,000 ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಬಯೋಮೆಟ್ರಿಕ್ ಹಾಗೂ ಸರ್ವರ್ ನೆಪವೊಡ್ಡಿ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.11 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲಿರುವ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಆದೇಶಿಸಿದ್ದಾರೆ. ಮುಂಗಾರು ಮಳೆ ಮತ್ತು ಗಾಳಿಗೆ ಇವು ಕಳಚಿ ವಾಹನ ಸವಾರರು ಹಾಗೂ ಪಾದಚಾರಿಗಳ ಮೇಲೆ ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆಯಿದೆ.ಡಿವೈಡರ್‌ಗಳ ಮೇಲಿನ ಬ್ಯಾನರ್‌ಗಳಿಂದಾಗಿ ರಸ್ತೆ ದಾಟುವವರಿಗೆ ಮತ್ತು ವಾಹನ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿವೆ ಎಂಬ ದೂರುಗಳು ಬಂದಿದ್ದವು. ಮಂಗಳೂರು

ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುರದೃಷ್ಟಕರ ಘಟನೆ ಮರದ ಮೇಲಿಂದ ಬಿದ್ದ ತೆಂಗಿನಕಾಯಿ ತಗುಲಿ ಒಂದೂವರೆ ವರ್ಷದ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com, ಜೂ.11 : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಗಂಡು ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಸಂಭವಿಸಿದೆ. ತಾಯಿಯು ತನ್ನ 6 ವರ್ಷದ ಹಿರಿಯ ಮಗಳನ್ನು ಶಾಲೆಗೆ ಬಿಡಲು ಕಿರಿಯ ಮಗುವನ್ನು ಎತ್ತಿಕೊಂಡು ಹೋಗುತ್ತಿದ್ದಾಗ, ದಾರಿ ಬದಿಯ ತೋಟದ 40 ಅಡಿ ಎತ್ತರದ ಮರದಿಂದ ಹಸಿ ತೆಂಗಿನಕಾಯಿಯೊಂದು ಅಚಾನಕ್ಕಾಗಿ ಮಗುವಿನ ತಲೆಗೆ ಬಿದ್ದಿದೆ. ಕಾಯಿ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರ ಪೆಟ್ಟಾಗಿತ್ತು.

ದುರದೃಷ್ಟಕರ ಘಟನೆ ಮರದ ಮೇಲಿಂದ ಬಿದ್ದ ತೆಂಗಿನಕಾಯಿ ತಗುಲಿ ಒಂದೂವರೆ ವರ್ಷದ ಮಗು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top