ಕಡಬ ನ್ಯೂಸ್

ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ

ನ್ಯೂಸ್ ಕಡಬ) newskadaba.com.ವಾಷಿಂಗ್ಟನ್ ,ಮೇ 04.  ಭಾರತ ಮೂಲದ ಅಮೆರಿಕನ್​​ ಉದ್ಯಮಿ ಅಜಯ್​ ಬಂಗಾ ವಿಶ್ವ ಬ್ಯಾಂಕ್​ನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿದ್ದರು.  ಭಾರತೀಯ ಮೂಲದ ಅಮೆರಿಕ ನಿವಾಸಿ​ ಅಜಯ್​ ಬಂಗಾ ವಿಶ್ವ ಬ್ಯಾಂಕ್​ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೂನ್​ 2 ರಿಂದ ಮುಂದಿನ 5 ವರ್ಷಗಳವರೆಗೆ ಅಧ್ಯಕ್ಷರಾಗಿ ಇರಲಿದ್ದಾರೆ. ಬಂಗಾ ಅವರು ವಿಶ್ವಬ್ಯಾಂಕ್‌ನ 14ನೇ ಅಧ್ಯಕ್ಷರಾಗಲಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ನಾಮನಿರ್ದೇಶನಗೊಂಡ ಡೇವಿಡ್ ಮಾಲ್ಪಾಸ್ ಅವರಿಂದ ಬಂಗಾ […]

ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ➤ ಆಫೀಸರ್ ಸೇರಿ ಮೂವರು ಗಂಭೀರ!

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ 04. ಜಮ್ಮು ಮತ್ತು ಕಾಶ್ಮೀರದ ಕಿಶ್​ತ್ವಾರ್ ಜಿಲ್ಲೆಯ ಮರ್ವಾಹ್ ತೆಹಸಿಲ್‌ನ ಮಚ್ನಾ ಗ್ರಾಮದ ಬಳಿ ಸೇನಾ ಕಾಪ್ಟರ್ ಎಎಲ್​ಎಚ್​ ಧ್ರುವ​ ಪತನಗೊಂಡ ಪರಿಣಾಮ ಕಾಪ್ಟರ್​ನಲ್ಲಿ ಕಮಾಂಡಿಂಗ್ ಆಫೀಸರ್ ​ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದು ಬೆಳಗ್ಗೆ ಕಾಪ್ಟರ್​ ಮರ್ವಾ ಕಡೆಗೆ ತೆರಳುತ್ತಿದ್ದಾಗ ಇಂದು ಬೆಳಗ್ಗೆ 9.40 ಕ್ಕೆ ಪತನಗೊಂಡಿದೆ. ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ಪತನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ➤ ಆಫೀಸರ್ ಸೇರಿ ಮೂವರು ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲಕ್ಷ.ರೂ ವಂಚನೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ 04. ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ ಲಿಂಕ್ ಕಳುಹಿಸಿ ವ್ಯಕ್ತಿಯೋರ್ವರಿಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ದೂರುದಾರರ ಇಮೇಲ್ ಐಡಿಗೆ ಮೇ 1ರಂದು lyall-nalda@xtra.co.nz ಇ-ಮೇಲ್ ಐಡಿಯಿಂದ Netflix Order Failed-action needed ಎಂಬ ಸಂದೇಶ ಬಂದಿತ್ತು. ಅದನ್ನು ತೆರೆದಾಗ ಅದರಲ್ಲಿ ‘ನಿಮ್ಮ ಕ್ರೆಡಿಟ್ ಕಾರ್ಡ್ ವಿಫಲವಾಗಿದೆ. ಅದನ್ನು ರಿ ರಿಜಿಸ್ಟರ್ ಮಾಡಬೇಕು’ಎಂದು ಬರೆಯಲಾಗಿತ್ತು. ಅದರ ಜತೆಗೆ ಲಿಂಕ್ ಕಳುಹಿಸಲಾಗಿತ್ತು. ದೂರುದಾರ ಆ ಲಿಂಕ್ ತೆರೆದು ನೋಡಿದಾಗ ಅದರಲ್ಲಿ

ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲಕ್ಷ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೇ. 4ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ 04. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆಯಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.  

ಮಂಗಳೂರು: ಮೇ. 4ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು Read More »

ಕರಾವಳಿ

ಧರ್ಮಸ್ಥಳದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ➤ 201 ಜೋಡಿ ವಧು-ವರರು ಹೊಸ ಜೀವನಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com, ಉಜಿರೆ , ಮೇ 04.  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆದ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್

ಧರ್ಮಸ್ಥಳದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ➤ 201 ಜೋಡಿ ವಧು-ವರರು ಹೊಸ ಜೀವನಕ್ಕೆ ಪಾದಾರ್ಪಣೆ Read More »

ಕರಾವಳಿ

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ. 03.  ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ. ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45)

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಮೇ. 03. ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.  ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದಿದ್ದಾರೆ. ಇನ್ನು ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ಪಕ್ಷದಲ್ಲಿಯೇ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಆರೋಪ

ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ Read More »

ಕರ್ನಾಟಕ

ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ

(ನ್ಯೂಸ್ ಕಡಬ) newskadaba.com. ಕುಂದಾಪುರ, ಮೇ.3. ಸರ್ವೀಸ್ ಸ್ಟೇಷನ್‌‌ನಿಂದ ಹೆದ್ದಾರಿಗೆ ಬಂದು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌‌ನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ಸಮೀಪ ಪ್ರವಾಸಿ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕುಮುಟಾ ಡಿಪೋದ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಅಶೋಕ ಎಂಬುವರು ತಲ್ಲೂರಿನಲ್ಲಿರುವ ಅಶೋಕ

ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

(ನ್ಯೂಸ್ ಕಡಬ) newskadaba.com. ರಾಮನಗರ,ಮೇ.3. ಬೊಂಬೆನಗರಿ ಚನ್ನಪಟ್ಟಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ‌. ದೇವೇಗೌಡ ಆಗಮಿಸಿ ಎರಡನೇ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ನಗರದ ಶೇರು ಸರ್ಕಲ್​ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕಳೆದೆರಡು ದಿನಗಳಲ್ಲಿ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ‌ ಕೊಡ್ತೇನೆ ಎಂದು ಹೇಳುವ ವ್ಯಕ್ತಿ ಇದ್ರೆ ಅದು ಕುಮಾರಸ್ವಾಮಿ ಎಂದರು. ಹಿಂದೂಸ್ಥಾನದಲ್ಲಿ ನುಡಿದಂತೆ ನಡೆಯುವ ರಾಜಕಾರಣಿ ಯಾರಾದ್ರು ಇದ್ರೆ ಅದು ಕುಮಾರಸ್ವಾಮಿ ಮಾತ್ರ.

ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ Read More »

ಕರ್ನಾಟಕ

ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ

(ನ್ಯೂಸ್ ಕಡಬ) newskadaba.com. ಚೆನ್ನೈ,ಮೇ.3. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಹಾಗೂ ನಿರ್ದೇಶಕ ಮನೋಬಾಲ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ನಟ ಮನೋಬಾಲ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಲಿವರ್​​ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top